AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರಿ ಉತ್ಸಾಹದಲ್ಲಿ ಪೋಸ್ಟರ್​ ಬಿಡುಗಡೆ ಮಾಡಿ ಟ್ರೋಲ್​ ಆದ ‘ದೇವರ’ ಚಿತ್ರತಂಡ

ಸ್ಟಾರ್​ ಹೀರೋಗಳ ಹೊಸ ಸಿನಿಮಾದಿಂದ ಯಾವುದೇ ಅಪ್​ಡೇಟ್​ ಸಿಕ್ಕರೂ ಜನರು ಅದನ್ನು ಸೂಕ್ಷ್ಮವಾಗಿ ಗಮನಿಸುತ್ತಾರೆ. ‘ದೇವರ’ ಸಿನಿಮಾದ ಹೊಸ ಪೋಸ್ಟರ್​ ನೋಡಿದ ಅಭಿಮಾನಿಗಳಿಗೆ ನಿರಾಸೆ ಆಗಿದೆ. ಯಾಕೆಂದರೆ ಈ ಪೋಸ್ಟರ್​ನಲ್ಲಿ ಯಾವುದೇ ವಿಶೇಷತೆ ಕಾಣಿಸಿಲ್ಲ. ಹೊಸತನ ಕೂಡ ಇಲ್ಲ. ಹಾಗಾಗಿ ಭಾರಿ ಟೀಕೆಗೆ ಒಳಗಾಗುತ್ತಿದೆ.

ಭಾರಿ ಉತ್ಸಾಹದಲ್ಲಿ ಪೋಸ್ಟರ್​ ಬಿಡುಗಡೆ ಮಾಡಿ ಟ್ರೋಲ್​ ಆದ ‘ದೇವರ’ ಚಿತ್ರತಂಡ
ಜೂನಿಯರ್​ ಎನ್​ಟಿಆರ್
Follow us
ಮದನ್​ ಕುಮಾರ್​
|

Updated on: Jan 02, 2024 | 12:17 PM

ನಟ ಜೂನಿಯರ್​ ಎನ್​ಟಿಆರ್​ (Jr NTR) ಅವರು ‘ದೇವರ’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರಕ್ಕೆ ಕೊರಟಾಲ ಶಿವ ನಿರ್ದೇಶನ ಮಾಡುತ್ತಿದ್ದಾರೆ. ‘ಆರ್​ಆರ್​ಆರ್​’ ಸಿನಿಮಾದ ಭರ್ಜರಿ ಯಶಸ್ಸಿನ ಬಳಿಕ ಜೂನಿಯರ್​ ಎನ್​ಟಿಆರ್​ ಅವರು ಕೈಗೆತ್ತಿಕೊಂಡ ಚಿತ್ರ ಎಂಬ ಕಾರಣಕ್ಕೆ ಈ ಸಿನಿಮಾಗೆ ಹೆಚ್ಚು ಹೈಪ್​ ಸೃಷ್ಟಿ ಆಗಿದೆ. ದೇವರ’ (Devara) ಚಿತ್ರದ ಹೊಸ ಪೋಸ್ಟರ್​ ಅನ್ನು ನ್ಯೂ ಇಯರ್​ ಪ್ರಯುಕ್ತ ಭಾರಿ ಉತ್ಸಾಹದಿಂದ ಬಿಡುಗಡೆ ಮಾಡಲಾಯಿತು. ಆದರೆ ಅಭಿಮಾನಿಗಳಿಗೆ ಇದು ಇಷ್ಟ ಆಗಿಲ್ಲ. ಹಾಗಾಗಿ ಸೋಶಿಯಲ್​ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಟ್ರೋಲ್​ ಮಾಡಲಾಗುತ್ತಿದೆ.

ಸ್ಟಾರ್​ ಹೀರೋಗಳ ಹೊಸ ಸಿನಿಮಾದಿಂದ ಯಾವುದೇ ಅಪ್​ಡೇಟ್​ ಸಿಕ್ಕರೂ ಜನರು ಅದನ್ನು ಸೂಕ್ಷ್ಮವಾಗಿ ಗಮನಿಸುತ್ತಾರೆ. ‘ದೇವರ’ ಸಿನಿಮಾದ ಹೊಸ ಪೋಸ್ಟರ್​ ನೋಡಿದ ಅಭಿಮಾನಿಗಳಿಗೆ ನಿರಾಸೆ ಆಗಿದೆ. ಯಾಕೆಂದರೆ ಈ ಪೋಸ್ಟರ್​ನಲ್ಲಿ ಯಾವುದೇ ವಿಶೇಷತೆ ಕಾಣಿಸಿಲ್ಲ. ಹೊಸತನ ಕೂಡ ಇಲ್ಲ. ಹಾಗಾಗಿ ಈ ಪೋಸ್ಟರ್​ ಭಾರಿ ಟೀಕೆಗೆ ಒಳಗಾಗುತ್ತಿದೆ.

ಜೂ ಎನ್​ಟಿಆರ್ ಸಹೋದರನ ಸಿನಿಮಾ ವಿವಾದದಲ್ಲಿ: ನಿರ್ದೇಶಕನ ದೀರ್ಘ ಪತ್ರ

ಹೊಸ ಪೋಸ್ಟರ್​ನಲ್ಲಿ ಜೂನಿಯರ್​ ಎನ್​ಟಿಆರ್​ ಅವರು ಸಮುದ್ರದಲ್ಲಿ ದೋಣಿಯ ಮೇಲೆ ನಿಂತು ಪೋಸ್​ ನೀಡಿದ್ದಾರೆ. ಈ ಮೊದಲು ಅನೇಕ ಸಿನಿಮಾಗಳ ಪೋಸ್ಟರ್​ಗಳು ಇದೇ ರೀತಿ ವಿನ್ಯಾಸಗೊಂಡಿದ್ದವು. ಹಾಗಾಗಿ ಜೂನಿಯರ್​ ಎನ್​ಟಿಆರ್​ ಅವರ ಅಭಿಮಾನಿಗಳಿಗೆ ಈ ಪೋಸ್ಟರ್​ ಕಿಂಚಿತ್ತೂ ಇಷ್ಟ ಆಗಿಲ್ಲ. ಬೇರೆ ನಟರ ಸಿನಿಮಾದ ಪೋಸ್ಟರ್​ಗಳಿಗೆ ಇದನ್ನು ಹೋಲಿಕೆ ಮಾಡಿ ಟ್ರೋಲ್​ ಮಾಡಲಾಗುತ್ತಿದೆ.

ಈ ಪೋಸ್ಟರ್​ ನೋಡಿ ಜೂನಿಯರ್​ ಎನ್​ಟಿಆರ್​ ಅಭಿಮಾನಿಗಳು ಬೇಸರ ಮಾಡಿಕೊಂಡಿರಬಹುದು. ಆದರೆ ಭರವಸೆ ಕಳೆದುಕೊಳ್ಳುವ ಅವಶ್ಯಕತೆ ಇಲ್ಲ. ಜನವರಿ 8ರಂದು ‘ದೇವರ’ ಸಿನಿಮಾದಿಂದ ಫಸ್ಟ್ ಗ್ಲಿಂಪ್ಸ್​ ಬಿಡುಗಡೆ ಆಗಲಿದೆ. ಅದು ಅಭಿಮಾನಿಗಳನ್ನು ಖುಷಿಪಡಿಸಲಿದೆ ಎಂದು ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಈ ಸಿನಿಮಾದ ಕೆಲಸಗಳು ಬಿರುಸಿನಿಂದ ಸಾಗುತ್ತಿವೆ. ಈ ಚಿತ್ರದ ಮೂಲಕ ಜಾನ್ವಿ ಕಪೂರ್​ ಅವರು ದಕ್ಷಿಣ ಭಾರತಕ್ಕೆ ಕಾಲಿಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಇಡೀ ವಿಶ್ವವೇ ಭಾರತೀಯ ಸೈನಿಕರ ಕಾರ್ಯವನ್ನು ಕೊಂಡಾಡುತ್ತಿದೆ: ಶಾಸಕ
ಇಡೀ ವಿಶ್ವವೇ ಭಾರತೀಯ ಸೈನಿಕರ ಕಾರ್ಯವನ್ನು ಕೊಂಡಾಡುತ್ತಿದೆ: ಶಾಸಕ
ನಾಗರಿಕರ ಹೆಸರಿನಲ್ಲಿ ರಾಜ್ಯಾದ್ಯಂತ ತಿರಂಗಾ ಯಾತ್ರೆ: ಆರ್ ಅಶೋಕ್
ನಾಗರಿಕರ ಹೆಸರಿನಲ್ಲಿ ರಾಜ್ಯಾದ್ಯಂತ ತಿರಂಗಾ ಯಾತ್ರೆ: ಆರ್ ಅಶೋಕ್