ಮೊದಲ ದಿನವೇ 100 ಕೋಟಿ ರೂ. ಕಲೆಕ್ಷನ್​ ಮಾಡುತ್ತಾ ‘ದೇವರ’: 12 ಲಕ್ಷ ಟಿಕೆಟ್​ ಬುಕ್

ಜೂನಿಯರ್​ ಎನ್​ಟಿಆರ್​, ಜಾನ್ವಿ ಕಪೂರ್​ ನಟನೆಯ ‘ದೇವರ’ ಸಿನಿಮಾವನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲು ಅಭಿಮಾನಿಗಳು ಸಜ್ಜಾಗಿದ್ದಾರೆ. ಸೆ.27ರ ಬೆಳಗ್ಗೆಯಿಂದ ಸೆಲೆಬ್ರೇಷನ್​ ಆರಂಭ ಆಗಲಿದೆ. ಬೇರೆ ಬೇರೆ ದೇಶಗಳಲ್ಲಿ ಕೂಡ ಈ ಚಿತ್ರ ತೆರೆಕಾಣುತ್ತಿದೆ. ‘ದೇವರ’ ಸಿನಿಮಾ ಮೊದಲ ದಿನ ಒಟ್ಟು ಎಷ್ಟು ಕಲೆಕ್ಷನ್​ ಮಾಡಲಿದೆ ಎಂಬುದು ತಿಳಿಯಲು ಸಿನಿಪ್ರಿಯರು ಕಾಯುತ್ತಿದ್ದಾರೆ.

ಮೊದಲ ದಿನವೇ 100 ಕೋಟಿ ರೂ. ಕಲೆಕ್ಷನ್​ ಮಾಡುತ್ತಾ ‘ದೇವರ’: 12 ಲಕ್ಷ ಟಿಕೆಟ್​ ಬುಕ್
ಜೂನಿಯರ್​ ಎನ್​ಟಿಆರ್​
Follow us
|

Updated on: Sep 26, 2024 | 9:50 PM

ಜೂನಿಯರ್​ ಎನ್​ಟಿಆರ್​ ಅವರ ಅಭಿಮಾನಿಗಳಿಗೆ ಸೆಪ್ಟೆಂಬರ್​ 27ರಂದು ಹಬ್ಬ. ‘ಆರ್​ಆರ್​ಆರ್​’ ಬಳಿಕ ಜೂ. ಎನ್​ಟಿಆರ್​ ನಟಿಸಿರುವ ‘ದೇವರ: ಪಾರ್ಟ್​ 1’ ಸಿನಿಮಾ ಸೆ.27ರಂದು ಬಿಡುಗಡೆ ಆಗುತ್ತಿದೆ. ಈ ಸಿನಿಮಾವನ್ನು ಸ್ವಾಗತಿಸಲು ಅಭಿಮಾನಿಗಳು ಭರ್ಜರಿಯಾಗಿ ತಯಾರಿ ಮಾಡಿಕೊಂಡಿದ್ದಾರೆ. ಎಲ್ಲ ಚಿತ್ರಮಂದಿರಗಳ ಮುಂದೆ ದೊಡ್ಡ ದೊಡ್ಡ ಕಟೌಟ್​ ನಿಲ್ಲಿಸಲಾಗಿದೆ. ಮುಂಜಾನೆಯೇ ಫ್ಯಾನ್ಸ್​ ಶೋ ಆರಂಭ ಆಗಲಿದೆ. ಕ್ರೇಜ್​ ಜೋರಾಗಿ ಇರುವುದರಿಂದ ಮೊದಲ ದಿನ ಈ ಸಿನಿಮಾ ಎಷ್ಟು ಕಲೆಕ್ಷನ್​ ಮಾಡಲಿದೆ ಎಂಬ ಕೌತುಕ ಎಲ್ಲರಲ್ಲೂ ಇದೆ. ವಿಶ್ವಾದ್ಯಂತ ಅಂದಾಜು 100 ಕೋಟಿ ರೂಪಾಯಿ ಕಮಾಯಿ ಆಗಬಹುದು ಎಂಬ ನಿರೀಕ್ಷೆ ಇದೆ.

ಕೊರಟಾಲ ಶಿವ ಅವರು ‘ದೇವರ’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಜೂನಿಯರ್ ಎನ್​ಟಿಆರ್ ಅವರು ಆ್ಯಕ್ಷನ್​ ಅವತಾರದಲ್ಲಿ ಅಭಿಮಾನಿಗಳಿಗೆ ಮನರಂಜನೆ ನೀಡಲಿದ್ದಾರೆ. ಟ್ರೇಲರ್​ಗೆ ಮಿಶ್ರ ಪ್ರತಿಕ್ರಿಯೆ ಸಿಕ್ಕಿದೆ. ಪೂರ್ತಿ ಸಿನಿಮಾ ಹೇಗಿದೆ ತಿಳಿಯಲು ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ. ಮೊದಲ ದಿನ ಬಹುತೇಕ ಎಲ್ಲ ಪ್ರದರ್ಶನಗಳು ಹೌಸ್​ಫುಲ್​ ಆಗಲಿವೆ.

ಕೆಲವು ದಿನಗಳ ಹಿಂದೆಯೇ ‘ದೇವರ’ ಸಿನಿಮಾದ ಅಡ್ವಾನ್ಸ್​ ಟಿಕೆಟ್​ ಬುಕಿಂಗ್ ಓಪನ್ ಆಗಿತ್ತು. ಗುರುವಾರ ಸಂಜೆ ವೇಳೆಗೆ ಅಂದಾಜು 12 ಲಕ್ಷ ಟಿಕೆಟ್​ಗಳು ಬುಕ್​ ಆಗಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಕರ್ನಾಟಕದಲ್ಲೂ ಹವಾ ಜೋರಾಗಿದೆ. ಇಲ್ಲಿಯೂ ಮುಂಜಾನೆಯಿಂದಲೇ ಪ್ರದರ್ಶನಗಳು ಆರಂಭ ಆಗಲಿವೆ. ಭಾರತ ಮಾತ್ರವಲ್ಲದೇ ವಿದೇಶದಲ್ಲೂ ಈ ಸಿನಿಮಾ ಬಿಡುಗಡೆ ಆಗುತ್ತಿದೆ. ಹಾಗಾಗಿ ಮೊದಲ ದಿನ ನೂರು ಕೋಟಿ ರೂಪಾಯಿ ಕಲೆಕ್ಷನ್​ ಆಗುವ ಸಾಧ್ಯತೆ ಇದೆ.

ಇದನ್ನೂ ಓದಿ: ಮುಂಬೈಗೆ ಹೋಗಿ ಜಾನ್ವಿ ಕಪೂರ್​ ಬಗ್ಗೆ ತಕರಾರು ತೆಗೆದ ಜೂನಿಯರ್​ ಎನ್​ಟಿಆರ್​; ಏನದು?

‘ಆರ್​ಆರ್​ಆರ್​’ ಸಿನಿಮಾ ಸೂಪರ್​ ಹಿಟ್​ ಆದ ಬಳಿಕ ಜೂನಿಯರ್​ ಎನ್​ಟಿಆರ್​ ಅವರಿಗೆ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಕ್ರೇಜ್​ ಜಾಸ್ತಿ ಆಯಿತು. ಈಗ ಅವರು ಹೃತಿಕ್​ ರೋಷನ್​ ಜೊತೆ ‘ವಾರ್​ 2’ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ. ಆದ್ದರಿಂದ ಹಿಂದಿ ಪ್ರೇಕ್ಷಕರ ವಲಯದಲ್ಲಿ ಜೂನಿಯರ್​ ಎನ್​ಟಿಆರ್​ ಅವರ ಸಿನಿಮಾಗಳ ಬಗ್ಗೆ ಕೌತುಕ ಹೆಚ್ಚಿದೆ. ‘ದೇವರ’ ಚಿತ್ರದಲ್ಲಿ ಜಾನ್ವಿ ಕಪೂರ್​, ಸೈಫ್​ ಅಲಿ ಖಾನ್​ ನಟಿಸಿರುವುದರಿಂದ ಬಾಲಿವುಡ್​ ಮಂದಿ ಕೂಡ ಹೆಚ್ಚು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಆ ನಿರೀಕ್ಷೆಯ ತಕ್ಕಂತೆ ಸಿನಿಮಾ ಮೂಡಿಬಂದಿದೆಯಾ ಅಥವಾ ಇಲ್ಲವಾ ಎಂಬುದು ಸೆ.27ರ ಬೆಳಗ್ಗೆ ತಿಳಿಯಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕ್ಲಾಸ್​ರೂಂನಲ್ಲೇ ಶಿಕ್ಷಕಿಗೆ ಬೆದರಿಕೆ ಹಾಕಿ, ಉಗುಳಿದ ಎಂಬಿಎ ವಿದ್ಯಾರ್ಥಿ
ಕ್ಲಾಸ್​ರೂಂನಲ್ಲೇ ಶಿಕ್ಷಕಿಗೆ ಬೆದರಿಕೆ ಹಾಕಿ, ಉಗುಳಿದ ಎಂಬಿಎ ವಿದ್ಯಾರ್ಥಿ
ಸಿದ್ದರಾಮಯ್ಯಗೆ ಮುಡಾ ಸಂಕಷ್ಟ: ಈ ಹಿಂದೆ ಕೋಡಿಶ್ರೀ ನುಡಿದಿದ್ದ ಭವಿಷ್ಯ ನಿಜ
ಸಿದ್ದರಾಮಯ್ಯಗೆ ಮುಡಾ ಸಂಕಷ್ಟ: ಈ ಹಿಂದೆ ಕೋಡಿಶ್ರೀ ನುಡಿದಿದ್ದ ಭವಿಷ್ಯ ನಿಜ
ಕಂಠಪೂರ್ತಿ ಕುಡಿದು ಅಪ್ಪನ ತಲೆಗೆ ಇಟ್ಟಿಗೆಯಿಂದ ಹೊಡೆದು ಕೊಂದ ಮಗ
ಕಂಠಪೂರ್ತಿ ಕುಡಿದು ಅಪ್ಪನ ತಲೆಗೆ ಇಟ್ಟಿಗೆಯಿಂದ ಹೊಡೆದು ಕೊಂದ ಮಗ
ಬೆಂಗಳೂರಿನ ‘ಏರಿಯಾನ್ ಟೆಕ್ನಾಲಜಿ ಕಂಪನಿ’ಯಲ್ಲಿ ಅಗ್ನಿ ಅವಘಡ;ತಪ್ಪಿದ ಅನಾಹುತ
ಬೆಂಗಳೂರಿನ ‘ಏರಿಯಾನ್ ಟೆಕ್ನಾಲಜಿ ಕಂಪನಿ’ಯಲ್ಲಿ ಅಗ್ನಿ ಅವಘಡ;ತಪ್ಪಿದ ಅನಾಹುತ
ಅಮ್ಮ-ಮಗು ಮೇಲೆ ಬೀದಿ ನಾಯಿಗಳ ದಾಳಿ; ಶಾಕಿಂಗ್ ವಿಡಿಯೋ ವೈರಲ್
ಅಮ್ಮ-ಮಗು ಮೇಲೆ ಬೀದಿ ನಾಯಿಗಳ ದಾಳಿ; ಶಾಕಿಂಗ್ ವಿಡಿಯೋ ವೈರಲ್
ನ್ಯಾಯಾಂಗ ನಿಂದನೆ ತೂಗುಗತ್ತಿ ಬೆನ್ನಲ್ಲೇ ಎಚ್ಚೆತ್ತುಕೊಂಡ ಜಮೀರ್
ನ್ಯಾಯಾಂಗ ನಿಂದನೆ ತೂಗುಗತ್ತಿ ಬೆನ್ನಲ್ಲೇ ಎಚ್ಚೆತ್ತುಕೊಂಡ ಜಮೀರ್
ಮುನಿರತ್ನರಿಂದ ಅತ್ಯಾಚಾರ ಆರೋಪ;ವಿಕಾಸಸೌಧದಲ್ಲಿ ‘ಕೈ’ ಮುಖಂಡರಿಂದ ಶುದ್ಧೀಕರಣ
ಮುನಿರತ್ನರಿಂದ ಅತ್ಯಾಚಾರ ಆರೋಪ;ವಿಕಾಸಸೌಧದಲ್ಲಿ ‘ಕೈ’ ಮುಖಂಡರಿಂದ ಶುದ್ಧೀಕರಣ
ಮುಡಾ ಕೇಸ್: ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ್ದ ಸಚಿವ ಜಮೀರ್​ಗೆ ಸಂಕಷ್ಟ!
ಮುಡಾ ಕೇಸ್: ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ್ದ ಸಚಿವ ಜಮೀರ್​ಗೆ ಸಂಕಷ್ಟ!
ಫ್ಲಿಪ್​ಕಾರ್ಟ್​​​ನಲ್ಲಿ ಬುಕ್ ಮಾಡಿದ್ರೆ ಮನೆಗೇ ಬರುತ್ತೆ ಬೈಕ್, ಸ್ಕೂಟರ್!
ಫ್ಲಿಪ್​ಕಾರ್ಟ್​​​ನಲ್ಲಿ ಬುಕ್ ಮಾಡಿದ್ರೆ ಮನೆಗೇ ಬರುತ್ತೆ ಬೈಕ್, ಸ್ಕೂಟರ್!
ದರ್ಶನ್ ಭೇಟಿ ಮಾಡಿದ ‘ಡೆವಿಲ್’ ನಿರ್ದೇಶಕ; ಬ್ಯಾಗ್​ ತುಂಬ ತಂದಿದ್ದೇನು?
ದರ್ಶನ್ ಭೇಟಿ ಮಾಡಿದ ‘ಡೆವಿಲ್’ ನಿರ್ದೇಶಕ; ಬ್ಯಾಗ್​ ತುಂಬ ತಂದಿದ್ದೇನು?