AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಬಗ್ಗೆ ಕನ್ನಡದಲ್ಲೇ ಜಾಗೃತಿ ಮೂಡಿಸಿದ ಟಾಲಿವುಡ್​ ಸ್ಟಾರ್​ ಜೂ. ಎನ್​ಟಿಆರ್​

ಎಸ್​.ಎಸ್​. ರಾಜಮೌಳಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಆಲಿಯಾ ಭಟ್​, ಜೂ. ಎನ್​ಟಿಆರ್​, ರಾಮ್​ ಚರಣ್​, ರಾಜಮೌಳಿ, ಅಜಯ್​ ದೇವಗನ್​ ಕೊರೊನಾ ಬಗ್ಗೆ ಜಾಗೃತಿ ಮೂಡಿಸಿದ್ದಾರೆ.

ಕೊರೊನಾ ಬಗ್ಗೆ ಕನ್ನಡದಲ್ಲೇ ಜಾಗೃತಿ ಮೂಡಿಸಿದ ಟಾಲಿವುಡ್​ ಸ್ಟಾರ್​ ಜೂ. ಎನ್​ಟಿಆರ್​
ಜೂ. ಎನ್​ಟಿಆರ್​
ರಾಜೇಶ್ ದುಗ್ಗುಮನೆ
|

Updated on: May 06, 2021 | 6:17 PM

Share

ಕೊರೊನಾ ವೈರಸ್​ ಮಿತಿಮೀರಿ ಹರಡುತ್ತಿದೆ. ನಿತ್ಯ ಸುಮಾರು 4 ಲಕ್ಷ ಕೊರೊನಾ ಕೇಸ್​ಗಳು ಭಾರತದಲ್ಲಿ ವರದಿ ಆಗುತ್ತಿವೆ. ಬೆಡ್​ಗಳು ಸಿಗದೇ ಸಾಕಷ್ಟು ಜನರು ಒದ್ದಾಡುತ್ತಿದ್ದಾರೆ. ಇದರಿಂದ ಸಾವಿನ ಸಂಖ್ಯೆ ಕೂಡ ಹೆಚ್ಚುತ್ತಿದೆ. ಕೊರೊನಾ ಹೆಚ್ಚದಂತೆ ತಡೆಯಲು ಸಾಕಷ್ಟು ಜನರು ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಈಗ ಎಸ್​.ಎಸ್​​. ರಾಜಮೌಳಿ ನಿರ್ದೇಶನದ ಆರ್​ಆರ್​ಆರ್​ ತಂಡ ಕೂಡ ಇದೇ ಮಾದರಿಯ ಕೆಲಸದಲ್ಲಿ ತೊಡಗಿದೆ. ವಿಶೇಷ ಎಂದರೆ, ಚಿತ್ರತಂಡದ ಪ್ರತಿಯೊಬ್ಬರೂ ಬೇರೆ ಬೇರೆ ಭಾಷೆಯಲ್ಲಿ ಮಾತನಾಡಿದ್ದಾರೆ.

ಎಸ್​.ಎಸ್​. ರಾಜಮೌಳಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಆಲಿಯಾ ಭಟ್​, ಜೂ. ಎನ್​ಟಿಆರ್​, ರಾಮ್​ ಚರಣ್​, ರಾಜಮೌಳಿ, ಅಜಯ್​ ದೇವಗನ್​ ಕೊರೊನಾ ಬಗ್ಗೆ ಜಾಗೃತಿ ಮೂಡಿಸಿದ್ದಾರೆ.

ವಿಡಿಯೋದಲ್ಲಿ ಕನ್ನಡದಲ್ಲಿ ಮಾತನಾಡಿರುವ ಜೂ.ಎನ್​ಟಿಆರ್​, ಎಲ್ಲರಿಗೂ ನಮಸ್ಕಾರ. ಕೋವಿಡ್​ ವಿರುದ್ಧದ ಹೋರಾಟದಲ್ಲಿ ಮಾಸ್ಕ್ ಹಾಗೂ​ ಸ್ಯಾನಿಟೈಸರ್​ ದೊಡ್ಡ ಅಸ್ತ್ರವಾಗಿದೆ. ಸದಾ ಮಾಸ್ಕ್​ ಧರಿಸಿ. ಕೈ ಸ್ವಚ್ಛವಾಗಿಟ್ಟುಕೊಳ್ಳಿ. ಪಬ್ಲಿಕ್​ನಲ್ಲಿ ಓಡಾಡುವಾಗ ಅಂತರ ಕಾಯ್ದುಕೊಳ್ಳಿ. ಮಾಸ್ಕ್​ ಧರಿಸುವುದಾಗಿ ಹಾಗೂ ವ್ಯಾಕ್ಸಿನ್​ ಹಾಕಿಸಿಕೊಳ್ಳುವುದಾಗಿ ಪ್ರತಿಜ್ಞೆ ಮಾಡಿ ಎಂದು ಕೋರಿದ್ದಾರೆ.

View this post on Instagram

A post shared by SS Rajamouli (@ssrajamouli)

ಅಕ್ಟೋಬರ್​ 13ರಂದು ಆರ್​ಆರ್​ಆರ್​ ಚಿತ್ರ ತೆರೆಗೆ ತರುವುದಾಗಿ ರಾಜಮೌಳಿ ಘೋಷಣೆ ಮಾಡಿದ್ದರು. ಈ ವಿಚಾರ ಕೇಳಿ ಅಭಿಮಾನಿಗಳು ಕೂಡ ಸಖತ್​ ಖುಷಿಯಾಗಿದ್ದರು. ಆದರೆ, ಈಗ ಅಭಿಮಾನಿಗಳಿಗೆ ಬ್ಯಾಡ್​ನ್ಯೂಸ್ ಒಂದು ಸಿಕ್ಕಿದೆ. ಆರ್​ಆರ್​ಆರ್​ ಸಿನಿಮಾ ರಿಲೀಸ್​ ದಿನಾಂಕ 2022ಕ್ಕೆ ಮುಂದೂಡಲ್ಪಟ್ಟಿದೆಯಂತೆ. ಆರ್​ಆರ್​ಆರ್​​ ಸಿನಿಮಾದ ಮೇಲೆ ಭಾರೀ ನಿರೀಕ್ಷೆ ಇದೆ. 2015ರಲ್ಲಿ ಬಾಹುಬಲಿ ಸಿನಿಮಾ ತೆರೆಕಂಡಿತ್ತು. ಇದಾದ ಎರಡೇ ವರ್ಷಕ್ಕೆ ಬಾಹುಬಲಿ 2 ಸಿನಿಮಾ ತೆರೆಕಂಡಿತ್ತು. ಈ ಸಿನಿಮಾ ತೆರೆಕಂಡು ನಾಲ್ಕು ವರ್ಷಗಳೇ ಕಳೆದಿವೆ. ಈಗ ರಾಜಮೌಳಿ ಅವರ ಮುಂದಿನ ಚಿತ್ರದ ಬಗ್ಗೆ ಭಾರೀ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಆದರೆ, ಪದೇಪದೇ ಸಿನಿಮಾ ರಿಲೀಸ್​ ದಿನಾಂಕ ಮುಂದೂಡಲ್ಪಡುತ್ತಿರುವುದು ಅಭಿಮಾನಿಗಳಿಗೆ ಬೇಸರ ಉಂಟಾಗುತ್ತಿದೆ.

ಇದನ್ನೂ ಓದಿ: ಉಲ್ಟಾಪಲ್ಟಾ ಆಯ್ತು ರಾಜಮೌಳಿ ಲೆಕ್ಕಾಚಾರ; ಅಭಿಮಾನಿಗಳಿಗೆ ಸಿಕ್ಕಾಪಟ್ಟೆ ಬೇಸರ

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ