‘ದೇವರ’ ಚಿತ್ರಕ್ಕೆ ಮುಳುವಾಗುತ್ತಾ ರಾಜಮೌಳಿ ಶಾಪ? ಏನಿದು ನಂಬಿಕೆ?

ಜೂನಿಯರ್​​ ಎನ್​ಟಿಆರ್​ ಅವರು ‘ದೇವರ’ ಮೂಲಕ ತೆರೆಮೇಲೆ ಬರಲು ರೆಡಿ ಆಗಿದ್ದಾರೆ. ಮೊದಲ ಭಾಗ ಸೆಪ್ಟೆಂಬರ್ 27ರಂದು ಬಿಡುಗಡೆ ಆಗುತ್ತಿದೆ. ಈ ಸಿನಿಮಾ ಗೆಲ್ಲೋದು ಅನುಮಾನ ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ. ಈ ಮಧ್ಯೆ ರಾಜಮೌಳಿ ಶಾಪದ ವಿಚಾರವೂ ಚರ್ಚೆ ಹುಟ್ಟುಹಾಕಿದೆ.

‘ದೇವರ’ ಚಿತ್ರಕ್ಕೆ ಮುಳುವಾಗುತ್ತಾ ರಾಜಮೌಳಿ ಶಾಪ? ಏನಿದು ನಂಬಿಕೆ?
ರಾಜಮೌಳಿ-ಎನ್​ಟಿಆರ್
Follow us
|

Updated on: Sep 12, 2024 | 7:28 AM

ಜೂನಿಯರ್ ಎನ್​ಟಿಆರ್ ನಟನೆಯ ‘ದೇವರ’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಈ ಚಿತ್ರಕ್ಕೆ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿದೆ. ಅನೇಕರು ಈ ಚಿತ್ರವನ್ನು ದೊಡ್ಡ ಮಟ್ಟದಲ್ಲಿ ಫ್ಲಾಪ್ ಆದ ‘ಆಚಾರ್ಯ’ ಚಿತ್ರಕ್ಕೆ ಹೋಲಿಕೆ ಮಾಡಿದ್ದಾರೆ. ‘ದೇವರ’ ಸಿನಿಮಾ ಎರಡು ಭಾಗದಲ್ಲಿ ರಿಲೀಸ್ ಆಗಲಿದೆ. ಮೊದಲ ಭಾಗ ಸೆಪ್ಟೆಂಬರ್ 27ರಂದು ಬಿಡುಗಡೆ ಆಗುತ್ತಿದೆ. ಈ ಸಿನಿಮಾ ಗೆಲ್ಲೋದು ಅನುಮಾನ ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ. ಈ ಮಧ್ಯೆ ಒಂದು ನಂಬಿಕೆ ಬಗ್ಗೆ ಫ್ಯಾನ್ಸ್ ಆತಂಕ ಹೊರಹಾಕಿದ್ದಾರೆ.

ರಾಜಮೌಳಿ ಜೊತೆ ಸಿನಿಮಾ ಮಾಡಿದ ಹೀರೋಗಳ ಮುಂದಿನ ಸಿನಿಮಾ ಫ್ಲಾಪ್ ಆಗುತ್ತದೆ ಎಂಬ ನಂಬಿಕೆ ಟಾಲಿವುಡ್​​ನಲ್ಲಿ ಇದೆ. ಇದು ಅನೇಕ ಬಾರಿ ಸಾಬೀತಾಗಿದೆ ಕೂಡ. ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್’ ಚಿತ್ರದಲ್ಲಿ ನಟಿಸಿದ್ದ ರಾಮ್ ಚರಣ್ ಅವರು ‘ಆಚಾರ್ಯ’ ಸಿನಿಮಾ ಮೂಲಕ ದೊಡ್ಡ ಸೋಲು ಕಂಡರು. ಈಗ ಜೂನಿಯರ್​ ಎನ್​ಟಿಆರ್ ಫ್ಯಾನ್ಸ್​ಗೂ ಆತಂಕ ಬಹುವಾಗಿ ಕಾಡುತ್ತಿದೆ.

ಜೂನಿಯರ್​ ಎನ್​ಟಿಆರ್​ಗೆ ಈ ಅನುಭವ ಆಗುತ್ತಿರುವುದು ಇದೇ ಮೊದಲೇನು ಅಲ್ಲ. ರಾಜಮೌಳಿ ನಿರ್ದೇಶನದ, ಜೂನಿಯರ್​ ಎನ್​​ಟಿಆರ್ ನಟನೆಯ ‘ಸ್ಟುಡೆಂಟ್ ನಂಬರ್ 1’ ಸಿನಿಮಾ ಗೆದ್ದ ಬಳಿಕ ರಿಲೀಸ್ ಆದ ‘ಸುಬ್ಬು’ ಫ್ಲಾಪ್ ಆಯಿತು. ‘ಸಿಂಹಾದ್ರಿ’ ಗೆಲುವಿನ ಬಳಿಕ ಅವರು ‘ಆಂಧ್ರಾವಾಲ’ ಚಿತ್ರದ ಮೂಲಕ ಸೋಲು ಕಂಡರು. ‘ಯಮದೊಂಗ’ ಗೆಲುವಿನ ಬಳಿಕ ಜೂನಿಯರ್ ಎನ್​ಟಿಆರ್ ‘ಕಂತ್ರಿ’ ಚಿತ್ರದ ಮೂಲಕ ಸೋಲು ಕಂಡರು. ಈ ನಂಬಿಕೆ ಫ್ಯಾನ್ಸ್ ಅವರನ್ನು ಬಲವಾಗಿ ಕಾಡುತ್ತಿದೆ.

ಇದನ್ನೂ ಓದಿ: ಜೂನಿಯರ್​ ಎನ್​ಟಿಆರ್​ಗೆ ಆದ ಗಾಯದಿಂದ ‘ವಾರ್ 2’ ಚಿತ್ರಕ್ಕೆ ದೊಡ್ಡ ನಷ್ಟ

‘ಆರ್​ಆರ್​ಆರ್’ ಬಳಿಕ ಜೂನಿಯರ್​ ಎನ್​ಟಿಆರ್ ಅವರ ನಟನೆಯ ಸಿನಿಮಾ ರಿಲೀಸ್ ಆಗುತ್ತಿದೆ ಎಂದರೆ ಅದು ‘ದೇವರ’. ಈ ಕಾರಣಕ್ಕೆ ಫ್ಯಾನ್ಸ್ ಆತಂಕ ಹೊರಹಾಕಿದ್ದಾರೆ.  ಇತ್ತೀಚೆಗೆ ಜೂನಿಯರ್ ಎನ್​ಟಿಆರ್ ಸಿನಿಮಾ ಬಗ್ಗೆ ಮಾತನಾಡಿದ್ದರು. ‘ಆರು ವರ್ಷಗಳ ಬಳಿಕ ಸೋಲೋ ಹೀರೋ ಆಗಿ ಬರುತ್ತಿದ್ದೇನೆ. ಈ ಕಾರಣಕ್ಕೆ ನರ್ವಸ್ ಇದೆ. ಉತ್ತರ ಭಾರತದ ಮಂದಿ ಆರ್​ಆರ್​ಆರ್​ ಚಿತ್ರವನ್ನು ಒಪ್ಪಿಕೊಂಡಂತೆ ದೇವರ ಚಿತ್ರವನ್ನು ಒಪ್ಪುತ್ತೀರಿ ಎನ್ನುವ ನಂಬಿಕೆ ಇದೆ’ ಎಂದಿದ್ದರು ಜೂನಿಯರ್ ಎನ್​ಟಿಆರ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ