AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಆರ್​ಆರ್​ ಚಿತ್ರದ ಪ್ರಮೋಷನ್​ಗಾಗಿ ದೊಡ್ಡ ತ್ಯಾಗಕ್ಕೆ ಸಿದ್ಧರಾದ ಜ್ಯೂ.ಎನ್​ಟಿಆರ್​

ಜ್ಯೂ.ಎನ್​ಟಿಆರ್​ ‘ಆರ್​ಆರ್​ಆರ್​’ ಸಿನಿಮಾದಲ್ಲಿ ನಟಿಸಿದ್ದಾರೆ. ಅವರು ಕೂಡ ಪ್ರಚಾರ ಕಾರ್ಯದಲ್ಲಿ ತೊಡಗಿಕೊಳ್ಳಲಿದ್ದಾರೆ. ಈ ಕಾರಣಕ್ಕೆ ಉಳಿದ ಎಲ್ಲಾ ಪ್ರಾಜೆಕ್ಟ್​ಗಳ ಕೆಲಸವನ್ನು ಮುಂದೂಡುವಂತೆ ಅವರು ಸೂಚಿಸಿದ್ದಾರೆ ಎನ್ನಲಾಗುತ್ತಿದೆ.

ಆರ್​ಆರ್​ಆರ್​ ಚಿತ್ರದ ಪ್ರಮೋಷನ್​ಗಾಗಿ ದೊಡ್ಡ ತ್ಯಾಗಕ್ಕೆ ಸಿದ್ಧರಾದ ಜ್ಯೂ.ಎನ್​ಟಿಆರ್​
TV9 Web
| Edited By: |

Updated on: Nov 12, 2021 | 4:06 PM

Share

ಎಸ್​.ಎಸ್​. ರಾಜಮೌಳಿ (SS Rajamouli) ಸಿನಿಮಾ ಮಾಡೋಕೆ ಎಷ್ಟು ಕಾಳಜಿ ವಹಿಸುತ್ತಾರೋ ಅಷ್ಟೇ ಪ್ರಾಮುಖ್ಯತೆಯನ್ನು ಸಿನಿಮಾದ ಪ್ರಚಾರಕ್ಕೂ ಕೊಡುತ್ತಾರೆ. ದೊಡ್ಡ ಬಜೆಟ್​ನಲ್ಲಿ ಸಿದ್ಧಗೊಳ್ಳುವ ಅವರ ನಿರ್ದೇಶನದ ಸಿನಿಮಾಗಳಿಗೆ ಭಾರೀ ಪ್ರಚಾರ ನೀಡುತ್ತಾರೆ. ಈ ಮೂಲಕ ಸಿನಿಮಾವನ್ನು ಎಲ್ಲರಿಗೂ ತಲುಪಿಸುವ ಕೆಲಸ ಮಾಡುತ್ತಾರೆ. ಈಗ ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್​’  (RRR Movie) ಸಿನಿಮಾ ರಿಲೀಸ್​ಗೆ ರೆಡಿ ಆಗಿದೆ. ಹೊಸ ವರ್ಷದ ಆರಂಭದಲ್ಲೇ ಈ ಚಿತ್ರ ರಿಲೀಸ್​ ಆಗುತ್ತಿದೆ. ಈ ಸಿನಿಮಾ ಕಲೆಕ್ಷನ್​ ರೂಪದಲ್ಲಿ ದೊಡ್ಡ ಮಟ್ಟದ ಗಳಿಕೆ ಮಾಡುವ ನಿರೀಕ್ಷೆ ಇದೆ. ಶೀಘ್ರದಲ್ಲೇ ಸಿನಿಮಾ ಪ್ರಚಾರ ಕಾರ್ಯ ಆರಂಭಿಸಲು ರಾಜಮೌಳಿ ರೆಡಿ ಆಗಿದ್ದಾರೆ. ಇದಕ್ಕೆ ಸಿದ್ಧರಾಗುವಂತೆ ತಂಡದ ಕಲಾವಿದರಿಗೆ ಅವರು ಸೂಚಿಸಿದ್ದಾರೆ.

ಜ್ಯೂ.ಎನ್​ಟಿಆರ್​ ‘ಆರ್​ಆರ್​ಆರ್​’ ಸಿನಿಮಾದಲ್ಲಿ ನಟಿಸಿದ್ದಾರೆ. ಅವರು ಕೂಡ ಪ್ರಚಾರ ಕಾರ್ಯದಲ್ಲಿ ತೊಡಗಿಕೊಳ್ಳಲಿದ್ದಾರೆ. ಈ ಕಾರಣಕ್ಕೆ ಉಳಿದ ಎಲ್ಲಾ ಪ್ರಾಜೆಕ್ಟ್​ಗಳ ಕೆಲಸವನ್ನು ಮುಂದೂಡುವಂತೆ ಅವರು ಸೂಚಿಸಿದ್ದಾರೆ ಎನ್ನಲಾಗುತ್ತಿದೆ. ಪ್ರಚಾರದ ಮಧ್ಯೆಯೂ ಅವರು ಉಳಿದ ಪ್ರಾಜೆಕ್ಟ್​ಗಳ ಕೆಲಸಗಳನ್ನು ಮುಂದುವರಿಸಬಹುದು. ಆದರೆ, ಇದರಿಂದ ಅವರ ಆರೋಗ್ಯದ ಮೇಲೆ ಬೇರೆಯದೇ ರೀತಿಯ ಪರಿಣಾಮ ಉಂಟಾಗಬಹುದು.

ಜ್ಯೂ.ಎನ್​ಟಿಆರ್​ ಇತ್ತೀಚೆಗೆ ಸಣ್ಣ ಪ್ರಮಾಣದ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಇದರಿಂದ ಅವರು ಕೊಂಚ ವಿಶ್ರಾಂತಿ ಪಡೆಯಬೇಕಿದೆ. ವಿಶ್ರಾಂತಿ ನಂತರದಲ್ಲಿ ‘ಆರ್​ಆರ್​ಆರ್​’ ಚಿತ್ರದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಲಿದ್ದಾರೆ. ಈ ನಡುವೆ ಬೇರೆ ಸಿನಿಮಾಗಳ ಕೆಲಸ ಮಾಡೋದು ಎಂದರೆ ಅದು ತುಂಬಾನೇ ಶ್ರಮದಾಯಕವಾಗಲಿದೆ. ಈ ಕಾರಣಕ್ಕೆ ಜ್ಯೂ.ಎನ್​ಟಿಆರ್​ ಅವರು ಉಳಿದ ಪ್ರಾಜೆಕ್ಟ್​ಗಳ ಕೆಲಸವನ್ನು 2022ಕ್ಕೆ ಮುಂದೂಡಿದ್ದಾರೆ.

ಜ್ಯೂ.ಎನ್​ಟಿಆರ್​ ಅವರು ಜಾಹೀರಾತು ಶೂಟಿಂಗ್​ಗಾಗಿ ಮುಂಬೈಗೆ ತೆರಳಬೇಕಿತ್ತು. ಆದರೆ, ಆ ಕೆಲಸವನ್ನು ಸದ್ಯಕ್ಕೆ ಹೋಲ್ಡ್​ನಲ್ಲಿ ಇರಿಸಿದ್ದಾರೆ. ಇನ್ನು, ಕೊರಟಾಲ ಶಿವ ಜತೆ ಜ್ಯೂ.ಎನ್​ಟಿಆರ್​ ಸಿನಿಮಾ ಮಾಡುತ್ತಿದ್ದಾರೆ. ಇದೇ ತಿಂಗಳಲ್ಲಿ ಈ ಸಿನಿಮಾ ಮುಹೂರ್ತ ನಡೆಯಬೇಕಿತ್ತು. ಅದನ್ನು ಕೂಡ ಜ್ಯೂ.ಎನ್​ಟಿಆರ್​ 2021ಕ್ಕೆ ಪೋಸ್ಟ್​ಪೋನ್​ ಮಾಡಿದ್ದಾರೆ.

ನೈಜ ಘಟನೆ ಆಧರಿಸಿ ‘ಆರ್​ಆರ್​ಆರ್​’ ಸಿನಿಮಾ ತಯಾರಾಗಿದೆ. ಖ್ಯಾತ ಸಂಗೀತ ನಿರ್ದೇಶಕ ಎಂಎಂ ಕೀರವಾಣಿ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ಈ ಹಿಂದೆ ‘ದೋಸ್ತಿ..’ ಹಾಡು ಬಿಡುಗಡೆ ಆಗಿತ್ತು. ಇತ್ತೀಚೆಗೆ ರಿಲೀಸ್​ ಆದ  ಎರಡನೇ ಗೀತೆ ‘ಹಳ್ಳಿ ನಾಟು..’ ಎಲ್ಲೆಲ್ಲೂ ರಾರಾಜಿಸುತ್ತಿದೆ. ಈ ಹಾಡಿನಿಂದಾಗಿ ಚಿತ್ರದ ಮೇಲಿನ ಕ್ರೇಜ್​ ಹೆಚ್ಚುವಂತಾಗಿದೆ. 2022ರ ಜ.7ರಂದು ಈ ಸಿನಿಮಾ ಅದ್ದೂರಿಯಾಗಿ ವಿಶ್ವಾದ್ಯಂತ ಬಿಡುಗಡೆ ಆಗಲಿದೆ. ಆ ದಿನಕ್ಕಾಗಿ ಸಿನಿಪ್ರಿಯರು ಕಾದು ಕುಳಿತಿದ್ದಾರೆ.

ಇದನ್ನೂ ಓದಿ: Naatu Naatu Song: ‘ಆರ್​ಆರ್​ಆರ್​’ ಚಿತ್ರದ ‘ಹಳ್ಳಿ ನಾಟು..’ ಹಾಡಿನಲ್ಲಿ ರಾಮ್​ ಚರಣ್​, ಜ್ಯೂ. ಎನ್​ಟಿಆರ್​ ಮಸ್ತ್​ ಡ್ಯಾನ್ಸ್​

Follow Us
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ": ಸಚಿವ ಶಿವಲಿಂಗೇಗೌಡ
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?