ಕೊರೊನಾ ಬಗ್ಗೆ ಕನ್ನಡದಲ್ಲೇ ಜಾಗೃತಿ ಮೂಡಿಸಿದ ಟಾಲಿವುಡ್​ ಸ್ಟಾರ್​ ಜೂ. ಎನ್​ಟಿಆರ್​

ಎಸ್​.ಎಸ್​. ರಾಜಮೌಳಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಆಲಿಯಾ ಭಟ್​, ಜೂ. ಎನ್​ಟಿಆರ್​, ರಾಮ್​ ಚರಣ್​, ರಾಜಮೌಳಿ, ಅಜಯ್​ ದೇವಗನ್​ ಕೊರೊನಾ ಬಗ್ಗೆ ಜಾಗೃತಿ ಮೂಡಿಸಿದ್ದಾರೆ.

ಕೊರೊನಾ ಬಗ್ಗೆ ಕನ್ನಡದಲ್ಲೇ ಜಾಗೃತಿ ಮೂಡಿಸಿದ ಟಾಲಿವುಡ್​ ಸ್ಟಾರ್​ ಜೂ. ಎನ್​ಟಿಆರ್​
ಜೂ. ಎನ್​ಟಿಆರ್​
Follow us
|

Updated on: May 06, 2021 | 6:17 PM

ಕೊರೊನಾ ವೈರಸ್​ ಮಿತಿಮೀರಿ ಹರಡುತ್ತಿದೆ. ನಿತ್ಯ ಸುಮಾರು 4 ಲಕ್ಷ ಕೊರೊನಾ ಕೇಸ್​ಗಳು ಭಾರತದಲ್ಲಿ ವರದಿ ಆಗುತ್ತಿವೆ. ಬೆಡ್​ಗಳು ಸಿಗದೇ ಸಾಕಷ್ಟು ಜನರು ಒದ್ದಾಡುತ್ತಿದ್ದಾರೆ. ಇದರಿಂದ ಸಾವಿನ ಸಂಖ್ಯೆ ಕೂಡ ಹೆಚ್ಚುತ್ತಿದೆ. ಕೊರೊನಾ ಹೆಚ್ಚದಂತೆ ತಡೆಯಲು ಸಾಕಷ್ಟು ಜನರು ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಈಗ ಎಸ್​.ಎಸ್​​. ರಾಜಮೌಳಿ ನಿರ್ದೇಶನದ ಆರ್​ಆರ್​ಆರ್​ ತಂಡ ಕೂಡ ಇದೇ ಮಾದರಿಯ ಕೆಲಸದಲ್ಲಿ ತೊಡಗಿದೆ. ವಿಶೇಷ ಎಂದರೆ, ಚಿತ್ರತಂಡದ ಪ್ರತಿಯೊಬ್ಬರೂ ಬೇರೆ ಬೇರೆ ಭಾಷೆಯಲ್ಲಿ ಮಾತನಾಡಿದ್ದಾರೆ.

ಎಸ್​.ಎಸ್​. ರಾಜಮೌಳಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಆಲಿಯಾ ಭಟ್​, ಜೂ. ಎನ್​ಟಿಆರ್​, ರಾಮ್​ ಚರಣ್​, ರಾಜಮೌಳಿ, ಅಜಯ್​ ದೇವಗನ್​ ಕೊರೊನಾ ಬಗ್ಗೆ ಜಾಗೃತಿ ಮೂಡಿಸಿದ್ದಾರೆ.

ವಿಡಿಯೋದಲ್ಲಿ ಕನ್ನಡದಲ್ಲಿ ಮಾತನಾಡಿರುವ ಜೂ.ಎನ್​ಟಿಆರ್​, ಎಲ್ಲರಿಗೂ ನಮಸ್ಕಾರ. ಕೋವಿಡ್​ ವಿರುದ್ಧದ ಹೋರಾಟದಲ್ಲಿ ಮಾಸ್ಕ್ ಹಾಗೂ​ ಸ್ಯಾನಿಟೈಸರ್​ ದೊಡ್ಡ ಅಸ್ತ್ರವಾಗಿದೆ. ಸದಾ ಮಾಸ್ಕ್​ ಧರಿಸಿ. ಕೈ ಸ್ವಚ್ಛವಾಗಿಟ್ಟುಕೊಳ್ಳಿ. ಪಬ್ಲಿಕ್​ನಲ್ಲಿ ಓಡಾಡುವಾಗ ಅಂತರ ಕಾಯ್ದುಕೊಳ್ಳಿ. ಮಾಸ್ಕ್​ ಧರಿಸುವುದಾಗಿ ಹಾಗೂ ವ್ಯಾಕ್ಸಿನ್​ ಹಾಕಿಸಿಕೊಳ್ಳುವುದಾಗಿ ಪ್ರತಿಜ್ಞೆ ಮಾಡಿ ಎಂದು ಕೋರಿದ್ದಾರೆ.

View this post on Instagram

A post shared by SS Rajamouli (@ssrajamouli)

ಅಕ್ಟೋಬರ್​ 13ರಂದು ಆರ್​ಆರ್​ಆರ್​ ಚಿತ್ರ ತೆರೆಗೆ ತರುವುದಾಗಿ ರಾಜಮೌಳಿ ಘೋಷಣೆ ಮಾಡಿದ್ದರು. ಈ ವಿಚಾರ ಕೇಳಿ ಅಭಿಮಾನಿಗಳು ಕೂಡ ಸಖತ್​ ಖುಷಿಯಾಗಿದ್ದರು. ಆದರೆ, ಈಗ ಅಭಿಮಾನಿಗಳಿಗೆ ಬ್ಯಾಡ್​ನ್ಯೂಸ್ ಒಂದು ಸಿಕ್ಕಿದೆ. ಆರ್​ಆರ್​ಆರ್​ ಸಿನಿಮಾ ರಿಲೀಸ್​ ದಿನಾಂಕ 2022ಕ್ಕೆ ಮುಂದೂಡಲ್ಪಟ್ಟಿದೆಯಂತೆ. ಆರ್​ಆರ್​ಆರ್​​ ಸಿನಿಮಾದ ಮೇಲೆ ಭಾರೀ ನಿರೀಕ್ಷೆ ಇದೆ. 2015ರಲ್ಲಿ ಬಾಹುಬಲಿ ಸಿನಿಮಾ ತೆರೆಕಂಡಿತ್ತು. ಇದಾದ ಎರಡೇ ವರ್ಷಕ್ಕೆ ಬಾಹುಬಲಿ 2 ಸಿನಿಮಾ ತೆರೆಕಂಡಿತ್ತು. ಈ ಸಿನಿಮಾ ತೆರೆಕಂಡು ನಾಲ್ಕು ವರ್ಷಗಳೇ ಕಳೆದಿವೆ. ಈಗ ರಾಜಮೌಳಿ ಅವರ ಮುಂದಿನ ಚಿತ್ರದ ಬಗ್ಗೆ ಭಾರೀ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಆದರೆ, ಪದೇಪದೇ ಸಿನಿಮಾ ರಿಲೀಸ್​ ದಿನಾಂಕ ಮುಂದೂಡಲ್ಪಡುತ್ತಿರುವುದು ಅಭಿಮಾನಿಗಳಿಗೆ ಬೇಸರ ಉಂಟಾಗುತ್ತಿದೆ.

ಇದನ್ನೂ ಓದಿ: ಉಲ್ಟಾಪಲ್ಟಾ ಆಯ್ತು ರಾಜಮೌಳಿ ಲೆಕ್ಕಾಚಾರ; ಅಭಿಮಾನಿಗಳಿಗೆ ಸಿಕ್ಕಾಪಟ್ಟೆ ಬೇಸರ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ