AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹಾಲಿವುಡ್​’ನಲ್ಲಿ ಪ್ರೀಮಿಯರ್ ಆಗಲಿದೆ ‘ದೇವರ’; ಅಮೆರಿಕಕ್ಕೆ ಹಾರಲಿದ್ದಾರೆ ಜೂ. ಎನ್​ಟಿಆರ್

ಜೂನಿಯರ್ ಎನ್​ಟಿಆರ್ ನಟನೆಯ ‘ದೇವರ’ ಸಿನಿಮಾ ದೊಡ್ಡ ಮಟ್ಟದಲ್ಲಿ ಹೈಪ್ ಸೃಷ್ಟಿ ಮಾಡಿದೆ. ಇತ್ತೀಚೆಗೆ ಸಿನಿಮಾದ ಟ್ರೇಲರ್ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ. ಈ ಚಿತ್ರ ಸೆಪ್ಟೆಂಬರ್ 27ರಂದು ಬಿಡುಗಡೆ ಆಗುತ್ತಿದೆ. ಈ ಚಿತ್ರದ ವಿಶೇಷ ಶೋನ ಅಮೆರಿಕದಲ್ಲಿ ಆಯೋಜನೆ ಮಾಡಲಾಗಿದೆ.

‘ಹಾಲಿವುಡ್​’ನಲ್ಲಿ ಪ್ರೀಮಿಯರ್ ಆಗಲಿದೆ ‘ದೇವರ’; ಅಮೆರಿಕಕ್ಕೆ ಹಾರಲಿದ್ದಾರೆ ಜೂ. ಎನ್​ಟಿಆರ್
ಎನ್​ಟಿಆರ್
ರಾಜೇಶ್ ದುಗ್ಗುಮನೆ
|

Updated on:Sep 13, 2024 | 12:55 PM

Share

ಜೂನಿಯರ್​ ಎನ್​ಟಿಆರ್ ಅವರು ‘ದೇವರ’ ಸಿನಿಮಾದ ಪ್ರಚಾರದಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರ ಸೆಪ್ಟೆಂಬರ್ 27ರಂದು ರಿಲೀಸ್ ಆಗುತ್ತಿದೆ. ಈ ಸಿನಿಮಾ ರಿಲೀಸ್ ಸಂದರ್ಭದಲ್ಲಿ ಜೂನಿಯರ್​ ಎನ್​ಟಿಆರ್ ಅವರು ಭಾರತದಲ್ಲಿ ಇರೋದಿಲ್ಲ. ಹೌದು, ಸೆಪ್ಟೆಂಬರ್ 25ರಂದು ಜೂನಿಯರ್​ ಎನ್​ಟಿಆರ್ ಅವರು ಅಮೆರಿಕದ ಲಾಸ್ ಎಂಜಲೀಸ್​ಗೆ ತೆರಳಲಿದ್ದಾರೆ. ಇದಕ್ಕೆ ಒಂದು ಕಾರಣವೂ ಇದೆ.

ಕನ್ನಡದಲ್ಲಿ ಯಾವುದೇ ಸಿನಿಮಾ ರಿಲೀಸ್ ಆದರೂ ಮೊದಲ ದಿನ ಹೀರೋಗಳು ಮುಖ್ಯ ಥಿಯೇಟರ್​ಗೆ ತೆರಳಿ ಫ್ಯಾನ್ಸ್ ಜೊತೆ ಸಿನಿಮಾ ನೋಡುವ ಟ್ರೆಂಡ್ ಇದೆ. ಆದರೆ, ತೆಲುಗಿನಲ್ಲಿ ಆ ರೀತಿ ಇಲ್ಲ. ಈ ಕಾರಣಕ್ಕೆ ಜೂನಿಯರ್​ ಎನ್​ಟಿಆರ್ ಅವರು ಸಿನಿಮಾ ರಿಲೀಸ್​ಗೂ ಮೊದಲು ಕ್ಯಾಲಿಫೋರ್ನಿಯಾ ತೆರಳಲಿದ್ದಾರೆ. ಅಲ್ಲಿಂದ ಅವರು ಲಾಸ್ ಏಂಜಲೀಸ್​ಗೆ ತೆರಳುತ್ತಾರೆ.

ಬಿಯಾಂಡ್ ಫೆಸ್ಟ್​ ಹಿನ್ನೆಲೆಯಲ್ಲಿ ಹಾಲಿವುಡ್​ನ ಈಜಿಪ್ಟಿಯನ್ ಥಿಯೇಟರ್​ನಲ್ಲಿ ‘ದೇವರ’ ಸಿನಿಮಾದ ಶೋ ಆಯೋಜನೆ ಮಾಡಲಾಗಿದೆ. ಈ ವಿಶೇಷ ಶೋ 26ಕ್ಕೆ ಇದೆ. ಈ ಕಾರಣದಿಂದ ಅವರು ಭಾರತದಿಂದ 25ಕ್ಕೇ ಹೊರಡಲಿದ್ದಾರೆ. ಸ್ಥಳೀಯ ಅಭಿಮಾನಿಗಳ ಜೊತೆ ಅವರು ಸಿನಿಮಾ ನೋಡಲಿದ್ದಾರೆ. ಹಾಲಿವುಡ್ ಸೆಲೆಬ್ರಿಟಿಗಳು ಕೂಡ ಇದರಲ್ಲಿ ಭಾಗಿ ಆಗುವ ನಿರೀಕ್ಷೆ ಇದೆ.

ಪ್ರಕಾಶ್ ರಾಜ್, ಜಾನ್ವಿ ಕಪೂರ್, ಸೈಫ್ ಅಲಿ ಖಾನ್, ಶ್ರೀಕಾಂತ್ ಮೊದಲಾದವರು ನಟಿಸಿದ್ದಾರೆ. ಈ ಸಿನಿಮಾಗೆ ಇತ್ತೀಚೆಗೆ ಸೆನ್ಸಾರ್ ಪ್ರಕ್ರಿಯೆ ಮುಗಿದಿದೆ. ಈ ಚಿತ್ರಕ್ಕೆ ‘ಯು/ಎ’ ಪ್ರಮಾಣಪತ್ರ ನೀಡಲಾಗಿದೆ. ಈ ಚಿತ್ರದ ಅವಧಿ ಸುಮಾರು ಮೂರು ಗಂಟೆ ಇದೆ.  ಈ ಚಿತ್ರಕ್ಕಾಗಿ ಫ್ಯಾನ್ಸ್ ಕಾಯುತ್ತಿದ್ದಾರೆ.

ಇದನ್ನೂ ಓದಿ: ಜೂನಿಯರ್​ ಎನ್​ಟಿಆರ್​ಗೆ ಆದ ಗಾಯದಿಂದ ‘ವಾರ್ 2’ ಚಿತ್ರಕ್ಕೆ ದೊಡ್ಡ ನಷ್ಟ

‘ದೇವರ’ ಸಿನಿಮಾದ ಟ್ರೇಲರ್ ನೋಡಿದ ಅನೇಕರು ನಕರಾತ್ಮಕವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಚಿತ್ರವನ್ನು ಕೆಲವರು ಅಟ್ಟರ್ ಫ್ಲಾಪ್ ಸಿನಿಮಾ ‘ಆಚಾರ್ಯ’ಕ್ಕೆ ಹೋಲಿಕೆ ಮಾಡಿದ್ದಾರೆ. ‘ದೇವರ’ ಮತ್ತೊಂದು ‘ಆಚಾರ್ಯ’ ಆಗಲಿದೆ ಎಂದು ಕೆಲವರು ಅಭಿಪ್ರಾಯ ಹೊರಹಾಕಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:53 pm, Fri, 13 September 24

ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ