AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರಿ ಉತ್ಸಾಹದಲ್ಲಿ ಪೋಸ್ಟರ್​ ಬಿಡುಗಡೆ ಮಾಡಿ ಟ್ರೋಲ್​ ಆದ ‘ದೇವರ’ ಚಿತ್ರತಂಡ

ಸ್ಟಾರ್​ ಹೀರೋಗಳ ಹೊಸ ಸಿನಿಮಾದಿಂದ ಯಾವುದೇ ಅಪ್​ಡೇಟ್​ ಸಿಕ್ಕರೂ ಜನರು ಅದನ್ನು ಸೂಕ್ಷ್ಮವಾಗಿ ಗಮನಿಸುತ್ತಾರೆ. ‘ದೇವರ’ ಸಿನಿಮಾದ ಹೊಸ ಪೋಸ್ಟರ್​ ನೋಡಿದ ಅಭಿಮಾನಿಗಳಿಗೆ ನಿರಾಸೆ ಆಗಿದೆ. ಯಾಕೆಂದರೆ ಈ ಪೋಸ್ಟರ್​ನಲ್ಲಿ ಯಾವುದೇ ವಿಶೇಷತೆ ಕಾಣಿಸಿಲ್ಲ. ಹೊಸತನ ಕೂಡ ಇಲ್ಲ. ಹಾಗಾಗಿ ಭಾರಿ ಟೀಕೆಗೆ ಒಳಗಾಗುತ್ತಿದೆ.

ಭಾರಿ ಉತ್ಸಾಹದಲ್ಲಿ ಪೋಸ್ಟರ್​ ಬಿಡುಗಡೆ ಮಾಡಿ ಟ್ರೋಲ್​ ಆದ ‘ದೇವರ’ ಚಿತ್ರತಂಡ
ಜೂನಿಯರ್​ ಎನ್​ಟಿಆರ್
ಮದನ್​ ಕುಮಾರ್​
|

Updated on: Jan 02, 2024 | 12:17 PM

Share

ನಟ ಜೂನಿಯರ್​ ಎನ್​ಟಿಆರ್​ (Jr NTR) ಅವರು ‘ದೇವರ’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರಕ್ಕೆ ಕೊರಟಾಲ ಶಿವ ನಿರ್ದೇಶನ ಮಾಡುತ್ತಿದ್ದಾರೆ. ‘ಆರ್​ಆರ್​ಆರ್​’ ಸಿನಿಮಾದ ಭರ್ಜರಿ ಯಶಸ್ಸಿನ ಬಳಿಕ ಜೂನಿಯರ್​ ಎನ್​ಟಿಆರ್​ ಅವರು ಕೈಗೆತ್ತಿಕೊಂಡ ಚಿತ್ರ ಎಂಬ ಕಾರಣಕ್ಕೆ ಈ ಸಿನಿಮಾಗೆ ಹೆಚ್ಚು ಹೈಪ್​ ಸೃಷ್ಟಿ ಆಗಿದೆ. ದೇವರ’ (Devara) ಚಿತ್ರದ ಹೊಸ ಪೋಸ್ಟರ್​ ಅನ್ನು ನ್ಯೂ ಇಯರ್​ ಪ್ರಯುಕ್ತ ಭಾರಿ ಉತ್ಸಾಹದಿಂದ ಬಿಡುಗಡೆ ಮಾಡಲಾಯಿತು. ಆದರೆ ಅಭಿಮಾನಿಗಳಿಗೆ ಇದು ಇಷ್ಟ ಆಗಿಲ್ಲ. ಹಾಗಾಗಿ ಸೋಶಿಯಲ್​ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಟ್ರೋಲ್​ ಮಾಡಲಾಗುತ್ತಿದೆ.

ಸ್ಟಾರ್​ ಹೀರೋಗಳ ಹೊಸ ಸಿನಿಮಾದಿಂದ ಯಾವುದೇ ಅಪ್​ಡೇಟ್​ ಸಿಕ್ಕರೂ ಜನರು ಅದನ್ನು ಸೂಕ್ಷ್ಮವಾಗಿ ಗಮನಿಸುತ್ತಾರೆ. ‘ದೇವರ’ ಸಿನಿಮಾದ ಹೊಸ ಪೋಸ್ಟರ್​ ನೋಡಿದ ಅಭಿಮಾನಿಗಳಿಗೆ ನಿರಾಸೆ ಆಗಿದೆ. ಯಾಕೆಂದರೆ ಈ ಪೋಸ್ಟರ್​ನಲ್ಲಿ ಯಾವುದೇ ವಿಶೇಷತೆ ಕಾಣಿಸಿಲ್ಲ. ಹೊಸತನ ಕೂಡ ಇಲ್ಲ. ಹಾಗಾಗಿ ಈ ಪೋಸ್ಟರ್​ ಭಾರಿ ಟೀಕೆಗೆ ಒಳಗಾಗುತ್ತಿದೆ.

ಜೂ ಎನ್​ಟಿಆರ್ ಸಹೋದರನ ಸಿನಿಮಾ ವಿವಾದದಲ್ಲಿ: ನಿರ್ದೇಶಕನ ದೀರ್ಘ ಪತ್ರ

ಹೊಸ ಪೋಸ್ಟರ್​ನಲ್ಲಿ ಜೂನಿಯರ್​ ಎನ್​ಟಿಆರ್​ ಅವರು ಸಮುದ್ರದಲ್ಲಿ ದೋಣಿಯ ಮೇಲೆ ನಿಂತು ಪೋಸ್​ ನೀಡಿದ್ದಾರೆ. ಈ ಮೊದಲು ಅನೇಕ ಸಿನಿಮಾಗಳ ಪೋಸ್ಟರ್​ಗಳು ಇದೇ ರೀತಿ ವಿನ್ಯಾಸಗೊಂಡಿದ್ದವು. ಹಾಗಾಗಿ ಜೂನಿಯರ್​ ಎನ್​ಟಿಆರ್​ ಅವರ ಅಭಿಮಾನಿಗಳಿಗೆ ಈ ಪೋಸ್ಟರ್​ ಕಿಂಚಿತ್ತೂ ಇಷ್ಟ ಆಗಿಲ್ಲ. ಬೇರೆ ನಟರ ಸಿನಿಮಾದ ಪೋಸ್ಟರ್​ಗಳಿಗೆ ಇದನ್ನು ಹೋಲಿಕೆ ಮಾಡಿ ಟ್ರೋಲ್​ ಮಾಡಲಾಗುತ್ತಿದೆ.

ಈ ಪೋಸ್ಟರ್​ ನೋಡಿ ಜೂನಿಯರ್​ ಎನ್​ಟಿಆರ್​ ಅಭಿಮಾನಿಗಳು ಬೇಸರ ಮಾಡಿಕೊಂಡಿರಬಹುದು. ಆದರೆ ಭರವಸೆ ಕಳೆದುಕೊಳ್ಳುವ ಅವಶ್ಯಕತೆ ಇಲ್ಲ. ಜನವರಿ 8ರಂದು ‘ದೇವರ’ ಸಿನಿಮಾದಿಂದ ಫಸ್ಟ್ ಗ್ಲಿಂಪ್ಸ್​ ಬಿಡುಗಡೆ ಆಗಲಿದೆ. ಅದು ಅಭಿಮಾನಿಗಳನ್ನು ಖುಷಿಪಡಿಸಲಿದೆ ಎಂದು ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಈ ಸಿನಿಮಾದ ಕೆಲಸಗಳು ಬಿರುಸಿನಿಂದ ಸಾಗುತ್ತಿವೆ. ಈ ಚಿತ್ರದ ಮೂಲಕ ಜಾನ್ವಿ ಕಪೂರ್​ ಅವರು ದಕ್ಷಿಣ ಭಾರತಕ್ಕೆ ಕಾಲಿಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಹೆಚ್​ಡಿಕೆ ವಿರುದ್ಧ ‘ಕೋಳಿ’ ಪೋಸ್ಟರ್ ಅಂಟಿಸಿ ಕಾಂಗ್ರೆಸ್ ವ್ಯಂಗ್ಯ
ಹೆಚ್​ಡಿಕೆ ವಿರುದ್ಧ ‘ಕೋಳಿ’ ಪೋಸ್ಟರ್ ಅಂಟಿಸಿ ಕಾಂಗ್ರೆಸ್ ವ್ಯಂಗ್ಯ
ಗೆಳೆಯ ವಾಸುಕಿ ವೈಭವ್​ ಕಾನ್ಸರ್ಟ್​ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಗೆಳೆಯ ವಾಸುಕಿ ವೈಭವ್​ ಕಾನ್ಸರ್ಟ್​ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ