AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಮಾನಿಯ ಕೊನೆ ಆಸೆ ಈಡೇರಿಸಲು ಮುಂದಾದ ಜೂ ಎನ್​ಟಿಆರ್

ಜೂ ಎನ್​ಟಿಆರ್ ನಟನೆಯ ‘ದೇವರ’ ಸಿನಿಮಾ ನೋಡುವ ಕೊನೆಯಾಸೆ ವ್ಯಕ್ತಪಡಿಸಿದ್ದ ಕ್ಯಾನ್ಸರ್ ಪೀಡಿತ ಅಭಿಮಾನಿಯೊಟ್ಟಿಗೆ ಜೂ ಎನ್​ಟಿಆರ್ ಇಂದು ವಿಡಿಯೋ ಕಾಲ್ ಮೂಲಕ ಮಾತನಾಡಿದ್ದಾರೆ.

ಅಭಿಮಾನಿಯ ಕೊನೆ ಆಸೆ ಈಡೇರಿಸಲು ಮುಂದಾದ ಜೂ ಎನ್​ಟಿಆರ್
ಮಂಜುನಾಥ ಸಿ.
|

Updated on:Sep 15, 2024 | 6:40 AM

Share

ತೆಲುಗಿನಲ್ಲಿ ಅತಿ ಹೆಚ್ಚು ಸಂಖ್ಯೆಯ ಅಭಿಮಾನಿಗಳಲ್ಲಿ ಹೊಂದಿರುವ ಕೆಲವೇ ನಟರಲ್ಲಿ ಜೂ ಎನ್​ಟಿಆರ್ ಸಹ ಒಬ್ಬರು. ಜೂ ಎನ್​ಟಿಆರ್ ಅಭಿಮಾನಿಗಳು ಬರೀ ಅಭಿಮಾನಿಗಳಲ್ಲ, ವೀರಾಭಿಮಾನಿಗಳು. ಇದೀಗ ಕೆಲವೇ ದಿನಗಳಲ್ಲಿ ಜೂ ಎನ್​ಟಿಆರ್ ನಟನೆಯ ‘ದೇವರ’ ಸಿನಿಮಾ ಬಿಡುಗಡೆ ಆಗಲಿದೆ. ಅಭಿಮಾನಿಗಳು, ಸಿನಿಮಾವನ್ನು ಸ್ವಾಗತಿಸಲು ಸಜ್ಜಾಗಿದ್ದಾರೆ. ಆದರೆ ಬ್ಲಡ್ ಕ್ಯಾನ್ಸರ್​ನಿಂದ ಬಳಲುತ್ತಿರುವ ಜೂ ಎನ್​ಟಿಆರ್ ಅಭಿಮಾನಿಯೊಬ್ಬ, ‘ದೇವರ’ ಸಿನಿಮಾ ನೋಡಬೇಕೆಂಬ ಕೊನೆ ಆಸೆ ವ್ಯಕ್ತಪಡಿಸಿದ್ದಾನೆ. ಆ ಅಭಿಮಾನಿಯೊಟ್ಟಿಗೆ ಸ್ವತಃ ‘ದೇವರ’ ಮಾತನಾಡಿದ್ದಾನೆ.

ತಿರುಪತಿಯ ಕೌಶಿಕ್​ ರಕ್ತದ ಕ್ಯಾನ್ಸರ್​ನಿಂದ ಬಳಲುತ್ತಿದ್ದು, ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೌಶಿಕ್ ಜೀವ ಸಹಿತ ಉಳಿಯುವುದು ಅನುಮಾನ ಎನ್ನಲಾಗುತ್ತಿದ್ದು, ಆತ, ತನ್ನ ಪೋಷಕರ ಬಳಿ, ‘ದೇವರ’ ಸಿನಿಮಾ ಬಿಡುಗಡೆ ಆಗುವವರೆಗೆ ನನ್ನನ್ನು ಉಳಿಸಿಕೊಳ್ಳಿ, ಆ ಸಿನಿಮಾ ನೋಡಿದ ಬಳಿಕ ಸಾಯುತ್ತೇನೆ ಎಂದು ಮನವಿ ಮಾಡಿದ್ದಾನೆ. ಈ ವಿಷಯವನ್ನು ಕೌಶಿಕ್​ನ ಪೋಷಕರು ಮಾಧ್ಯಮಗಳ ಬಳಿ ಹೇಳಿದ್ದರು. ಈ ವಿಷಯ ಜೂ ಎನ್​ಟಿಆರ್​ಗೆ ತಲುಪಬೇಕೆಂದು ಸುದ್ದಿಗೋಷ್ಠಿ ಮಾಡುತ್ತಿರುವುದಾಗಿ ಹೇಳಿದ್ದರು.

ಇದನ್ನೂ ಓದಿ:ಮತ್ತೆ ಪ್ರಾರಂಭ ಕಪಿಲ್ ಶೋ, ಜೂ ಎನ್​ಟಿಆರ್ ಸೇರಿ ಹಲವು ಅತಿಥಿಗಳು, ಇಲ್ಲಿದೆ ಪಟ್ಟಿ

ಇದೀಗ ಸ್ವತಃ ಜೂ ಎನ್​ಟಿಆರ್, ಸಾವಿನ ಮನೆಯ ಬಾಗಿಲು ಬಡಿಯುತ್ತಿರುವ ತನ್ನ ಅಭಿಮಾನಿ ಕೌಶಿಕ್​ ಜೊತೆ ಮಾತನಾಡಿದ್ದಾರೆ. ಕೌಶಿಕ್​ಗೆ ವಿಡಿಯೋ ಕಾಲ್ ಮಾಡಿದ್ದ ಜೂ ಎನ್​ಟಿಆರ್, ಕೌಶಿಕ್​ಗೆ ಧೈರ್ಯ ಹೇಳಿದ್ದಾರೆ. ಅವರ ತಾಯಿಯೊಟ್ಟಿಗೂ ಸಹ ಮಾತನಾಡಿದ್ದಾರೆ. ಕೌಶಿಕ್​ಗೆ ಚಿಕಿತ್ಸೆ ಪಡೆದುಕೊಳ್ಳುವಂತೆ ಹೇಳಿದ್ದು, ವೈದ್ಯರು ಅನುಮತಿ ನೀಡಿದರೆ ಸಿನಿಮಾ ತೋರಿಸುವ ವ್ಯವಸ್ಥೆ ಮಾಡುವುದಾಗಿ ಹೇಳಿದ್ದಾರೆ ಎನ್ನಲಾಗಿದೆ. ಜೂ ಎನ್​ಟಿಆರ್, ಕೌಶಿಕ್​ ಜೊತೆಗೆ ಮಾತನಾಡುತ್ತಿರುವ ವಿಡಿಯೋಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

ಜೂ ಎನ್​ಟಿಆರ್ ನಟನೆಯ ‘ದೇವರ’ ಸಿನಿಮಾದ ಮೊದಲ ಭಾಗ ಸೆಪ್ಟೆಂಬರ್ 27ಕ್ಕೆ ಬಿಡುಗಡೆ ಆಗಲಿದೆ. ಈ ಸಿನಿಮಾದಲ್ಲಿ ಎರಡು ಶೇಡ್​ಗಳಲ್ಲಿ ಜೂ ಎನ್​ಟಿಆರ್ ನಟಿಸಿದ್ದಾರೆ. ಸಿನಿಮಾವನ್ನು ಕೊರಟಾಲ ಶಿವ ನಿರ್ದೇಶನ ಮಾಡಿದ್ದಾರೆ. ನಿರ್ಮಾಣ ಮಾಡಿರುವುದು ಜೂ ಎನ್​ಟಿಆರ್ ಸಹೋದರ ಕಲ್ಯಾಣ್ ರಾಮ್. ಸಿನಿಮಾದಲ್ಲಿ ಜಾನ್ಹವಿ ಕಪೂರ್ ನಾಯಕಿ, ಸೈಫ್ ಅಲಿ ಖಾನ್ ವಿಲನ್.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:52 pm, Sat, 14 September 24

Follow Us
ದಿ ರೈಸ್ ಆಫ್ ಅಶೋಕ: ಇಂಗ್ಲಿಷ್ ಟೈಟಲ್ ಇಟ್ಟಿದ್ದಕ್ಕೆ ಕಾರಣ ತಿಳಿಸಿದ ಸತೀಶ್
ದಿ ರೈಸ್ ಆಫ್ ಅಶೋಕ: ಇಂಗ್ಲಿಷ್ ಟೈಟಲ್ ಇಟ್ಟಿದ್ದಕ್ಕೆ ಕಾರಣ ತಿಳಿಸಿದ ಸತೀಶ್
ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ
ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ
ಕರ್ನಾಟಕ ವಿರುದ್ಧ 5 ವಿಕೆಟ್ ಉರುಳಿಸಿದ ಆಕಿಬ್ ನಬಿ
ಕರ್ನಾಟಕ ವಿರುದ್ಧ 5 ವಿಕೆಟ್ ಉರುಳಿಸಿದ ಆಕಿಬ್ ನಬಿ
ತಂಡಕ್ಕೆ ಚಿಯರ್ ಅಪ್ ಮಾಡಲು ಹುಬ್ಬಳ್ಳಿಗೆ ಬಂದ ಜಮ್ಮು-ಕಾಶ್ಮೀರ ಸಿಎಂ
ತಂಡಕ್ಕೆ ಚಿಯರ್ ಅಪ್ ಮಾಡಲು ಹುಬ್ಬಳ್ಳಿಗೆ ಬಂದ ಜಮ್ಮು-ಕಾಶ್ಮೀರ ಸಿಎಂ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ