AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದೇವರ’ ಚಿತ್ರದ ವಿಎಫ್​ಎಕ್ಸ್ ಕೆಲಸಕ್ಕೆ ಭರ್ಜರಿ ಬಜೆಟ್ ಮೀಸಲಿಟ್ಟ ಜೂನಿಯರ್ ಎನ್​ಟಿಆರ್

‘ದೇವರ’ ಚಿತ್ರದ ವಿಎಫ್​ಎಕ್ಸ್ ಕೆಲಸಗಳಿಗೆ 50 ಕೋಟಿ ರೂಪಾಯಿ ಖರ್ಚು ಮಾಡಲಾಗುತ್ತಿದೆ. ಮೂಲಗಳ ಪ್ರಕಾರ ಈ ಸಿನಿಮಾದ ಬಜೆಟ್ ಸರಿಸುಮಾರು 150 ಕೋಟಿ ರೂಪಾಯಿ ಇದೆ ಎನ್ನಲಾಗುತ್ತಿದೆ. ಈ ವಿಚಾರ ಕೇಳಿ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ. ಸಿನಿಮಾದ ವಿಎಫ್​ಎಕ್ಸ್ ದೃಶ್ಯಗಳನ್ನು ನೋಡಲು ಅಭಿಮಾನಿಗಳು ಕಾದಿದ್ದಾರೆ.

‘ದೇವರ’ ಚಿತ್ರದ ವಿಎಫ್​ಎಕ್ಸ್ ಕೆಲಸಕ್ಕೆ ಭರ್ಜರಿ ಬಜೆಟ್ ಮೀಸಲಿಟ್ಟ ಜೂನಿಯರ್ ಎನ್​ಟಿಆರ್
ಜೂನಿಯರ್​ ಎನ್​ಟಿಆರ್​
 ಶ್ರೀಲಕ್ಷ್ಮೀ ಎಚ್
| Updated By: ಮದನ್​ ಕುಮಾರ್​|

Updated on: Aug 29, 2023 | 5:42 PM

Share

ಟಾಲಿವುಡ್​ನ ಖ್ಯಾತ ನಿರ್ದೇಶಕ ಎಸ್​ಎಸ್​ ರಾಜಮೌಳಿ ಅವರು ಅದ್ಭುತ ಕಲ್ಪನೆ ಇಟ್ಟುಕೊಂಡು ಸಿನಿಮಾ ಮಾಡುತ್ತಾರೆ. ‘ಬಾಹುಬಲಿ’, ‘ಈಗ’, ‘ಆರ್​ಆರ್​ಆರ್’ ಸಿನಿಮಾಗಳು ಇದಕ್ಕೆ ಸಾಕ್ಷಿ. ಅವರ ಕಲ್ಪನೆಯನ್ನು ಮತ್ತಷ್ಟು ಸುಂದರಗೊಳಿಸೋಕೆ ಸಹಕಾರಿ ಆಗೋದು ವಿಎಫ್​ಎಕ್ಸ್. ಈಗ ಜೂನಿಯರ್ ಎನ್​ಟಿಆರ್ (Jr NTR) ಅವರು ಕೂಡ ತಮ್ಮ ಸಿನಿಮಾ ತಂಡಕ್ಕೆ ವಿಎಫ್​ಎಕ್ಸ್​ಗೆ (VFX) ಹೆಚ್ಚು ಒತ್ತು ನೀಡುವಂತೆ ಸೂಚನೆ ಕೊಟ್ಟಿದ್ದಾರೆ ಎನ್ನಲಾಗುತ್ತಿದೆ. ಹೌದು, ಜೂನಿಯರ್ ಎನ್​ಟಿಆರ್ ನಟನೆಯ ‘ದೇವರ’ (Devara) ಚಿತ್ರದ ವಿಎಫ್​​ಎಕ್ಸ್​ ಕೆಲಸಕ್ಕೆ ಭರ್ಜರಿ ಬಜೆಟ್ ಮೀಸಲಿಡಲಾಗುತ್ತಿದೆ.

ಜೂನಿಯರ್ ಎನ್​ಟಿಆರ್ ಅವರ 30ನೇ ಚಿತ್ರಕ್ಕೆ ‘ದೇವರ’ ಶೀರ್ಷಿಕೆ ಫಿಕ್ಸ್ ಆಗಿದೆ. ರಾಜಮೌಳಿ ಜೊತೆ ಒಳ್ಳೆಯ ನಂಟು ಇಟ್ಟುಕೊಂಡಿರುವ ಜೂ. ಎನ್​ಟಿಆರ್​, ಅವರಿಂದ ಒಂದಷ್ಟು ವಿಚಾರಗಳನ್ನು ಕಲಿತಿದ್ದಾರೆ. ಸಿನಿಮಾಗೆ ವಿಎಫ್​ಎಕ್ಸ್ ಕೆಲಸಗಳು ಹೆಚ್ಚಿದ್ದರೆ ಅದಕ್ಕೆ ದೊಡ್ಡ ಬಜೆಟ್ ಮೀಸಲಿಡಬೇಕು ಎಂಬುದನ್ನು ತಿಳಿದುಕೊಂಡಿದ್ದಾರೆ. ಈ ಕಾರಣದಿಂದಲೇ ಕೊರಟಾಲ ಶಿವ ಹಾಗೂ ಜೂನಿಯರ್ ಎನ್​ಟಿಆರ್ ಅವರು ‘ದೇವರ’ ಚಿತ್ರದ ವಿಎಫ್​ಎಕ್ಸ್ ಬಜೆಟ್​ಗೆ ದೊಡ್ಡ ಮೊತ್ತ ಮೀಸಲಿಡಲು ನಿರ್ಧರಿಸಿದ್ದಾರೆ.

‘ದೇವರ’ ಚಿತ್ರದ ವಿಎಫ್​ಎಕ್ಸ್ ಕೆಲಸಗಳಿಗೆ 50 ಕೋಟಿ ರೂಪಾಯಿ ಖರ್ಚು ಮಾಡಲಾಗುತ್ತಿದೆ. ಮೂಲಗಳ ಪ್ರಕಾರ ಈ ಸಿನಿಮಾದ ಬಜೆಟ್ ಸರಿಸುಮಾರು 150 ಕೋಟಿ ರೂಪಾಯಿ ಇದೆ ಎನ್ನಲಾಗುತ್ತಿದೆ. ಈ ವಿಚಾರ ಕೇಳಿ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ. ಸಿನಿಮಾದ ವಿಎಫ್​ಎಕ್ಸ್ ದೃಶ್ಯಗಳನ್ನು ನೋಡಲು ಅಭಿಮಾನಿಗಳು ಕಾದಿದ್ದಾರೆ.

ಇದನ್ನೂ ಓದಿ: ಎನ್​ಟಿಆರ್ ಹೆಸರಲ್ಲಿ 100 ರೂ. ನಾಣ್ಯ ಬಿಡುಗಡೆ; ವಿಶೇಷ ಕ್ಷಣ ಮಿಸ್ ಮಾಡಿಕೊಂಡ ಮೊಮ್ಮೊಗ ಜೂ.ಎನ್​ಟಿಆರ್

ಇಷ್ಟು ದೊಡ್ಡ ಬಜೆಟ್​ನ ಸಿನಿಮಾ ಮಾಡುವಾಗ ನಿರ್ಮಾಪಕರು ದೊಡ್ಡ ರಿಸ್ಕ್ ತೆಗೆದುಕೊಳ್ಳಬೇಕಾಗುತ್ತದೆ. ‘ಆರ್​ಆರ್​ಆರ್​’ ಹಾಗೂ ‘ಆದಿಪುರುಷ್’ ಇವರೆಡೂ ಚಿತ್ರಗಳು ದೊಡ್ಡ ಬಜೆಟ್​ನಲ್ಲಿ ಸಿದ್ಧವಾಗಿವೆ. ‘ಆರ್​ಆರ್​ಆರ್’ ಚಿತ್ರ ಅಂದುಕೊಂಡ ರೀತಿಯಲ್ಲೇ ಗಳಿಕೆ ಮಾಡಿದ್ದರಿಂದ ನಿರ್ಮಾಪಕರು ಲಾಭ ಕಂಡರು. ಆದರೆ, ‘ಆದಿಪುರುಷ್’ ದೊಡ್ಡ ಬಜೆಟ್​ನಲ್ಲಿ ಸಿದ್ಧವಾದ ಹೊರತಾಗಿಯೂ ಕಳಪೆ ವಿಎಫ್​ಎಕ್ಸ್​ನಿಂದ ಹಿನ್ನಡೆ ಅನುಭವಿಸಿತು. ಈ ಕಾರಣಕ್ಕೆ ‘ದೇವರ’ ಸಿನಿಮಾ ನಿರ್ಮಾಪಕರು ತೆಗೆದುಕೊಳ್ಳುತ್ತಿರುವ ರಿಸ್ಕ್​ ಬಗ್ಗೆ ಅನೇಕರು ಮೆಚ್ಚುಗೆ ಸೂಚಿಸುತ್ತಿದ್ದಾರೆ. ಚಿತ್ರದ ಟೀಸರ್ ಅಥವಾ ಟ್ರೇಲರ್ ರಿಲೀಸ್ ಆದ ಬಳಿಕ ಸಿನಿಮಾ ಗುಣಮಟ್ಟದ ಬಗ್ಗೆ ತಿಳಿಯಲಿದೆ.

ಇದನ್ನೂ ಓದಿ: ಜೂನಿಯರ್ ಎನ್​ಟಿಆರ್ ಧರಿಸಿದ ಈ ವಾಚ್​ನ ಬೆಲೆ ಎಷ್ಟು ಕೋಟಿ ರೂಪಾಯಿ ಗೊತ್ತಾ?

‘ದೇವರ’ ಸಿನಿಮಾಗೆ ಜಾನ್ವಿ ಕಪೂರ್ ನಾಯಕಿ. ಅವರು ದಕ್ಷಿಣ ಭಾರತದಲ್ಲಿ ನಟಿಸುತ್ತಿರುವ ಮೊದಲ ಸಿನಿಮಾ ಇದು. ಅವರ ತಾಯಿ ಶ್ರೀದೇವಿ ಈ ಮೊದಲು ದಕ್ಷಿಣ ಭಾರತದಲ್ಲಿ ಗುರುತಿಸಿಕೊಂಡಿದ್ದರು. ಅದೇ ರೀತಿ ಜಾನ್ವಿ ಕೂಡ ಇಲ್ಲಿ ಮಿಂಚುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ. ಈ ಚಿತ್ರಕ್ಕೆ ಸೈಫ್ ಅಲಿ ಖಾನ್ ಅವರು ವಿಲನ್. ಈ ಮೊದಲು ‘ಆದಿಪುರುಷ್’ ಚಿತ್ರದಲ್ಲಿ ಅವರು ರಾವಣನ ಪಾತ್ರ ಮಾಡಿದ್ದರು. ಯುವಸುಧಾ ಆರ್ಟ್ಸ್ ಹಾಗೂ ಎನ್​ಟಿಆರ್​ ಆರ್ಟ್ಸ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ. ನಂದಮೂರಿ ಕಲ್ಯಾಣ್ ರಾಮ್ ಈ ಚಿತ್ರವನ್ನು ಪ್ರೆಸೆಂಟ್ ಮಾಡುತ್ತಿದ್ದಾರೆ. ‘ಜೈಲರ್’ ಖ್ಯಾತಿಯ ಅನಿರುದ್ಧ್ ರವಿಚಂದರ್ ಅವರು ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. 2024 ಏಪ್ರಿಲ್ 5ರಂದು ಸಿನಿಮಾ ಬಿಡುಗಡೆ ಆಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಸುರ್ಜೇವಾಲಾ ಕರೆದು ಮಾತಾಡಿದರೆ ಅದರಲ್ಲಿ ತಪ್ಪೇನಿಲ್ಲ: ಜಾರಕಿಹೊಳಿ
ಸುರ್ಜೇವಾಲಾ ಕರೆದು ಮಾತಾಡಿದರೆ ಅದರಲ್ಲಿ ತಪ್ಪೇನಿಲ್ಲ: ಜಾರಕಿಹೊಳಿ
ಸರೋಜಾದೇವಿ ಎಲ್ಲರೊಂದಿಗೆ ಪ್ರೀತಿಯಿಂದ ಮಾತಾಡುತ್ತಿದ್ದರು: ಸಿದ್ದರಾಮಯ್ಯ
ಸರೋಜಾದೇವಿ ಎಲ್ಲರೊಂದಿಗೆ ಪ್ರೀತಿಯಿಂದ ಮಾತಾಡುತ್ತಿದ್ದರು: ಸಿದ್ದರಾಮಯ್ಯ
W,W,W: ಟೆಸ್ಟ್​ನಲ್ಲಿ ಹ್ಯಾಟ್ರಿಕ್... ಹೊಸ ಇತಿಹಾಸ ಬರೆದ ಬೋಲ್ಯಾಂಡ್
W,W,W: ಟೆಸ್ಟ್​ನಲ್ಲಿ ಹ್ಯಾಟ್ರಿಕ್... ಹೊಸ ಇತಿಹಾಸ ಬರೆದ ಬೋಲ್ಯಾಂಡ್
ತಾಯಿಯ ಸಮಾಧಿ ಪಕ್ಕದಲ್ಲೇ ಸರೋಜಾದೇವಿ ಪಾರ್ಥೀವ ಶರೀರ ದಫನ
ತಾಯಿಯ ಸಮಾಧಿ ಪಕ್ಕದಲ್ಲೇ ಸರೋಜಾದೇವಿ ಪಾರ್ಥೀವ ಶರೀರ ದಫನ
‘ಲವ್ ಮಾಕ್ಟೇಲ್ 3’ ಚಿತ್ರಕ್ಕೆ ಶೂಟಿಂಗ್ ಶುರು ಮಾಡಿದ ಡಾರ್ಲಿಂಗ್​ ಕೃಷ್ಣ
‘ಲವ್ ಮಾಕ್ಟೇಲ್ 3’ ಚಿತ್ರಕ್ಕೆ ಶೂಟಿಂಗ್ ಶುರು ಮಾಡಿದ ಡಾರ್ಲಿಂಗ್​ ಕೃಷ್ಣ
ಬಿಬಿಎಂಪಿ ಕಚೇರಿ ಎದುರೇ ನಾಯಿಗಳಿಗೆ ಶಾಲು ಹೊದೆಸಿ ಸನ್ಮಾನಿಸಿದ ವಾಟಾಳ್!
ಬಿಬಿಎಂಪಿ ಕಚೇರಿ ಎದುರೇ ನಾಯಿಗಳಿಗೆ ಶಾಲು ಹೊದೆಸಿ ಸನ್ಮಾನಿಸಿದ ವಾಟಾಳ್!
ಧರ್ಮಶಾಲಾ: ಪ್ಯಾರಾಗ್ಲೈಡಿಂಗ್ ವೇಳೆ ಅಪಘಾತ, ವ್ಯಕ್ತಿ ಸಾವು
ಧರ್ಮಶಾಲಾ: ಪ್ಯಾರಾಗ್ಲೈಡಿಂಗ್ ವೇಳೆ ಅಪಘಾತ, ವ್ಯಕ್ತಿ ಸಾವು
ಚಂದ್ರ ಕುಂಭ ರಾಶಿಯಲ್ಲಿ ಸಂಚಾರ: ಇಂದಿನ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕುಂಭ ರಾಶಿಯಲ್ಲಿ ಸಂಚಾರ: ಇಂದಿನ ದಿನ ಭವಿಷ್ಯ ಇಲ್ಲಿದೆ
ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ