AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹ್ಯಾಪಿ ಬರ್ತ್​ಡೇ ಸೈಫ್​ ಸರ್​..’: ಸೈಫ್​ ಅಲಿ ಖಾನ್​ಗೆ ಜನ್ಮದಿನದ ಶುಭ ಕೋರಿದ ಜೂನಿಯರ್​ ಎನ್​ಟಿಆರ್​

‘ದೇವರ’ ಸಿನಿಮಾ ತಂಡದಿಂದ ಸೈಫ್​ ಅಲಿ ಖಾನ್​ ಅವರ ಫಸ್ಟ್​ ಲುಕ್​ ಪೋಸ್ಟರ್​ ಅನಾವರಣ ಮಾಡಲಾಗಿದೆ. ಇದನ್ನು ಜೂನಿಯರ್​ ಎನ್​ಟಿಆರ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡು ಶುಭ ಕೋರಿದ್ದಾರೆ. ‘ಹ್ಯಾಪಿ ಬರ್ತ್​ಡೇ ಸೈಫ್​ ಸರ್​..’ ಎಂದು ಗೌರವದಿಂದ ಅವರು ವಿಶ್​ ಮಾಡಿದ್ದಾರೆ. ಅಂದಹಾಗೆ, ಈ ಸಿನಿಮಾದಲ್ಲಿ ಸೈಫ್​ ಅಲಿ ಖಾನ್​ ಅವರು ಭೈರ ಎಂಬ ಪಾತ್ರವನ್ನು ಮಾಡುತ್ತಿದ್ದಾರೆ.

‘ಹ್ಯಾಪಿ ಬರ್ತ್​ಡೇ ಸೈಫ್​ ಸರ್​..’: ಸೈಫ್​ ಅಲಿ ಖಾನ್​ಗೆ ಜನ್ಮದಿನದ ಶುಭ ಕೋರಿದ ಜೂನಿಯರ್​ ಎನ್​ಟಿಆರ್​
ಸೈಫ್​ ಅಲಿ ಖಾನ್​, ಜೂನಿಯರ್ ಎನ್​ಟಿಆರ್​
ಮದನ್​ ಕುಮಾರ್​
|

Updated on: Aug 16, 2023 | 5:46 PM

Share

ನಟ ಸೈಫ್​ ಅಲಿ ಖಾನ್​ (Saif Ali Khan) ಅವರು ಈಗ ಬಾಲಿವುಡ್​ಗೆ ಮಾತ್ರ ಸೀಮಿತವಾಗಿಲ್ಲ. ದಕ್ಷಿಣ ಭಾರತದಲ್ಲೂ ಅವರಿಗೆ ಸಖತ್​ ಬೇಡಿಕೆ ಸೃಷ್ಟಿ ಆಗಿದೆ. ಹಿಂದಿ ಸಿನಿಮಾಗಳಲ್ಲಿ ಹೀರೋ ಆಗಿ ಮಿಂಚುವ ಅವರು ಸೌತ್​ ಸಿನಿಮಾಗಳಲ್ಲಿ ವಿಲನ್​ ಅವತಾರ ತಾಳುತ್ತಿದ್ದಾರೆ. ಪ್ರಭಾಸ್​ ನಟನೆಯ ‘ಆದಿಪುರುಷ್​’ ಸಿನಿಮಾದಲ್ಲಿ ರಾವಣನ ಪಾತ್ರ ಮಾಡುವ ಮೂಲಕ ಅವರು ಗಮನ ಸೆಳೆದಿದ್ದರು. ಈಗ ಜೂನಿಯರ್​ ಎನ್​ಟಿಆರ್​ ಅಭಿನಯದ ದೇವರ’ (Devara) ಸಿನಿಮಾದಲ್ಲಿ ಕೂಡ ಸೈಫ್​ ಅಲಿ ಖಾನ್​ ಅವರು ಒಂದು ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಇಂದು (ಆಗಸ್ಟ್​ 16) ಅವರ ಜನ್ಮದಿನ. ಆ ಪ್ರಯುಕ್ತ ಎಲ್ಲರೂ ಅವರಿಗೆ ಶುಭ ಕೋರುತ್ತಿದ್ದಾರೆ. ‘ದೇವರ’ ಚಿತ್ರತಂಡದ ಪರವಾಗಿ ಜೂನಿಯರ್​ ಎನ್​ಟಿಆರ್​ (Jr NTR) ಕೂಡ ಸೈಫ್​ ಅಲಿ ಖಾನ್​ಗೆ ವಿಶ್​ ಮಾಡಿದ್ದಾರೆ.

‘ದೇವರ’ ಸಿನಿಮಾ ತಂಡದಿಂದ ಸೈಫ್​ ಅಲಿ ಖಾನ್​ ಅವರ ಫಸ್ಟ್​ ಲುಕ್​ ಪೋಸ್ಟರ್​ ಅನಾವರಣ ಮಾಡಲಾಗಿದೆ. ಜೂನಿಯರ್​ ಎನ್​ಟಿಆರ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡು ಶುಭ ಕೋರಿದ್ದಾರೆ. ‘ಹ್ಯಾಪಿ ಬರ್ತ್​ಡೇ ಸೈಫ್​ ಸರ್​..’ ಎಂದು ಗೌರವದಿಂದ ಅವರು ವಿಶ್​ ಮಾಡಿದ್ದಾರೆ. ಅಂದಹಾಗೆ, ಈ ಸಿನಿಮಾದಲ್ಲಿ ಸೈಫ್​ ಅಲಿ ಖಾನ್​ ಅವರು ಭೈರ ಎಂಬ ಪಾತ್ರವನ್ನು ಮಾಡುತ್ತಿದ್ದಾರೆ. ಹೊಸ ಪೋಸ್ಟರ್​ ಮೂಲಕ ಈ ಮಾಹಿತಿಯನ್ನು ಚಿತ್ರತಂಡ ಬಿಟ್ಟುಕೊಟ್ಟಿದೆ.

ಜೂನಿಯರ್​ ಎನ್​ಟಿಆರ್ ಟ್ವೀಟ್​:

ಸೈಫ್​ ಅಲಿ ಖಾನ್​ ಅವರಿಗೆ ಈಗ 53 ವರ್ಷ ವಯಸ್ಸು. ಯಾವ ಪಾತ್ರ ಸಿಕ್ಕರೂ ಅವರು ಅದಕ್ಕೆ ನ್ಯಾಯ ಸಲ್ಲಿಸುತ್ತಾರೆ. ಬಾಲಿವುಡ್​ನಲ್ಲೂ ಅವರು ನೆಗೆಟಿವ್​ ಶೇಡ್​ ಇರುವ ಪಾತ್ರಗಳನ್ನು ಮಾಡಿ ಸೈ ಎನಿಸಿಕೊಂಡಿದ್ದಾರೆ. ದಕ್ಷಿಣ ಭಾರತದಲ್ಲಿ ವಿಲನ್​ ಪಾತ್ರಗಳನ್ನು ಮಾಡುವ ಮೂಲಕ ವೃತ್ತಿಜೀವನದಲ್ಲಿ ಹೊಸ ಅಧ್ಯಾಯ ಆರಂಭಿಸಿದ್ದಾರೆ. ಅವರು ನಟಿಸುತ್ತಿರುವುದರಿಂದ ‘ದೇವರ’ ಸಿನಿಮಾ ಬಗ್ಗೆ ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚುವಂತಾಗಿದೆ.

ಇದನ್ನೂ ಓದಿ: ‘ಹೃದಯಂ’ ರಿಮೇಕ್​ನಲ್ಲಿ ಸೈಫ್​ ಅಲಿ ಖಾನ್​ ಮಗ ಇಬ್ರಾಹಿಂ? ಲಾಂಚ್​ ಮಾಡ್ತಾರೆ ಕರಣ್​ ಜೋಹರ್​

‘ದೇವರ’ ಸಿನಿಮಾಗೆ ಕೊರಟಾಲ ಶಿವ ಅವರು ನಿರ್ದೇಶನ ಮಾಡುತ್ತಿದ್ದಾರೆ. ಇದು ಕೂಡ ‘ಆರ್​ಆರ್​ಆರ್​’ ರೀತಿ ಪ್ಯಾನ್​ ಇಂಡಿಯಾ ಸಿನಿಮಾ ಆದ್ದರಿಂದ ಬಾಲಿವುಡ್​ ಕಲಾವಿದರನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಜೂನಿಯರ್​ ಎನ್​ಟಿಆರ್​ ಅವರಿಗೆ ಜೋಡಿಯಾಗಿ ಜಾನ್ವಿ ಕಪೂರ್​ ನಟಿಸುತ್ತಿದ್ದಾರೆ. ಅವರಿಗೆ ಇದು ಮೊದಲ ದಕ್ಷಿಣ ಭಾರತದ ಸಿನಿಮಾ ಎಂಬುದು ವಿಶೇಷ. ‘ಆರ್​ಆರ್​ಆರ್​’ ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್​ ಆದ ಬಳಿಕ ಜೂನಿಯರ್​ ಎನ್​ಟಿಆರ್​ ಅವರು ‘ದೇವರ’ ಸಿನಿಮಾವನ್ನು ಕೈಗೆತ್ತಿಕೊಂಡರು. ಈ ಚಿತ್ರದ ಕೆಲಸಗಳು ಬಿರುಸಿನಿಂದ ಸಾಗುತ್ತಿವೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು