AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರಿ ಉತ್ಸಾಹದಲ್ಲಿ ಪೋಸ್ಟರ್​ ಬಿಡುಗಡೆ ಮಾಡಿ ಟ್ರೋಲ್​ ಆದ ‘ದೇವರ’ ಚಿತ್ರತಂಡ

ಸ್ಟಾರ್​ ಹೀರೋಗಳ ಹೊಸ ಸಿನಿಮಾದಿಂದ ಯಾವುದೇ ಅಪ್​ಡೇಟ್​ ಸಿಕ್ಕರೂ ಜನರು ಅದನ್ನು ಸೂಕ್ಷ್ಮವಾಗಿ ಗಮನಿಸುತ್ತಾರೆ. ‘ದೇವರ’ ಸಿನಿಮಾದ ಹೊಸ ಪೋಸ್ಟರ್​ ನೋಡಿದ ಅಭಿಮಾನಿಗಳಿಗೆ ನಿರಾಸೆ ಆಗಿದೆ. ಯಾಕೆಂದರೆ ಈ ಪೋಸ್ಟರ್​ನಲ್ಲಿ ಯಾವುದೇ ವಿಶೇಷತೆ ಕಾಣಿಸಿಲ್ಲ. ಹೊಸತನ ಕೂಡ ಇಲ್ಲ. ಹಾಗಾಗಿ ಭಾರಿ ಟೀಕೆಗೆ ಒಳಗಾಗುತ್ತಿದೆ.

ಭಾರಿ ಉತ್ಸಾಹದಲ್ಲಿ ಪೋಸ್ಟರ್​ ಬಿಡುಗಡೆ ಮಾಡಿ ಟ್ರೋಲ್​ ಆದ ‘ದೇವರ’ ಚಿತ್ರತಂಡ
ಜೂನಿಯರ್​ ಎನ್​ಟಿಆರ್
ಮದನ್​ ಕುಮಾರ್​
|

Updated on: Jan 02, 2024 | 12:17 PM

Share

ನಟ ಜೂನಿಯರ್​ ಎನ್​ಟಿಆರ್​ (Jr NTR) ಅವರು ‘ದೇವರ’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರಕ್ಕೆ ಕೊರಟಾಲ ಶಿವ ನಿರ್ದೇಶನ ಮಾಡುತ್ತಿದ್ದಾರೆ. ‘ಆರ್​ಆರ್​ಆರ್​’ ಸಿನಿಮಾದ ಭರ್ಜರಿ ಯಶಸ್ಸಿನ ಬಳಿಕ ಜೂನಿಯರ್​ ಎನ್​ಟಿಆರ್​ ಅವರು ಕೈಗೆತ್ತಿಕೊಂಡ ಚಿತ್ರ ಎಂಬ ಕಾರಣಕ್ಕೆ ಈ ಸಿನಿಮಾಗೆ ಹೆಚ್ಚು ಹೈಪ್​ ಸೃಷ್ಟಿ ಆಗಿದೆ. ದೇವರ’ (Devara) ಚಿತ್ರದ ಹೊಸ ಪೋಸ್ಟರ್​ ಅನ್ನು ನ್ಯೂ ಇಯರ್​ ಪ್ರಯುಕ್ತ ಭಾರಿ ಉತ್ಸಾಹದಿಂದ ಬಿಡುಗಡೆ ಮಾಡಲಾಯಿತು. ಆದರೆ ಅಭಿಮಾನಿಗಳಿಗೆ ಇದು ಇಷ್ಟ ಆಗಿಲ್ಲ. ಹಾಗಾಗಿ ಸೋಶಿಯಲ್​ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಟ್ರೋಲ್​ ಮಾಡಲಾಗುತ್ತಿದೆ.

ಸ್ಟಾರ್​ ಹೀರೋಗಳ ಹೊಸ ಸಿನಿಮಾದಿಂದ ಯಾವುದೇ ಅಪ್​ಡೇಟ್​ ಸಿಕ್ಕರೂ ಜನರು ಅದನ್ನು ಸೂಕ್ಷ್ಮವಾಗಿ ಗಮನಿಸುತ್ತಾರೆ. ‘ದೇವರ’ ಸಿನಿಮಾದ ಹೊಸ ಪೋಸ್ಟರ್​ ನೋಡಿದ ಅಭಿಮಾನಿಗಳಿಗೆ ನಿರಾಸೆ ಆಗಿದೆ. ಯಾಕೆಂದರೆ ಈ ಪೋಸ್ಟರ್​ನಲ್ಲಿ ಯಾವುದೇ ವಿಶೇಷತೆ ಕಾಣಿಸಿಲ್ಲ. ಹೊಸತನ ಕೂಡ ಇಲ್ಲ. ಹಾಗಾಗಿ ಈ ಪೋಸ್ಟರ್​ ಭಾರಿ ಟೀಕೆಗೆ ಒಳಗಾಗುತ್ತಿದೆ.

ಜೂ ಎನ್​ಟಿಆರ್ ಸಹೋದರನ ಸಿನಿಮಾ ವಿವಾದದಲ್ಲಿ: ನಿರ್ದೇಶಕನ ದೀರ್ಘ ಪತ್ರ

ಹೊಸ ಪೋಸ್ಟರ್​ನಲ್ಲಿ ಜೂನಿಯರ್​ ಎನ್​ಟಿಆರ್​ ಅವರು ಸಮುದ್ರದಲ್ಲಿ ದೋಣಿಯ ಮೇಲೆ ನಿಂತು ಪೋಸ್​ ನೀಡಿದ್ದಾರೆ. ಈ ಮೊದಲು ಅನೇಕ ಸಿನಿಮಾಗಳ ಪೋಸ್ಟರ್​ಗಳು ಇದೇ ರೀತಿ ವಿನ್ಯಾಸಗೊಂಡಿದ್ದವು. ಹಾಗಾಗಿ ಜೂನಿಯರ್​ ಎನ್​ಟಿಆರ್​ ಅವರ ಅಭಿಮಾನಿಗಳಿಗೆ ಈ ಪೋಸ್ಟರ್​ ಕಿಂಚಿತ್ತೂ ಇಷ್ಟ ಆಗಿಲ್ಲ. ಬೇರೆ ನಟರ ಸಿನಿಮಾದ ಪೋಸ್ಟರ್​ಗಳಿಗೆ ಇದನ್ನು ಹೋಲಿಕೆ ಮಾಡಿ ಟ್ರೋಲ್​ ಮಾಡಲಾಗುತ್ತಿದೆ.

ಈ ಪೋಸ್ಟರ್​ ನೋಡಿ ಜೂನಿಯರ್​ ಎನ್​ಟಿಆರ್​ ಅಭಿಮಾನಿಗಳು ಬೇಸರ ಮಾಡಿಕೊಂಡಿರಬಹುದು. ಆದರೆ ಭರವಸೆ ಕಳೆದುಕೊಳ್ಳುವ ಅವಶ್ಯಕತೆ ಇಲ್ಲ. ಜನವರಿ 8ರಂದು ‘ದೇವರ’ ಸಿನಿಮಾದಿಂದ ಫಸ್ಟ್ ಗ್ಲಿಂಪ್ಸ್​ ಬಿಡುಗಡೆ ಆಗಲಿದೆ. ಅದು ಅಭಿಮಾನಿಗಳನ್ನು ಖುಷಿಪಡಿಸಲಿದೆ ಎಂದು ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಈ ಸಿನಿಮಾದ ಕೆಲಸಗಳು ಬಿರುಸಿನಿಂದ ಸಾಗುತ್ತಿವೆ. ಈ ಚಿತ್ರದ ಮೂಲಕ ಜಾನ್ವಿ ಕಪೂರ್​ ಅವರು ದಕ್ಷಿಣ ಭಾರತಕ್ಕೆ ಕಾಲಿಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ