AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂನಿಯರ್​ ಎನ್​ಟಿಆರ್​, ಪ್ರಶಾಂತ್ ನೀಲ್ ಫ್ಯಾನ್ಸ್ ಪಾಲಿಗೆ ಏ.22 ವಿಶೇಷ ದಿನ; ಸಿಕ್ತು ಅಪ್​ಡೇಟ್

ಪ್ರಶಾಂತ್ ನೀಲ್ ಹಾಗೂ ಜೂನಿಯರ್ ಎನ್​ಟಿಆರ್​ ಅವರು ಸಿನಿಮಾ ಅನೌನ್ಸ್ ಮಾಡಿ ಬಹಳ ಸಮಯ ಕಳೆದಿದೆ. ಇದರ ಶೂಟಿಂಗ್ ಕೂಡ ನಡೆಯುತ್ತಿದೆ. ಆದರೆ ಜೂನಿಯರ್​ ಎನ್​ಟಿಆರ್ ಅವರು ಇನ್ನೂ ಶೂಟಿಂಗ್ ಸೆಟ್​ಗೆ ಬಂದಿಲ್ಲ. ಹಾಗಾದರೆ ಅವರು ಚಿತ್ರೀಕರಣಕ್ಕೆ ಬರುವುದು ಯಾವಾಗ? ಈ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ.

ಜೂನಿಯರ್​ ಎನ್​ಟಿಆರ್​, ಪ್ರಶಾಂತ್ ನೀಲ್ ಫ್ಯಾನ್ಸ್ ಪಾಲಿಗೆ ಏ.22 ವಿಶೇಷ ದಿನ; ಸಿಕ್ತು ಅಪ್​ಡೇಟ್
Prashanth Neel, Jr NTR
Follow us
ಮದನ್​ ಕುಮಾರ್​
|

Updated on: Apr 09, 2025 | 8:09 PM

ಟಾಲಿವುಡ್ ನಟ ಜೂನಿಯರ್ ಎನ್​ಟಿಆರ್ (Jr NTR)​ ಅವರು ‘ದೇವರ’ ಸಿನಿಮಾದ ಬಳಿಕ ಹೊಸ ಚಿತ್ರದ ಕೆಲಸಗಳತ್ತ ಗಮನ ನೀಡಿದ್ದಾರೆ. ಕನ್ನಡದ ನಿರ್ದೇಶಕ ಪ್ರಶಾಂತ್ ನೀಲ್ (Prashanth Neel) ಜೊತೆ ಅವರು ಸಿನಿಮಾ ಮಾಡುತ್ತಿರುವುದು ಗೊತ್ತೇ ಇದೆ. ಈ ಸಿನಿಮಾ ಮೇಲೆ ಸಖತ್ ನಿರೀಕ್ಷೆ ಇದೆ. ಈಗಾಗಲೇ ಈ ಚಿತ್ರದ ಶೂಟಿಂಗ್ ಆರಂಭ ಆಗಿದೆ. ಹಾಗಿದ್ದರೂ ಕೂಡ ಜೂನಿಯರ್ ಎನ್​ಟಿಆರ್​ ಅವರು ಇನ್ನೂ ಶೂಟಿಂಗ್​ನಲ್ಲಿ ಭಾಗಿಯಾಗಿಲ್ಲ. ಅವರು ಯಾವಾಗ ಚಿತ್ರೀಕರಣದ ಸೆಟ್​ಗೆ ಬರುತ್ತಾರೆ ಎಂದು ಕೇಳುತ್ತಿದ್ದ ಅಭಿಮಾನಿಗಳಿಗೆ ಈಗ ಉತ್ತರ ಸಿಕ್ಕಿದೆ. ಶೂಟಿಂಗ್ ಬಗ್ಗೆ ನಿರ್ಮಾಣ ಸಂಸ್ಥೆಯಿಂದ ಅಪ್​ಡೇಟ್​ ನೀಡಲಾಗಿದೆ.

ಈ ವರ್ಷ ಫೆಬ್ರವರಿ ಮಧ್ಯ ಭಾಗದಲ್ಲಿ ಈ ಸಿನಿಮಾಗೆ ಪ್ರಶಾಂತ್ ನೀಲ್ ಅವರು ಶೂಟಿಂಗ್ ಆರಂಭಿಸಿದ್ದರು. ಬರೋಬ್ಬರಿ 2 ಸಾವಿರ ಮಂದಿ ಜೂನಿಯರ್​ ಆರ್ಟಿಸ್ಟ್​ಗಳ ಜೊತೆ ಚಿತ್ರೀಕರಣಕ್ಕೆ ಚಾಲನೆ ನೀಡಲಾಗಿತ್ತು. ಅದು ಮೊದಲ ಹಂತದ ಚಿತ್ರೀಕರಣ. ಅದರಲ್ಲಿ ಜೂನಿಯರ್​ ಎನ್​ಟಿಆರ್ ಭಾಗಿ ಆಗಲಿಲ್ಲ. ಈಗ ಅವರು ಚಿತ್ರೀಕರಣದಲ್ಲಿ ಭಾಗಿಯಾಗುವ ಸಮಯ ಬಂದಿದೆ. ಏಪ್ರಿಲ್ 22ರಂದು ಜೂನಿಯರ್​ ಎನ್​ಟಿಆರ್​ ಅವರು ಶೂಟಿಂಗ್​ ಸೆಟ್​ಗೆ ಬರಲಿದ್ದಾರೆ.

ಇದನ್ನೂ ಓದಿ
Image
ರಾಮ್ ಚರಣ್​ಗೆ ಪತ್ನಿ ಉಪಾಸನಾ ಕೊಡುವ ದುಬಾರಿ ಗಿಫ್ಟ್​ಗಳೇನು?
Image
ಗೆದ್ದಿದ್ದು ಕಡಿಮೆ ಸಿನಿಮಾ ಆದರೂ ರಾಮ್ ಚರಣ್ ಆಸ್ತಿ 1,300 ಕೋಟಿ ರೂಪಾಯಿ
Image
ರಾಮ್ ಚರಣ್ ಮನೆಯಲ್ಲಿ ಇದೆ ಬರೋಬ್ಬರಿ 15 ಕುದುರೆ; ಕಾರಣ ಏನು?
Image
ಪೌರಾಣಿಕ ಪಾತ್ರದಲ್ಲಿ ಮಿಂಚಲಿದ್ದಾರೆ ರಾಮ್ ಚರಣ್

ಸದ್ಯಕ್ಕೆ ಈ ಸಿನಿಮಾದ ಹೆಸರು ಏನೆಂಬುದು ಬಹಿರಂಗ ಆಗಿಲ್ಲ. ಪ್ರಶಾಂತ್ ನೀಲ್ ಹಾಗೂ ಜೂನಿಯರ್ ಎನ್​ಟಿಆರ್​ ಕಾಂಬಿನೇಷನ್​ನ ಸಿನಿಮಾ ಆದ್ದರಿಂದ #NTRNeel ಎಂದು ತಾತ್ಕಾಲಿಕವಾಗಿ ಕರೆಯಲಾಗುತ್ತಿದೆ. ಈ ಸಿನಿಮಾದಲ್ಲಿ ಜೂನಿಯರ್ ಎನ್​ಟಿಆರ್​ ಅವರ ಲುಕ್ ಹೇಗಿದೆ ಎಂಬುದನ್ನು ತಿಳಿಯಲು ಫ್ಯಾನ್ಸ್ ಉತ್ಸುಕರಾಗಿದ್ದಾರೆ. ಅದ್ದೂರಿ ಬಜೆಟ್​ನಲ್ಲಿ ಈ ಸಿನಿಮಾ ಮೂಡಿಬರುತ್ತಿದೆ.

‘ಪುಷ್ಪ 2’ ಸಿನಿಮಾ ನಿರ್ಮಾಣ ಮಾಡಿದ್ದ ‘ಮೈತ್ರೀ ಮೂವೀ ಮೇಕರ್ಸ್​’ ಸಂಸ್ಥೆಯೇ ಈಗ ಜೂನಿಯರ್​ ಎನ್​ಟಿಆರ್​-ಪ್ರಶಾಂತ್ ನೀಲ್ ಕಾಂಬಿನೇಷನ್​ನ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ. ‘ಕೆಜಿಎಫ್ 1’, ‘ಕೆಜಿಎಫ್​ 2’, ‘ಸಲಾರ್’ ಸಿನಿಮಾಗಳ ಮೂಲಕ ಹೆಸರು ಮಾಡಿರುವ ಪ್ರಶಾಂತ್ ನೀಲ್ ಅವರಿಗೆ ಟಾಲಿವುಡ್​ನಲ್ಲಿ ಬೇಡಿಕೆ ಹೆಚ್ಚಾಗಿದೆ.

ಇದನ್ನೂ ಓದಿ: ಜೂ ಎನ್​ಟಿಆರ್​ಗಾಗಿ ತೆಲುಗು ಕಲಿತ ಜಪಾನಿ ಮಹಿಳೆ, ವಿಡಿಯೋ ಹಂಚಿಕೊಂಡ ನಟ

ಈಗ ಟಾಲಿವುಡ್​ ಹೀರೋಗಳೆಲ್ಲ ಜಾಗತಿಕ ಮಟ್ಟದಲ್ಲಿ ಸದ್ದು ಮಾಡುತ್ತಿದ್ದಾರೆ. ರಾಮ್ ಚರಣ್ ಅವರು ‘ಪೆದ್ದಿ’ ಸಿನಿಮಾದಿಂದ ಧೂಳೆಬ್ಬಿಸಲು ಸಜ್ಜಾಗಿದ್ದಾರೆ. ಅತ್ತ, ಅಲ್ಲು ಅರ್ಜುನ್ ಅವರು ಅಟ್ಲಿ ಜೊತೆ ಕೈಜೋಡಿಸಿ ವಿದೇಶದಲ್ಲಿ ಕೆಲಸ ಆರಂಭಿಸಿದ್ದಾರೆ. ಹಾಗಾಗಿ ಪೈಪೋಟಿ ಜೋರಾಗಿದೆ. ಆ ಪೈಪೋಟಿಗೆ ತಕ್ಕಂತೆ ಜೂನಿಯರ್​ ಎನ್​ಟಿಆರ್​-ಪ್ರಶಾಂತ್ ನೀಲ್ ಕೂಡ ಸಿನಿಮಾ ಮಾಡುತ್ತಾರೆ ಎಂಬ ನಿರೀಕ್ಷೆಯಲ್ಲಿ ಅವರ ಅಭಿಮಾನಿಗಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಚಿಕ್ಕಮಗಳೂರಿನಲ್ಲಿ ಪ್ರವಾಸಿಗರ ಹುಚ್ಚಾಟ: ಸೀತಾಳಯ್ಯನಗಿರಿಯಲ್ಲಿ ಹೊಡೆದಾಟ
ಚಿಕ್ಕಮಗಳೂರಿನಲ್ಲಿ ಪ್ರವಾಸಿಗರ ಹುಚ್ಚಾಟ: ಸೀತಾಳಯ್ಯನಗಿರಿಯಲ್ಲಿ ಹೊಡೆದಾಟ
ಗೋಕರ್ಣದಲ್ಲಿ ಮತಾಂತರ ಶಂಕೆ: ಬಡವರು, ರೋಗ ಪಿಡಿತರೇ ಟಾರ್ಗೆಟ್!
ಗೋಕರ್ಣದಲ್ಲಿ ಮತಾಂತರ ಶಂಕೆ: ಬಡವರು, ರೋಗ ಪಿಡಿತರೇ ಟಾರ್ಗೆಟ್!
ಬಿಜೆಪಿ ಮತ್ತು ನಾನು ಪರಸ್ಪರ ಅವಲಂಬಿತರಾಗಿದ್ದೇವೆ: ಬಸನಗೌಡ ಯತ್ನಾಳ್
ಬಿಜೆಪಿ ಮತ್ತು ನಾನು ಪರಸ್ಪರ ಅವಲಂಬಿತರಾಗಿದ್ದೇವೆ: ಬಸನಗೌಡ ಯತ್ನಾಳ್
ರಾಷ್ಟ್ರಪತಿ ಭೇಟಿಗೆ ತೆರಳುವೆ, ಮೋದಿ ಭೇಟಿಗೂ ಸಮಯ ಕೇಳಿದ್ದೇನೆ: ಸಿಎಂ
ರಾಷ್ಟ್ರಪತಿ ಭೇಟಿಗೆ ತೆರಳುವೆ, ಮೋದಿ ಭೇಟಿಗೂ ಸಮಯ ಕೇಳಿದ್ದೇನೆ: ಸಿಎಂ
ರಾಜ್ಯ ರಾಜ್ಯಕಾರಣದಲ್ಲಿ ಯಡಿಯೂರಪ್ಪ ಸಕ್ರಿಯರಾಗುವ ಹಿಂದೆ ಕಾರಣವಿದೆಯೇ?
ರಾಜ್ಯ ರಾಜ್ಯಕಾರಣದಲ್ಲಿ ಯಡಿಯೂರಪ್ಪ ಸಕ್ರಿಯರಾಗುವ ಹಿಂದೆ ಕಾರಣವಿದೆಯೇ?
ಈಶ್ವರಪ್ಪರ ಪ್ರಕಾರ ಅಲ್ಪಸಂಖ್ಯಾತರು ಅನ್ನೋದು ಕೂಡ ಒಂದು ಧರ್ಮ!
ಈಶ್ವರಪ್ಪರ ಪ್ರಕಾರ ಅಲ್ಪಸಂಖ್ಯಾತರು ಅನ್ನೋದು ಕೂಡ ಒಂದು ಧರ್ಮ!
ತಾಯಿಗೆ ಹೊಡೆಯುವಾಗ ತಂದೆಗೆ ಕೈಮುಗಿದು ಬೇಡಿದ ಮಗಳು
ತಾಯಿಗೆ ಹೊಡೆಯುವಾಗ ತಂದೆಗೆ ಕೈಮುಗಿದು ಬೇಡಿದ ಮಗಳು
ಆರೋಪಿಗಳು ಓಡಿ ಹೋಗಲು ಅವಕಾಶ ಮಾಡಿಕೊಟ್ಟ ಇಬ್ಬರು ಪೊಲೀಸರ ಅಮಾನತು
ಆರೋಪಿಗಳು ಓಡಿ ಹೋಗಲು ಅವಕಾಶ ಮಾಡಿಕೊಟ್ಟ ಇಬ್ಬರು ಪೊಲೀಸರ ಅಮಾನತು
ವಿಚಾರಣೆ ನಂತರ ಈಡಿ ಕರೆದಿದ್ದು ಯಾಕೆ ಅಂತ ಗೊತ್ತಾಗಲಿದೆ: ಸುರೇಶ್
ವಿಚಾರಣೆ ನಂತರ ಈಡಿ ಕರೆದಿದ್ದು ಯಾಕೆ ಅಂತ ಗೊತ್ತಾಗಲಿದೆ: ಸುರೇಶ್
ದೂದ್​ಗಂಗಾ, ವೇದಗಂಗಾ ಮತ್ತು ಹಿರಣ್ಯಕೇಶಿ ನದಿಗಳಲ್ಲೂ ಹೆಚ್ಚಿದ ನೀರು ಪ್ರಮಾಣ
ದೂದ್​ಗಂಗಾ, ವೇದಗಂಗಾ ಮತ್ತು ಹಿರಣ್ಯಕೇಶಿ ನದಿಗಳಲ್ಲೂ ಹೆಚ್ಚಿದ ನೀರು ಪ್ರಮಾಣ