AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jr NTR: ಜೂನಿಯರ್​ ಎನ್​ಟಿಆರ್​ ಬೆಂಗಳೂರಿಗೆ ಬಂದುಹೋದ ಬೆನ್ನಲ್ಲೇ ಕೇಳಿಬಂತು ಹೊಸ ಸಿನಿಮಾ ಸುದ್ದಿ

Jr NTR New Movie: ‘ಆರ್​ಆರ್​ಆರ್​’ ಬಳಿಕ ಜೂನಿಯರ್​ ಎನ್​ಟಿಆರ್​ ಅವರು ಬೇರೆ ಯಾವುದೇ ಸಿನಿಮಾವನ್ನೂ ಸದ್ಯಕ್ಕೆ ಶುರು ಮಾಡಿಲ್ಲ. ಯುವ ನಿರ್ದೇಶಕನ ಜೊತೆ ಅವರೀಗ ಮಾತುಕಥೆ ನಡೆಸಿದ್ದಾರೆ.

Jr NTR: ಜೂನಿಯರ್​ ಎನ್​ಟಿಆರ್​ ಬೆಂಗಳೂರಿಗೆ ಬಂದುಹೋದ ಬೆನ್ನಲ್ಲೇ ಕೇಳಿಬಂತು ಹೊಸ ಸಿನಿಮಾ ಸುದ್ದಿ
ಜೂನಿಯರ್​ ಎನ್​ಟಿಆರ್​
TV9 Web
| Edited By: |

Updated on:Nov 02, 2022 | 8:19 AM

Share

ನಟ ಪುನೀತ್​ ರಾಜ್​ಕುಮಾರ್​ ಅವರಿಗೆ ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಲಾಯಿತು. ವಿಧಾನಸೌಧದ ಮೆಟ್ಟಿಲುಗಳ ಮೇಲೆ ಮಂಗಳವಾರ (ನ.1) ಕನ್ನಡ ರಾಜ್ಯೋತ್ಸವದ ಶುಭ ಸಂದರ್ಭದಲ್ಲಿ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಖ್ಯಾತ ನಟ ಜೂನಿಯರ್ ಎನ್​ಟಿಆರ್​ (Jr NTR) ಅವರು ಮುಖ್ಯ ಅತಿಥಿ ಆಗಿದ್ದರು. ಅವರ ಬಂದು ಹೋಗಿದ್ದು ಕರುನಾಡಿನಲ್ಲಿನ ಅಭಿಮಾನಿಗಳಿಗೆ ಸಾಕಷ್ಟು ಖುಷಿ ನೀಡಿದೆ. ಅದರ ಬೆನ್ನಲ್ಲೇ ಹೊಸ ಚಿತ್ರದ ಬಗ್ಗೆ ಒಂದು ಗುಸುಗುಸು ಕೇಳಿಬಂದಿದೆ. ಮೂಲಗಳ ಪ್ರಕಾರ ಜೂನಿಯರ್ ಎನ್​ಟಿಆರ್​ ಅವರು ‘ಸೀತಾ ರಾಮಂ’ (Sita Ramam) ಚಿತ್ರದ ನಿರ್ದೇಶಕ ಹನು ರಾಘವಪುಡಿ (Hanu Raghavapudi) ಜೊತೆ ಕೈ ಜೋಡಿಸುವ ಸಾಧ್ಯತೆ ಇದೆ. ಈಗಾಗಲೇ ಇವರಿಬ್ಬರು ಒಂದು ಸ್ಕ್ರಿಪ್ಟ್​ ​ ಕುರಿತು ಮಾತುಕಥೆ ನಡೆಸಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್​’ ಸಿನಿಮಾ ಗೆಲುವಿನ ಬಳಿಕ ಜೂನಿಯರ್​ ಎನ್​ಟಿಆರ್​ ಅವರ ಮಾರುಕಟ್ಟೆ ಹಿರಿದಾಗಿದೆ. ಟಾಲಿವುಡ್​ನಲ್ಲಿ ಮಾತ್ರವಲ್ಲದೇ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಅವರು ಬಹುಬೇಡಿಕೆಯ ನಟನಾಗಿ ಗುರುತಿಸಿಕೊಂಡಿದ್ದಾರೆ. ಪ್ರತಿ ಚಿತ್ರದ ಸ್ಕ್ರಿಪ್ಟ್​ ಆಯ್ಕೆಯಲ್ಲಿ ಅವರು ಸಖತ್​ ಕಾಳಜಿ ವಹಿಸುತ್ತಿದ್ದಾರೆ. ಈಗ ಅವರು ‘ಸೀತಾ ರಾಮಂ’ ನಿರ್ದೇಶಕ ಹನು ರಾಘವಪುಡಿ ಜೊತೆ ಕೈ ಜೋಡಿಸುವ ಸಾಧ್ಯತೆ ದಟ್ಟವಾಗಿದೆ ಎನ್ನಲಾಗುತ್ತಿದೆ.

ರಶ್ಮಿಕಾ ಮಂದಣ್ಣ, ದುಲ್ಕರ್​ ಸಲ್ಮಾನ್​, ಮೃಣಾಲ್​ ಠಾಕೂರ್ ನಟನೆಯ ‘ಸೀತಾ ರಾಮಂ’ ಸಿನಿಮಾ ಈ ವರ್ಷ ಸೂಪರ್​ ಹಿಟ್​ ಆಯಿತು. ಆ ಬಳಿಕ ನಿರ್ದೇಶಕ ಹನು ರಾಘವಪುಡಿ ಅವರು ರಾಷ್ಟ್ರಮಟ್ಟದಲ್ಲಿ ಖ್ಯಾತಿ ಗಳಿಸಿದ್ದಾರೆ. ಈಗ ಅವರು ಜೂನಿಯರ್​ ಎನ್​ಟಿಆರ್​ ಅವರನ್ನು ಭೇಟಿ ಮಾಡಿ ಒಂದು ಕಥೆ​ ಹೇಳಿದ್ದಾರೆ ಎಂದು ಕೆಲವೆಡೆ ವರದಿ ಆಗಿದೆ. ಈ ಬಗ್ಗೆ ಯಾರಿಂದಲೂ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಆದರೂ ಬೆಂಕಿ ಇಲ್ಲದೆ ಹೊಗೆ ಆಡಲ್ಲ ಎನ್ನುತ್ತಿದ್ದಾರೆ ಗಾಸಿಪ್​ ಮಂದಿ.

ಇದನ್ನೂ ಓದಿ
Image
Jr NTR: ಜೂನಿಯರ್​ ಎನ್​ಟಿಆರ್​ ಮನೆಯಲ್ಲಿ ಅಪ್ಪು ಫೋಟೋ; ಕರುನಾಡ ಗೆಳೆಯನಿಗೆ ತೆಲುಗು​ ನಟನ ಗೌರವ
Image
ಪುನೀತ್​ಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಸಮಾರಂಭ; ​ ನಟ ಜೂ. ಎನ್​ಟಿಆರ್-ರಜನಿಕಾಂತ್​ ಭಾಗಿ
Image
ಜ್ಯೂ. ಎನ್​ಟಿಆರ್ ಭೇಟಿ ಮಾಡಿದ ಕೇಂದ್ರ ಗೃಹ ಸಚಿವ ಅಮಿತ್​ ಶಾ​; ಇಲ್ಲಿದೆ ಫೋಟೋ ಗ್ಯಾಲರಿ
Image
‘ಪುನೀತ್​ ನಟನೆಯ ಜೇಮ್ಸ್​ ನೋಡಿದ್ರಾ?’; ಈ ಪ್ರಶ್ನೆಗೆ ಕನ್ನಡದಲ್ಲೇ ಉತ್ತರಿಸಿದ ಜ್ಯೂ.ಎನ್​ಟಿಆರ್​

‘ಆರ್​ಆರ್​ಆರ್​’ ತೆರೆಕಂಡ ಬಳಿಕ ಜೂನಿಯರ್​ ಎನ್​ಟಿಆರ್​ ಅವರು ಬೇರೆ ಯಾವುದೇ ಸಿನಿಮಾವನ್ನೂ ಸದ್ಯಕ್ಕೆ ಶುರು ಮಾಡಿಲ್ಲ. ಕೆಲವು ಚಿತ್ರಗಳಿಗೆ ಸಹಿ ಮಾಡಿದ್ದಾರಾದರೂ ಶೂಟಿಂಗ್​ ಪ್ರಾರಂಭ ಆಗಿಲ್ಲ. ನಿರ್ದೇಶಕ ಕೊರಟಾಲ ಶಿವ ಅವರ ಜೊತೆ ಜೂನಿಯರ್ ಎನ್​ಟಿಆರ್​ ಕೈ ಜೋಡಿಸಿರುವ ‘ಎನ್​ಟಿಆರ್​30’ ಚಿತ್ರ ಕೂಡ ಸೆಟ್ಟೇರುವುದು ತಡವಾಗುತ್ತಿದೆ. ಈ ಗ್ಯಾಪ್​ನಲ್ಲಿಯೇ ಅವರು ಹನು ರಾಘವಪುಡಿ ಜೊತೆ ಹೊಸ ಸ್ಕ್ರಿಪ್ಟ್​ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:19 am, Wed, 2 November 22

ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!