AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದೇವರ’ ಚಿತ್ರಕ್ಕೆ ಮುಳುವಾಗುತ್ತಾ ರಾಜಮೌಳಿ ಶಾಪ? ಏನಿದು ನಂಬಿಕೆ?

ಜೂನಿಯರ್​​ ಎನ್​ಟಿಆರ್​ ಅವರು ‘ದೇವರ’ ಮೂಲಕ ತೆರೆಮೇಲೆ ಬರಲು ರೆಡಿ ಆಗಿದ್ದಾರೆ. ಮೊದಲ ಭಾಗ ಸೆಪ್ಟೆಂಬರ್ 27ರಂದು ಬಿಡುಗಡೆ ಆಗುತ್ತಿದೆ. ಈ ಸಿನಿಮಾ ಗೆಲ್ಲೋದು ಅನುಮಾನ ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ. ಈ ಮಧ್ಯೆ ರಾಜಮೌಳಿ ಶಾಪದ ವಿಚಾರವೂ ಚರ್ಚೆ ಹುಟ್ಟುಹಾಕಿದೆ.

‘ದೇವರ’ ಚಿತ್ರಕ್ಕೆ ಮುಳುವಾಗುತ್ತಾ ರಾಜಮೌಳಿ ಶಾಪ? ಏನಿದು ನಂಬಿಕೆ?
ರಾಜಮೌಳಿ-ಎನ್​ಟಿಆರ್
ರಾಜೇಶ್ ದುಗ್ಗುಮನೆ
|

Updated on: Sep 12, 2024 | 7:28 AM

Share

ಜೂನಿಯರ್ ಎನ್​ಟಿಆರ್ ನಟನೆಯ ‘ದೇವರ’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಈ ಚಿತ್ರಕ್ಕೆ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿದೆ. ಅನೇಕರು ಈ ಚಿತ್ರವನ್ನು ದೊಡ್ಡ ಮಟ್ಟದಲ್ಲಿ ಫ್ಲಾಪ್ ಆದ ‘ಆಚಾರ್ಯ’ ಚಿತ್ರಕ್ಕೆ ಹೋಲಿಕೆ ಮಾಡಿದ್ದಾರೆ. ‘ದೇವರ’ ಸಿನಿಮಾ ಎರಡು ಭಾಗದಲ್ಲಿ ರಿಲೀಸ್ ಆಗಲಿದೆ. ಮೊದಲ ಭಾಗ ಸೆಪ್ಟೆಂಬರ್ 27ರಂದು ಬಿಡುಗಡೆ ಆಗುತ್ತಿದೆ. ಈ ಸಿನಿಮಾ ಗೆಲ್ಲೋದು ಅನುಮಾನ ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ. ಈ ಮಧ್ಯೆ ಒಂದು ನಂಬಿಕೆ ಬಗ್ಗೆ ಫ್ಯಾನ್ಸ್ ಆತಂಕ ಹೊರಹಾಕಿದ್ದಾರೆ.

ರಾಜಮೌಳಿ ಜೊತೆ ಸಿನಿಮಾ ಮಾಡಿದ ಹೀರೋಗಳ ಮುಂದಿನ ಸಿನಿಮಾ ಫ್ಲಾಪ್ ಆಗುತ್ತದೆ ಎಂಬ ನಂಬಿಕೆ ಟಾಲಿವುಡ್​​ನಲ್ಲಿ ಇದೆ. ಇದು ಅನೇಕ ಬಾರಿ ಸಾಬೀತಾಗಿದೆ ಕೂಡ. ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್’ ಚಿತ್ರದಲ್ಲಿ ನಟಿಸಿದ್ದ ರಾಮ್ ಚರಣ್ ಅವರು ‘ಆಚಾರ್ಯ’ ಸಿನಿಮಾ ಮೂಲಕ ದೊಡ್ಡ ಸೋಲು ಕಂಡರು. ಈಗ ಜೂನಿಯರ್​ ಎನ್​ಟಿಆರ್ ಫ್ಯಾನ್ಸ್​ಗೂ ಆತಂಕ ಬಹುವಾಗಿ ಕಾಡುತ್ತಿದೆ.

ಜೂನಿಯರ್​ ಎನ್​ಟಿಆರ್​ಗೆ ಈ ಅನುಭವ ಆಗುತ್ತಿರುವುದು ಇದೇ ಮೊದಲೇನು ಅಲ್ಲ. ರಾಜಮೌಳಿ ನಿರ್ದೇಶನದ, ಜೂನಿಯರ್​ ಎನ್​​ಟಿಆರ್ ನಟನೆಯ ‘ಸ್ಟುಡೆಂಟ್ ನಂಬರ್ 1’ ಸಿನಿಮಾ ಗೆದ್ದ ಬಳಿಕ ರಿಲೀಸ್ ಆದ ‘ಸುಬ್ಬು’ ಫ್ಲಾಪ್ ಆಯಿತು. ‘ಸಿಂಹಾದ್ರಿ’ ಗೆಲುವಿನ ಬಳಿಕ ಅವರು ‘ಆಂಧ್ರಾವಾಲ’ ಚಿತ್ರದ ಮೂಲಕ ಸೋಲು ಕಂಡರು. ‘ಯಮದೊಂಗ’ ಗೆಲುವಿನ ಬಳಿಕ ಜೂನಿಯರ್ ಎನ್​ಟಿಆರ್ ‘ಕಂತ್ರಿ’ ಚಿತ್ರದ ಮೂಲಕ ಸೋಲು ಕಂಡರು. ಈ ನಂಬಿಕೆ ಫ್ಯಾನ್ಸ್ ಅವರನ್ನು ಬಲವಾಗಿ ಕಾಡುತ್ತಿದೆ.

ಇದನ್ನೂ ಓದಿ: ಜೂನಿಯರ್​ ಎನ್​ಟಿಆರ್​ಗೆ ಆದ ಗಾಯದಿಂದ ‘ವಾರ್ 2’ ಚಿತ್ರಕ್ಕೆ ದೊಡ್ಡ ನಷ್ಟ

‘ಆರ್​ಆರ್​ಆರ್’ ಬಳಿಕ ಜೂನಿಯರ್​ ಎನ್​ಟಿಆರ್ ಅವರ ನಟನೆಯ ಸಿನಿಮಾ ರಿಲೀಸ್ ಆಗುತ್ತಿದೆ ಎಂದರೆ ಅದು ‘ದೇವರ’. ಈ ಕಾರಣಕ್ಕೆ ಫ್ಯಾನ್ಸ್ ಆತಂಕ ಹೊರಹಾಕಿದ್ದಾರೆ.  ಇತ್ತೀಚೆಗೆ ಜೂನಿಯರ್ ಎನ್​ಟಿಆರ್ ಸಿನಿಮಾ ಬಗ್ಗೆ ಮಾತನಾಡಿದ್ದರು. ‘ಆರು ವರ್ಷಗಳ ಬಳಿಕ ಸೋಲೋ ಹೀರೋ ಆಗಿ ಬರುತ್ತಿದ್ದೇನೆ. ಈ ಕಾರಣಕ್ಕೆ ನರ್ವಸ್ ಇದೆ. ಉತ್ತರ ಭಾರತದ ಮಂದಿ ಆರ್​ಆರ್​ಆರ್​ ಚಿತ್ರವನ್ನು ಒಪ್ಪಿಕೊಂಡಂತೆ ದೇವರ ಚಿತ್ರವನ್ನು ಒಪ್ಪುತ್ತೀರಿ ಎನ್ನುವ ನಂಬಿಕೆ ಇದೆ’ ಎಂದಿದ್ದರು ಜೂನಿಯರ್ ಎನ್​ಟಿಆರ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ದಿ ರೈಸ್ ಆಫ್ ಅಶೋಕ: ಇಂಗ್ಲಿಷ್ ಟೈಟಲ್ ಇಟ್ಟಿದ್ದಕ್ಕೆ ಕಾರಣ ತಿಳಿಸಿದ ಸತೀಶ್
ದಿ ರೈಸ್ ಆಫ್ ಅಶೋಕ: ಇಂಗ್ಲಿಷ್ ಟೈಟಲ್ ಇಟ್ಟಿದ್ದಕ್ಕೆ ಕಾರಣ ತಿಳಿಸಿದ ಸತೀಶ್
ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ
ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ
ಕರ್ನಾಟಕ ವಿರುದ್ಧ 5 ವಿಕೆಟ್ ಉರುಳಿಸಿದ ಆಕಿಬ್ ನಬಿ
ಕರ್ನಾಟಕ ವಿರುದ್ಧ 5 ವಿಕೆಟ್ ಉರುಳಿಸಿದ ಆಕಿಬ್ ನಬಿ
ತಂಡಕ್ಕೆ ಚಿಯರ್ ಅಪ್ ಮಾಡಲು ಹುಬ್ಬಳ್ಳಿಗೆ ಬಂದ ಜಮ್ಮು-ಕಾಶ್ಮೀರ ಸಿಎಂ
ತಂಡಕ್ಕೆ ಚಿಯರ್ ಅಪ್ ಮಾಡಲು ಹುಬ್ಬಳ್ಳಿಗೆ ಬಂದ ಜಮ್ಮು-ಕಾಶ್ಮೀರ ಸಿಎಂ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ