‘ದೇವರ’: ಇದು ಭಯ-ಧೈರ್ಯದ ನಡುವಿನ ಯುದ್ಧ

Devera Trailer: ಜೂ ಎನ್​ಟಿಆರ್ ನಟನೆಯ ‘ದೇವರ’ ಸಿನಿಮಾ ಟ್ರೈಲರ್ ಬಿಡುಗಡೆ ಆಗಿದೆ. ಜೂ ಎನ್​ಟಿಆರ್ ಎರಡು ಶೇಡ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಕಡಲ್ಗಳ್ಳರ ಕತೆಯುಳ್ಳ ಈ ಸಿನಿಮಾ ಶೀಘ್ರವೇ ತೆರೆಗೆ ಬರಲಿದೆ.

‘ದೇವರ’: ಇದು ಭಯ-ಧೈರ್ಯದ ನಡುವಿನ ಯುದ್ಧ
Follow us
|

Updated on: Sep 11, 2024 | 11:49 AM

ಜೂ ಎನ್​ಟಿಆರ್ ನಟನೆಯ ‘ದೇವರ’ ಸಿನಿಮಾದ ಮೊದಲ ಭಾಗ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಸಿನಿಮಾದ ಮೊದಲ ಭಾಗದ ಟ್ರೈಲರ್ ಇಂದು (ಸೆಪ್ಟೆಂಬರ್ 11) ಬಿಡುಗಡೆ ಆಗಿದ್ದು, ಜೂ ಎನ್​ಟಿಆರ್ ‘ಕಿಲ್ಲಿಂಗ್ ಮಷಿನ್’ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ‘ದೇವರ’ ಸಿನಿಮಾ ಭಯ ಹಾಗೂ ಧೈರ್ಯದ ನಡುವೆ ಕಡಲ ತೀರದಲ್ಲಿ ನಡೆಯುವ ಭೀಕರ ಯುದ್ಧದ ಕತೆಯನ್ನು ಒಳಗೊಂಡಿದೆ ಎಂಬುದು ಟ್ರೈಲರ್​ನಿಂದ ತಿಳಿದು ಬರುತ್ತಿದೆ.

ಇಂದು ಬಿಡುಗಡೆ ಆಗಿರುವ ಟ್ರೈಲರ್, ಸಿನಿಮಾದ ಸಣ್ಣ ಎಳೆಯನ್ನು ಬಿಟ್ಟುಕೊಡುತ್ತಿದೆ. ಭಯ ಎಂದರೇನು ಎಂದೇ ತಿಳಿಯದ ಕೇವಲ ಧೈರ್ಯ ಮಾತ್ರವೇ ಇರುವ ಕಡಲ್ಗಳರ ಸಮೂಹ, ಆ ಸಮೂಹಕ್ಕೆ ಭಯದ ಅರ್ಥ ತಿಳಿಸಿಕೊಡಲು ಬರುವ ‘ದೇವರ’. ಇಬ್ಬರ ನಡುವೆ ನಡೆಯುವ ರಕ್ತಸಿಕ್ತ ಯುದ್ಧದ ಕತೆ ದೇವರ. ಆದರೆ ಸಿನಿಮಾದ ಕತೆ ಇಷ್ಟು ಸರಳವಲ್ಲ, ಏಕೆಂದರೆ ‘ದೇವರ’ ಜೊತೆಗಿರುವವರು ಅವನನ್ನೇ ಕೊಲ್ಲಲು ಸರಿಯಾದ ಸಮಯ ಮಾತ್ರವಲ್ಲ ಸರಿಯಾದ ಆಯುಧಕ್ಕಾಗಿ ಕಾಯುತ್ತಿದ್ದಾರೆ.

ಟ್ರೈಲರ್​ನಲ್ಲಿ ಎರಡು ಶೇಡ್​ಗಳಲ್ಲಿ ಜೂ ಎನ್​ಟಿಆರ್ ಕಾಣಿಸಿಕೊಂಡಿದ್ದಾರೆ. ಧೈರ್ಯವಂತರಿಗೇ ಭಯ ಮೂಡಿಸುವ ‘ದೇವರ’ ರೂಪದಲ್ಲಿ ಹಾಗೂ ಭಯದ ಹೊರತಾಗಿ ಇನ್ನೇನೂ ಅರಿಯದ ದೇವರನ ಮಗನಾಗಿಯೂ ಜೂ ಎನ್​ಟಿಆರ್ ನಟಿಸಿದ್ದಾರೆ. ಈ ‘ದೇವರ’ ಯಾರು? ಅವನೇಕೆ ಕಡಲ್ಗಳ್ಳರ ವಿರುದ್ಧ ನಿಂತಿದ್ದಾನೆ. ಅವರೊಂದಿಗೆ ಏಕೆ ಕೈ ಜೋಡಿಸಿದ್ದಾನೆ. ಅವನೊಟ್ಟಿಗೆ ಇರುವವರು ಏಕೆ ಅವನ್ನು ಕೊಲ್ಲಲು ಹೊಂಚು ಹಾಕಿದ್ದಾರೆ. ಕೊಲ್ಲಲು ಯಶಸ್ವಿಯಾದರಾ? ‘ದೇವರ’ ಮಗನೇಕೆ ಅಷ್ಟು ಭಯಸ್ತ? ಅವನ ಭವಿಷ್ಯ ಏನು? ಹೀಗೆ ಹಲವು ಪ್ರಶ್ನೆಗಳನ್ನು ಸಹ ‘ದೇವರ’ ಟ್ರೈಲರ್ ಮೂಡಿಸುತ್ತಿದೆ.

ಇದನ್ನೂ ಓದಿ:ಅಮೆರಿದಲ್ಲಿ ದೂಳೆಬ್ಬಿಸುತ್ತಿದೆ ಜೂ ಎನ್​ಟಿಆರ್ ‘ದೇವರ’

ಸಿನಿಮಾದ ಟ್ರೈಲರ್​ನಲ್ಲಿ ಗಮನ ಸೆಳೆಯುತ್ತಿರುವ ಪ್ರಮುಖ ವಿಷಯವೆಂದರೆ ಆಕ್ಷನ್. ಟ್ರೈಲರ್ ಆರಂಭದಿಂದ ಅಂತ್ಯದವರೆಗೂ ಹಲವು ಆಕ್ಷನ್ ದೃಶ್ಯದ ತುಣುಕುಗಳಿವೆ. ಜೂ ಎನ್​ಟಿಆರ್ ಅಭಿಮಾನಿಗಳಂತೂ ಹುಚ್ಚೆದ್ದು ಕುಣಿಯುವಂತ ಆಕ್ಷನ್ ದೃಶ್ಯಗಳನ್ನು ಕಂಪೋಸ್ ಮಾಡಿರುವುದು ಟ್ರೈಲರ್​ನಿಂದ ಗೊತ್ತಾಗುತ್ತಿದೆ. ತಿಮಿಂಗಲದ ಬೆನ್ನೇರಿ ಬರುವ ಜೂ ಎನ್​ಟಿಆರ್ ದೃಶ್ಯಕ್ಕಂತೂ ಚಿತ್ರಮಂದಿರದಲ್ಲಿ ಶಿಳ್ಳೆ-ಚಪ್ಪಾಳೆಗಳ ಮಳೆ ಬೀಳುವುದಂತೂ ಪಕ್ಕಾ. ಟ್ರೈಲರ್​ನಲ್ಲಿ ಜೂ ಎನ್​ಟಿಆರ್ ಜೊತೆಗೆ ಸೈಫ್ ಅಲಿ ಖಾನ್ ಸಹ ಗಮನ ಸೆಳೆಯುತ್ತಾರೆ. ‘ದೇವರ’ಗೆ ಪ್ರಬಲ ಪ್ರತಿಸ್ಪರ್ಧಿಯಾಗಿ ಸೈಫ್ ಕಾಣಿಸಿಕೊಂಡಿದ್ದಾರೆ. ಇನ್ನು ಪ್ರಕಾಶ್ ರೈ, ರಾವ್ ರಮೇಶ್, ನಾಯಕಿ ಜಾನ್ಹವಿಯ ಕೆಲ ದೃಶ್ಯಗಳ ತುಣುಕಗಳು ಸಹ ಟ್ರೈಲರ್​ನಲ್ಲಿವೆ.

‘ದೇವರ’ ಸಿನಿಮಾವನ್ನು ಕೊರಟಾಲ ಶಿವ ನಿರ್ದೇಶನ ಮಾಡಿದ್ದಾರೆ. ಸಿನಿಮಾಕ್ಕೆ ಅನಿರುದ್ಧ್ ರವಿಚಂದ್ರನ್ ಸಂಗೀತ ನೀಡಿದ್ದಾರೆ. ಸಿನಿಮಾಕ್ಕೆ ಬಂಡವಾಳ ಹೂಡಿರುವುದು ಜೂ ಎನ್​ಟಿಆರ್ ಸಹೋದರ ಕಲ್ಯಾಣ್ ರಾಮ್. ಸಿನಿಮಾದ ಮೊದಲ ಭಾಗ ಸೆಪ್ಟೆಂಬರ್ 27ಕ್ಕೆ ತೆರೆಗೆ ಬರಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ