AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿರ್ಮಿಸಿದ್ದು, ಖರೀದಿಸಿದ್ದಲ್ಲ’; ಕಟ್ಟುಮಸ್ತಾದ ದೇಹದ ಫೋಟೋ ಹಂಚಿಕೊಂಡ ಜೂನಿಯರ್ ಎನ್​​​ಟಿಆರ್

ಜೂನಿಯರ್ ಎನ್​ಟಿಆರ್ ಅವರು ಪ್ರಶಾಂತ್ ನೀಲ್ ಅವರ 'ಡ್ರ್ಯಾಗನ್' ಚಿತ್ರಕ್ಕಾಗಿ ಭಾರಿ ದೇಹದಾರ್ಢ್ಯ ರೂಪಿಸಿಕೊಂಡಿದ್ದಾರೆ. ತೂಕ ಇಳಿಸಿಕೊಂಡು ಈಗ ಕಟ್ಟುಮಸ್ತಾದ ದೇಹದ ಫೋಟೋ ಹಂಚಿಕೊಂಡಿದ್ದಾರೆ. 'ಇದು ನಿರ್ಮಿಸಿದ್ದು, ಖರೀದಿಸಿದ್ದಲ್ಲ' ಎಂದು ಬರೆದು ಟ್ರೋಲ್‌ಗಳಿಗೆ ಉತ್ತರ ನೀಡಿದ್ದಾರೆ. ಈ ಪರಿವರ್ತನೆ ಡ್ರ್ಯಾಗನ್ ಸಿನಿಮಾಕ್ಕೆ ಹೊಸ ನಿರೀಕ್ಷೆ ಮೂಡಿಸಿದೆ.

‘ನಿರ್ಮಿಸಿದ್ದು, ಖರೀದಿಸಿದ್ದಲ್ಲ’; ಕಟ್ಟುಮಸ್ತಾದ ದೇಹದ ಫೋಟೋ ಹಂಚಿಕೊಂಡ ಜೂನಿಯರ್ ಎನ್​​​ಟಿಆರ್
ಜೂನಿಯರ್ ಎನ್​ಟಿಆರ್
ರಾಜೇಶ್ ದುಗ್ಗುಮನೆ
|

Updated on:Apr 13, 2026 | 2:52 PM

Share

ಜೂನಿಯರ್ ಎನ್​​ಟಿಆರ್ (JR NTR) ಅವರು ಇತ್ತೀಚೆಗೆ ಸುದ್ದಿ ಆಗಿದ್ದಾರೆ. ಅವರು ಪ್ರಶಾಂತ್ ನೀಲ್ ಅವರ ‘ಡ್ರ್ಯಾಗನ್’ ಚಿತ್ರದಲ್ಲಿ ಬ್ಯುಸಿ ಇದ್ದಾರೆ. ಈ ಸಿನಿಮಾಗಾಗಿ ಅವರು ದೇಹದ ತೂಕವನ್ನು ಕಡಿಮೆ ಮಾಡಿಕೊಂಡಿದ್ದರು. ಈಗ ಜೂನಿಯರ್ ಎನ್​ಟಿಆರ್ ಅವರು ಕಟ್ಟುಮಸ್ತಾದ ದೇಹ ಮಾಡಿಕೊಂಡಿದ್ದಾರೆ. ಈ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಜೂನಿಯರ್ ಎನ್​​ಟಿಆರ್ ಅವರು ಕೊನೆಯದಾಗಿ ತೆಲುಗಿನಲ್ಲಿ ಕಾಣಿಸಿಕೊಂಡಿದ್ದು ‘ದೇವರ’ ಚಿತ್ರದಲ್ಲಿ. ಈ ಸಿನಿಮಾ ಮೋಡಿ ಮಾಡುವಲ್ಲಿ ವಿಫಲವಾಯಿತು. ಆ ಬಳಿಕ ಅವರು ‘ವಾರ್ 2’ ಸಿನಿಮಾ ಮಾಡಿದರು. ಈ ಚಿತ್ರ ಹೀನಾಯವಾಗಿ ಸೋಲು ಕಂಡಿತು. ಈಗ ಅವರು ಪ್ರಶಾಂತ್ ನೀಲ್ ಜೊತೆ ಕೆಲಸ ಮಾಡುತ್ತಿದ್ದಾರೆ. ಈ ಸಿನಿಮಾ ನಿಂತಿದೆ ಎಂದೆಲ್ಲ ಸುದ್ದಿಗಳು ಹರಿದಾಡಿತ್ತು. ತಂಡದವರು ಪ್ರತಿ ಹಂತದಲ್ಲೂ ಇದಕ್ಕೆ ಸ್ಪಷ್ಟನೆ ನೀಡುತ್ತಾ ಹೊಗುತ್ತಿದ್ದಾರೆ. ಈಗ ಜೂನಿಯರ್ ಎನ್​​ಟಿಆರ್ ಟ್ರೋಲ್​​ಗಳಿಗೆ ಉತ್ತರ ನೀಡಿದ್ದಾರೆ.

ಜೂನಿಯರ್ ಎನ್​ಟಿಆರ್ ಅವರು ಈಗ ಹಿಂಭಾಗದಿಂದ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರ ಫಿಟ್ ಆದ ಬಾಡಿ ಗಮನ ಸೆಳೆದಿದೆ. ‘ಇದನ್ನು ನಿರ್ಮಿಸಿದ್ದು, ಖರೀದಿ ಮಾಡಿದ್ದಲ್ಲ’ ಎಂದು ಅವರು ಕ್ಯಾಪ್ಶನ್ ನೀಡಿದ್ದಾರೆ. ಈ ಮೂಲಕ ಟ್ರೋಲ್ ಮಾಡುವವರಿಗೆ ಅವರು ಉತ್ತರ ಕೊಟ್ಟಿದ್ದಾರೆ.

View this post on Instagram

A post shared by Jr NTR (@jrntr)

‘ಡ್ರ್ಯಾಗನ್’ ಚಿತ್ರಕ್ಕಾಗಿ ಜೂ.ಎನ್​ಟಿಆರ್ ಅವರು ಸಾಕಷ್ಟು ತೂಕ ಇಳಿಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಾ ಇದೆ. ಕೆಲವರಿಗೆ ಈ ಬಗ್ಗೆ ಬೇಸರ ಇದೆ. ಅವರು ಸಿನಿಮಾ ಶೂಟ್ ಮುಗಿದ ಬಳಿಕ ಮತ್ತೆ ತೂಕ ಹೆಚ್ಚಿಸಿಕೊಳ್ಳುವ ಸಾಧ್ಯತೆ ಇದೆ.

ಇದನ್ನೂ ಓದಿ: ಜೂ ಎನ್​​ಟಿಆರ್ ಸಿನಿಮಾಕ್ಕೆ ಬಾಲಿವುಡ್ ನಟನಿಗೆ ಗಾಳ ಹಾಕಿದ ಪ್ರಶಾಂತ್ ನೀಲ್

ಪ್ರಶಾಂತ್ ನೀಲ್ ಕೊನೆಯದಾಗಿ ನಿರ್ದೇಶನ ಮಾಡಿದ್ದು ‘ಸಲಾರ್’ ಚಿತ್ರವನ್ನು. ಈ ಸಿನಿಮಾ ಹಿಟ್ ಆಗಿಲ್ಲ. ಆ ಬಳಿಕ ಅವರು ‘ಡ್ರ್ಯಾಗನ್’ ಚಿತ್ರ ಒಪ್ಪಿಕೊಂಡರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:51 pm, Mon, 13 April 26

Follow Us
ಇಂಡೋನೇಷ್ಯಾದ 1,000 ವರ್ಷದ ಶಿವನ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಭಾರತ ಬೆಂಬಲ
ಇಂಡೋನೇಷ್ಯಾದ 1,000 ವರ್ಷದ ಶಿವನ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಭಾರತ ಬೆಂಬಲ
ಶಿರಾಡಿ ಘಾಟ್‌ನಲ್ಲಿ ನಿಯಂತ್ರಣ ತಪ್ಪಿ ಡಾಂಬರ್ ಟ್ಯಾಂಕರ್ ಪಲ್ಟಿ
ಶಿರಾಡಿ ಘಾಟ್‌ನಲ್ಲಿ ನಿಯಂತ್ರಣ ತಪ್ಪಿ ಡಾಂಬರ್ ಟ್ಯಾಂಕರ್ ಪಲ್ಟಿ
ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ
ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ
SIR ಪ್ರಕ್ರಿಯಲ್ಲಿ ಸಾಲುಸಾಲು ಎಡವಟ್ಟು: ಫಾರ್ಮ್​ ತುಂಬಲು ಶಾಲಾ ಮಕ್ಕಳ ಬಳಕೆ
SIR ಪ್ರಕ್ರಿಯಲ್ಲಿ ಸಾಲುಸಾಲು ಎಡವಟ್ಟು: ಫಾರ್ಮ್​ ತುಂಬಲು ಶಾಲಾ ಮಕ್ಕಳ ಬಳಕೆ