AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಡ್ರ್ಯಾಗನ್’ ಶೂಟಿಂಗ್ ವೇಳೆ ಜೂ. ಎನ್​ಟಿಆರ್​ ಭುಜಕ್ಕೆ ಗಾಯ; 2 ತಿಂಗಳು ವಿಶ್ರಾಂತಿ ಅಗತ್ಯ

ಪ್ರಶಾಂತ್ ನೀಲ್ ನಿರ್ದೇಶನ ಮಾಡುತ್ತಿರುವ ‘ಡ್ರ್ಯಾಗನ್’ ಸಿನಿಮಾದ ಶೂಟಿಂಗ್ ವೇಳೆ ಖ್ಯಾತ ನಟ ಜೂನಿಯರ್ ಎನ್​ಟಿಆರ್ ಅವರಿಗೆ ಪೆಟ್ಟಾಗಿದೆ. ಇದರಿಂದಾಗಿ ಅವರು ಸುಮಾರು 2 ತಿಂಗಳು ವಿಶ್ರಾಂತಿ ಪಡೆಯಬೇಕು ಎಂದು ವೈದ್ಯರು ಸಲಹೆ ನೀಡಿದ್ದಾರೆ. ಆ ಬಗ್ಗೆ ಇಲ್ಲಿದೆ ಪೂರ್ತಿ ವಿವರ..

‘ಡ್ರ್ಯಾಗನ್’ ಶೂಟಿಂಗ್ ವೇಳೆ ಜೂ. ಎನ್​ಟಿಆರ್​ ಭುಜಕ್ಕೆ ಗಾಯ; 2 ತಿಂಗಳು ವಿಶ್ರಾಂತಿ ಅಗತ್ಯ
Jr NTR
ಮದನ್​ ಕುಮಾರ್​
|

Updated on: Jul 27, 2026 | 10:41 PM

Share

ಮುಖ್ಯಾಂಶಗಳು

  • ಚಿತ್ರೀಕರಣದ ಸಂದರ್ಭದಲ್ಲಿ ನಟ ಜೂನಿಯರ್ ಎನ್‌ಟಿಆರ್ ಅವರ ಭುಜಕ್ಕೆ ಗಾಯ.
  • ಚೇತರಿಸಿಕೊಳ್ಳಲು 6ರಿಂದ 8 ವಾರಗಳ ಕಾಲ ವಿಶ್ರಾಂತಿ ಪಡೆಯುವಂತೆ ವೈದ್ಯರ ಸೂಚನೆ.
  • ಅಭಿಮಾನಿಗಳು ಆತಂಕಪಡುವ ಅಗತ್ಯವಿಲ್ಲ ಎಂದು ಜೂ. ಎನ್‌ಟಿಆರ್ ತಂಡ ತಿಳಿಸಿದೆ.

ನಟ ಜೂನಿಯರ್ ಎನ್‌ಟಿಆರ್ (Jr NTR) ಅವರಿಗೆ ಶೂಟಿಂಗ್ ವೇಳೆ ಭುಜಕ್ಕೆ ಗಾಯವಾಗಿದ್ದು (Shoulder Injury), ವೈದ್ಯರು ಅವರಿಗೆ 6ರಿಂದ 8 ವಾರಗಳ ಕಾಲ ಸಂಪೂರ್ಣ ವಿಶ್ರಾಂತಿ ಪಡೆಯುವಂತೆ ಸೂಚಿಸಿದ್ದಾರೆ. ನಿರ್ದೇಶಕ ಪ್ರಶಾಂತ್ ನೀಲ್ ಅವರು ಆ್ಯಕ್ಷನ್-ಕಟ್ ಹೇಳುತ್ತಿರುವ ಬಹುನಿರೀಕ್ಷಿತ ‘ಡ್ರ್ಯಾಗನ್’ (Dragon) ಸಿನಿಮಾದ ಚಿತ್ರೀಕರಣದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಜೂ. ಎನ್​ಟಿಆರ್ ಅವರಿಗೆ ಗಾಯ ಆಗಿದೆ ಎಂಬ ವಿಷಯ ತಿಳಿದು ಅಭಿಮಾನಿಗಳಿಗೆ ಗಾಬರಿ ಆಗಿತ್ತು. ಆದರೆ ಆತಂಕಪಡುವ ಅವಶ್ಯಕತೆ ಇಲ್ಲ ಎಂದು ಅವರ ಟೀಮ್ ಹೇಳಿದೆ.

ಜೂನಿಯರ್ ಎನ್​ಟಿಆರ್ ಹೆಲ್ತ್ ಅಪ್​ಡೇಟ್:

ಸಂಜೆಯ ವೇಳೆಗೆ ನಡೆದ ಈ ಅಪಘಾತದ ನಂತರ ಜೂನಿಯರ್ ಎನ್‌ಟಿಆರ್ ಅವರನ್ನು ತಕ್ಷಣವೇ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಯಿತು. ಡಾ. ಜೆ. ಮಧುಸೂದನ್ ರಾವ್ ಹಾಗೂ ಡಾ. ಆರ್.ಎ. ಪೂರ್ಣಚಂದ್ರ ತೇಜಸ್ವಿ ಅವರನ್ನೊಳಗೊಂಡ ವೈದ್ಯರ ತಂಡವು ನಟನಿಗೆ ಸಂಪೂರ್ಣ ತಪಾಸಣೆ ನಡೆಸಿದ್ದು, ಬೇಗನೆ ಗುಣಮುಖರಾಗಲು ಕನಿಷ್ಠ 6ರಿಂದ 8 ವಾರಗಳ ಕಾಲ ಸಂಪೂರ್ಣ ವಿಶ್ರಾಂತಿ ತೆಗೆದುಕೊಳ್ಳುವುದು ಅಗತ್ಯ ಎಂದು ತಿಳಿಸಿದೆ.

ಅಭಿಮಾನಿಗಳಿಗೆ ಧೈರ್ಯ ಹೇಳಿದ ತಂಡ:

ಜೂ. ಎನ್‌ಟಿಆರ್ ಅವರ ಆರೋಗ್ಯ ಸ್ಥಿತಿಯ ಬಗ್ಗೆ ಅಭಿಮಾನಿಗಳಲ್ಲಿ ಆತಂಕ ಮೂಡದಂತೆ ಚಿತ್ರತಂಡ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದೆ. ‘ಜೂನಿಯರ್ ಎನ್‌ಟಿಆರ್ ಅವರಿಗೆ ಸಂಜೆ ಶೂಟಿಂಗ್ ವೇಳೆ ಭುಜಕ್ಕೆ ಗಾಯವಾಗಿರುವುದು ವಿಷಾದನೀಯ. ವೈದ್ಯರ ತಂಡ ತಪಾಸಣೆ ನಡೆಸಿದ್ದು, ಅವರು ಸಂಪೂರ್ಣ ಗುಣಮುಖರಾಗಲು 6ರಿಂದ 8 ವಾರಗಳ ವಿಶ್ರಾಂತಿ ಸೂಚಿಸಿದ್ದಾರೆ. ಆತಂಕಪಡುವ ಅಗತ್ಯವಿಲ್ಲ, ಅವರು ವೈದ್ಯರ ಸೂಕ್ತ ಉಸ್ತುವಾರಿಯಲ್ಲಿದ್ದಾರೆ’ ಎಂದು ತಿಳಿಸಲಾಗಿದೆ.

ಬಾಲಕೃಷ್ಣ ಅವರಿಗೂ ಕಾಲಿಗೆ ಗಾಯವಾಗಿತ್ತು:

ಇತ್ತೀಚೆಗಷ್ಟೇ ಹಿರಿಯ ನಟ ನಂದಮೂರಿ ಬಾಲಕೃಷ್ಣ ಅವರು ಕೂಡ ತಮ್ಮ ಹೊಸ ಸಿನಿಮಾದ ಶೂಟಿಂಗ್ ವೇಳೆ ಕಾಲಿಗೆ ಗಾಯಮಾಡಿಕೊಂಡಿದ್ದರು. ಹೈದರಾಬಾದ್‌ನ ಎಐಜಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಬಾಲಕೃಷ್ಣ ಅವರು ಪ್ರಸ್ತುತ ಚೇತರಿಸಿಕೊಳ್ಳುತ್ತಿದ್ದಾರೆ. ಇದೀಗ ಎನ್‌ಟಿಆರ್ ಕೂಡ ಕೆಲವು ವಾರಗಳ ಕಾಲ ಸಿನಿಮಾದ ಕೆಲಸಗಳಿಂದ ದೂರ ಉಳಿದು ವಿಶ್ರಾಂತಿ ಪಡೆಯಲಿದ್ದಾರೆ.

ಇದನ್ನೂ ಓದಿ: ಅಂದು ಬಾಡಿ ಶೇಮಿಂಗ್ ಎದುರಿಸಿದ್ದ ಜೂ. ಎನ್‌ಟಿಆರ್; ಈಗ ಕಟ್ಟುಮಸ್ತಾದ ಫೋಟೋ ವೈರಲ್

‘ಡ್ರ್ಯಾಗನ್’ ಸಿನಿಮಾ ತೆರೆಕಾಣಲು ಇನ್ನೂ ಸುಮಾರು 10 ತಿಂಗಳ ಕಾಲಾವಕಾಶ ಇರುವುದರಿಂದ, ಈ ಬ್ರೇಕ್‌ನಿಂದ ಸಿನಿಮಾದ ಒಟ್ಟಾರೆ ಕೆಲಸಗಳಿಗೆ ದೊಡ್ಡ ಮಟ್ಟದ ಅಡಚಣೆಯಾಗುವುದಿಲ್ಲ ಎನ್ನಲಾಗಿದೆ. ಈ ಬಿಡುವಿನ ಸಮಯದಲ್ಲಿ ಜೂ. ಎನ್‌ಟಿಆರ್ ಅವರು ಹೊಸ ಕಥೆಗಳನ್ನು ಕೇಳಲು ಹಾಗೂ ವಿಶ್ರಾಂತಿ ಪಡೆಯಲು ಸಮಯ ಮೀಸಲಿಡಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು