Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋರ್ಟ್ ಕಟಕಟೆ ಏರಿದ ನಟ ಜೂನಿಯರ್ ಎನ್​ಟಿಆರ್​; ವಿಡಿಯೋ ವೈರಲ್

ಕಮರ್ಷಿಯಲ್ ಶೂಟ್​ನಲ್ಲಿ ಜೂನಿಯರ್ ಎನ್​ಟಿಆರ್​ ಅವರು ಭಾಗಿ ಆಗಿದ್ದಾರೆ. ಇದರಲ್ಲಿ ಅವರು ಸಖತ್ ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ. ಅವರು ಕಟಕಟೆ ಮಾದರಿಯ ಜಾಗದಲ್ಲಿ ನಿಂತು ಕ್ಯಾಮೆರಾ ಎದುರಿಸಿದ್ದಾರೆ.

ಕೋರ್ಟ್ ಕಟಕಟೆ ಏರಿದ ನಟ ಜೂನಿಯರ್ ಎನ್​ಟಿಆರ್​; ವಿಡಿಯೋ ವೈರಲ್
ಜೂನಿಯರ್ ಎನ್​ಟಿಆರ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Nov 23, 2022 | 2:35 PM

ನಟ ಜೂನಿಯರ್ ಎನ್​ಟಿಆರ್ (Jr. NTR) ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಈ ವರ್ಷ ತೆರೆಗೆ ಬಂದ ‘ಆರ್​ಆರ್​ಆರ್​’ ಸಿನಿಮಾ ಸಾವಿರಾರು ಕೋಟಿ ರೂಪಾಯಿ ಬಿಸ್ನೆಸ್ ಮಾಡಿತು. ಈ ಚಿತ್ರದಿಂದ ವಿಶ್ವ ಮಟ್ಟದಲ್ಲಿ ಅವರಿಗಿದ್ದ ಖ್ಯಾತಿ ದ್ವಿಗುಣ ಆಗಿದೆ. ಈಗ ಜೂನಿಯರ್ ಎನ್​ಟಿಆರ್ ಅವರು ಕಟಕಟೆ ಎದುರು ನಿಂತಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಷ್ಟಕ್ಕೂ ಅವರು ಈ ರೀತಿ ಕಟಕಟೆ ಏರಿದ್ದು ಕಮರ್ಷಿಯಲ್ ಶೂಟ್​ಗೋಸ್ಕರ.

ಕಮರ್ಷಿಯಲ್ ಶೂಟ್​ನಲ್ಲಿ ಜೂನಿಯರ್ ಎನ್​ಟಿಆರ್​ ಅವರು ಭಾಗಿ ಆಗಿದ್ದಾರೆ. ಇದರಲ್ಲಿ ಅವರು ಸಖತ್ ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ. ಅವರು ಕಟಕಟೆ ಮಾದರಿಯ ಜಾಗದಲ್ಲಿ ನಿಂತು ಕ್ಯಾಮೆರಾ ಎದುರಿಸಿದ್ದಾರೆ. ಕಮರ್ಷಿಯಲ್ ಶೂಟ್​ನ ಮೇಕಿಂಗ್ ವಿಡಿಯೋನ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ. ಸದ್ಯ ಈ ವಿಡಿಯೋ ಸಾಕಷ್ಟು ವೈರಲ್ ಆಗುತ್ತಿದೆ. ಸೆಲೆಬ್ರಿಟಿ ಹೇರ್​ಸ್ಟೈಲಿಸ್ಟ್​ ಆಲಿಮ್ ಹಕೀಮ್ ಕೂಡ ಈ ಶೂಟ್​ನಲ್ಲಿ ಭಾಗಿ ಆಗಿದ್ದಾರೆ. ಜ್ಯೂ.ಎನ್​ಟಿಆರ್​ಗೆ ಅವರೇ ಹೇರ್​ ಸ್ಟೈಲ್ ಮಾಡಿದ್ದಾರೆ.

ಇದನ್ನೂ ಓದಿ
Image
Jr NTR: ಜೂನಿಯರ್​ ಎನ್​ಟಿಆರ್​ ಮನೆಯಲ್ಲಿ ಅಪ್ಪು ಫೋಟೋ; ಕರುನಾಡ ಗೆಳೆಯನಿಗೆ ತೆಲುಗು​ ನಟನ ಗೌರವ
Image
ಪುನೀತ್​ಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಸಮಾರಂಭ; ​ ನಟ ಜೂ. ಎನ್​ಟಿಆರ್-ರಜನಿಕಾಂತ್​ ಭಾಗಿ
Image
ಜ್ಯೂ. ಎನ್​ಟಿಆರ್ ಭೇಟಿ ಮಾಡಿದ ಕೇಂದ್ರ ಗೃಹ ಸಚಿವ ಅಮಿತ್​ ಶಾ​; ಇಲ್ಲಿದೆ ಫೋಟೋ ಗ್ಯಾಲರಿ
Image
‘ಪುನೀತ್​ ನಟನೆಯ ಜೇಮ್ಸ್​ ನೋಡಿದ್ರಾ?’; ಈ ಪ್ರಶ್ನೆಗೆ ಕನ್ನಡದಲ್ಲೇ ಉತ್ತರಿಸಿದ ಜ್ಯೂ.ಎನ್​ಟಿಆರ್​

ಜ್ಯೂ.ಎನ್​ಟಿಆರ್​ ಕೈಯಲ್ಲಿ ಎರಡು ದೊಡ್ಡ ಬಜೆಟ್ ಚಿತ್ರಗಳಿವೆ. ಕೊರಟಾಲ ಶಿವ ಅವರು ಜ್ಯೂ.ಎನ್​ಟಿಆರ್​ 30ನೇ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಸಾಕಷ್ಟು ಮಾಸ್ ರೀತಿಯಲ್ಲಿ ಈ ಸಿನಿಮಾ ಮೂಡಿ ಬರಲಿದೆ ಎನ್ನಲಾಗಿದೆ. ಅನಿರುದ್ಧ್​ ರವಿಚಂದರ್ ಅವರು ಈ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಈ ಚಿತ್ರ ದೊಡ್ಡ ಬಜೆಟ್​ನಲ್ಲಿ ಸಿದ್ಧಗೊಳ್ಳಲಿದೆ. 2016ರಲ್ಲಿ ತೆರೆಗೆ ಬಂದ ‘ಜನತಾ ಗ್ಯಾರೇಜ್​’ ಚಿತ್ರದಲ್ಲಿ ಜೂನಿಯರ್ ಎನ್​ಟಿಆರ್ ಹಾಗೂ ಕೊರಟಾಲ ಶಿವ ಒಟ್ಟಾಗಿ ಕೆಲಸ ಮಾಡಿದ್ದರು.

ಇದನ್ನೂ ಓದಿ: Jr NTR: ಜೂನಿಯರ್​ ಎನ್​ಟಿಆರ್​ ಬೆಂಗಳೂರಿಗೆ ಬಂದುಹೋದ ಬೆನ್ನಲ್ಲೇ ಕೇಳಿಬಂತು ಹೊಸ ಸಿನಿಮಾ ಸುದ್ದಿ

ಜೂನಿಯರ್ ಎನ್​ಟಿಆರ್ ಅವರ 31ನೇ ಚಿತ್ರದ ಬಗ್ಗೆಯೂ ಸಾಕಷ್ಟು ನಿರೀಕ್ಷೆ ಇದೆ. ಈ ಸಿನಿಮಾಗೆ ‘ಕೆಜಿಎಫ್’ ಖ್ಯಾತಿಯ ಪ್ರಶಾಂತ್ ನೀಲ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರ ಪ್ರೀ ಪ್ರೊಡಕ್ಷನ್ ಹಂತದಲ್ಲಿದೆ. ಪ್ರಶಾಂತ್ ನೀಲ್ ಅವರು ‘ಸಲಾರ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಜೂನಿಯರ್ ಎನ್​ಟಿಆರ್​ ಅವರ 30ನೇ ಸಿನಿಮಾ ಪೂರ್ಣಗೊಂಡ ಬಳಿಕ ಈ ಚಿತ್ರದ ಕೆಲಸಗಳು ಆರಂಭ ಆಗಲಿವೆ.

Published On - 2:35 pm, Wed, 23 November 22

ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಜಾತಿ ಗಣತಿ ಬೇಸಿಕ್ ಡಾಟಾ ಒದಗಿಸಿದೆ, ಆದರ ಆಧಾರದ ಮೇಲೆ ತೀರ್ಮಾನಗಳು: ಸಚಿವ
ಜಾತಿ ಗಣತಿ ಬೇಸಿಕ್ ಡಾಟಾ ಒದಗಿಸಿದೆ, ಆದರ ಆಧಾರದ ಮೇಲೆ ತೀರ್ಮಾನಗಳು: ಸಚಿವ
ಜಾತಿ ಗಣತಿಯ ಬಗ್ಗೆ ಕಾಂಗ್ರೆಸ್ ಸರ್ಕಾರದ ಗೊಂದಲ ಜನಕ್ಕೆ ಗೊತ್ತಾಗುತ್ತಿದೆ!
ಜಾತಿ ಗಣತಿಯ ಬಗ್ಗೆ ಕಾಂಗ್ರೆಸ್ ಸರ್ಕಾರದ ಗೊಂದಲ ಜನಕ್ಕೆ ಗೊತ್ತಾಗುತ್ತಿದೆ!
ಬಿಜೆಪಿಯ ರಾಜಕೀಯ ಪಿತೂರಿ; ಇಡಿ ಸಮನ್ಸ್ ಬಳಿಕ ರಾಬರ್ಟ್ ವಾದ್ರಾ ಆರೋಪ
ಬಿಜೆಪಿಯ ರಾಜಕೀಯ ಪಿತೂರಿ; ಇಡಿ ಸಮನ್ಸ್ ಬಳಿಕ ರಾಬರ್ಟ್ ವಾದ್ರಾ ಆರೋಪ
ಮತ್ತೊಮ್ಮೆ ಸಮೀಕ್ಷೆ ಮಾಡಿಸುವಂತೆ ಸಿಎಂ, ಡಿಸಿಎಂಗೆ ಆಗ್ರಹಿಸುತ್ತೇವೆ: ಶಾಸಕ
ಮತ್ತೊಮ್ಮೆ ಸಮೀಕ್ಷೆ ಮಾಡಿಸುವಂತೆ ಸಿಎಂ, ಡಿಸಿಎಂಗೆ ಆಗ್ರಹಿಸುತ್ತೇವೆ: ಶಾಸಕ
ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸಿಎಂ ಹಣ ಮೀಸಲಿಟ್ಟಿದ್ದಾರಾ? ವಿಜಯೇಂದ್ರ
ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸಿಎಂ ಹಣ ಮೀಸಲಿಟ್ಟಿದ್ದಾರಾ? ವಿಜಯೇಂದ್ರ