AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಮಾನಿಯ ಕೊನೆ ಆಸೆ ಈಡೇರಿಸಲು ಮುಂದಾದ ಜೂ ಎನ್​ಟಿಆರ್

ಜೂ ಎನ್​ಟಿಆರ್ ನಟನೆಯ ‘ದೇವರ’ ಸಿನಿಮಾ ನೋಡುವ ಕೊನೆಯಾಸೆ ವ್ಯಕ್ತಪಡಿಸಿದ್ದ ಕ್ಯಾನ್ಸರ್ ಪೀಡಿತ ಅಭಿಮಾನಿಯೊಟ್ಟಿಗೆ ಜೂ ಎನ್​ಟಿಆರ್ ಇಂದು ವಿಡಿಯೋ ಕಾಲ್ ಮೂಲಕ ಮಾತನಾಡಿದ್ದಾರೆ.

ಅಭಿಮಾನಿಯ ಕೊನೆ ಆಸೆ ಈಡೇರಿಸಲು ಮುಂದಾದ ಜೂ ಎನ್​ಟಿಆರ್
ಮಂಜುನಾಥ ಸಿ.
|

Updated on:Sep 15, 2024 | 6:40 AM

Share

ತೆಲುಗಿನಲ್ಲಿ ಅತಿ ಹೆಚ್ಚು ಸಂಖ್ಯೆಯ ಅಭಿಮಾನಿಗಳಲ್ಲಿ ಹೊಂದಿರುವ ಕೆಲವೇ ನಟರಲ್ಲಿ ಜೂ ಎನ್​ಟಿಆರ್ ಸಹ ಒಬ್ಬರು. ಜೂ ಎನ್​ಟಿಆರ್ ಅಭಿಮಾನಿಗಳು ಬರೀ ಅಭಿಮಾನಿಗಳಲ್ಲ, ವೀರಾಭಿಮಾನಿಗಳು. ಇದೀಗ ಕೆಲವೇ ದಿನಗಳಲ್ಲಿ ಜೂ ಎನ್​ಟಿಆರ್ ನಟನೆಯ ‘ದೇವರ’ ಸಿನಿಮಾ ಬಿಡುಗಡೆ ಆಗಲಿದೆ. ಅಭಿಮಾನಿಗಳು, ಸಿನಿಮಾವನ್ನು ಸ್ವಾಗತಿಸಲು ಸಜ್ಜಾಗಿದ್ದಾರೆ. ಆದರೆ ಬ್ಲಡ್ ಕ್ಯಾನ್ಸರ್​ನಿಂದ ಬಳಲುತ್ತಿರುವ ಜೂ ಎನ್​ಟಿಆರ್ ಅಭಿಮಾನಿಯೊಬ್ಬ, ‘ದೇವರ’ ಸಿನಿಮಾ ನೋಡಬೇಕೆಂಬ ಕೊನೆ ಆಸೆ ವ್ಯಕ್ತಪಡಿಸಿದ್ದಾನೆ. ಆ ಅಭಿಮಾನಿಯೊಟ್ಟಿಗೆ ಸ್ವತಃ ‘ದೇವರ’ ಮಾತನಾಡಿದ್ದಾನೆ.

ತಿರುಪತಿಯ ಕೌಶಿಕ್​ ರಕ್ತದ ಕ್ಯಾನ್ಸರ್​ನಿಂದ ಬಳಲುತ್ತಿದ್ದು, ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೌಶಿಕ್ ಜೀವ ಸಹಿತ ಉಳಿಯುವುದು ಅನುಮಾನ ಎನ್ನಲಾಗುತ್ತಿದ್ದು, ಆತ, ತನ್ನ ಪೋಷಕರ ಬಳಿ, ‘ದೇವರ’ ಸಿನಿಮಾ ಬಿಡುಗಡೆ ಆಗುವವರೆಗೆ ನನ್ನನ್ನು ಉಳಿಸಿಕೊಳ್ಳಿ, ಆ ಸಿನಿಮಾ ನೋಡಿದ ಬಳಿಕ ಸಾಯುತ್ತೇನೆ ಎಂದು ಮನವಿ ಮಾಡಿದ್ದಾನೆ. ಈ ವಿಷಯವನ್ನು ಕೌಶಿಕ್​ನ ಪೋಷಕರು ಮಾಧ್ಯಮಗಳ ಬಳಿ ಹೇಳಿದ್ದರು. ಈ ವಿಷಯ ಜೂ ಎನ್​ಟಿಆರ್​ಗೆ ತಲುಪಬೇಕೆಂದು ಸುದ್ದಿಗೋಷ್ಠಿ ಮಾಡುತ್ತಿರುವುದಾಗಿ ಹೇಳಿದ್ದರು.

ಇದನ್ನೂ ಓದಿ:ಮತ್ತೆ ಪ್ರಾರಂಭ ಕಪಿಲ್ ಶೋ, ಜೂ ಎನ್​ಟಿಆರ್ ಸೇರಿ ಹಲವು ಅತಿಥಿಗಳು, ಇಲ್ಲಿದೆ ಪಟ್ಟಿ

ಇದೀಗ ಸ್ವತಃ ಜೂ ಎನ್​ಟಿಆರ್, ಸಾವಿನ ಮನೆಯ ಬಾಗಿಲು ಬಡಿಯುತ್ತಿರುವ ತನ್ನ ಅಭಿಮಾನಿ ಕೌಶಿಕ್​ ಜೊತೆ ಮಾತನಾಡಿದ್ದಾರೆ. ಕೌಶಿಕ್​ಗೆ ವಿಡಿಯೋ ಕಾಲ್ ಮಾಡಿದ್ದ ಜೂ ಎನ್​ಟಿಆರ್, ಕೌಶಿಕ್​ಗೆ ಧೈರ್ಯ ಹೇಳಿದ್ದಾರೆ. ಅವರ ತಾಯಿಯೊಟ್ಟಿಗೂ ಸಹ ಮಾತನಾಡಿದ್ದಾರೆ. ಕೌಶಿಕ್​ಗೆ ಚಿಕಿತ್ಸೆ ಪಡೆದುಕೊಳ್ಳುವಂತೆ ಹೇಳಿದ್ದು, ವೈದ್ಯರು ಅನುಮತಿ ನೀಡಿದರೆ ಸಿನಿಮಾ ತೋರಿಸುವ ವ್ಯವಸ್ಥೆ ಮಾಡುವುದಾಗಿ ಹೇಳಿದ್ದಾರೆ ಎನ್ನಲಾಗಿದೆ. ಜೂ ಎನ್​ಟಿಆರ್, ಕೌಶಿಕ್​ ಜೊತೆಗೆ ಮಾತನಾಡುತ್ತಿರುವ ವಿಡಿಯೋಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

ಜೂ ಎನ್​ಟಿಆರ್ ನಟನೆಯ ‘ದೇವರ’ ಸಿನಿಮಾದ ಮೊದಲ ಭಾಗ ಸೆಪ್ಟೆಂಬರ್ 27ಕ್ಕೆ ಬಿಡುಗಡೆ ಆಗಲಿದೆ. ಈ ಸಿನಿಮಾದಲ್ಲಿ ಎರಡು ಶೇಡ್​ಗಳಲ್ಲಿ ಜೂ ಎನ್​ಟಿಆರ್ ನಟಿಸಿದ್ದಾರೆ. ಸಿನಿಮಾವನ್ನು ಕೊರಟಾಲ ಶಿವ ನಿರ್ದೇಶನ ಮಾಡಿದ್ದಾರೆ. ನಿರ್ಮಾಣ ಮಾಡಿರುವುದು ಜೂ ಎನ್​ಟಿಆರ್ ಸಹೋದರ ಕಲ್ಯಾಣ್ ರಾಮ್. ಸಿನಿಮಾದಲ್ಲಿ ಜಾನ್ಹವಿ ಕಪೂರ್ ನಾಯಕಿ, ಸೈಫ್ ಅಲಿ ಖಾನ್ ವಿಲನ್.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:52 pm, Sat, 14 September 24

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ
ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ?ಅಭಿಪ್ರಾಯ ಸಂಗ್ರಹದಲ್ಲಿ ಏನೆಲ್ಲಾ ಆಯ್ತು
ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ?ಅಭಿಪ್ರಾಯ ಸಂಗ್ರಹದಲ್ಲಿ ಏನೆಲ್ಲಾ ಆಯ್ತು
ಆಗಸ್ಟ್‌ 31 ರೊಳಗೆ ಗ್ರೇಟರ್ ಬೆಂಗಳೂರು ಚುನಾವಣೆ ಅಸಾಧ್ಯ?
ಆಗಸ್ಟ್‌ 31 ರೊಳಗೆ ಗ್ರೇಟರ್ ಬೆಂಗಳೂರು ಚುನಾವಣೆ ಅಸಾಧ್ಯ?
ಲ್ಯಾಪ್ ಟಾಪ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ NWKRTC ಡ್ರೈವರ್
ಲ್ಯಾಪ್ ಟಾಪ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ NWKRTC ಡ್ರೈವರ್
ದೆಹಲಿಗೆ ಹಾರಿದ ಸಚಿವಾಕಾಂಕ್ಷಿಗಳು: ಯಾರೆಲ್ಲ ಪ್ರಯಾಣ?
ದೆಹಲಿಗೆ ಹಾರಿದ ಸಚಿವಾಕಾಂಕ್ಷಿಗಳು: ಯಾರೆಲ್ಲ ಪ್ರಯಾಣ?
ಯಂತ್ರಗಳು ಕೈಕೊಟ್ಟಾಗ ರಸ್ತೆಗಿಳಿದ ಗಜರಾಜ
ಯಂತ್ರಗಳು ಕೈಕೊಟ್ಟಾಗ ರಸ್ತೆಗಿಳಿದ ಗಜರಾಜ
ಅದ್ಭುತ, ಅತ್ಯದ್ಭುತ; ಶುಭ್​​ಮನ್ ಡೈವ್ ಕ್ಯಾಚ್​​​ಗೆ CSK ಸೈಲೆಂಟ್
ಅದ್ಭುತ, ಅತ್ಯದ್ಭುತ; ಶುಭ್​​ಮನ್ ಡೈವ್ ಕ್ಯಾಚ್​​​ಗೆ CSK ಸೈಲೆಂಟ್
ಮಧ್ಯರಾತ್ರಿ ವಿದ್ಯಾರ್ಥಿನಿಯರ ರೂಮಿಗೆ ನುಗ್ಗಿದ ಹಾಸ್ಟೆಲ್ ಮಾಲೀಕನ ಮಗ
ಮಧ್ಯರಾತ್ರಿ ವಿದ್ಯಾರ್ಥಿನಿಯರ ರೂಮಿಗೆ ನುಗ್ಗಿದ ಹಾಸ್ಟೆಲ್ ಮಾಲೀಕನ ಮಗ
ನ್ಯೂಯಾರ್ಕ್​ನಲ್ಲಿ ಭಾರಿ ಮಳೆ, ಪ್ರವಾಹ ಸ್ಥಿತಿ, ಕೆರೆಯಂತಾದ ರಸ್ತೆಗಳು
ನ್ಯೂಯಾರ್ಕ್​ನಲ್ಲಿ ಭಾರಿ ಮಳೆ, ಪ್ರವಾಹ ಸ್ಥಿತಿ, ಕೆರೆಯಂತಾದ ರಸ್ತೆಗಳು