AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ನಟ ಜೂ ಎನ್​​ಟಿಆರ್: ಕಾರಣವೇನು?

Jr NTR movies: ಜೂ ಎನ್​​ಟಿಆರ್ ಖ್ಯಾತ ಪ್ಯಾನ್ ಇಂಡಿಯಾ ನಟ. ತಾವಾಯ್ತು ತಮ್ಮ ಸಿನಿಮಾ ಆಯ್ತು ಎಂದು ಸದಾ ವಿವಾದಗಳಿಂದ ದೂರವೇ ಇರುವ ನಟ ಜೂ ಎನ್​​ಟಿಆರ್. ಇದೀಗ ಜೂ ಎನ್​​ಟಿಆರ್ ಅವರು ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಜೂ ಎನ್​​ಟಿಆರ್ ಅವರ ಚಿತ್ರ, ವಿಡಿಯೋಗಳನ್ನು ಕೆಲವರು ಅನಧಿಕೃತವಾಗಿ ಬಳಸಿಕೊಳ್ಳುತ್ತಿದ್ದು, ಇವುಗಳ ವಿರುದ್ಧ ಜೂ ಎನ್​​ಟಿಆರ್ ಮೊಕದ್ದಮೆ ಹೂಡಿದ್ದಾರೆ.

ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ನಟ ಜೂ ಎನ್​​ಟಿಆರ್: ಕಾರಣವೇನು?
Jr Ntr
ಮಂಜುನಾಥ ಸಿ.
|

Updated on: Dec 09, 2025 | 1:20 PM

Share

ಪ್ಯಾನ್ ಇಂಡಿಯಾ ಸ್ಟಾರ್ ನಟ ಜೂ ಎನ್​​ಟಿಆರ್ (Jr NTR) ಇದೀಗ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಸಾಮಾನ್ಯವಾಗಿ ವಿವಾದಗಳಿಂದ ದೂರ ಉಳಿವ ಜೂ ಎನ್​ಟಿಆರ್ ಅವರು ಇದೀಗ ಕೋರ್ಟ್ ಮೆಟ್ಟಿಲೇರಿರುವುದು ಅಭಿಮಾನಿಗಳ ಆಶ್ಚರ್ಯಕ್ಕೆ ಕಾರಣವಾಗಿದೆ. ಕೆಲವು ಬಾಲಿವುಡ್ ಸ್ಟಾರ್ ನಟ, ನಟಿಯರು ಇತ್ತೀಚೆಗೆ ತಮ್ಮ ವ್ಯಕ್ತಿತ್ವದ ಹಕ್ಕುಗಳ ರಕ್ಷಣೆಗೆ ನ್ಯಾಯಾಲಯದ ಮೆಟ್ಟಿಲೇರುತ್ತಿದ್ದಾರೆ. ಇದೀಗ ನಟ ಜೂ ಎನ್​​ಟಿಆರ್ ಸಹ ಇದೇ ವಿಷಯಕ್ಕೆ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ತಮ್ಮ ಹೆಸರು, ಚಿತ್ರ, ಹೋಲಿಕೆ ಮತ್ತು ಗುರುತಿನ ಇತರ ಗುಣಲಕ್ಷಣಗಳನ್ನು ಅನಧಿಕೃತವಾಗಿ ಬಳಸುವುದರ ವಿರುದ್ಧ ತಮ್ಮ ವ್ಯಕ್ತಿತ್ವ ಹಕ್ಕುಗಳನ್ನು ರಕ್ಷಿಸಿಕೊಡುವಂತೆ ಕೋರಿ ಜೂನಿಯರ್ ಎನ್‌ಟಿಆರ್ ದೆಹಲಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದರು. ನ್ಯಾಯಮೂರ್ತಿ ಮನ್ಮೀತ್ ಪ್ರೀತಮ್ ಸಿಂಗ್ ಅವರು ಪ್ರಕರಣದ ವಿಚಾರಣೆ ನಡೆಸಿದ್ದಾರೆ. ಹಿರಿಯ ವಕೀಲ ಜೆ ಸಾಯಿ ದೀಪಕ್, ಜೂನಿಯರ್ ಎನ್‌ಟಿಆರ್ ಅವರ ಪರವಾಗಿ ವಾದಿಸಿದ್ದು, ಹಲವಾರು ಇ-ಕಾಮರ್ಸ್ ಮತ್ತು ಸಾಮಾಜಿಕ ಮಾಧ್ಯಮ ಸೈಟ್‌ಗಳು ಜೂ ಎನ್​​ಟಿಆರ್ ಅವರ ಚಿತ್ರ, ವಿಡಿಯೋಗಳನ್ನು ಬಳಸುವ ಮೂಲಕ ಅವರ ಹಕ್ಕುಗಳನ್ನು ಉಲ್ಲಂಘಿಸಿವೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಜೂ ಎನ್​​ಟಿಆರ್ ಅವರ ಒಪ್ಪಿಗೆಯಿಲ್ಲದೆ ವಾಣಿಜ್ಯ ಲಾಭಕ್ಕಾಗಿ ಅವರ ಚಿತ್ರ, ವಿಡಿಯೋ ಇನ್ನಿತರೆಗಳನ್ನು ಬಳಸಲಾಗುತ್ತಿದೆ ಎಂದು ಅವರು ನ್ಯಾಯಾಲಯದಲ್ಲಿ ತಿಳಿಸಿದರು.

ಜೂ ಎನ್​​ಟಿಆರ್ ಪರ ವಕೀಲರ ವಾದ ಆಲಿಸಿದ ನಂತರ, ನ್ಯಾಯಾಲಯವು ಜೂನಿಯರ್ ಎನ್‌ಟಿಆರ್ ಅವರ ಮೊಕದ್ದಮೆಯನ್ನು ಮಾಹಿತಿ ತಂತ್ರಜ್ಞಾನ ನಿಯಮಗಳು, 2021 ರ ಅಡಿಯಲ್ಲಿ ಔಪಚಾರಿಕ ದೂರಾಗಿ ಪರಿಗಣಿಸಲು ವೇದಿಕೆಗಳಿಗೆ ಸಾಮಾಜಿಕ ಜಾಲತಾಣ ವೇದಿಕೆಗಳು ಮತ್ತು ಕೆಲ ವೆಬ್​​ಸೈಟ್​​ಗಳಿಗೆ ಸೂಚನೆ ನಿಡಿದ್ದಲ್ಲದೆ, ಕಂಪನಿಗಳಿಗೆ ಪ್ರತಿಕ್ರಿಯಿಸಲು ಮೂರು ದಿನಗಳ ಕಾಲಾವಕಾಶ ನೀಡಲಾಗಿದೆ.

ಇದನ್ನೂ ಓದಿ:‘ವಾರ್ 2’ ಸೋತರೂ ಜೂ ಎನ್​ಟಿಆರ್​​ಗೆ ಮತ್ತೊಂದು ಅವಕಾಶ ಕೊಟ್ಟ ವೈಆರ್​ಎಫ್

ಡಿಸೆಂಬರ್ 22 ರಂದು ನ್ಯಾಯಾಲಯವು ಈ ವಿಷಯವನ್ನು ಮತ್ತೆ ವಿಚಾರಣೆ ನಡೆಸಲಿದೆ, ಆಗ ವಿವರವಾದ ಮತ್ತು ಔಪಚಾರಿಕ ಆದೇಶ ಹೊರಡಿಸುವ ನಿರೀಕ್ಷೆಯಿದೆ. ಅಮಿತಾಬ್ ಬಚ್ಚನ್, ಐಶ್ವರ್ಯಾ ರೈ, ನಾಗಾರ್ಜುನ, ಅನಿಲ್ ಕಪೂರ್, ಅಭಿಷೇಕ್ ಬಚ್ಚನ್, ಚಿರಂಜೀವಿ ಮತ್ತು ಇತರ ಸೆಲೆಬ್ರಿಟಿಗಳು ತಮ್ಮ ವ್ಯಕ್ತಿತ್ವದ ದುರುಪಯೋಗದ ವಿರುದ್ಧ ನ್ಯಾಯಾಲಯಗಳಲ್ಲಿ ಮೊಕದ್ದಮೆಗಳನ್ನು ದಾಖಲಿಸಿದ್ದಾರೆ. ಹಲವಾರು ನಟ, ನಟಿಯರು ತಮ್ಮ ವ್ಯಕ್ತಿತ್ವ ಹಕ್ಕಿನ ರಕ್ಷಣೆಯನ್ನು ಮಾಡಿಕೊಂಡಿದ್ದಾರೆ.

ಜೂ ಎನ್​​ಟಿಆರ್ ಪ್ರಸ್ತುತ ಕೆಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಪ್ರಸ್ತುತ ಅವರು ಪ್ರಶಾಂತ್ ನೀಲ್ ನಿರ್ದೇಶನದ ಹೊಸ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾಕ್ಕೆ ಕನ್ನಡತಿ ರುಕ್ಮಿಣಿ ವಸಂತ್ ನಾಯಕಿ. ಇದರ ಬಳಿಕ ಜೂ ಎನ್​​ಟಿಆರ್ ಅವರು ತ್ರಿವಿಕ್ರಮ್ ಶ್ರೀನಿವಾಸ್ ನಿರ್ದೇಶಿಸಲಿರುವ ಹೊಸ ಸಿನಿಮಾನಲ್ಲಿ ನಟಿಸಲಿದ್ದಾರೆ. ಸಿನಿಮಾದ ಕತೆಯು ಮುರುಗನ್ ದೇವರ ಕುರಿತಾದ ಕತೆಯನ್ನು ಒಳಗೊಂಡಿರಲಿದೆ. ಅದಾದ ಬಳಿಕ ‘ದೇವರ 2’ನಲ್ಲಿ ನಟಿಸಲಿದ್ದಾರೆ. ಅದರ ಬಳಿಕ ಬಾಲಿವುಡ್​ ಸಿನಿಮಾ ಒಂದರಲ್ಲಿ ಜೂ ಎನ್​​ಟಿಆರ್ ನಟಿಸಲಿದ್ದಾರೆ. ತಮಿಳಿನ ನಿರ್ದೇಶಕ ವೆಟ್ರಿಮಾರನ್ ಅವರೊಟ್ಟಿಗೆ ಸಹ ಸಿನಿಮಾ ಒಂದರ ಕುರಿತು ಚರ್ಚೆ ಜಾರಿಯಲ್ಲಿದೆಯಂತೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್