AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಗೆಟಿವ್ ವಿಮರ್ಶೆಗಳ ನಡುವೆಯೂ ಮುಂದುವರೆದ ‘ದೇವರ’ ಅಬ್ಬರ

Jr NTR Movie Box Office: ಜೂ ಎನ್​ಟಿಆರ್ ನಟನೆಯ ‘ದೇವರ’ ಸಿನಿಮಾ ಬಿಡುಗಡೆ ಆಗಿ ನಾಲ್ಕು ದಿನಗಳಾಗಿವೆ. ಸಿನಿಮಾದ ಬಗ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆದರೆ ಈ ಮಿಶ್ರ ಪ್ರತಿಕ್ರಿಯೆಯ ನಡುವೆಯೂ ಸಿನಿಮಾ ಕಲೆಕ್ಷನ್ ತೀರಾ ಧಾರುಣವಾಗಿ ಕುಸಿದಿಲ್ಲ.

ನೆಗೆಟಿವ್ ವಿಮರ್ಶೆಗಳ ನಡುವೆಯೂ ಮುಂದುವರೆದ ‘ದೇವರ’ ಅಬ್ಬರ
ಮಂಜುನಾಥ ಸಿ.
|

Updated on: Oct 02, 2024 | 7:29 AM

Share

ಜೂ ಎನ್​ಟಿಆರ್ ನಟನೆಯ ‘ದೇವರ’ ಸಿನಿಮಾ ಕೆಲ ದಿನಗಳ ಹಿಂದಷ್ಟೆ ವಿಶ್ವದಾದ್ಯಂತ ಬಿಡುಗಡೆ ಆಗಿದೆ. ಕೊರಟಾಲ ಶಿವ ನಿರ್ದೇಶನದ ಈ ಸಿನಿಮಾ ಬಿಡುಗಡೆ ಆದ ದಿನದಿಂದಲೂ ಸಿನಿಮಾ ಬಗ್ಗೆ ಋಣಾತ್ಮಕ ವಿಮರ್ಶೆಗಳೇ ಕೇಳಿ ಬರುತ್ತಿವೆ. ಎನ್​ಟಿಆರ್ ಅಭಿಮಾನಿಗಳೂ ಸಹ ಕೆಲವರು ಸಿನಿಮಾದ ಬಗ್ಗೆ ಮಿಶ್ರ ಪ್ರತಿಕ್ರಿಯೆಯನ್ನೇ ವ್ಯಕ್ತಪಡಿಸಿದ್ದಾರೆ. ಋಣಾತ್ಮಕ ವಿಮರ್ಶೆಗಳ ನಡುವೆಯೂ ಸಹ ಸಿನಿಮಾ ಉತ್ತಮ ಕಲೆಕ್ಷನ್ ಅನ್ನೇ ಮಾಡುತ್ತಿದೆ. ಇದೀಗ ಸಿನಿಮಾ ಬಿಡುಗಡೆ ಆಗಿ ನಾಲ್ಕು ದಿನ ಆಗಿದ್ದು, ಕಲೆಕ್ಷನ್ ಧಾರುಣವಾಗಿ ಏನೂ ಕುಸಿದಿಲ್ಲ.

‘ದೇವರ’ ಸಿನಿಮಾ ಮಂಗಳವಾರ ಸುಮಾರು 12 ಕೋಟಿ ರೂಪಾಯಿಗಳನ್ನು ಗಳಿಕೆ ಮಾಡಿದೆ. ಸೋಮವಾರದ ಕಲೆಕ್ಷನ್​ಗೆ ಹೋಲಿಸಿದರೆ ಮಂಗಳವಾರ ತುಸು ಕಲೆಕ್ಷನ್ ಹೆಚ್ಚಾಗಿಯೇ ಆಗಿದೆ. ಇದು ಚಿತ್ರತಂಡದಲ್ಲಿ ಭರವಸೆ ಮೂಡಿಸಿದ್ದು, ಸಿನಿಮಾದ 500 ಕೋಟಿ ಕಲೆಕ್ಷನ್ ಕನಸನ್ನು ಜೀವಂತವಾಗಿರಿಸಿದೆ. ಮಂಗಳವಾರ ಕಲೆಕ್ಷನ್ ಆದ 12 ಕೋಟಿ ಹಣದಲ್ಲಿ ನಾಲ್ಕು ಕೋಟಿ ಹಿಂದಿ ಡಬ್ ಆವೃತ್ತಿಯಿಂದಲೇ ಬಂದಿದೆ. ಉತ್ತರ ಭಾರತದಲ್ಲಿ ಕಲೆಕ್ಷನ್ ಉತ್ತಮಗೊಂಡಿದ್ದು, ಮಂಗಳವಾರ ದಿನ ನಾಲ್ಕು ಕೋಟಿಗೂ ಹೆಚ್ಚು ಹಣ ಗಳಿಕೆ ಆಗಿದೆ.

ಇದನ್ನೂ ಓದಿ:‘ದೇವರ’ ಬಗ್ಗೆ ಮೌನ ತಾಳಿದ ಮಹೇಶ್ ಬಾಬು; ಸಿನಿಮಾ ಇಷ್ಟವಾಗಿಲ್ವಾ?

ನಾಲ್ಕು ದಿನಗಳಲ್ಲಿ ‘ದೇವರ’ ಸಿನಿಮಾದ ಅಂತರಾಷ್ಟ್ರೀಯ ಬಾಕ್ಸ್ ಆಫೀಸ್ ಕಲೆಕ್ಷನ್ 300 ಕೋಟಿ ರೂಪಾಯಿ ದಾಟಿದೆ. ಕೆಲವೇ ದಿನಗಳಲ್ಲಿ 350 ಕೋಟಿ ಕಲೆಕ್ಷನ್ ದಾಟಲಿದ್ದು, ಸಿನಿಮಾದ ಲೈಫ್​ ಟೈಮ್ ಕಲೆಕ್ಷನ್ 500 ಕೋಟಿ ಆಗಲಿದೆಯಾ ಎಂಬ ಅನುಮಾನ ಇದೀಗ ಮೂಡಿದೆ. ‘ದೇವರ’ ಸಿನಿಮಾ ವಿಜಯ್ ನಟನೆಯ ‘ವಾರಿಸು’ ಸಿನಿಮಾದ ಓವರ್​ಆಲ್ ಕಲೆಕ್ಷನ್ ಅನ್ನು ಈಗಾಗಲೇ ಮೀರಿಸಿದ್ದು, 500 ಕೋಟಿ ಕಲೆಕ್ಷನ್ ಗುರಿ ತಲುಪುವ ನಿರೀಕ್ಷೆಯಲ್ಲಿದೆ. ಆದರೆ ಅದು ಅಷ್ಟು ಸುಲಭ ಅಲ್ಲ ಎಂದಿದ್ದಾರೆ ಬಾಕ್ಸ್ ಆಫೀಸ್ ವಿಶ್ಲೇಷಕರು.

‘ದೇವರ’ ಸಿನಿಮಾ, ಆರು ವರ್ಷಗಳ ಬಳಿಕ ಬಿಡುಗಡೆ ಆಗುತ್ತಿರುವ ಜೂ ಎನ್​ಟಿಆರ್​ ಅವರ ಸೋಲೊ ಸಿನಿಮಾ ಆಗಿದೆ. ‘ಆರ್​ಆರ್​ಆರ್’ ಸಿನಿಮಾ ಬಿಡುಗಡೆ ಆಗಿತ್ತಾದರೂ ಆ ಸಿನಿಮಾದಲ್ಲಿ ಜೂ ಎನ್​ಟಿಆರ್​ ಜೊತೆಗೆ ರಾಮ್ ಚರಣ್ ಸಹ ಇದ್ದರು. ‘ದೇವರ’ ಸಿನಿಮಾವನ್ನು ಕೊರಟಾಲ ಶಿವ ನಿರ್ದೇಶನ ಮಾಡಿದ್ದು, ಸಿನಿಮಾದಲ್ಲಿ ನಾಯಕಿಯಾಗಿ ಜಾನ್ಹವಿ ಕಪೂರ್ ನಟಿಸಿದ್ದಾರೆ. ಸೈಫ್ ಅಲಿ ಖಾನ್ ವಿಲನ್. ಸಿನಿಮಾದ ಮೊದಲ ಭಾಗವಷ್ಟೆ ಈಗ ಬಿಡುಗಡೆ ಆಗಿದ್ದು, ಮುಂದಿನ ಭಾಗ ಮುಂದಿನ ವರ್ಷ ತೆರೆಗೆ ಬರಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!