AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಲ್ಲಿ ಎಲ್ಲರೂ ಮೃಗಗಳೇ ಯಾರಿಗೂ ಸಾವಿನ ಬಗ್ಗೆ ಭಯವಿಲ್ಲ, ಆದರೆ..’: ಜೂ ಎನ್​ಟಿಆರ್ ಹೊಸ ಸಿನಿಮಾ ಕತೆ

Jr NTR: ಜೂ ಎನ್​ಟಿಆರ್ ನಟನೆಯ 'ದೇವರ' ಸಿನಿಮಾ ಚಿತ್ರೀಕರಣ ಭರದಿಂದ ಸಾಗಿದೆ. ಸಿನಿಮಾದ ಒನ್​ಲೈನ್ ಕತೆ ಇದೀಗ ಹೊರಬಿದ್ದಿದೆ.

'ಅಲ್ಲಿ ಎಲ್ಲರೂ ಮೃಗಗಳೇ ಯಾರಿಗೂ ಸಾವಿನ ಬಗ್ಗೆ ಭಯವಿಲ್ಲ, ಆದರೆ..': ಜೂ ಎನ್​ಟಿಆರ್ ಹೊಸ ಸಿನಿಮಾ ಕತೆ
ದೇವರ ಸಿನಿಮಾ
ಮಂಜುನಾಥ ಸಿ.
|

Updated on: Jul 30, 2023 | 8:04 PM

Share

ಆರ್​ಆರ್​ಆರ್‘ (RRR) ಸಿನಿಮಾದ ಮೂಲಕ ಗ್ಲೋಬಲ್ ಹಿಟ್ ನೀಡಿರುವ ಜೂ ಎನ್​ಟಿಆರ್ (Jr NTR) ಮೇಲೆ ಈಗ ನಿರೀಕ್ಷೆಗಳು ದುಪ್ಪಟ್ಟಾಗಿದೆ. ‘ಆರ್​ಆರ್​ಆರ್’ ಗ್ಲೋಬಲ್ ಹಿಟ್ ಆಗುವ ಮುನ್ನವೇ ಜೂ ಎನ್​ಟಿಆರ್, ಕೊರಟಾಲ ಶಿವ ಜೊತೆಗಿನ ‘ದೇವರ’ ಸಿನಿಮಾವನ್ನು ಒಪ್ಪಿಕೊಂಡಿದ್ದರು. ಆದರೆ ‘ಆರ್​ಆರ್​ಆರ್’ ಸಿನಿಮಾ ಸೂಪರ್ ಡೂಪರ್ ಹಿಟ್ ಆದ ಬಳಿಕ ಕೊರಟಾಲ ಶಿವ (Koratala Shiva) ತಮ್ಮ ಸಿನಿಮಾದ ಚಿತ್ರಕತೆಯನ್ನು ತಿದ್ದಿದ ಜೊತೆಗೆ ಸಿನಿಮಾವನ್ನು ದೊಡ್ಡ ಸ್ಕೇಲ್​ನಲ್ಲಿ ನಿರ್ಮಿಸಲು ಮುಂದಾಗಿದ್ದಾರೆ.

‘ದೇವರ’ ಸಿನಿಮಾದ ಕತೆಯ ಎಳೆಯೊಂದು ಇದೀಗ ಬಹಿರಂಗಗೊಂಡಿದೆ. ‘ದೇವರ’ ಚಿತ್ರತಂಡವು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿದ್ದು, ಪ್ರೋಮೋ ವಿಡಿಯೋದ ಹಿನ್ನೆಲೆಯಲ್ಲಿರುವ ಧ್ವನಿಯೊಂದು ‘ದೇವರ’ ಸಿನಿಮಾದ ಕತೆಯ ಎಳೆಯನ್ನು ಹೇಳಿದೆ. ”ಕತೆಯಲ್ಲಿ ಮನುಷ್ಯರಿಗಿಂತಲೂ ಹೆಚ್ಚು ಮೃಗಗಳೇ ಇರುತ್ತಾರೆ. ಸಾವೆಂದರೆ ಭಯ ಇರದ, ದೇವರೆಂದರೆ ಭಯ ಇರದ ಮೃಗಗಳು ಅವರು. ಆದರೆ ಅವರಿಗೆಲ್ಲ ಒಬ್ಬರೆಂದರೆ ಭಯ. ಅದು ಯಾರೆಂದು ವಿವರಿಸಿ ಹೇಳಬೇಕಿಲ್ಲ. ಭಯ ಇರಬೇಕು, ಭಯ ಅವಶ್ಯಕ, ಭಯ ಪಡಿಸಲು ಈ ಸಿನಿಮಾದಲ್ಲಿ ಆತ ಯಾವ ರೇಂಜಿಗೆ ಬೇಕಾದರು ಹೋಗುತ್ತಾನೆ. ಇದು ಬಹಳ ಎಮೋಷನಲ್ ಪಯಣ” ಎಂದಿದೆ.

‘ದೇವರ’ ಸಿನಿಮಾ ಪಕ್ಕಾ ಆಕ್ಷನ್ ಭರಿತ ಹೊಡಿ-ಬಡಿ ಕತೆಯನ್ನು ಒಳಗೊಂಡಿರುವುದು ಇದಾಗಲೇ ಖಾತ್ರಿಯಾಗಿದೆ. ಸಮುದ್ರ ತಟದಲ್ಲಿ ನಡೆವ ಕತೆಯನ್ನು ಈ ಸಿನಿಮಾ ಒಳಗೊಂಡಿದ್ದು, ಸಮುದ್ರದ ಮೇಲೆ ಅಧಿಕಾರಕ್ಕಾಗಿ ಪರಸ್ಪರ ಕಾದಾಟದಲ್ಲಿರುವ ಮೃಗಗಳ ಮಧ್ಯೆ ಜೂ ಎನ್​ಟಿಆರ್ ಪಾತ್ರ ಸೆಣೆಸಲಿದೆ ಎನ್ನಲಾಗುತ್ತಿದೆ. ಅಲ್ಲದೆ ಸಿನಿಮಾದಲ್ಲಿ ಜೂ ಎನ್​ಟಿಆರ್ ಎರಡು ಷೇಡ್​ನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರಂತೆ.

ಇದನ್ನೂ ಓದಿ:‘ಕೆಜಿಎಫ್ 2’ ನೋಡಿ ಕಲಿತುಕೊಳ್ಳಲು ಸ್ಟಾರ್​ ಡೈರೆಕ್ಟರ್​ಗೆ ಸೂಚನೆ ನೀಡಿದ ಜ್ಯೂ. ಎನ್​ಟಿಆರ್​?

‘ದೇವರ’ ಸಿನಿಮಾದಲ್ಲಿ ಜೂ ಎನ್​ಟಿಆರ್ ಜೊತೆಗೆ ಬಾಲಿವುಡ್ ಬೆಡಗಿ ಜಾನ್ಹವಿ ಕಪೂರ್ ನಾಯಕಿಯಾಗಿ ನಟಿಸಿದ್ದಾರೆ. ಇದು ಜಾನ್ಹವಿಯ ಮೊದಲ ದಕ್ಷಿಣ ಭಾರತದ ಸಿನಿಮಾ. ಜಾನ್ಹವಿ ಜೊತೆಗೆ ಮತ್ತೊಬ್ಬ ನಟಿಯೂ ಈ ಸಿನಿಮಾದಲ್ಲಿದ್ದಾರೆ ಎನ್ನಲಾಗುತ್ತಿದೆ. ಇದರ ಜೊತೆಗೆ ಸಿನಿಮಾದ ಮುಖ್ಯ ವಿಲನ್ ಪಾತ್ರದಲ್ಲಿ ಸೈಫ್ ಅಲಿ ಖಾನ್ ನಟಿಸಿದ್ದಾರೆ. ಸಿನಿಮಾದ ಪ್ರಮುಖ ವಿಭಾಗಗಳಿಗೆ ನುರಿತ ತಂತ್ರಜ್ಞರನ್ನು ನೇಮಿಸಿಕೊಳ್ಳಲಾಗಿದೆ. ಸಿನಿಮಾದ ಸಾಹಸ ನಿರ್ದೇಶನಕ್ಕೆ ಹಾಲಿವುಡ್​ನ ಜನಪ್ರಿಯ ಸಾಹಸ ನಿರ್ದೇಶಕರನ್ನು ಕರೆತರಲಾಗಿದೆ.

ಜೂ ಎನ್​ಟಿಆರ್, ‘ದೇವರ’ ಸಿನಿಮಾದ ಬಗ್ಗೆ ಬಹಳ ನಿರೀಕ್ಷೆ ಇರಿಸಿಕೊಂಡಿದ್ದಾರೆ. ಕೊರಟಾಲ ಶಿವ ಸಹ, ಜೂ ಎನ್​ಟಿಆರ್ ಒತ್ತಾಯದ ಮೇರೆಗೆ ಸಿನಿಮಾದ ಚಿತ್ರಕತೆಯನ್ನು ಹಲವು ಬಾರಿ ತಿದ್ದಿರುವುದಲ್ಲದೆ ಭಾರಿ ಬಜೆಟ್​ನಲ್ಲಿ ಸಿನಿಮಾ ನಿರ್ಮಿಸಲು ಮುಂದಾಗಿದ್ದಾರೆ. ಸಿನಿಮಾಕ್ಕಾಗಿ ಎರಡು ಹಾಲಿವುಡ್​ ರೇಂಜ್​ನ ಫೈಟ್ ಸೀಕ್ವೆನ್ಸ್​ಗಳನ್ನು ಸೃಷ್ಟಿಸಿದ್ದಾರಂತೆ. ಒಂದು ಫೈಟ್ ದೊಡ್ಡ ಹಡಗಿನಲ್ಲಿ ನಡೆದರೆ ಮತ್ತೊಂದು ಫೈಟ್ ಸಮುದ್ರದ ದಡದಲ್ಲಿ ನಡೆಯುತ್ತದೆ. ಎರಡಕ್ಕೂ ಹಾಲಿವುಡ್​ನ ಅನುಭವಿ ಫೈಟ್ ಕಂಪೋಸರ್​ ಅನ್ನು ಕರೆತರಲಾಗಿದೆ. ‘ದೇವರ’ ಸಿನಿಮಾ 2024 ರ ಏಪ್ರಿಲ್ 05ಕ್ಕೆ ಬಿಡುಗಡೆ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?