AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jr NTR: ಜೂನಿಯರ್​ ಎನ್​ಟಿಆರ್​ ಬೆಂಗಳೂರಿಗೆ ಬಂದುಹೋದ ಬೆನ್ನಲ್ಲೇ ಕೇಳಿಬಂತು ಹೊಸ ಸಿನಿಮಾ ಸುದ್ದಿ

Jr NTR New Movie: ‘ಆರ್​ಆರ್​ಆರ್​’ ಬಳಿಕ ಜೂನಿಯರ್​ ಎನ್​ಟಿಆರ್​ ಅವರು ಬೇರೆ ಯಾವುದೇ ಸಿನಿಮಾವನ್ನೂ ಸದ್ಯಕ್ಕೆ ಶುರು ಮಾಡಿಲ್ಲ. ಯುವ ನಿರ್ದೇಶಕನ ಜೊತೆ ಅವರೀಗ ಮಾತುಕಥೆ ನಡೆಸಿದ್ದಾರೆ.

Jr NTR: ಜೂನಿಯರ್​ ಎನ್​ಟಿಆರ್​ ಬೆಂಗಳೂರಿಗೆ ಬಂದುಹೋದ ಬೆನ್ನಲ್ಲೇ ಕೇಳಿಬಂತು ಹೊಸ ಸಿನಿಮಾ ಸುದ್ದಿ
ಜೂನಿಯರ್​ ಎನ್​ಟಿಆರ್​
Follow us
TV9 Web
| Updated By: ಮದನ್​ ಕುಮಾರ್​

Updated on:Nov 02, 2022 | 8:19 AM

ನಟ ಪುನೀತ್​ ರಾಜ್​ಕುಮಾರ್​ ಅವರಿಗೆ ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಲಾಯಿತು. ವಿಧಾನಸೌಧದ ಮೆಟ್ಟಿಲುಗಳ ಮೇಲೆ ಮಂಗಳವಾರ (ನ.1) ಕನ್ನಡ ರಾಜ್ಯೋತ್ಸವದ ಶುಭ ಸಂದರ್ಭದಲ್ಲಿ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಖ್ಯಾತ ನಟ ಜೂನಿಯರ್ ಎನ್​ಟಿಆರ್​ (Jr NTR) ಅವರು ಮುಖ್ಯ ಅತಿಥಿ ಆಗಿದ್ದರು. ಅವರ ಬಂದು ಹೋಗಿದ್ದು ಕರುನಾಡಿನಲ್ಲಿನ ಅಭಿಮಾನಿಗಳಿಗೆ ಸಾಕಷ್ಟು ಖುಷಿ ನೀಡಿದೆ. ಅದರ ಬೆನ್ನಲ್ಲೇ ಹೊಸ ಚಿತ್ರದ ಬಗ್ಗೆ ಒಂದು ಗುಸುಗುಸು ಕೇಳಿಬಂದಿದೆ. ಮೂಲಗಳ ಪ್ರಕಾರ ಜೂನಿಯರ್ ಎನ್​ಟಿಆರ್​ ಅವರು ‘ಸೀತಾ ರಾಮಂ’ (Sita Ramam) ಚಿತ್ರದ ನಿರ್ದೇಶಕ ಹನು ರಾಘವಪುಡಿ (Hanu Raghavapudi) ಜೊತೆ ಕೈ ಜೋಡಿಸುವ ಸಾಧ್ಯತೆ ಇದೆ. ಈಗಾಗಲೇ ಇವರಿಬ್ಬರು ಒಂದು ಸ್ಕ್ರಿಪ್ಟ್​ ​ ಕುರಿತು ಮಾತುಕಥೆ ನಡೆಸಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್​’ ಸಿನಿಮಾ ಗೆಲುವಿನ ಬಳಿಕ ಜೂನಿಯರ್​ ಎನ್​ಟಿಆರ್​ ಅವರ ಮಾರುಕಟ್ಟೆ ಹಿರಿದಾಗಿದೆ. ಟಾಲಿವುಡ್​ನಲ್ಲಿ ಮಾತ್ರವಲ್ಲದೇ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಅವರು ಬಹುಬೇಡಿಕೆಯ ನಟನಾಗಿ ಗುರುತಿಸಿಕೊಂಡಿದ್ದಾರೆ. ಪ್ರತಿ ಚಿತ್ರದ ಸ್ಕ್ರಿಪ್ಟ್​ ಆಯ್ಕೆಯಲ್ಲಿ ಅವರು ಸಖತ್​ ಕಾಳಜಿ ವಹಿಸುತ್ತಿದ್ದಾರೆ. ಈಗ ಅವರು ‘ಸೀತಾ ರಾಮಂ’ ನಿರ್ದೇಶಕ ಹನು ರಾಘವಪುಡಿ ಜೊತೆ ಕೈ ಜೋಡಿಸುವ ಸಾಧ್ಯತೆ ದಟ್ಟವಾಗಿದೆ ಎನ್ನಲಾಗುತ್ತಿದೆ.

ರಶ್ಮಿಕಾ ಮಂದಣ್ಣ, ದುಲ್ಕರ್​ ಸಲ್ಮಾನ್​, ಮೃಣಾಲ್​ ಠಾಕೂರ್ ನಟನೆಯ ‘ಸೀತಾ ರಾಮಂ’ ಸಿನಿಮಾ ಈ ವರ್ಷ ಸೂಪರ್​ ಹಿಟ್​ ಆಯಿತು. ಆ ಬಳಿಕ ನಿರ್ದೇಶಕ ಹನು ರಾಘವಪುಡಿ ಅವರು ರಾಷ್ಟ್ರಮಟ್ಟದಲ್ಲಿ ಖ್ಯಾತಿ ಗಳಿಸಿದ್ದಾರೆ. ಈಗ ಅವರು ಜೂನಿಯರ್​ ಎನ್​ಟಿಆರ್​ ಅವರನ್ನು ಭೇಟಿ ಮಾಡಿ ಒಂದು ಕಥೆ​ ಹೇಳಿದ್ದಾರೆ ಎಂದು ಕೆಲವೆಡೆ ವರದಿ ಆಗಿದೆ. ಈ ಬಗ್ಗೆ ಯಾರಿಂದಲೂ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಆದರೂ ಬೆಂಕಿ ಇಲ್ಲದೆ ಹೊಗೆ ಆಡಲ್ಲ ಎನ್ನುತ್ತಿದ್ದಾರೆ ಗಾಸಿಪ್​ ಮಂದಿ.

ಇದನ್ನೂ ಓದಿ
Image
Jr NTR: ಜೂನಿಯರ್​ ಎನ್​ಟಿಆರ್​ ಮನೆಯಲ್ಲಿ ಅಪ್ಪು ಫೋಟೋ; ಕರುನಾಡ ಗೆಳೆಯನಿಗೆ ತೆಲುಗು​ ನಟನ ಗೌರವ
Image
ಪುನೀತ್​ಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಸಮಾರಂಭ; ​ ನಟ ಜೂ. ಎನ್​ಟಿಆರ್-ರಜನಿಕಾಂತ್​ ಭಾಗಿ
Image
ಜ್ಯೂ. ಎನ್​ಟಿಆರ್ ಭೇಟಿ ಮಾಡಿದ ಕೇಂದ್ರ ಗೃಹ ಸಚಿವ ಅಮಿತ್​ ಶಾ​; ಇಲ್ಲಿದೆ ಫೋಟೋ ಗ್ಯಾಲರಿ
Image
‘ಪುನೀತ್​ ನಟನೆಯ ಜೇಮ್ಸ್​ ನೋಡಿದ್ರಾ?’; ಈ ಪ್ರಶ್ನೆಗೆ ಕನ್ನಡದಲ್ಲೇ ಉತ್ತರಿಸಿದ ಜ್ಯೂ.ಎನ್​ಟಿಆರ್​

‘ಆರ್​ಆರ್​ಆರ್​’ ತೆರೆಕಂಡ ಬಳಿಕ ಜೂನಿಯರ್​ ಎನ್​ಟಿಆರ್​ ಅವರು ಬೇರೆ ಯಾವುದೇ ಸಿನಿಮಾವನ್ನೂ ಸದ್ಯಕ್ಕೆ ಶುರು ಮಾಡಿಲ್ಲ. ಕೆಲವು ಚಿತ್ರಗಳಿಗೆ ಸಹಿ ಮಾಡಿದ್ದಾರಾದರೂ ಶೂಟಿಂಗ್​ ಪ್ರಾರಂಭ ಆಗಿಲ್ಲ. ನಿರ್ದೇಶಕ ಕೊರಟಾಲ ಶಿವ ಅವರ ಜೊತೆ ಜೂನಿಯರ್ ಎನ್​ಟಿಆರ್​ ಕೈ ಜೋಡಿಸಿರುವ ‘ಎನ್​ಟಿಆರ್​30’ ಚಿತ್ರ ಕೂಡ ಸೆಟ್ಟೇರುವುದು ತಡವಾಗುತ್ತಿದೆ. ಈ ಗ್ಯಾಪ್​ನಲ್ಲಿಯೇ ಅವರು ಹನು ರಾಘವಪುಡಿ ಜೊತೆ ಹೊಸ ಸ್ಕ್ರಿಪ್ಟ್​ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:19 am, Wed, 2 November 22

ಉಡುಪಿ: ಬೈಕ್​ಗೆ ನಾಯಿ ಕಟ್ಟಿ ಎಳೆದೊಯ್ದ ವ್ಯಕ್ತಿ, ವಿಡಿಯೋ ವೈರಲ್
ಉಡುಪಿ: ಬೈಕ್​ಗೆ ನಾಯಿ ಕಟ್ಟಿ ಎಳೆದೊಯ್ದ ವ್ಯಕ್ತಿ, ವಿಡಿಯೋ ವೈರಲ್
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ