AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ತಿ ವಿವಾದ, ತೆಲಂಗಾಣ ಹೈಕೋರ್ಟ್ ಮೆಟ್ಟಿಲೇರಿದ ಜೂ ಎನ್​ಟಿಆರ್

ತಮ್ಮದೇ ಕುಟುಂಬದ ಪಕ್ಷವಾದ ಟಿಡಿಪಿ ಪರವಾಗಿ ಪ್ರಚಾರಕ್ಕೂ ಸಹ ಹೋಗದೆ ತಾವಾಯಿತು, ತಮ್ಮ ಕೆಲಸವಾಯ್ತು ಎಂದು ಸುಮ್ಮನಿರುವ ಜೂ ಎನ್​ಟಿಆರ್ ಅವರನ್ನು ವಿವಾದವೊಂದು ಹುಡುಕಿಕೊಂಡು ಬಂದಿದೆ.

ಆಸ್ತಿ ವಿವಾದ, ತೆಲಂಗಾಣ ಹೈಕೋರ್ಟ್ ಮೆಟ್ಟಿಲೇರಿದ ಜೂ ಎನ್​ಟಿಆರ್
ಮಂಜುನಾಥ ಸಿ.
|

Updated on: May 17, 2024 | 3:47 PM

Share

ಟಾಲಿವುಡ್ (Tollywood) ನಟ ಜೂ ಎನ್​ಟಿಆರ್ (Jr NTR), ತಾವಾಯ್ತು, ತಮ್ಮ ಸಿನಿಮಾ ಆಯ್ತೆಯಂದು ತಮ್ಮ ಪಾಡಿಗೆ ತಾವಿದ್ದಾರೆ. ಚುನಾವಣೆಗಳಲ್ಲಿ ತಮ್ಮ ಕುಟುಂಬದ ಟಿಡಿಪಿ ಪಕ್ಷದ ಪರವಾಗಿ ಸಕ್ರಿಯವಾಗಿ ಪ್ರಚಾರದಲ್ಲಿ ತೊಡಗುತ್ತಿದ್ದ ಜೂ ಎನ್​ಟಿಆರ್, ಈ ಬಾರಿ ಚುನಾವಣೆಯಿಂದ ಬಹು ದೂರ ಉಳಿದಿಬಿಟ್ಟಿದ್ದರು. ಆದರೆ ವಿವಾದ ಎಂಬುದು ಜೂ ಎನ್​ಟಿಆರ್ ಅವರನ್ನು ಹುಡುಕಿ ಬಂದಂತಿದೆ. 21 ವರ್ಷದ ಹಿಂದೆ ಖರೀದಿಸಿದ್ದ ಜಾಗದ ವಿಷಯವಾಗಿ ವಿವಾದವೊಂದು ಸೃಷ್ಟಿಯಾಗಿದ್ದು, ಪ್ರಕರಣ ಸಂಬಂಧವಾಗಿ ಜೂ ಎನ್​ಟಿಆರ್ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.

ಜೂ ಎನ್​ಟಿಆರ್ ಅವರು 2003 ರಲ್ಲಿ ಹೈದರಾಬಾದ್​ನ ಜೂಬ್ಲಿ ಹಿಲ್ಸ್​ನಲ್ಲಿ 6165 ಚದರ ಅಡಿಯ ಜಾಗವನ್ನು 34 ಲಕ್ಷ ರೂಪಾಯಿ ನೀಡಿ ಸುಂಕು ಗೀತಾ ಲಕ್ಷ್ಮಿ ಎಂಬುವರಿಂದ ಖರೀದಿ ಮಾಡಿದ್ದರು. ಆ ಜಮೀನಿನ ಈಗಿನ ಮೌಲ್ಯ ಸುಮಾರು 24 ಕೋಟಿ ರೂಪಾಯಿಗಳು. ಖರೀದಿಸಿದ್ದ ಜಾಗದಲ್ಲಿ ಜೂನ ಎನ್​ಟಿಆರ್ ಅದ್ಧೂರಿಯಾಗಿ ಮನೆಯನ್ನು ಸಹ ನಿರ್ಮಿಸಿದ್ದಾರೆ. ಈಗ ಈ ಜಮೀನು ವಿವಾದಕ್ಕೆ ಕಾರಣಾಗಿದೆ.

1996 ರಲ್ಲಿ ಜಮೀನನ್ನು ಅಡಮಾನವಿಟ್ಟು ಸಾಲ ಪಡೆಯಲಾಗಿತ್ತು. ಸಾಲದ ಪ್ರತಿಯಾಗಿ ಒತ್ತೆಯಿಡಲಾಗಿರುವ ಜಮೀನನ್ನು ವಶಪಡಿಸಿಕೊಳ್ಳಲು ಅನುಮತಿಗಾಗಿ ನಾಲ್ಕು ಬ್ಯಾಂಕ್​ಗಳು ಡೆಟ್ ರಿಕವರಿ ಟ್ರಿಬ್ಯುನಲ್​ ಗೆ ಮನವಿ ಮಾಡಿತ್ತು. ವಿಚಾರಣೆ ಆಲಿಸಿದ ಟ್ರಿಬ್ಯೂನಲ್ ಈಗ ಬ್ಯಾಂಕ್​ಗಳ ಪರವಾಗಿ ಆದೇಶ ನೀಡಿದೆ. ಬಳಿಕ ಬ್ಯಾಂಕ್​ನವರು ಜೂ ಎನ್​ಟಿಆರ್ ಈಗ ವಾಸವಿರುವ ಜಮೀನನ್ನು ತಮ್ಮ ವಶಕ್ಕೆ ಒಪ್ಪಿಸುವಂತೆ ನೊಟೀಸ್ ನೀಡಿದ್ದಾರೆ. ತಮ್ಮ ಬಳಿ ಇರುವ ಜಮೀನಿನ ದಾಖಲೆಗಳನ್ನು ಸಹ ನೀಡಿದ್ದಾರೆ.

ಇದನ್ನೂ ಓದಿ:ಜೂ ಎನ್​ಟಿಆರ್ ನಟನೆಯ ‘ದೇವರ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ

ಇದೇ ಪ್ರಕರಣವಾಗಿ ತೆಲಂಗಾಣ ಹೈಕೋರ್ಟ್​ಗೆ ಮನವಿ ಸಲ್ಲಿಸಿರುವ ಜೂ ಎನ್​ಟಿಆರ್, ತಮ್ಮ ಬಳಿ ಇರುವ ಹಾಗೂ ಬ್ಯಾಂಕ್​ನವರು ಸಲ್ಲಿಸಿರುವ ದಾಖಲೆಗಳನ್ನು ಫೊರೆನ್ಸಿಕ್​ ಪರೀಕ್ಷೆಗೆ ಕಳಿಸಲಾಗಿದ್ದು, ನನ್ನ ಬಳಿ ಇರುವ ದಾಖಲೆಗಳು ಒರಿಜಿನಲ್ ಎಂದು ವರದಿ ಬಂದಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಜೂ ಎನ್​ಟಿಆರ್ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶರು, ‘ಜೂ ಎನ್​ಟಿಆರ್ ಏಕೆ ಈ ವಿಷಯವನ್ನು ಹೈಕೋರ್ಟ್​ಗೆ ತಂದರು, ಡೆಟ್ ರಿಕವರಿ ಟ್ರಿಬ್ಯುನಲ್​ಗೆ ಏಕೆ ಮನವಿ ಸಲ್ಲಿಸಲಿಲ್ಲ ಎಂದು ಪ್ರಶ್ನಿಸಿದ್ದಾರೆ. ಆದರೆ ಜೂ ಎನ್​ಟಿಆರ್ ಪರ ವಕೀಲರು ಡಿಆರ್​ಟಿಯ ಆದೇಶದಲ್ಲಿರುವ ಒಂದು ತಾಂತ್ರಿಕ ಸಮಸ್ಯೆ ಬಗ್ಗೆ ಗಮನ ಸೆಳೆದು ಈ ಕಾರಣಕ್ಕಾಗಿ ನಾವು ಹೈಕೋರ್ಟ್​ಗೆ ಮನವಿ ಸಲ್ಲಿಸಿರುವುದಾಗಿ ಹೇಳಿದ್ದಾರೆ. ಪ್ರಕರಣವನ್ನು ಜೂನ್ 6 ಕ್ಕೆ ಮುಂದೂಡಲಾಗಿದೆ.

2003 ರಲ್ಲಿ ಜಮೀನು ಖರೀದಿಸಿದ ಜೂ ಎನ್​ಟಿಆರ್, 2007ರಲ್ಲಿ ಅದೇ ಜಮೀನಿನಲ್ಲಿ ಅದ್ಧೂರಿಯಾಗಿ ಮನೆ ಸಹ ನಿರ್ಮಿಸಿದರು. ಈಗಲೂ ಅವರು ಅದೇ ಮನೆಯಲ್ಲಿ ಕುಟುಂಬದೊಂದಿಗೆ ವಾಸವಿದ್ದಾರೆ. ಜೂ ಎನ್​ಟಿಆರ್ ಸಾಕಷ್ಟು ರಿಯಲ್ ಎಸ್ಟೇಟ್ ಹೂಡಿಕೆಗಳನ್ನು ಮಾಡಿದ್ದಾರೆ. ಆಂಧ್ರ, ತೆಲಂಗಾಣದ ಹಲವು ಜಿಲ್ಲೆಗಳಲ್ಲಿ ಜೂಎನ್​ಟಿಆರ್ ಜಮೀನು ಹೊಂದಿದ್ದಾರೆ. ಕೆಲವು ಕಮರ್ಶಿಯಲ್ ಬಿಲ್ಡಿಂಗ್​ಗಳನ್ನು ಸಹ ಅವರು ಹೊಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ