AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹಾಲಿವುಡ್​’ನಲ್ಲಿ ಪ್ರೀಮಿಯರ್ ಆಗಲಿದೆ ‘ದೇವರ’; ಅಮೆರಿಕಕ್ಕೆ ಹಾರಲಿದ್ದಾರೆ ಜೂ. ಎನ್​ಟಿಆರ್

ಜೂನಿಯರ್ ಎನ್​ಟಿಆರ್ ನಟನೆಯ ‘ದೇವರ’ ಸಿನಿಮಾ ದೊಡ್ಡ ಮಟ್ಟದಲ್ಲಿ ಹೈಪ್ ಸೃಷ್ಟಿ ಮಾಡಿದೆ. ಇತ್ತೀಚೆಗೆ ಸಿನಿಮಾದ ಟ್ರೇಲರ್ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ. ಈ ಚಿತ್ರ ಸೆಪ್ಟೆಂಬರ್ 27ರಂದು ಬಿಡುಗಡೆ ಆಗುತ್ತಿದೆ. ಈ ಚಿತ್ರದ ವಿಶೇಷ ಶೋನ ಅಮೆರಿಕದಲ್ಲಿ ಆಯೋಜನೆ ಮಾಡಲಾಗಿದೆ.

‘ಹಾಲಿವುಡ್​’ನಲ್ಲಿ ಪ್ರೀಮಿಯರ್ ಆಗಲಿದೆ ‘ದೇವರ’; ಅಮೆರಿಕಕ್ಕೆ ಹಾರಲಿದ್ದಾರೆ ಜೂ. ಎನ್​ಟಿಆರ್
ಎನ್​ಟಿಆರ್
ರಾಜೇಶ್ ದುಗ್ಗುಮನೆ
|

Updated on:Sep 13, 2024 | 12:55 PM

Share

ಜೂನಿಯರ್​ ಎನ್​ಟಿಆರ್ ಅವರು ‘ದೇವರ’ ಸಿನಿಮಾದ ಪ್ರಚಾರದಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರ ಸೆಪ್ಟೆಂಬರ್ 27ರಂದು ರಿಲೀಸ್ ಆಗುತ್ತಿದೆ. ಈ ಸಿನಿಮಾ ರಿಲೀಸ್ ಸಂದರ್ಭದಲ್ಲಿ ಜೂನಿಯರ್​ ಎನ್​ಟಿಆರ್ ಅವರು ಭಾರತದಲ್ಲಿ ಇರೋದಿಲ್ಲ. ಹೌದು, ಸೆಪ್ಟೆಂಬರ್ 25ರಂದು ಜೂನಿಯರ್​ ಎನ್​ಟಿಆರ್ ಅವರು ಅಮೆರಿಕದ ಲಾಸ್ ಎಂಜಲೀಸ್​ಗೆ ತೆರಳಲಿದ್ದಾರೆ. ಇದಕ್ಕೆ ಒಂದು ಕಾರಣವೂ ಇದೆ.

ಕನ್ನಡದಲ್ಲಿ ಯಾವುದೇ ಸಿನಿಮಾ ರಿಲೀಸ್ ಆದರೂ ಮೊದಲ ದಿನ ಹೀರೋಗಳು ಮುಖ್ಯ ಥಿಯೇಟರ್​ಗೆ ತೆರಳಿ ಫ್ಯಾನ್ಸ್ ಜೊತೆ ಸಿನಿಮಾ ನೋಡುವ ಟ್ರೆಂಡ್ ಇದೆ. ಆದರೆ, ತೆಲುಗಿನಲ್ಲಿ ಆ ರೀತಿ ಇಲ್ಲ. ಈ ಕಾರಣಕ್ಕೆ ಜೂನಿಯರ್​ ಎನ್​ಟಿಆರ್ ಅವರು ಸಿನಿಮಾ ರಿಲೀಸ್​ಗೂ ಮೊದಲು ಕ್ಯಾಲಿಫೋರ್ನಿಯಾ ತೆರಳಲಿದ್ದಾರೆ. ಅಲ್ಲಿಂದ ಅವರು ಲಾಸ್ ಏಂಜಲೀಸ್​ಗೆ ತೆರಳುತ್ತಾರೆ.

ಬಿಯಾಂಡ್ ಫೆಸ್ಟ್​ ಹಿನ್ನೆಲೆಯಲ್ಲಿ ಹಾಲಿವುಡ್​ನ ಈಜಿಪ್ಟಿಯನ್ ಥಿಯೇಟರ್​ನಲ್ಲಿ ‘ದೇವರ’ ಸಿನಿಮಾದ ಶೋ ಆಯೋಜನೆ ಮಾಡಲಾಗಿದೆ. ಈ ವಿಶೇಷ ಶೋ 26ಕ್ಕೆ ಇದೆ. ಈ ಕಾರಣದಿಂದ ಅವರು ಭಾರತದಿಂದ 25ಕ್ಕೇ ಹೊರಡಲಿದ್ದಾರೆ. ಸ್ಥಳೀಯ ಅಭಿಮಾನಿಗಳ ಜೊತೆ ಅವರು ಸಿನಿಮಾ ನೋಡಲಿದ್ದಾರೆ. ಹಾಲಿವುಡ್ ಸೆಲೆಬ್ರಿಟಿಗಳು ಕೂಡ ಇದರಲ್ಲಿ ಭಾಗಿ ಆಗುವ ನಿರೀಕ್ಷೆ ಇದೆ.

ಪ್ರಕಾಶ್ ರಾಜ್, ಜಾನ್ವಿ ಕಪೂರ್, ಸೈಫ್ ಅಲಿ ಖಾನ್, ಶ್ರೀಕಾಂತ್ ಮೊದಲಾದವರು ನಟಿಸಿದ್ದಾರೆ. ಈ ಸಿನಿಮಾಗೆ ಇತ್ತೀಚೆಗೆ ಸೆನ್ಸಾರ್ ಪ್ರಕ್ರಿಯೆ ಮುಗಿದಿದೆ. ಈ ಚಿತ್ರಕ್ಕೆ ‘ಯು/ಎ’ ಪ್ರಮಾಣಪತ್ರ ನೀಡಲಾಗಿದೆ. ಈ ಚಿತ್ರದ ಅವಧಿ ಸುಮಾರು ಮೂರು ಗಂಟೆ ಇದೆ.  ಈ ಚಿತ್ರಕ್ಕಾಗಿ ಫ್ಯಾನ್ಸ್ ಕಾಯುತ್ತಿದ್ದಾರೆ.

ಇದನ್ನೂ ಓದಿ: ಜೂನಿಯರ್​ ಎನ್​ಟಿಆರ್​ಗೆ ಆದ ಗಾಯದಿಂದ ‘ವಾರ್ 2’ ಚಿತ್ರಕ್ಕೆ ದೊಡ್ಡ ನಷ್ಟ

‘ದೇವರ’ ಸಿನಿಮಾದ ಟ್ರೇಲರ್ ನೋಡಿದ ಅನೇಕರು ನಕರಾತ್ಮಕವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಚಿತ್ರವನ್ನು ಕೆಲವರು ಅಟ್ಟರ್ ಫ್ಲಾಪ್ ಸಿನಿಮಾ ‘ಆಚಾರ್ಯ’ಕ್ಕೆ ಹೋಲಿಕೆ ಮಾಡಿದ್ದಾರೆ. ‘ದೇವರ’ ಮತ್ತೊಂದು ‘ಆಚಾರ್ಯ’ ಆಗಲಿದೆ ಎಂದು ಕೆಲವರು ಅಭಿಪ್ರಾಯ ಹೊರಹಾಕಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:53 pm, Fri, 13 September 24

Follow Us
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯುಸಿ ರಿಸಲ್ಟ್ ಪ್ರಕಟ: ಈ ಬಾರಿ ದಾಖಲೆ ಫಲಿತಾಂಶ
ದ್ವಿತೀಯ ಪಿಯುಸಿ ರಿಸಲ್ಟ್ ಪ್ರಕಟ: ಈ ಬಾರಿ ದಾಖಲೆ ಫಲಿತಾಂಶ