ಮೇ 10ರಂದು ಚಿತ್ರಮಂದಿರಗಳಲ್ಲಿ ಮರು ಬಿಡುಗಡೆ ಆಗಲಿದೆ ‘ಆರ್​ಆರ್​ಆರ್​’ ಸಿನಿಮಾ

ದೇಶದ ಆಯ್ದ ಕೆಲವು ಚಿತ್ರಮಂದಿರಗಳಲ್ಲಿ ‘ಆರ್​ಆರ್​ಆರ್​’ ಸಿನಿಮಾ ಮರು ಬಿಡುಗಡೆ ಆಗಲಿದೆ. ಈ ಬಾರಿ ಎಷ್ಟು ಕಲೆಕ್ಷನ್​ ಮಾಡಲಿದೆ ಎಂಬುದನ್ನು ತಿಳಿಯುವ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ. ಜೂನಿಯರ್​ ಎನ್​ಟಿಆರ್, ರಾಮ್​ ಚರಣ್​, ಆಲಿಯಾ ಭಟ್​, ಅಜಯ್​ ದೇವಗನ್​ ಮುಂತಾದವರು ನಟಿಸಿರುವ ಈ ಸಿನಿಮಾಗೆ ಎಸ್​ಎಸ್​ ರಾಜಮೌಳಿ ನಿರ್ದೇಶನವಿದೆ.

ಮೇ 10ರಂದು ಚಿತ್ರಮಂದಿರಗಳಲ್ಲಿ ಮರು ಬಿಡುಗಡೆ ಆಗಲಿದೆ ‘ಆರ್​ಆರ್​ಆರ್​’ ಸಿನಿಮಾ
ಜೂನಿಯರ್​ ಎನ್​ಟಿಆರ್​, ರಾಮ್​ ಚರಣ್​
Follow us
|

Updated on: May 06, 2024 | 10:22 PM

2022ರ ಮಾರ್ಚ್​ 24ರಂದು ‘ಆರ್​ಆರ್​ಆರ್​’ ಸಿನಿಮಾ (RRR Movie) ಬಿಡುಗಡೆ ಆಗಿತ್ತು. ಆ ಚಿತ್ರದ ಹವಾ ಇನ್ನೂ ಕಡಿಮೆ ಆಗಿಲ್ಲ. ಈಗಲೂ ಕೂಡ ಆ ಸಿನಿಮಾ ಬಗ್ಗೆ ಜನರು ಮಾತನಾಡುತ್ತಲೇ ಇದ್ದಾರೆ. ರಾಜಮೌಳಿ (SS Rajamouli) ನಿರ್ದೇಶನದ ‘ಆರ್​ಆರ್​ಆರ್​’ ಸಿನಿಮಾವನ್ನು ಈಗ ಮರು ಬಿಡುಗಡೆ ಮಾಡಲಾಗುತ್ತಿದೆ. ಮತ್ತೊಮ್ಮೆ ದೊಡ್ಡ ಪರದೆಯಲ್ಲಿ ಈ ಚಿತ್ರವನ್ನು ಕಣ್ತುಂಬಿಕೊಳ್ಳುವ ಅವಕಾಶ ಸಿಗುತ್ತಿದೆ. ರಾಮ್​ ಚರಣ್ (Ram Charan), ಜೂನಿಯರ್​ ಎನ್​ಟಿಆರ್​, ಆಲಿಯಾ ಭಟ್​, ಅಜಯ್​ ದೇವಗನ್​ ಮುಂತಾದ ಸ್ಟಾರ್​ ಕಲಾವಿದರು ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ.

ಜಾಗತಿಕ ಮಟ್ಟದಲ್ಲಿ ‘ಆರ್​ಆರ್​ಆರ್​’ ಸಿನಿಮಾ ಸದ್ದು ಮಾಡಿದೆ. ಈ ಸಿನಿಮಾದ ‘ನಾಟು ನಾಟು..’ ಹಾಡಿಗೆ ಆಸ್ಕರ್​ ಪ್ರಶಸ್ತಿ ಸಿಕ್ಕಿದೆ. ಹಾಲಿವುಡ್​ನ ಸೆಲೆಬ್ರಿಟಿಗಳು ಕೂಡ ಈ ಸಿನಿಮಾವನ್ನು ಹಾಡಿ ಹೊಗಳಿದ್ದಾರೆ. ಅದರಿಂದಾಗಿ ರಾಜಮೌಳಿ, ರಾಮ್​ ಚರಣ್​, ಜೂನಿಯರ್​ ಎನ್​ಟಿಆರ್​ ಮುಂತಾದವರಿಗೆ ವಿಶ್ವಮಟ್ಟದಲ್ಲಿ ಜನಪ್ರಿಯತೆ ಹೆಚ್ಚಾಯಿತು.

ಇದನ್ನೂ ಓದಿ: ಜೂ. ಎನ್​ಟಿಆರ್​ನ ಫಾಲೋ ಮಾಡಿಕೊಂಡು ಬಂದ ವ್ಯಕ್ತಿ; ಸಿಟ್ಟಿನಿಂದ ಕೂಗಾಡಿದ ನಟ

ಜಪಾನ್​ನಲ್ಲಿ ಈಗಲೂ ‘ಆರ್​ಆರ್​ಆರ್​’ ಸಿನಿಮಾ ಪ್ರದರ್ಶನ ಕಾಣುತ್ತಿದೆ ಎಂಬ ಬಗ್ಗೆ ಚಿತ್ರತಂಡದವರು ಇತ್ತೀಚೆಗೆ ಮಾಹಿತಿ ಹಂಚಿಕೊಂಡಿದ್ದರು. ಅಲ್ಲಿನ ಕೆಲವು ಅಭಿಮಾಭಿಮಾನಿಗಳು ಭಾರತಕ್ಕೆ ಬಂದು ‘ಆರ್​ಆರ್​ಆರ್​’ ಸಿನಿಮಾದ ಚಿತ್ರೀಕರಣ ನಡೆದ ಜಾಗಕ್ಕೆ ಭೇಟಿ ನೀಡಿದ್ದರು. ಅವರ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದ್ದವು. ಅಷ್ಟೆಲ್ಲ ಕ್ರೇಜ್​ ಸೃಷ್ಟಿ ಮಾಡಿದ ಈ ಸಿನಿಮಾ ಮತ್ತೆ ಬಿಡುಗಡೆ ಆಗುತ್ತಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ.

ಇದನ್ನೂ ಓದಿ: ಒಂದೇ ಸಿನಿಮಾದಲ್ಲಿ ಶಾರುಖ್​, ಆಮಿರ್​, ಸಲ್ಮಾನ್​; ‘ರಾಜಮೌಳಿ ನಿರ್ದೇಶನ ಮಾಡ್ಬೇಕು’ ಎಂದ ನೆಟ್ಟಿಗರು

‘ಆರ್​ಆರ್​ಆರ್’ ಸಿನಿಮಾ ಮೊದಲ ಬಾರಿ ಬಿಡುಗಡೆ ಆದಾಗ ಬಾಕ್ಸ್​ ಆಫೀಸ್​ನಲ್ಲಿ ಭರ್ಜರಿ ಕಮಾಯಿ ಮಾಡಿತ್ತು. ಈಗ ಮರು ಬಿಡುಗಡೆ ಆಗಲಿದ್ದು, ಎಷ್ಟು ಕಲೆಕ್ಷನ್​ ಆಗಲಿದೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ. 3ಡಿ ಮತ್ತು 2ಡಿ ವರ್ಷನ್​ನಲ್ಲಿ ಈ ಸಿನಿಮಾ ಮರು ಬಿಡುಗಡೆ ಆಗುತ್ತಿದೆ. ಎಂ.ಎಂ. ಕೀರವಾಣಿ ಅವರು ಈ ಸಿನಿಮಾಗೆ ಸಂಗೀತ ನಿರ್ದೇಶನ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ