AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂ ಎನ್​ಟಿಆರ್​ಗೆ ಗಾಯ, ಅಧಿಕೃತ ಹೇಳಿಕೆ ಬಿಡುಗಡೆ

ಜೂ ಎನ್​ಟಿಆರ್ ನಟನೆಯ ಸಂದರ್ಭದಲ್ಲಿ ಜೂ ಎನ್​ಟಿಆರ್​ಗೆ ಪೆಟ್ಟಾಗಿ ಆಸ್ಪತ್ರೆ ಸೇರಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಆದರೆ ಚಿತ್ರತಂಡ ಈ ಬಗ್ಗೆ ಸ್ಪಷ್ಟನೆ ನೀಡಿದೆ.

ಜೂ ಎನ್​ಟಿಆರ್​ಗೆ ಗಾಯ, ಅಧಿಕೃತ ಹೇಳಿಕೆ ಬಿಡುಗಡೆ
ಮಂಜುನಾಥ ಸಿ.
|

Updated on: Aug 14, 2024 | 6:14 PM

Share

ನಟ ಜೂ ಎನ್​ಟಿಆರ್ ‘ದೇವರ’ ಸಿನಿಮಾದ ಶೂಟಿಂಗ್​ನಲ್ಲಿ ಬ್ಯುಸಿಯಾಗಿದ್ದು, ಸಿನಿಮಾದ ಕ್ಲೈಮ್ಯಾಕ್ಸ್ ದೃಶ್ಯಗಳ ಚಿತ್ರೀಕರಣ ಚಾಲ್ತಿಯಲ್ಲಿದೆ ಎನ್ನಲಾಗುತ್ತಿದೆ. ಸಿನಿಮಾದ ಕೆಲವು ಫೈಟ್ ದೃಶ್ಯಗಳಲ್ಲಿ ಜೂ ಎನ್​ಟಿಆರ್ ತೊಡಗಿಸಿಕೊಂಡಿದ್ದು, ಈ ನಡುವೆ ಜೂ ಎನ್​ಟಿಆರ್​ ಗಾಯಗೊಂಡಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಫೈಟ್ ದೃಶ್ಯದ ಚಿತ್ರೀಕರಣದ ಸಂದರ್ಭದಲ್ಲಿ ಜೂ ಎನ್​ಟಿಆರ್ ಬಿದ್ದು ಗಾಯಗೊಂಡಿದ್ದಾರೆ, ಅವರನ್ನು ಆಸ್ಪತ್ರೆಗೆ ದಾಖಲಸಲಾಗಿದೆ ಎಂಬ ಸುದ್ದಿ ಎರಡು ದಿನದ ಹಿಂದೆಯೇ ಹರಿದಾಡಲು ಆರಂಭಿಸಿತ್ತು. ಇದೀಗ ಈ ಬಗ್ಗೆ ಅಧಿಕೃತ ಹೇಳಿಕೆ ಹೊರಬಿದ್ದಿದೆ.

ದೇವರ ಚಿತ್ರತಂಡದವರು ನೀಡಿರುವ ಮಾಹಿತಿಯಂತೆ ಜಿಮ್​ನಲ್ಲಿ ವರ್ಕೌಟ್ ಮಾಡುತ್ತಿರುವಾಗ ಜೂ ಎನ್​ಟಿಆರ್ ಗಾಯಗೊಂಡಿದ್ದಾರೆಯೇ ವಿನಃ ಸಿನಿಮಾದ ಶೂಟಿಂಗ್​ನಲ್ಲಿ ಅಲ್ಲ. ಜಿಮ್​ನಲ್ಲಿ ವರ್ಕೌಟ್ ಮಾಡುವಾಗ ಅವರ ಮಣಿಕಟ್ಟು ಹಾಗೂ ಹೆಬ್ಬೆರಳಿಗೆ ಗಾಯ ಮಾಡಿಕೊಂಡಿದ್ದಾರೆ ಜೂ ಎನ್​ಟಿಆರ್. ಸೂಕ್ತ ಚಿಕಿತ್ಸೆಯನ್ನು ಪಡೆದುಕೊಂಡಿದ್ದಾರೆ. ನೋವಿನ ನಡುವೆಯೂ ಜೂ ಎನ್​ಟಿಆರ್ ‘ದೇವರ’ ಸಿನಿಮಾದ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಲ್ಲದೆ ಸಿನಿಮಾದ ಮೊದಲ ಭಾಗದ ಚಿತ್ರೀಕರಣವನ್ನೂ ಸಹ ಮುಗಿಸಿಕೊಟ್ಟಿದ್ದಾರೆ ಎಂದಿದ್ದಾರೆ.

ಇದನ್ನೂ ಓದಿ:ಜೂ ಎನ್​ಟಿಆರ್ ಕೈಯಲ್ಲಿರುವ ಈ ವಾಚ್​ ಬೆಲೆಗೆ ಒಂದು ಸಿನಿಮಾ ನಿರ್ಮಿಸಬಹುದು

ಜೂ ಎನ್​ಟಿಆರ್ ಸಹ ನಿನ್ನೆ ಟ್ವೀಟ್ ಒಂದನ್ನು ಮಾಡಿದ್ದು, ‘ದೇವರ’ ಸಿನಿಮಾದ ಮೊದಲ ಭಾಗದ ಚಿತ್ರೀಕರಣ ಮುಗಿಸಿದ್ದೇವೆ. ನಾನು ಈ ತಂಡದ ಸಮುದ್ರದಂಥಹಾ ಪ್ರೀತಿ ಮತ್ತು ಕಾಳಜಿಯನ್ನು ನಾನು ಮಿಸ್ ಮಾಡಿಕೊಳ್ಳಲಿದ್ದೇನೆ. ಕೊರಟಾಲ ಶಿವ ಸೃಷ್ಟಿಸಿರುವ ಅದ್ಭುತ ಪ್ರಪಂಚದಲ್ಲಿ ಯಾನ ಮಾಡಲು ನಾನಂತೂ ಕಾಯುತ್ತಿದ್ದೇನೆ. ಈ ಕಾಯುವಿಕೆ ಸೆಪ್ಟೆಂಬರ್ 27ಕ್ಕೆ ಅಂತ್ಯವಾಗಲಿದೆ’ ಎಂದಿದ್ದಾರೆ. ಸಂದೇಶದ ಜೊತೆಗೆ ತಮ್ಮ ಹಾಗೂ ಕೊರಟಾಲ ಶಿವ ಅವರ ಚಿತ್ರವನ್ನು ಹಂಚಿಕೊಂಡಿದ್ದು, ಚಿತ್ರದಲ್ಲಿ ಜೂ ಎನ್​ಟಿಆರ್ ಆರೋಗ್ಯಕರವಾಗಿರುವಂತೆ ಕಾಣುತ್ತಿದ್ದಾರೆ.

‘ದೇವರ’ ಚಿತ್ರತಂಡ ಹೇಳಿರುವಂತೆ ಸಿನಿಮಾದ ಮೊದಲ ಭಾಗದ ಚಿತ್ರೀಕರಣ ಮುಗಿದಿದ್ದು, ಎರಡನೇ ಭಾಗದ ಚಿತ್ರೀಕರಣವನ್ನು ಸಹ ಈಗಲೇ ಪ್ರಾರಂಭ ಮಾಡುವ ಯೋಜನೆ ಇದೆಯಂತೆ. ಆದರೆ ಎರಡನೇ ಭಾಗದ ಕೆಲವು ಭಾಗಗಳಷ್ಟೆ ಈಗ ಚಿತ್ರೀಕರಣ ಆಗಲಿವೆಯಂತೆ. ಜೂ ಎನ್​ಟಿಆರ್ ಪ್ರಸ್ತುತ ಹಿಂದಿಯ ‘ವಾರ್ 2’ ಸಿನಿಮಾದಲ್ಲಿ ಹೃತಿಕ್ ರೋಷನ್ ಜೊತೆಗೆ ನಟಿಸುತ್ತಿದ್ದಾರೆ. ಆ ಸಿನಿಮಾದ ಬಳಿಕ ಪ್ರಶಾಂತ್ ನೀಲ್ ನಿರ್ದೇಶನದ ‘ಡ್ರ್ಯಾಗನ್’ ಸಿನಿಮಾದ ಚಿತ್ರೀಕರಣ ಶುರು ಮಾಡಲಿದ್ದಾರೆ. ‘ವಾರ್ 2’ ಸಿನಿಮಾದ ಚಿತ್ರೀಕರಣವೂ ಬಹುತೇಕ ಅಂತ್ಯವಾಗುತ್ತಾ ಬಂದಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ದಿ ರೈಸ್ ಆಫ್ ಅಶೋಕ: ಇಂಗ್ಲಿಷ್ ಟೈಟಲ್ ಇಟ್ಟಿದ್ದಕ್ಕೆ ಕಾರಣ ತಿಳಿಸಿದ ಸತೀಶ್
ದಿ ರೈಸ್ ಆಫ್ ಅಶೋಕ: ಇಂಗ್ಲಿಷ್ ಟೈಟಲ್ ಇಟ್ಟಿದ್ದಕ್ಕೆ ಕಾರಣ ತಿಳಿಸಿದ ಸತೀಶ್
ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ
ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ
ಕರ್ನಾಟಕ ವಿರುದ್ಧ 5 ವಿಕೆಟ್ ಉರುಳಿಸಿದ ಆಕಿಬ್ ನಬಿ
ಕರ್ನಾಟಕ ವಿರುದ್ಧ 5 ವಿಕೆಟ್ ಉರುಳಿಸಿದ ಆಕಿಬ್ ನಬಿ
ತಂಡಕ್ಕೆ ಚಿಯರ್ ಅಪ್ ಮಾಡಲು ಹುಬ್ಬಳ್ಳಿಗೆ ಬಂದ ಜಮ್ಮು-ಕಾಶ್ಮೀರ ಸಿಎಂ
ತಂಡಕ್ಕೆ ಚಿಯರ್ ಅಪ್ ಮಾಡಲು ಹುಬ್ಬಳ್ಳಿಗೆ ಬಂದ ಜಮ್ಮು-ಕಾಶ್ಮೀರ ಸಿಎಂ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ