AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದೇವರ’ ಚಿತ್ರಕ್ಕೆ ಮುಳುವಾಗುತ್ತಾ ರಾಜಮೌಳಿ ಶಾಪ? ಏನಿದು ನಂಬಿಕೆ?

ಜೂನಿಯರ್​​ ಎನ್​ಟಿಆರ್​ ಅವರು ‘ದೇವರ’ ಮೂಲಕ ತೆರೆಮೇಲೆ ಬರಲು ರೆಡಿ ಆಗಿದ್ದಾರೆ. ಮೊದಲ ಭಾಗ ಸೆಪ್ಟೆಂಬರ್ 27ರಂದು ಬಿಡುಗಡೆ ಆಗುತ್ತಿದೆ. ಈ ಸಿನಿಮಾ ಗೆಲ್ಲೋದು ಅನುಮಾನ ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ. ಈ ಮಧ್ಯೆ ರಾಜಮೌಳಿ ಶಾಪದ ವಿಚಾರವೂ ಚರ್ಚೆ ಹುಟ್ಟುಹಾಕಿದೆ.

‘ದೇವರ’ ಚಿತ್ರಕ್ಕೆ ಮುಳುವಾಗುತ್ತಾ ರಾಜಮೌಳಿ ಶಾಪ? ಏನಿದು ನಂಬಿಕೆ?
ರಾಜಮೌಳಿ-ಎನ್​ಟಿಆರ್
ರಾಜೇಶ್ ದುಗ್ಗುಮನೆ
|

Updated on: Sep 12, 2024 | 7:28 AM

Share

ಜೂನಿಯರ್ ಎನ್​ಟಿಆರ್ ನಟನೆಯ ‘ದೇವರ’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಈ ಚಿತ್ರಕ್ಕೆ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿದೆ. ಅನೇಕರು ಈ ಚಿತ್ರವನ್ನು ದೊಡ್ಡ ಮಟ್ಟದಲ್ಲಿ ಫ್ಲಾಪ್ ಆದ ‘ಆಚಾರ್ಯ’ ಚಿತ್ರಕ್ಕೆ ಹೋಲಿಕೆ ಮಾಡಿದ್ದಾರೆ. ‘ದೇವರ’ ಸಿನಿಮಾ ಎರಡು ಭಾಗದಲ್ಲಿ ರಿಲೀಸ್ ಆಗಲಿದೆ. ಮೊದಲ ಭಾಗ ಸೆಪ್ಟೆಂಬರ್ 27ರಂದು ಬಿಡುಗಡೆ ಆಗುತ್ತಿದೆ. ಈ ಸಿನಿಮಾ ಗೆಲ್ಲೋದು ಅನುಮಾನ ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ. ಈ ಮಧ್ಯೆ ಒಂದು ನಂಬಿಕೆ ಬಗ್ಗೆ ಫ್ಯಾನ್ಸ್ ಆತಂಕ ಹೊರಹಾಕಿದ್ದಾರೆ.

ರಾಜಮೌಳಿ ಜೊತೆ ಸಿನಿಮಾ ಮಾಡಿದ ಹೀರೋಗಳ ಮುಂದಿನ ಸಿನಿಮಾ ಫ್ಲಾಪ್ ಆಗುತ್ತದೆ ಎಂಬ ನಂಬಿಕೆ ಟಾಲಿವುಡ್​​ನಲ್ಲಿ ಇದೆ. ಇದು ಅನೇಕ ಬಾರಿ ಸಾಬೀತಾಗಿದೆ ಕೂಡ. ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್’ ಚಿತ್ರದಲ್ಲಿ ನಟಿಸಿದ್ದ ರಾಮ್ ಚರಣ್ ಅವರು ‘ಆಚಾರ್ಯ’ ಸಿನಿಮಾ ಮೂಲಕ ದೊಡ್ಡ ಸೋಲು ಕಂಡರು. ಈಗ ಜೂನಿಯರ್​ ಎನ್​ಟಿಆರ್ ಫ್ಯಾನ್ಸ್​ಗೂ ಆತಂಕ ಬಹುವಾಗಿ ಕಾಡುತ್ತಿದೆ.

ಜೂನಿಯರ್​ ಎನ್​ಟಿಆರ್​ಗೆ ಈ ಅನುಭವ ಆಗುತ್ತಿರುವುದು ಇದೇ ಮೊದಲೇನು ಅಲ್ಲ. ರಾಜಮೌಳಿ ನಿರ್ದೇಶನದ, ಜೂನಿಯರ್​ ಎನ್​​ಟಿಆರ್ ನಟನೆಯ ‘ಸ್ಟುಡೆಂಟ್ ನಂಬರ್ 1’ ಸಿನಿಮಾ ಗೆದ್ದ ಬಳಿಕ ರಿಲೀಸ್ ಆದ ‘ಸುಬ್ಬು’ ಫ್ಲಾಪ್ ಆಯಿತು. ‘ಸಿಂಹಾದ್ರಿ’ ಗೆಲುವಿನ ಬಳಿಕ ಅವರು ‘ಆಂಧ್ರಾವಾಲ’ ಚಿತ್ರದ ಮೂಲಕ ಸೋಲು ಕಂಡರು. ‘ಯಮದೊಂಗ’ ಗೆಲುವಿನ ಬಳಿಕ ಜೂನಿಯರ್ ಎನ್​ಟಿಆರ್ ‘ಕಂತ್ರಿ’ ಚಿತ್ರದ ಮೂಲಕ ಸೋಲು ಕಂಡರು. ಈ ನಂಬಿಕೆ ಫ್ಯಾನ್ಸ್ ಅವರನ್ನು ಬಲವಾಗಿ ಕಾಡುತ್ತಿದೆ.

ಇದನ್ನೂ ಓದಿ: ಜೂನಿಯರ್​ ಎನ್​ಟಿಆರ್​ಗೆ ಆದ ಗಾಯದಿಂದ ‘ವಾರ್ 2’ ಚಿತ್ರಕ್ಕೆ ದೊಡ್ಡ ನಷ್ಟ

‘ಆರ್​ಆರ್​ಆರ್’ ಬಳಿಕ ಜೂನಿಯರ್​ ಎನ್​ಟಿಆರ್ ಅವರ ನಟನೆಯ ಸಿನಿಮಾ ರಿಲೀಸ್ ಆಗುತ್ತಿದೆ ಎಂದರೆ ಅದು ‘ದೇವರ’. ಈ ಕಾರಣಕ್ಕೆ ಫ್ಯಾನ್ಸ್ ಆತಂಕ ಹೊರಹಾಕಿದ್ದಾರೆ.  ಇತ್ತೀಚೆಗೆ ಜೂನಿಯರ್ ಎನ್​ಟಿಆರ್ ಸಿನಿಮಾ ಬಗ್ಗೆ ಮಾತನಾಡಿದ್ದರು. ‘ಆರು ವರ್ಷಗಳ ಬಳಿಕ ಸೋಲೋ ಹೀರೋ ಆಗಿ ಬರುತ್ತಿದ್ದೇನೆ. ಈ ಕಾರಣಕ್ಕೆ ನರ್ವಸ್ ಇದೆ. ಉತ್ತರ ಭಾರತದ ಮಂದಿ ಆರ್​ಆರ್​ಆರ್​ ಚಿತ್ರವನ್ನು ಒಪ್ಪಿಕೊಂಡಂತೆ ದೇವರ ಚಿತ್ರವನ್ನು ಒಪ್ಪುತ್ತೀರಿ ಎನ್ನುವ ನಂಬಿಕೆ ಇದೆ’ ಎಂದಿದ್ದರು ಜೂನಿಯರ್ ಎನ್​ಟಿಆರ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ನಿಧಿ ಸಂಗ್ರಹ ಮಾಡೋದೇ ಈ ಅಜ್ಜನ ಕಾಯಕ; ಸರ್ಕಾರಕ್ಕೆ ನೀಡಿಲ್ಲ ಎಂದ ತೋಟಯ್ಯ
ನಿಧಿ ಸಂಗ್ರಹ ಮಾಡೋದೇ ಈ ಅಜ್ಜನ ಕಾಯಕ; ಸರ್ಕಾರಕ್ಕೆ ನೀಡಿಲ್ಲ ಎಂದ ತೋಟಯ್ಯ
ಕಾಡ್ಗಿಚ್ಚಿನಿಂದ ನಾಶವಾಯ್ತು ನಂದಾ ದೇವಿ ಅರಣ್ಯದ ಅಪರೂಪದ ಸಸ್ಯ ಸಂಪತ್ತು
ಕಾಡ್ಗಿಚ್ಚಿನಿಂದ ನಾಶವಾಯ್ತು ನಂದಾ ದೇವಿ ಅರಣ್ಯದ ಅಪರೂಪದ ಸಸ್ಯ ಸಂಪತ್ತು
ತಮಿಳುನಾಡಿನ ಮಧುರೈನಲ್ಲಿ ಜಲ್ಲಿಕಟ್ಟು ಸ್ಪರ್ಧೆ ಆರಂಭ
ತಮಿಳುನಾಡಿನ ಮಧುರೈನಲ್ಲಿ ಜಲ್ಲಿಕಟ್ಟು ಸ್ಪರ್ಧೆ ಆರಂಭ
ಸಾವಿನಿಂದ ಕೂದಲೆಳೆ ಅಂತರದಲ್ಲಿ ಪಾರಾದ ಕ್ರಿಕೆಟಿಗ
ಸಾವಿನಿಂದ ಕೂದಲೆಳೆ ಅಂತರದಲ್ಲಿ ಪಾರಾದ ಕ್ರಿಕೆಟಿಗ
ಹತ್ಯೆಗೈದು ಎಲ್ಲರ ಮುಂದೆ ನಾಟಕವಾಡಿದ್ದ ಆರೋಪಿಗಳು ಸಿಕ್ಕಿಬಿದ್ದಿದ್ದೇಗೆ?
ಹತ್ಯೆಗೈದು ಎಲ್ಲರ ಮುಂದೆ ನಾಟಕವಾಡಿದ್ದ ಆರೋಪಿಗಳು ಸಿಕ್ಕಿಬಿದ್ದಿದ್ದೇಗೆ?
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು