AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಬಗ್ಗೆ ಕನ್ನಡದಲ್ಲೇ ಜಾಗೃತಿ ಮೂಡಿಸಿದ ಟಾಲಿವುಡ್​ ಸ್ಟಾರ್​ ಜೂ. ಎನ್​ಟಿಆರ್​

ಎಸ್​.ಎಸ್​. ರಾಜಮೌಳಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಆಲಿಯಾ ಭಟ್​, ಜೂ. ಎನ್​ಟಿಆರ್​, ರಾಮ್​ ಚರಣ್​, ರಾಜಮೌಳಿ, ಅಜಯ್​ ದೇವಗನ್​ ಕೊರೊನಾ ಬಗ್ಗೆ ಜಾಗೃತಿ ಮೂಡಿಸಿದ್ದಾರೆ.

ಕೊರೊನಾ ಬಗ್ಗೆ ಕನ್ನಡದಲ್ಲೇ ಜಾಗೃತಿ ಮೂಡಿಸಿದ ಟಾಲಿವುಡ್​ ಸ್ಟಾರ್​ ಜೂ. ಎನ್​ಟಿಆರ್​
ಜೂ. ಎನ್​ಟಿಆರ್​
ರಾಜೇಶ್ ದುಗ್ಗುಮನೆ
|

Updated on: May 06, 2021 | 6:17 PM

Share

ಕೊರೊನಾ ವೈರಸ್​ ಮಿತಿಮೀರಿ ಹರಡುತ್ತಿದೆ. ನಿತ್ಯ ಸುಮಾರು 4 ಲಕ್ಷ ಕೊರೊನಾ ಕೇಸ್​ಗಳು ಭಾರತದಲ್ಲಿ ವರದಿ ಆಗುತ್ತಿವೆ. ಬೆಡ್​ಗಳು ಸಿಗದೇ ಸಾಕಷ್ಟು ಜನರು ಒದ್ದಾಡುತ್ತಿದ್ದಾರೆ. ಇದರಿಂದ ಸಾವಿನ ಸಂಖ್ಯೆ ಕೂಡ ಹೆಚ್ಚುತ್ತಿದೆ. ಕೊರೊನಾ ಹೆಚ್ಚದಂತೆ ತಡೆಯಲು ಸಾಕಷ್ಟು ಜನರು ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಈಗ ಎಸ್​.ಎಸ್​​. ರಾಜಮೌಳಿ ನಿರ್ದೇಶನದ ಆರ್​ಆರ್​ಆರ್​ ತಂಡ ಕೂಡ ಇದೇ ಮಾದರಿಯ ಕೆಲಸದಲ್ಲಿ ತೊಡಗಿದೆ. ವಿಶೇಷ ಎಂದರೆ, ಚಿತ್ರತಂಡದ ಪ್ರತಿಯೊಬ್ಬರೂ ಬೇರೆ ಬೇರೆ ಭಾಷೆಯಲ್ಲಿ ಮಾತನಾಡಿದ್ದಾರೆ.

ಎಸ್​.ಎಸ್​. ರಾಜಮೌಳಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಆಲಿಯಾ ಭಟ್​, ಜೂ. ಎನ್​ಟಿಆರ್​, ರಾಮ್​ ಚರಣ್​, ರಾಜಮೌಳಿ, ಅಜಯ್​ ದೇವಗನ್​ ಕೊರೊನಾ ಬಗ್ಗೆ ಜಾಗೃತಿ ಮೂಡಿಸಿದ್ದಾರೆ.

ವಿಡಿಯೋದಲ್ಲಿ ಕನ್ನಡದಲ್ಲಿ ಮಾತನಾಡಿರುವ ಜೂ.ಎನ್​ಟಿಆರ್​, ಎಲ್ಲರಿಗೂ ನಮಸ್ಕಾರ. ಕೋವಿಡ್​ ವಿರುದ್ಧದ ಹೋರಾಟದಲ್ಲಿ ಮಾಸ್ಕ್ ಹಾಗೂ​ ಸ್ಯಾನಿಟೈಸರ್​ ದೊಡ್ಡ ಅಸ್ತ್ರವಾಗಿದೆ. ಸದಾ ಮಾಸ್ಕ್​ ಧರಿಸಿ. ಕೈ ಸ್ವಚ್ಛವಾಗಿಟ್ಟುಕೊಳ್ಳಿ. ಪಬ್ಲಿಕ್​ನಲ್ಲಿ ಓಡಾಡುವಾಗ ಅಂತರ ಕಾಯ್ದುಕೊಳ್ಳಿ. ಮಾಸ್ಕ್​ ಧರಿಸುವುದಾಗಿ ಹಾಗೂ ವ್ಯಾಕ್ಸಿನ್​ ಹಾಕಿಸಿಕೊಳ್ಳುವುದಾಗಿ ಪ್ರತಿಜ್ಞೆ ಮಾಡಿ ಎಂದು ಕೋರಿದ್ದಾರೆ.

View this post on Instagram

A post shared by SS Rajamouli (@ssrajamouli)

ಅಕ್ಟೋಬರ್​ 13ರಂದು ಆರ್​ಆರ್​ಆರ್​ ಚಿತ್ರ ತೆರೆಗೆ ತರುವುದಾಗಿ ರಾಜಮೌಳಿ ಘೋಷಣೆ ಮಾಡಿದ್ದರು. ಈ ವಿಚಾರ ಕೇಳಿ ಅಭಿಮಾನಿಗಳು ಕೂಡ ಸಖತ್​ ಖುಷಿಯಾಗಿದ್ದರು. ಆದರೆ, ಈಗ ಅಭಿಮಾನಿಗಳಿಗೆ ಬ್ಯಾಡ್​ನ್ಯೂಸ್ ಒಂದು ಸಿಕ್ಕಿದೆ. ಆರ್​ಆರ್​ಆರ್​ ಸಿನಿಮಾ ರಿಲೀಸ್​ ದಿನಾಂಕ 2022ಕ್ಕೆ ಮುಂದೂಡಲ್ಪಟ್ಟಿದೆಯಂತೆ. ಆರ್​ಆರ್​ಆರ್​​ ಸಿನಿಮಾದ ಮೇಲೆ ಭಾರೀ ನಿರೀಕ್ಷೆ ಇದೆ. 2015ರಲ್ಲಿ ಬಾಹುಬಲಿ ಸಿನಿಮಾ ತೆರೆಕಂಡಿತ್ತು. ಇದಾದ ಎರಡೇ ವರ್ಷಕ್ಕೆ ಬಾಹುಬಲಿ 2 ಸಿನಿಮಾ ತೆರೆಕಂಡಿತ್ತು. ಈ ಸಿನಿಮಾ ತೆರೆಕಂಡು ನಾಲ್ಕು ವರ್ಷಗಳೇ ಕಳೆದಿವೆ. ಈಗ ರಾಜಮೌಳಿ ಅವರ ಮುಂದಿನ ಚಿತ್ರದ ಬಗ್ಗೆ ಭಾರೀ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಆದರೆ, ಪದೇಪದೇ ಸಿನಿಮಾ ರಿಲೀಸ್​ ದಿನಾಂಕ ಮುಂದೂಡಲ್ಪಡುತ್ತಿರುವುದು ಅಭಿಮಾನಿಗಳಿಗೆ ಬೇಸರ ಉಂಟಾಗುತ್ತಿದೆ.

ಇದನ್ನೂ ಓದಿ: ಉಲ್ಟಾಪಲ್ಟಾ ಆಯ್ತು ರಾಜಮೌಳಿ ಲೆಕ್ಕಾಚಾರ; ಅಭಿಮಾನಿಗಳಿಗೆ ಸಿಕ್ಕಾಪಟ್ಟೆ ಬೇಸರ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು