AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಮಾನಿಯ ಕೊನೆ ಆಸೆ ಈಡೇರಿಸಲು ಮುಂದಾದ ಜೂ ಎನ್​ಟಿಆರ್

ಜೂ ಎನ್​ಟಿಆರ್ ನಟನೆಯ ‘ದೇವರ’ ಸಿನಿಮಾ ನೋಡುವ ಕೊನೆಯಾಸೆ ವ್ಯಕ್ತಪಡಿಸಿದ್ದ ಕ್ಯಾನ್ಸರ್ ಪೀಡಿತ ಅಭಿಮಾನಿಯೊಟ್ಟಿಗೆ ಜೂ ಎನ್​ಟಿಆರ್ ಇಂದು ವಿಡಿಯೋ ಕಾಲ್ ಮೂಲಕ ಮಾತನಾಡಿದ್ದಾರೆ.

ಅಭಿಮಾನಿಯ ಕೊನೆ ಆಸೆ ಈಡೇರಿಸಲು ಮುಂದಾದ ಜೂ ಎನ್​ಟಿಆರ್
ಮಂಜುನಾಥ ಸಿ.
|

Updated on:Sep 15, 2024 | 6:40 AM

Share

ತೆಲುಗಿನಲ್ಲಿ ಅತಿ ಹೆಚ್ಚು ಸಂಖ್ಯೆಯ ಅಭಿಮಾನಿಗಳಲ್ಲಿ ಹೊಂದಿರುವ ಕೆಲವೇ ನಟರಲ್ಲಿ ಜೂ ಎನ್​ಟಿಆರ್ ಸಹ ಒಬ್ಬರು. ಜೂ ಎನ್​ಟಿಆರ್ ಅಭಿಮಾನಿಗಳು ಬರೀ ಅಭಿಮಾನಿಗಳಲ್ಲ, ವೀರಾಭಿಮಾನಿಗಳು. ಇದೀಗ ಕೆಲವೇ ದಿನಗಳಲ್ಲಿ ಜೂ ಎನ್​ಟಿಆರ್ ನಟನೆಯ ‘ದೇವರ’ ಸಿನಿಮಾ ಬಿಡುಗಡೆ ಆಗಲಿದೆ. ಅಭಿಮಾನಿಗಳು, ಸಿನಿಮಾವನ್ನು ಸ್ವಾಗತಿಸಲು ಸಜ್ಜಾಗಿದ್ದಾರೆ. ಆದರೆ ಬ್ಲಡ್ ಕ್ಯಾನ್ಸರ್​ನಿಂದ ಬಳಲುತ್ತಿರುವ ಜೂ ಎನ್​ಟಿಆರ್ ಅಭಿಮಾನಿಯೊಬ್ಬ, ‘ದೇವರ’ ಸಿನಿಮಾ ನೋಡಬೇಕೆಂಬ ಕೊನೆ ಆಸೆ ವ್ಯಕ್ತಪಡಿಸಿದ್ದಾನೆ. ಆ ಅಭಿಮಾನಿಯೊಟ್ಟಿಗೆ ಸ್ವತಃ ‘ದೇವರ’ ಮಾತನಾಡಿದ್ದಾನೆ.

ತಿರುಪತಿಯ ಕೌಶಿಕ್​ ರಕ್ತದ ಕ್ಯಾನ್ಸರ್​ನಿಂದ ಬಳಲುತ್ತಿದ್ದು, ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೌಶಿಕ್ ಜೀವ ಸಹಿತ ಉಳಿಯುವುದು ಅನುಮಾನ ಎನ್ನಲಾಗುತ್ತಿದ್ದು, ಆತ, ತನ್ನ ಪೋಷಕರ ಬಳಿ, ‘ದೇವರ’ ಸಿನಿಮಾ ಬಿಡುಗಡೆ ಆಗುವವರೆಗೆ ನನ್ನನ್ನು ಉಳಿಸಿಕೊಳ್ಳಿ, ಆ ಸಿನಿಮಾ ನೋಡಿದ ಬಳಿಕ ಸಾಯುತ್ತೇನೆ ಎಂದು ಮನವಿ ಮಾಡಿದ್ದಾನೆ. ಈ ವಿಷಯವನ್ನು ಕೌಶಿಕ್​ನ ಪೋಷಕರು ಮಾಧ್ಯಮಗಳ ಬಳಿ ಹೇಳಿದ್ದರು. ಈ ವಿಷಯ ಜೂ ಎನ್​ಟಿಆರ್​ಗೆ ತಲುಪಬೇಕೆಂದು ಸುದ್ದಿಗೋಷ್ಠಿ ಮಾಡುತ್ತಿರುವುದಾಗಿ ಹೇಳಿದ್ದರು.

ಇದನ್ನೂ ಓದಿ:ಮತ್ತೆ ಪ್ರಾರಂಭ ಕಪಿಲ್ ಶೋ, ಜೂ ಎನ್​ಟಿಆರ್ ಸೇರಿ ಹಲವು ಅತಿಥಿಗಳು, ಇಲ್ಲಿದೆ ಪಟ್ಟಿ

ಇದೀಗ ಸ್ವತಃ ಜೂ ಎನ್​ಟಿಆರ್, ಸಾವಿನ ಮನೆಯ ಬಾಗಿಲು ಬಡಿಯುತ್ತಿರುವ ತನ್ನ ಅಭಿಮಾನಿ ಕೌಶಿಕ್​ ಜೊತೆ ಮಾತನಾಡಿದ್ದಾರೆ. ಕೌಶಿಕ್​ಗೆ ವಿಡಿಯೋ ಕಾಲ್ ಮಾಡಿದ್ದ ಜೂ ಎನ್​ಟಿಆರ್, ಕೌಶಿಕ್​ಗೆ ಧೈರ್ಯ ಹೇಳಿದ್ದಾರೆ. ಅವರ ತಾಯಿಯೊಟ್ಟಿಗೂ ಸಹ ಮಾತನಾಡಿದ್ದಾರೆ. ಕೌಶಿಕ್​ಗೆ ಚಿಕಿತ್ಸೆ ಪಡೆದುಕೊಳ್ಳುವಂತೆ ಹೇಳಿದ್ದು, ವೈದ್ಯರು ಅನುಮತಿ ನೀಡಿದರೆ ಸಿನಿಮಾ ತೋರಿಸುವ ವ್ಯವಸ್ಥೆ ಮಾಡುವುದಾಗಿ ಹೇಳಿದ್ದಾರೆ ಎನ್ನಲಾಗಿದೆ. ಜೂ ಎನ್​ಟಿಆರ್, ಕೌಶಿಕ್​ ಜೊತೆಗೆ ಮಾತನಾಡುತ್ತಿರುವ ವಿಡಿಯೋಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

ಜೂ ಎನ್​ಟಿಆರ್ ನಟನೆಯ ‘ದೇವರ’ ಸಿನಿಮಾದ ಮೊದಲ ಭಾಗ ಸೆಪ್ಟೆಂಬರ್ 27ಕ್ಕೆ ಬಿಡುಗಡೆ ಆಗಲಿದೆ. ಈ ಸಿನಿಮಾದಲ್ಲಿ ಎರಡು ಶೇಡ್​ಗಳಲ್ಲಿ ಜೂ ಎನ್​ಟಿಆರ್ ನಟಿಸಿದ್ದಾರೆ. ಸಿನಿಮಾವನ್ನು ಕೊರಟಾಲ ಶಿವ ನಿರ್ದೇಶನ ಮಾಡಿದ್ದಾರೆ. ನಿರ್ಮಾಣ ಮಾಡಿರುವುದು ಜೂ ಎನ್​ಟಿಆರ್ ಸಹೋದರ ಕಲ್ಯಾಣ್ ರಾಮ್. ಸಿನಿಮಾದಲ್ಲಿ ಜಾನ್ಹವಿ ಕಪೂರ್ ನಾಯಕಿ, ಸೈಫ್ ಅಲಿ ಖಾನ್ ವಿಲನ್.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:52 pm, Sat, 14 September 24

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಸೋಲುವ ಪಂದ್ಯವನ್ನು ಟೈ ಮಾಡಿ, ಆಮೇಲೆ ಸೋತ ಟೀಮ್ ಇಂಡಿಯಾ
ಸೋಲುವ ಪಂದ್ಯವನ್ನು ಟೈ ಮಾಡಿ, ಆಮೇಲೆ ಸೋತ ಟೀಮ್ ಇಂಡಿಯಾ
ಈ ರಾಶಿಯವರಿಗಿಂದು ಹಣದ ವಿಷಯದಲ್ಲಿ ಆತುರದ ನಿರ್ಧಾರ ಬೇಡ
ಈ ರಾಶಿಯವರಿಗಿಂದು ಹಣದ ವಿಷಯದಲ್ಲಿ ಆತುರದ ನಿರ್ಧಾರ ಬೇಡ
ಗರುಡ ಪುರಾಣದ ಪ್ರಕಾರ ಊಟ ಎಲ್ಲಿ ಮಾಡಬೇಕು, ಎಲ್ಲಿ ಮಾಡಬಾರದು? ಫಲಗಳೇನು?
ಗರುಡ ಪುರಾಣದ ಪ್ರಕಾರ ಊಟ ಎಲ್ಲಿ ಮಾಡಬೇಕು, ಎಲ್ಲಿ ಮಾಡಬಾರದು? ಫಲಗಳೇನು?
2028ರ ಎಲೆಕ್ಷನ್ ಗೆಲ್ಲಲು ಜೋಶಿಗೆ ಸಾರಥ್ಯ?ಇದಕ್ಕೆ ಅವರು ಹೇಳಿದ್ದೇನು?
2028ರ ಎಲೆಕ್ಷನ್ ಗೆಲ್ಲಲು ಜೋಶಿಗೆ ಸಾರಥ್ಯ?ಇದಕ್ಕೆ ಅವರು ಹೇಳಿದ್ದೇನು?
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್​:FSL ವರದಿಯನ್ನೇ ತಿರುಚಿದ ಗ್ಯಾಂಗ್!
ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್​:FSL ವರದಿಯನ್ನೇ ತಿರುಚಿದ ಗ್ಯಾಂಗ್!
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ