AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನೊಂದು ಟ್ರೇಲರ್​ ಬಿಡುಗಡೆ ಮಾಡಿದ ‘ದೇವರ’ ಚಿತ್ರತಂಡ; ಜನರಿಗೆ ಇಷ್ಟ ಆಯ್ತಾ?

ಜೂನಿಯರ್​ ಎನ್​ಟಿಆರ್​, ಜಾನ್ವಿ ಕಪೂರ್​, ಸೈಫ್​ ಅಲಿ ಖಾನ್​ ಮುಂತಾದವರು ನಟಿಸಿರುವ ‘ದೇವರ’ ಚಿತ್ರತಂಡದಿಂದ 2ನೇ ಟ್ರೇಲರ್​ ಬಿಡುಗಡೆ ಮಾಡಲಾಗಿದೆ. ಮೊದಲ ಟ್ರೇಲರ್​ ರೀತಿ 2ನೇ ಟ್ರೇಲರ್​ನಲ್ಲೂ ಆ್ಯಕ್ಷನ್​ ದೃಶ್ಯಗಳು ಹೈಲೈಟ್​ ಆಗಿವೆ. ಜನರು ಮಿಶ್ರ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಸೆ.27ರಂದು ಈ ಸಿನಿಮಾ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ತೆರೆಕಾಣಲಿದೆ.

ಇನ್ನೊಂದು ಟ್ರೇಲರ್​ ಬಿಡುಗಡೆ ಮಾಡಿದ ‘ದೇವರ’ ಚಿತ್ರತಂಡ; ಜನರಿಗೆ ಇಷ್ಟ ಆಯ್ತಾ?
ಜೂ. ಎನ್​ಟಿಆರ್​, ಸೈಫ್​ ಅಲಿ ಖಾನ್​
ಮದನ್​ ಕುಮಾರ್​
|

Updated on: Sep 22, 2024 | 4:08 PM

Share

ಜೂನಿಯರ್​ ಎನ್​ಟಿಆರ್​ ನಟನೆಯ ‘ದೇವರ: ಪಾರ್ಟ್​ 1’ ಸಿನಿಮಾದ ಬಿಡುಗಡೆಗೆ ಇನ್ನು ಕೆಲವೇ ದಿನಗಳು ಉಳಿದಿವೆ. ಈ ಸಿನಿಮಾ ಮೇಲೆ ಅವರ ಅಭಿಮಾನಿಗಳು ಬಹಳ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ‘ಆರ್​ಆರ್​ಆರ್​’ ಸಿನಿಮಾದ ಬಳಿಕ ಜೂನಿಯರ್​ ಎನ್​ಟಿಆರ್​ ನಟಿಸಿದ ಸಿನಿಮಾ ಎಂಬ ಕಾರಣದಿಂದಲೂ ನಿರೀಕ್ಷೆ ಜಾಸ್ತಿ ಇದೆ. ಸೆಪ್ಟೆಂಬರ್​ 27ರಂದು ‘ದೇವರ’ ಸಿನಿಮಾ ರಿಲೀಸ್​ ಆಗಲಿದೆ. ಈಗ ಸಿನಿಮಾದ ಹೊಸ ಟ್ರೇಲರ್​ ಅನಾವರಣ ಮಾಡಲಾಗಿದೆ. ಜನರಿಂದ ಈ ಟ್ರೇಲರ್​ಗೆ ಮಿಶ್ರ ಪ್ರತಿಕ್ರಿಯೆ ಸಿಕ್ಕಿದೆ.

ಸಾಮಾನ್ಯವಾಗಿ ಎಲ್ಲ ಸಿನಿಮಾ ತಂಡಗಳು ಒಂದು ಟ್ರೇಲರ್​ ಬಿಡುಗಡೆ ಮಾಡುತ್ತವೆ. ಆದರೆ ‘ದೇವರ’ ತಂಡ 2 ಟ್ರೇಲರ್ ರಿಲೀಸ್​ ಮಾಡಿದೆ. ಕೆಲವೇ ದಿನಗಳ ಹಿಂದೆ ಮೊದಲ ಟ್ರೇಲರ್​ ಅನಾವರಣ ಆಗಿತ್ತು. ಇಂದು (ಸೆಪ್ಟೆಂಬರ್​ 22) ಎರಡನೇ ಟ್ರೇಲರ್​ ಹೊರಬಂದಿದೆ. ಮೊದಲ ಟ್ರೇಲರ್​ ನೋಡಿದ್ದ ಜನರು ಮಿಶ್ರ ಪ್ರತಿಕ್ರಿಯೆ ನೀಡಿದ್ದರು. ಎರಡನೇ ಟ್ರೇಲರ್​ ಕೂಡ ಅದೇ ರೀತಿ ಪ್ರತಿಕ್ರಿಯೆಯನ್ನು ಪಡೆದುಕೊಂಡಿದೆ.

ಇದನ್ನೂ ಓದಿ: ಜೂ. ಎನ್​ಟಿಆರ್​-ಜಾನ್ವಿ ನಡುವೆ 14 ವರ್ಷ ವಯಸ್ಸಿನ ಅಂತರ; ಟ್ರೋಲ್ ಆಯ್ತು ರೊಮ್ಯಾನ್ಸ್

ಕೊರಟಾಲ ಶಿವ ಅವರು ‘ದೇವರ’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದಲ್ಲಿ ಭರ್ಜರಿ ಆ್ಯಕ್ಷನ್​ ಸನ್ನಿವೇಶಗಳು ಇರಲಿವೆ ಎಂಬುದನ್ನು ಎರಡೂ ಟ್ರೇಲರ್​ಗಳು ಒತ್ತಿ ಹೇಳುತ್ತಿವೆ. ಜೂನಿಯರ್​ ಎನ್​ಟಿಆರ್​ ಅವರನ್ನು ಆ್ಯಕ್ಷನ್​ ಅವತಾರದಲ್ಲಿ ನೋಡಲು ಇಷ್ಟಪಡುವ ಅಭಿಮಾನಿಗಳಿಗೆ ‘ದೇವರ’ ಸಿನಿಮಾ ಮೇಲೆ ಭರವಸೆ ಮೂಡಿದೆ. ಸೆಪ್ಟೆಂಬರ್​ 27ಕ್ಕೆ ಸಿನಿಮಾ ತೆರೆಕಾಣಲಿದ್ದು ಮೊದಲ ದಿನ ಎಷ್ಟು ಕಲೆಕ್ಷನ್​ ಆಗಲಿದೆ ಎಂಬುದನ್ನು ಕಾದು ನೋಡಬೇಕು.

‘ದೇವರ: ಪಾರ್ಟ್​ 1’ ಸಿನಿಮಾ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಆಗಲಿದೆ. ತೆಲುಗಿನ ಈ ಸಿನಿಮಾ ಕನ್ನಡ, ಹಿಂದಿ, ತಮಿಳು ಮುಂತಾದ ಭಾಷೆಗಳಿಗೆ ಡಬ್​ ಆಗಿ ರಿಲೀಸ್​ ಆಗಲಿದೆ. ‘ಆರ್​ಆರ್​ಆರ್’ ಬಳಿಕ ಜೂನಿಯರ್​ ಎನ್​ಟಿಆರ್​ ಅವರಿಗೆ ಹಿಂದಿ ಪ್ರೇಕ್ಷಕರ ವಲಯದಲ್ಲಿ ಬೇಡಿಕೆ ಹೆಚ್ಚಾಗಿದೆ. ಹಾಗಾಗಿ ಉತ್ತರ ಭಾರತದ ಪ್ರೇಕ್ಷಕರನ್ನು ಸೆಳೆಯಲು ಬಾಲಿವುಡ್​ ಕಲಾವಿದರನ್ನು ಈ ಸಿನಿಮಾದ ಪಾತ್ರವರ್ಗಕ್ಕೆ ಸೇರಿಸಿಕೊಳ್ಳಲಾಗಿದೆ. ನಾಯಕಿಯಾಗಿ ಜಾನ್ವಿ ಕಪೂರ್​ ನಟಿಸಿದ್ದಾರೆ. ಮತ್ತೊಂದು ಮುಖ್ಯ ಪಾತ್ರದಲ್ಲಿ ಬಾಲಿವುಡ್​ ನಟ ಸೈಫ್​ ಅಲಿ ಖಾನ್​ ಅವರು ಅಭಿನಯಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು