AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದೇವರ’ ಸಿನಿಮಾ ಕಡೆಯಿಂದ ಸರ್​ಪ್ರೈಸ್; ಹೊಸ ಪೋಸ್ಟರ್ ಜೊತೆ ಅಪ್​ಡೇಟ್ ಕೊಟ್ಟ ತಂಡ

ಹೊಸ ವರ್ಷದ ಸಂದರ್ಭದಲ್ಲಿ ಹಲವು ಸಿನಿಮಾ ತಂಡಗಳು ಹೊಸ ಪೋಸ್ಟರ್ ರಿಲೀಸ್ ಮಾಡುತ್ತಿವೆ. ಅದೇ ರೀತಿ ಜೂನಿಯರ್ ಎನ್​ಟಿಆರ್ ಅವರ ನಟನೆಯ ‘ದೇವರ’ ತಂಡ ಕೂಡ ಪೋಸ್ಟರ್ ಬಿಡುಗಡೆ ಮಾಡಿದೆ. ಸಮುದ್ರದ ಮಧ್ಯದಲ್ಲಿ ದೋಣಿಯ ಮೇಲೆ ಜೂನಿಯರ್ ಎನ್​ಟಿಆರ್ ನಿಂತಿದ್ದಾರೆ. ಈ ಪೋಸ್ಟರ್ ಗಮನ ಸೆಳೆಯುತ್ತಿದೆ.

‘ದೇವರ’ ಸಿನಿಮಾ ಕಡೆಯಿಂದ ಸರ್​ಪ್ರೈಸ್; ಹೊಸ ಪೋಸ್ಟರ್ ಜೊತೆ ಅಪ್​ಡೇಟ್ ಕೊಟ್ಟ ತಂಡ
ಜೂನಿಯರ್​ ಎನ್​ಟಿಆರ್​
Follow us
 ಶ್ರೀಲಕ್ಷ್ಮೀ ಎಚ್
| Updated By: ಮದನ್​ ಕುಮಾರ್​

Updated on: Jan 01, 2024 | 5:32 PM

‘ಆರ್​ಆರ್​ಆರ್’ ಸಿನಿಮಾದ ದೊಡ್ಡ ಗೆಲುವಿನ ಬಳಿಕ ಜೂನಿಯರ್ ಎನ್​ಟಿಆರ್ (Jr NTR) ಅವರು ‘ದೇವರ’ (Devara) ಸಿನಿಮಾ  ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಈ ಚಿತ್ರಕ್ಕೆ ಕೊರಟಾಲ ಶಿವ (Koratala Siva) ಅವರು ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದ ಹೊಸ ಪೋಸ್ಟರ್ ರಿಲೀಸ್ ಆಗಿದೆ. ಇದರ ಜೊತೆಗೆ ಒಂದು ಒಳ್ಳೆಯ ಸುದ್ದಿಯನ್ನು ತಂಡ ನೀಡಿದೆ. ಸಿನಿಮಾದ ಮೊದಲ ಗ್ಲಿಂಪ್ಸ್ ಯಾವಾಗ ರಿಲೀಸ್ ಆಗಲಿದೆ ಎಂದು ತಂಡ ಮಾಹಿತಿ ನೀಡಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ಎಲ್ಲ ಕಡೆಗಳಲ್ಲಿ ಹೊಸ ವರ್ಷವನ್ನು ಅದ್ದೂರಿಯಾಗಿ ಸ್ವಾಗತಿಸಲಾಗಿದೆ. ಹೊಸ ವರ್ಷದ ಸಂದರ್ಭದಲ್ಲಿ ಹಲವು ಸಿನಿಮಾ ತಂಡಗಳು ಹೊಸ ಪೋಸ್ಟರ್ ರಿಲೀಸ್ ಮಾಡುತ್ತಿವೆ. ಅದೇ ರೀತಿ ಜೂನಿಯರ್ ಎನ್​ಟಿಆರ್ ಅವರ ನಟನೆಯ ‘ದೇವರ’ ತಂಡ ಕೂಡ ಪೋಸ್ಟರ್ ಬಿಡುಗಡೆ ಮಾಡಿದೆ. ಸಮುದ್ರದ ಮಧ್ಯದಲ್ಲಿ ದೋಣಿಯ ಮೇಲೆ ಜೂನಿಯರ್ ಎನ್​ಟಿಆರ್ ನಿಂತಿದ್ದಾರೆ. ಈ ಪೋಸ್ಟರ್ ಗಮನ ಸೆಳೆಯುತ್ತಿದೆ. ಇದರ ಜೊತೆಗೆ ಮೊದಲ ಗ್ಲಿಂಪ್ಸ್ ರಿಲೀಸ್ ಆಗೋದು ಯಾವಾಗ ಎನ್ನುವ ಬಗ್ಗೆಯೂ ತಂಡ ಮಾಹಿತಿ ಹಂಚಿಕೊಂಡಿದೆ. ಜನವರಿ 8ರಂದು ‘ದೇವರ’ ಚಿತ್ರದ ಝಲಕ್ ಸಿಗಲಿದೆ. ಅಂದು ಯಶ್ ಅವರ ಜನ್ಮದಿನ. ‘ಟಾಕ್ಸಿಕ್’ ಚಿತ್ರದಿಂದಲೂ ಗ್ಲಿಂಪ್ಸ್ ರಿಲೀಸ್ ಆಗೋ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ಮೂಲಕ ಸಿನಿಪ್ರಿಯರಿಗೆ ಒಂದೇ ದಿನ ಎರಡು ಖುಷಿ ಸುದ್ದಿ ಸಿಗುತ್ತಿದೆ.

ಕೊರಟಾಲ ಶಿವ ನಿರ್ದೇಶನದ ‘ಆಚಾರ್ಯ’ ಸಿನಿಮಾ 2022ರಲ್ಲಿ ರಿಲೀಸ್ ಆಗಿ ಸೋತಿದೆ. ಈ ಚಿತ್ರದ ಬಳಿಕ ‘ದೇವರ’ ಸಿನಿಮಾ ಕೆಲಸಗಳಲ್ಲಿ ಅವರು ಬ್ಯುಸಿ ಆದರು. ಈ ಚಿತ್ರದಿಂದ ಗೆಲ್ಲಲೇಬೇಕಾದ ಅನಿವಾರ್ಯತೆ ಅವರಿಗೆ ಇದೆ. ‘ದೇವರ’ ಚಿತ್ರಕ್ಕೆ ಅನಿರುದ್ಧ್​ ರವಿಚಂದರ್ ಅವರು ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಸಮುದ್ರ ತೀರದಲ್ಲಿ ಚಿತ್ರದ ಕಥೆ ಸಾಗುತ್ತದೆ. ಈ ಚಿತ್ರಕ್ಕೆ ಬಾಲಿವುಡ್ ನಟಿ ಜಾನ್ವಿ ಕಪೂರ್ ನಾಯಕಿ. ಇದೇ ಮೊದಲ ಬಾರಿಗೆ ಅವರು ಟಾಲಿವುಡ್​ಗೆ ಕಾಲಿಡುತ್ತಿದ್ದಾರೆ.

ಇದನ್ನೂ ಓದಿ: ಜೂ ಎನ್​ಟಿಆರ್ ಸಹೋದರನ ಸಿನಿಮಾ ವಿವಾದದಲ್ಲಿ: ನಿರ್ದೇಶಕನ ದೀರ್ಘ ಪತ್ರ

ಏಪ್ರಿಲ್ ತಿಂಗಳಲ್ಲಿ ‘ದೇವರ’ ಸಿನಿಮಾ ರಿಲೀಸ್ ಆಗುವ ಸಾಧ್ಯತೆ ಇದೆ. ಇದಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ. ಈ ಸಿನಿಮಾ ಬಳಿಕ ಜೂನಿಯರ್ ಎನ್​ಟಿಆರ್ ಅವರು ‘ವಾರ್ 2’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಳ್ಳಲಿದ್ದಾರೆ. ಇದು ಬಾಲಿವುಡ್ ಸಿನಿಮಾ ಎಂಬ ಕಾರಣಕ್ಕೆ ನಿರೀಕ್ಷೆ ಹೆಚ್ಚಿದೆ. ಇದಾದ ಬಳಿಕ ಪ್ರಶಾಂತ್ ನೀಲ್ ನಿರ್ದೇಶನದ ಸಿನಿಮಾದಲ್ಲಿ ಜೂನಿಯರ್​ ಎನ್​ಟಿಆರ್ ನಟಿಸಲಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಜಮ್ಮು ಕಾಶ್ಮೀರದ ಪ್ರವಾಸಿ ರೆಸಾರ್ಟ್​ ಬಳಿ ಕರಡಿ ಪ್ರತ್ಯಕ್ಷ, ಹೆಚ್ಚಿದ ಆತಂಕ
ಜಮ್ಮು ಕಾಶ್ಮೀರದ ಪ್ರವಾಸಿ ರೆಸಾರ್ಟ್​ ಬಳಿ ಕರಡಿ ಪ್ರತ್ಯಕ್ಷ, ಹೆಚ್ಚಿದ ಆತಂಕ
ಕುಂಕುಮ ಹಾಗೂ ವಿಭೂತಿ ಇಲ್ಲದೆ ದೇವತಾಕಾರ್ಯ ಮಾಡಬಹುದಾ ತಿಳಿಯಿರಿ
ಕುಂಕುಮ ಹಾಗೂ ವಿಭೂತಿ ಇಲ್ಲದೆ ದೇವತಾಕಾರ್ಯ ಮಾಡಬಹುದಾ ತಿಳಿಯಿರಿ
ಚಂದ್ರನು ಕರ್ಕಾಟಕ ರಾಶಿಯಿಂದ ಪುನರ್ವಸು ನಕ್ಷತ್ರದೆಡೆಗೆ ಸಂಚಾರ
ಚಂದ್ರನು ಕರ್ಕಾಟಕ ರಾಶಿಯಿಂದ ಪುನರ್ವಸು ನಕ್ಷತ್ರದೆಡೆಗೆ ಸಂಚಾರ
ಗುಜರಾತ್​​ನಲ್ಲಿ ಭಾರೀ ಪ್ರವಾಹ; ಭಾಗಶಃ ಮುಳುಗಿದ ತಡಕೇಶ್ವರ ಮಹಾದೇವ ದೇವಾಲಯ
ಗುಜರಾತ್​​ನಲ್ಲಿ ಭಾರೀ ಪ್ರವಾಹ; ಭಾಗಶಃ ಮುಳುಗಿದ ತಡಕೇಶ್ವರ ಮಹಾದೇವ ದೇವಾಲಯ
‘ಕಾಲವೇ ಮೋಸಗಾರ’ ಚಿತ್ರಕ್ಕಾಗಿ ವಿದ್ಯಾರ್ಥಿಗಳ ಬಳಿ ತೆರಳಿದ ಭರತ್ ಸಾಗರ್
‘ಕಾಲವೇ ಮೋಸಗಾರ’ ಚಿತ್ರಕ್ಕಾಗಿ ವಿದ್ಯಾರ್ಥಿಗಳ ಬಳಿ ತೆರಳಿದ ಭರತ್ ಸಾಗರ್
5 ಹುಲಿಗಳ ಸಾವಿನ ಸುತ್ತ ಹಸು: ಸ್ಫೋಟಕ ಅಂಶ ಬಿಚ್ಚಿಟ್ಟ ಡಿಸಿಎಫ್
5 ಹುಲಿಗಳ ಸಾವಿನ ಸುತ್ತ ಹಸು: ಸ್ಫೋಟಕ ಅಂಶ ಬಿಚ್ಚಿಟ್ಟ ಡಿಸಿಎಫ್
ಸಲಾಲ್ ಡ್ಯಾಂನಿಂದ ಭಾರೀ ನೀರು ಬಿಡುಗಡೆ; ಪಾಕಿಸ್ತಾನಕ್ಕೆ ನೆರೆಯ ಭೀತಿ
ಸಲಾಲ್ ಡ್ಯಾಂನಿಂದ ಭಾರೀ ನೀರು ಬಿಡುಗಡೆ; ಪಾಕಿಸ್ತಾನಕ್ಕೆ ನೆರೆಯ ಭೀತಿ
ಕೇರಳದ ಕೊಟ್ಟಿಯೂರು ದೇವಸ್ಥಾನದಲ್ಲಿ ದರ್ಶನ್ ಮಾಡಿಸಿದ ಪೂಜೆಯ ವಿಶೇಷತೆ ಏನು?
ಕೇರಳದ ಕೊಟ್ಟಿಯೂರು ದೇವಸ್ಥಾನದಲ್ಲಿ ದರ್ಶನ್ ಮಾಡಿಸಿದ ಪೂಜೆಯ ವಿಶೇಷತೆ ಏನು?
ವಿದ್ಯಾರ್ಥಿನಿಗೆ 10 ಸಾವಿರ ರೂಪಾಯಿ ಬಹುಮಾನ ನೀಡಿದ ಅದಿತಿ ಪ್ರಭುದೇವ
ವಿದ್ಯಾರ್ಥಿನಿಗೆ 10 ಸಾವಿರ ರೂಪಾಯಿ ಬಹುಮಾನ ನೀಡಿದ ಅದಿತಿ ಪ್ರಭುದೇವ
ಪರ್ಯಾಯ ಪವರ್ ಸೆಂಟರ್​ ಅಂತ ಶಿವಕುಮಾರ್ ಉದ್ದೇಶಿಸಿ ರಾಜಣ್ಣ ಹೇಳಿದರೇ?
ಪರ್ಯಾಯ ಪವರ್ ಸೆಂಟರ್​ ಅಂತ ಶಿವಕುಮಾರ್ ಉದ್ದೇಶಿಸಿ ರಾಜಣ್ಣ ಹೇಳಿದರೇ?