AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರಿ ಉತ್ಸಾಹದಲ್ಲಿ ಪೋಸ್ಟರ್​ ಬಿಡುಗಡೆ ಮಾಡಿ ಟ್ರೋಲ್​ ಆದ ‘ದೇವರ’ ಚಿತ್ರತಂಡ

ಸ್ಟಾರ್​ ಹೀರೋಗಳ ಹೊಸ ಸಿನಿಮಾದಿಂದ ಯಾವುದೇ ಅಪ್​ಡೇಟ್​ ಸಿಕ್ಕರೂ ಜನರು ಅದನ್ನು ಸೂಕ್ಷ್ಮವಾಗಿ ಗಮನಿಸುತ್ತಾರೆ. ‘ದೇವರ’ ಸಿನಿಮಾದ ಹೊಸ ಪೋಸ್ಟರ್​ ನೋಡಿದ ಅಭಿಮಾನಿಗಳಿಗೆ ನಿರಾಸೆ ಆಗಿದೆ. ಯಾಕೆಂದರೆ ಈ ಪೋಸ್ಟರ್​ನಲ್ಲಿ ಯಾವುದೇ ವಿಶೇಷತೆ ಕಾಣಿಸಿಲ್ಲ. ಹೊಸತನ ಕೂಡ ಇಲ್ಲ. ಹಾಗಾಗಿ ಭಾರಿ ಟೀಕೆಗೆ ಒಳಗಾಗುತ್ತಿದೆ.

ಭಾರಿ ಉತ್ಸಾಹದಲ್ಲಿ ಪೋಸ್ಟರ್​ ಬಿಡುಗಡೆ ಮಾಡಿ ಟ್ರೋಲ್​ ಆದ ‘ದೇವರ’ ಚಿತ್ರತಂಡ
ಜೂನಿಯರ್​ ಎನ್​ಟಿಆರ್
ಮದನ್​ ಕುಮಾರ್​
|

Updated on: Jan 02, 2024 | 12:17 PM

Share

ನಟ ಜೂನಿಯರ್​ ಎನ್​ಟಿಆರ್​ (Jr NTR) ಅವರು ‘ದೇವರ’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರಕ್ಕೆ ಕೊರಟಾಲ ಶಿವ ನಿರ್ದೇಶನ ಮಾಡುತ್ತಿದ್ದಾರೆ. ‘ಆರ್​ಆರ್​ಆರ್​’ ಸಿನಿಮಾದ ಭರ್ಜರಿ ಯಶಸ್ಸಿನ ಬಳಿಕ ಜೂನಿಯರ್​ ಎನ್​ಟಿಆರ್​ ಅವರು ಕೈಗೆತ್ತಿಕೊಂಡ ಚಿತ್ರ ಎಂಬ ಕಾರಣಕ್ಕೆ ಈ ಸಿನಿಮಾಗೆ ಹೆಚ್ಚು ಹೈಪ್​ ಸೃಷ್ಟಿ ಆಗಿದೆ. ದೇವರ’ (Devara) ಚಿತ್ರದ ಹೊಸ ಪೋಸ್ಟರ್​ ಅನ್ನು ನ್ಯೂ ಇಯರ್​ ಪ್ರಯುಕ್ತ ಭಾರಿ ಉತ್ಸಾಹದಿಂದ ಬಿಡುಗಡೆ ಮಾಡಲಾಯಿತು. ಆದರೆ ಅಭಿಮಾನಿಗಳಿಗೆ ಇದು ಇಷ್ಟ ಆಗಿಲ್ಲ. ಹಾಗಾಗಿ ಸೋಶಿಯಲ್​ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಟ್ರೋಲ್​ ಮಾಡಲಾಗುತ್ತಿದೆ.

ಸ್ಟಾರ್​ ಹೀರೋಗಳ ಹೊಸ ಸಿನಿಮಾದಿಂದ ಯಾವುದೇ ಅಪ್​ಡೇಟ್​ ಸಿಕ್ಕರೂ ಜನರು ಅದನ್ನು ಸೂಕ್ಷ್ಮವಾಗಿ ಗಮನಿಸುತ್ತಾರೆ. ‘ದೇವರ’ ಸಿನಿಮಾದ ಹೊಸ ಪೋಸ್ಟರ್​ ನೋಡಿದ ಅಭಿಮಾನಿಗಳಿಗೆ ನಿರಾಸೆ ಆಗಿದೆ. ಯಾಕೆಂದರೆ ಈ ಪೋಸ್ಟರ್​ನಲ್ಲಿ ಯಾವುದೇ ವಿಶೇಷತೆ ಕಾಣಿಸಿಲ್ಲ. ಹೊಸತನ ಕೂಡ ಇಲ್ಲ. ಹಾಗಾಗಿ ಈ ಪೋಸ್ಟರ್​ ಭಾರಿ ಟೀಕೆಗೆ ಒಳಗಾಗುತ್ತಿದೆ.

ಜೂ ಎನ್​ಟಿಆರ್ ಸಹೋದರನ ಸಿನಿಮಾ ವಿವಾದದಲ್ಲಿ: ನಿರ್ದೇಶಕನ ದೀರ್ಘ ಪತ್ರ

ಹೊಸ ಪೋಸ್ಟರ್​ನಲ್ಲಿ ಜೂನಿಯರ್​ ಎನ್​ಟಿಆರ್​ ಅವರು ಸಮುದ್ರದಲ್ಲಿ ದೋಣಿಯ ಮೇಲೆ ನಿಂತು ಪೋಸ್​ ನೀಡಿದ್ದಾರೆ. ಈ ಮೊದಲು ಅನೇಕ ಸಿನಿಮಾಗಳ ಪೋಸ್ಟರ್​ಗಳು ಇದೇ ರೀತಿ ವಿನ್ಯಾಸಗೊಂಡಿದ್ದವು. ಹಾಗಾಗಿ ಜೂನಿಯರ್​ ಎನ್​ಟಿಆರ್​ ಅವರ ಅಭಿಮಾನಿಗಳಿಗೆ ಈ ಪೋಸ್ಟರ್​ ಕಿಂಚಿತ್ತೂ ಇಷ್ಟ ಆಗಿಲ್ಲ. ಬೇರೆ ನಟರ ಸಿನಿಮಾದ ಪೋಸ್ಟರ್​ಗಳಿಗೆ ಇದನ್ನು ಹೋಲಿಕೆ ಮಾಡಿ ಟ್ರೋಲ್​ ಮಾಡಲಾಗುತ್ತಿದೆ.

ಈ ಪೋಸ್ಟರ್​ ನೋಡಿ ಜೂನಿಯರ್​ ಎನ್​ಟಿಆರ್​ ಅಭಿಮಾನಿಗಳು ಬೇಸರ ಮಾಡಿಕೊಂಡಿರಬಹುದು. ಆದರೆ ಭರವಸೆ ಕಳೆದುಕೊಳ್ಳುವ ಅವಶ್ಯಕತೆ ಇಲ್ಲ. ಜನವರಿ 8ರಂದು ‘ದೇವರ’ ಸಿನಿಮಾದಿಂದ ಫಸ್ಟ್ ಗ್ಲಿಂಪ್ಸ್​ ಬಿಡುಗಡೆ ಆಗಲಿದೆ. ಅದು ಅಭಿಮಾನಿಗಳನ್ನು ಖುಷಿಪಡಿಸಲಿದೆ ಎಂದು ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಈ ಸಿನಿಮಾದ ಕೆಲಸಗಳು ಬಿರುಸಿನಿಂದ ಸಾಗುತ್ತಿವೆ. ಈ ಚಿತ್ರದ ಮೂಲಕ ಜಾನ್ವಿ ಕಪೂರ್​ ಅವರು ದಕ್ಷಿಣ ಭಾರತಕ್ಕೆ ಕಾಲಿಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?