AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಗೆಟಿವ್ ವಿಮರ್ಶೆಗಳ ನಡುವೆಯೂ ಮುಂದುವರೆದ ‘ದೇವರ’ ಅಬ್ಬರ

Jr NTR Movie Box Office: ಜೂ ಎನ್​ಟಿಆರ್ ನಟನೆಯ ‘ದೇವರ’ ಸಿನಿಮಾ ಬಿಡುಗಡೆ ಆಗಿ ನಾಲ್ಕು ದಿನಗಳಾಗಿವೆ. ಸಿನಿಮಾದ ಬಗ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆದರೆ ಈ ಮಿಶ್ರ ಪ್ರತಿಕ್ರಿಯೆಯ ನಡುವೆಯೂ ಸಿನಿಮಾ ಕಲೆಕ್ಷನ್ ತೀರಾ ಧಾರುಣವಾಗಿ ಕುಸಿದಿಲ್ಲ.

ನೆಗೆಟಿವ್ ವಿಮರ್ಶೆಗಳ ನಡುವೆಯೂ ಮುಂದುವರೆದ ‘ದೇವರ’ ಅಬ್ಬರ
ಮಂಜುನಾಥ ಸಿ.
|

Updated on: Oct 02, 2024 | 7:29 AM

Share

ಜೂ ಎನ್​ಟಿಆರ್ ನಟನೆಯ ‘ದೇವರ’ ಸಿನಿಮಾ ಕೆಲ ದಿನಗಳ ಹಿಂದಷ್ಟೆ ವಿಶ್ವದಾದ್ಯಂತ ಬಿಡುಗಡೆ ಆಗಿದೆ. ಕೊರಟಾಲ ಶಿವ ನಿರ್ದೇಶನದ ಈ ಸಿನಿಮಾ ಬಿಡುಗಡೆ ಆದ ದಿನದಿಂದಲೂ ಸಿನಿಮಾ ಬಗ್ಗೆ ಋಣಾತ್ಮಕ ವಿಮರ್ಶೆಗಳೇ ಕೇಳಿ ಬರುತ್ತಿವೆ. ಎನ್​ಟಿಆರ್ ಅಭಿಮಾನಿಗಳೂ ಸಹ ಕೆಲವರು ಸಿನಿಮಾದ ಬಗ್ಗೆ ಮಿಶ್ರ ಪ್ರತಿಕ್ರಿಯೆಯನ್ನೇ ವ್ಯಕ್ತಪಡಿಸಿದ್ದಾರೆ. ಋಣಾತ್ಮಕ ವಿಮರ್ಶೆಗಳ ನಡುವೆಯೂ ಸಹ ಸಿನಿಮಾ ಉತ್ತಮ ಕಲೆಕ್ಷನ್ ಅನ್ನೇ ಮಾಡುತ್ತಿದೆ. ಇದೀಗ ಸಿನಿಮಾ ಬಿಡುಗಡೆ ಆಗಿ ನಾಲ್ಕು ದಿನ ಆಗಿದ್ದು, ಕಲೆಕ್ಷನ್ ಧಾರುಣವಾಗಿ ಏನೂ ಕುಸಿದಿಲ್ಲ.

‘ದೇವರ’ ಸಿನಿಮಾ ಮಂಗಳವಾರ ಸುಮಾರು 12 ಕೋಟಿ ರೂಪಾಯಿಗಳನ್ನು ಗಳಿಕೆ ಮಾಡಿದೆ. ಸೋಮವಾರದ ಕಲೆಕ್ಷನ್​ಗೆ ಹೋಲಿಸಿದರೆ ಮಂಗಳವಾರ ತುಸು ಕಲೆಕ್ಷನ್ ಹೆಚ್ಚಾಗಿಯೇ ಆಗಿದೆ. ಇದು ಚಿತ್ರತಂಡದಲ್ಲಿ ಭರವಸೆ ಮೂಡಿಸಿದ್ದು, ಸಿನಿಮಾದ 500 ಕೋಟಿ ಕಲೆಕ್ಷನ್ ಕನಸನ್ನು ಜೀವಂತವಾಗಿರಿಸಿದೆ. ಮಂಗಳವಾರ ಕಲೆಕ್ಷನ್ ಆದ 12 ಕೋಟಿ ಹಣದಲ್ಲಿ ನಾಲ್ಕು ಕೋಟಿ ಹಿಂದಿ ಡಬ್ ಆವೃತ್ತಿಯಿಂದಲೇ ಬಂದಿದೆ. ಉತ್ತರ ಭಾರತದಲ್ಲಿ ಕಲೆಕ್ಷನ್ ಉತ್ತಮಗೊಂಡಿದ್ದು, ಮಂಗಳವಾರ ದಿನ ನಾಲ್ಕು ಕೋಟಿಗೂ ಹೆಚ್ಚು ಹಣ ಗಳಿಕೆ ಆಗಿದೆ.

ಇದನ್ನೂ ಓದಿ:‘ದೇವರ’ ಬಗ್ಗೆ ಮೌನ ತಾಳಿದ ಮಹೇಶ್ ಬಾಬು; ಸಿನಿಮಾ ಇಷ್ಟವಾಗಿಲ್ವಾ?

ನಾಲ್ಕು ದಿನಗಳಲ್ಲಿ ‘ದೇವರ’ ಸಿನಿಮಾದ ಅಂತರಾಷ್ಟ್ರೀಯ ಬಾಕ್ಸ್ ಆಫೀಸ್ ಕಲೆಕ್ಷನ್ 300 ಕೋಟಿ ರೂಪಾಯಿ ದಾಟಿದೆ. ಕೆಲವೇ ದಿನಗಳಲ್ಲಿ 350 ಕೋಟಿ ಕಲೆಕ್ಷನ್ ದಾಟಲಿದ್ದು, ಸಿನಿಮಾದ ಲೈಫ್​ ಟೈಮ್ ಕಲೆಕ್ಷನ್ 500 ಕೋಟಿ ಆಗಲಿದೆಯಾ ಎಂಬ ಅನುಮಾನ ಇದೀಗ ಮೂಡಿದೆ. ‘ದೇವರ’ ಸಿನಿಮಾ ವಿಜಯ್ ನಟನೆಯ ‘ವಾರಿಸು’ ಸಿನಿಮಾದ ಓವರ್​ಆಲ್ ಕಲೆಕ್ಷನ್ ಅನ್ನು ಈಗಾಗಲೇ ಮೀರಿಸಿದ್ದು, 500 ಕೋಟಿ ಕಲೆಕ್ಷನ್ ಗುರಿ ತಲುಪುವ ನಿರೀಕ್ಷೆಯಲ್ಲಿದೆ. ಆದರೆ ಅದು ಅಷ್ಟು ಸುಲಭ ಅಲ್ಲ ಎಂದಿದ್ದಾರೆ ಬಾಕ್ಸ್ ಆಫೀಸ್ ವಿಶ್ಲೇಷಕರು.

‘ದೇವರ’ ಸಿನಿಮಾ, ಆರು ವರ್ಷಗಳ ಬಳಿಕ ಬಿಡುಗಡೆ ಆಗುತ್ತಿರುವ ಜೂ ಎನ್​ಟಿಆರ್​ ಅವರ ಸೋಲೊ ಸಿನಿಮಾ ಆಗಿದೆ. ‘ಆರ್​ಆರ್​ಆರ್’ ಸಿನಿಮಾ ಬಿಡುಗಡೆ ಆಗಿತ್ತಾದರೂ ಆ ಸಿನಿಮಾದಲ್ಲಿ ಜೂ ಎನ್​ಟಿಆರ್​ ಜೊತೆಗೆ ರಾಮ್ ಚರಣ್ ಸಹ ಇದ್ದರು. ‘ದೇವರ’ ಸಿನಿಮಾವನ್ನು ಕೊರಟಾಲ ಶಿವ ನಿರ್ದೇಶನ ಮಾಡಿದ್ದು, ಸಿನಿಮಾದಲ್ಲಿ ನಾಯಕಿಯಾಗಿ ಜಾನ್ಹವಿ ಕಪೂರ್ ನಟಿಸಿದ್ದಾರೆ. ಸೈಫ್ ಅಲಿ ಖಾನ್ ವಿಲನ್. ಸಿನಿಮಾದ ಮೊದಲ ಭಾಗವಷ್ಟೆ ಈಗ ಬಿಡುಗಡೆ ಆಗಿದ್ದು, ಮುಂದಿನ ಭಾಗ ಮುಂದಿನ ವರ್ಷ ತೆರೆಗೆ ಬರಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು