AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದೇವರ’ ಚಿತ್ರದ ವಿಎಫ್​ಎಕ್ಸ್ ಕೆಲಸಕ್ಕೆ ಭರ್ಜರಿ ಬಜೆಟ್ ಮೀಸಲಿಟ್ಟ ಜೂನಿಯರ್ ಎನ್​ಟಿಆರ್

‘ದೇವರ’ ಚಿತ್ರದ ವಿಎಫ್​ಎಕ್ಸ್ ಕೆಲಸಗಳಿಗೆ 50 ಕೋಟಿ ರೂಪಾಯಿ ಖರ್ಚು ಮಾಡಲಾಗುತ್ತಿದೆ. ಮೂಲಗಳ ಪ್ರಕಾರ ಈ ಸಿನಿಮಾದ ಬಜೆಟ್ ಸರಿಸುಮಾರು 150 ಕೋಟಿ ರೂಪಾಯಿ ಇದೆ ಎನ್ನಲಾಗುತ್ತಿದೆ. ಈ ವಿಚಾರ ಕೇಳಿ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ. ಸಿನಿಮಾದ ವಿಎಫ್​ಎಕ್ಸ್ ದೃಶ್ಯಗಳನ್ನು ನೋಡಲು ಅಭಿಮಾನಿಗಳು ಕಾದಿದ್ದಾರೆ.

‘ದೇವರ’ ಚಿತ್ರದ ವಿಎಫ್​ಎಕ್ಸ್ ಕೆಲಸಕ್ಕೆ ಭರ್ಜರಿ ಬಜೆಟ್ ಮೀಸಲಿಟ್ಟ ಜೂನಿಯರ್ ಎನ್​ಟಿಆರ್
ಜೂನಿಯರ್​ ಎನ್​ಟಿಆರ್​
 ಶ್ರೀಲಕ್ಷ್ಮೀ ಎಚ್
| Edited By: |

Updated on: Aug 29, 2023 | 5:42 PM

Share

ಟಾಲಿವುಡ್​ನ ಖ್ಯಾತ ನಿರ್ದೇಶಕ ಎಸ್​ಎಸ್​ ರಾಜಮೌಳಿ ಅವರು ಅದ್ಭುತ ಕಲ್ಪನೆ ಇಟ್ಟುಕೊಂಡು ಸಿನಿಮಾ ಮಾಡುತ್ತಾರೆ. ‘ಬಾಹುಬಲಿ’, ‘ಈಗ’, ‘ಆರ್​ಆರ್​ಆರ್’ ಸಿನಿಮಾಗಳು ಇದಕ್ಕೆ ಸಾಕ್ಷಿ. ಅವರ ಕಲ್ಪನೆಯನ್ನು ಮತ್ತಷ್ಟು ಸುಂದರಗೊಳಿಸೋಕೆ ಸಹಕಾರಿ ಆಗೋದು ವಿಎಫ್​ಎಕ್ಸ್. ಈಗ ಜೂನಿಯರ್ ಎನ್​ಟಿಆರ್ (Jr NTR) ಅವರು ಕೂಡ ತಮ್ಮ ಸಿನಿಮಾ ತಂಡಕ್ಕೆ ವಿಎಫ್​ಎಕ್ಸ್​ಗೆ (VFX) ಹೆಚ್ಚು ಒತ್ತು ನೀಡುವಂತೆ ಸೂಚನೆ ಕೊಟ್ಟಿದ್ದಾರೆ ಎನ್ನಲಾಗುತ್ತಿದೆ. ಹೌದು, ಜೂನಿಯರ್ ಎನ್​ಟಿಆರ್ ನಟನೆಯ ‘ದೇವರ’ (Devara) ಚಿತ್ರದ ವಿಎಫ್​​ಎಕ್ಸ್​ ಕೆಲಸಕ್ಕೆ ಭರ್ಜರಿ ಬಜೆಟ್ ಮೀಸಲಿಡಲಾಗುತ್ತಿದೆ.

ಜೂನಿಯರ್ ಎನ್​ಟಿಆರ್ ಅವರ 30ನೇ ಚಿತ್ರಕ್ಕೆ ‘ದೇವರ’ ಶೀರ್ಷಿಕೆ ಫಿಕ್ಸ್ ಆಗಿದೆ. ರಾಜಮೌಳಿ ಜೊತೆ ಒಳ್ಳೆಯ ನಂಟು ಇಟ್ಟುಕೊಂಡಿರುವ ಜೂ. ಎನ್​ಟಿಆರ್​, ಅವರಿಂದ ಒಂದಷ್ಟು ವಿಚಾರಗಳನ್ನು ಕಲಿತಿದ್ದಾರೆ. ಸಿನಿಮಾಗೆ ವಿಎಫ್​ಎಕ್ಸ್ ಕೆಲಸಗಳು ಹೆಚ್ಚಿದ್ದರೆ ಅದಕ್ಕೆ ದೊಡ್ಡ ಬಜೆಟ್ ಮೀಸಲಿಡಬೇಕು ಎಂಬುದನ್ನು ತಿಳಿದುಕೊಂಡಿದ್ದಾರೆ. ಈ ಕಾರಣದಿಂದಲೇ ಕೊರಟಾಲ ಶಿವ ಹಾಗೂ ಜೂನಿಯರ್ ಎನ್​ಟಿಆರ್ ಅವರು ‘ದೇವರ’ ಚಿತ್ರದ ವಿಎಫ್​ಎಕ್ಸ್ ಬಜೆಟ್​ಗೆ ದೊಡ್ಡ ಮೊತ್ತ ಮೀಸಲಿಡಲು ನಿರ್ಧರಿಸಿದ್ದಾರೆ.

‘ದೇವರ’ ಚಿತ್ರದ ವಿಎಫ್​ಎಕ್ಸ್ ಕೆಲಸಗಳಿಗೆ 50 ಕೋಟಿ ರೂಪಾಯಿ ಖರ್ಚು ಮಾಡಲಾಗುತ್ತಿದೆ. ಮೂಲಗಳ ಪ್ರಕಾರ ಈ ಸಿನಿಮಾದ ಬಜೆಟ್ ಸರಿಸುಮಾರು 150 ಕೋಟಿ ರೂಪಾಯಿ ಇದೆ ಎನ್ನಲಾಗುತ್ತಿದೆ. ಈ ವಿಚಾರ ಕೇಳಿ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ. ಸಿನಿಮಾದ ವಿಎಫ್​ಎಕ್ಸ್ ದೃಶ್ಯಗಳನ್ನು ನೋಡಲು ಅಭಿಮಾನಿಗಳು ಕಾದಿದ್ದಾರೆ.

ಇದನ್ನೂ ಓದಿ: ಎನ್​ಟಿಆರ್ ಹೆಸರಲ್ಲಿ 100 ರೂ. ನಾಣ್ಯ ಬಿಡುಗಡೆ; ವಿಶೇಷ ಕ್ಷಣ ಮಿಸ್ ಮಾಡಿಕೊಂಡ ಮೊಮ್ಮೊಗ ಜೂ.ಎನ್​ಟಿಆರ್

ಇಷ್ಟು ದೊಡ್ಡ ಬಜೆಟ್​ನ ಸಿನಿಮಾ ಮಾಡುವಾಗ ನಿರ್ಮಾಪಕರು ದೊಡ್ಡ ರಿಸ್ಕ್ ತೆಗೆದುಕೊಳ್ಳಬೇಕಾಗುತ್ತದೆ. ‘ಆರ್​ಆರ್​ಆರ್​’ ಹಾಗೂ ‘ಆದಿಪುರುಷ್’ ಇವರೆಡೂ ಚಿತ್ರಗಳು ದೊಡ್ಡ ಬಜೆಟ್​ನಲ್ಲಿ ಸಿದ್ಧವಾಗಿವೆ. ‘ಆರ್​ಆರ್​ಆರ್’ ಚಿತ್ರ ಅಂದುಕೊಂಡ ರೀತಿಯಲ್ಲೇ ಗಳಿಕೆ ಮಾಡಿದ್ದರಿಂದ ನಿರ್ಮಾಪಕರು ಲಾಭ ಕಂಡರು. ಆದರೆ, ‘ಆದಿಪುರುಷ್’ ದೊಡ್ಡ ಬಜೆಟ್​ನಲ್ಲಿ ಸಿದ್ಧವಾದ ಹೊರತಾಗಿಯೂ ಕಳಪೆ ವಿಎಫ್​ಎಕ್ಸ್​ನಿಂದ ಹಿನ್ನಡೆ ಅನುಭವಿಸಿತು. ಈ ಕಾರಣಕ್ಕೆ ‘ದೇವರ’ ಸಿನಿಮಾ ನಿರ್ಮಾಪಕರು ತೆಗೆದುಕೊಳ್ಳುತ್ತಿರುವ ರಿಸ್ಕ್​ ಬಗ್ಗೆ ಅನೇಕರು ಮೆಚ್ಚುಗೆ ಸೂಚಿಸುತ್ತಿದ್ದಾರೆ. ಚಿತ್ರದ ಟೀಸರ್ ಅಥವಾ ಟ್ರೇಲರ್ ರಿಲೀಸ್ ಆದ ಬಳಿಕ ಸಿನಿಮಾ ಗುಣಮಟ್ಟದ ಬಗ್ಗೆ ತಿಳಿಯಲಿದೆ.

ಇದನ್ನೂ ಓದಿ: ಜೂನಿಯರ್ ಎನ್​ಟಿಆರ್ ಧರಿಸಿದ ಈ ವಾಚ್​ನ ಬೆಲೆ ಎಷ್ಟು ಕೋಟಿ ರೂಪಾಯಿ ಗೊತ್ತಾ?

‘ದೇವರ’ ಸಿನಿಮಾಗೆ ಜಾನ್ವಿ ಕಪೂರ್ ನಾಯಕಿ. ಅವರು ದಕ್ಷಿಣ ಭಾರತದಲ್ಲಿ ನಟಿಸುತ್ತಿರುವ ಮೊದಲ ಸಿನಿಮಾ ಇದು. ಅವರ ತಾಯಿ ಶ್ರೀದೇವಿ ಈ ಮೊದಲು ದಕ್ಷಿಣ ಭಾರತದಲ್ಲಿ ಗುರುತಿಸಿಕೊಂಡಿದ್ದರು. ಅದೇ ರೀತಿ ಜಾನ್ವಿ ಕೂಡ ಇಲ್ಲಿ ಮಿಂಚುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ. ಈ ಚಿತ್ರಕ್ಕೆ ಸೈಫ್ ಅಲಿ ಖಾನ್ ಅವರು ವಿಲನ್. ಈ ಮೊದಲು ‘ಆದಿಪುರುಷ್’ ಚಿತ್ರದಲ್ಲಿ ಅವರು ರಾವಣನ ಪಾತ್ರ ಮಾಡಿದ್ದರು. ಯುವಸುಧಾ ಆರ್ಟ್ಸ್ ಹಾಗೂ ಎನ್​ಟಿಆರ್​ ಆರ್ಟ್ಸ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ. ನಂದಮೂರಿ ಕಲ್ಯಾಣ್ ರಾಮ್ ಈ ಚಿತ್ರವನ್ನು ಪ್ರೆಸೆಂಟ್ ಮಾಡುತ್ತಿದ್ದಾರೆ. ‘ಜೈಲರ್’ ಖ್ಯಾತಿಯ ಅನಿರುದ್ಧ್ ರವಿಚಂದರ್ ಅವರು ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. 2024 ಏಪ್ರಿಲ್ 5ರಂದು ಸಿನಿಮಾ ಬಿಡುಗಡೆ ಆಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು