AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂನಿಯರ್​ ಎನ್​ಟಿಆರ್​, ಪ್ರಶಾಂತ್ ನೀಲ್ ಫ್ಯಾನ್ಸ್ ಪಾಲಿಗೆ ಏ.22 ವಿಶೇಷ ದಿನ; ಸಿಕ್ತು ಅಪ್​ಡೇಟ್

ಪ್ರಶಾಂತ್ ನೀಲ್ ಹಾಗೂ ಜೂನಿಯರ್ ಎನ್​ಟಿಆರ್​ ಅವರು ಸಿನಿಮಾ ಅನೌನ್ಸ್ ಮಾಡಿ ಬಹಳ ಸಮಯ ಕಳೆದಿದೆ. ಇದರ ಶೂಟಿಂಗ್ ಕೂಡ ನಡೆಯುತ್ತಿದೆ. ಆದರೆ ಜೂನಿಯರ್​ ಎನ್​ಟಿಆರ್ ಅವರು ಇನ್ನೂ ಶೂಟಿಂಗ್ ಸೆಟ್​ಗೆ ಬಂದಿಲ್ಲ. ಹಾಗಾದರೆ ಅವರು ಚಿತ್ರೀಕರಣಕ್ಕೆ ಬರುವುದು ಯಾವಾಗ? ಈ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ.

ಜೂನಿಯರ್​ ಎನ್​ಟಿಆರ್​, ಪ್ರಶಾಂತ್ ನೀಲ್ ಫ್ಯಾನ್ಸ್ ಪಾಲಿಗೆ ಏ.22 ವಿಶೇಷ ದಿನ; ಸಿಕ್ತು ಅಪ್​ಡೇಟ್
Prashanth Neel, Jr NTR
ಮದನ್​ ಕುಮಾರ್​
|

Updated on: Apr 09, 2025 | 8:09 PM

Share

ಟಾಲಿವುಡ್ ನಟ ಜೂನಿಯರ್ ಎನ್​ಟಿಆರ್ (Jr NTR)​ ಅವರು ‘ದೇವರ’ ಸಿನಿಮಾದ ಬಳಿಕ ಹೊಸ ಚಿತ್ರದ ಕೆಲಸಗಳತ್ತ ಗಮನ ನೀಡಿದ್ದಾರೆ. ಕನ್ನಡದ ನಿರ್ದೇಶಕ ಪ್ರಶಾಂತ್ ನೀಲ್ (Prashanth Neel) ಜೊತೆ ಅವರು ಸಿನಿಮಾ ಮಾಡುತ್ತಿರುವುದು ಗೊತ್ತೇ ಇದೆ. ಈ ಸಿನಿಮಾ ಮೇಲೆ ಸಖತ್ ನಿರೀಕ್ಷೆ ಇದೆ. ಈಗಾಗಲೇ ಈ ಚಿತ್ರದ ಶೂಟಿಂಗ್ ಆರಂಭ ಆಗಿದೆ. ಹಾಗಿದ್ದರೂ ಕೂಡ ಜೂನಿಯರ್ ಎನ್​ಟಿಆರ್​ ಅವರು ಇನ್ನೂ ಶೂಟಿಂಗ್​ನಲ್ಲಿ ಭಾಗಿಯಾಗಿಲ್ಲ. ಅವರು ಯಾವಾಗ ಚಿತ್ರೀಕರಣದ ಸೆಟ್​ಗೆ ಬರುತ್ತಾರೆ ಎಂದು ಕೇಳುತ್ತಿದ್ದ ಅಭಿಮಾನಿಗಳಿಗೆ ಈಗ ಉತ್ತರ ಸಿಕ್ಕಿದೆ. ಶೂಟಿಂಗ್ ಬಗ್ಗೆ ನಿರ್ಮಾಣ ಸಂಸ್ಥೆಯಿಂದ ಅಪ್​ಡೇಟ್​ ನೀಡಲಾಗಿದೆ.

ಈ ವರ್ಷ ಫೆಬ್ರವರಿ ಮಧ್ಯ ಭಾಗದಲ್ಲಿ ಈ ಸಿನಿಮಾಗೆ ಪ್ರಶಾಂತ್ ನೀಲ್ ಅವರು ಶೂಟಿಂಗ್ ಆರಂಭಿಸಿದ್ದರು. ಬರೋಬ್ಬರಿ 2 ಸಾವಿರ ಮಂದಿ ಜೂನಿಯರ್​ ಆರ್ಟಿಸ್ಟ್​ಗಳ ಜೊತೆ ಚಿತ್ರೀಕರಣಕ್ಕೆ ಚಾಲನೆ ನೀಡಲಾಗಿತ್ತು. ಅದು ಮೊದಲ ಹಂತದ ಚಿತ್ರೀಕರಣ. ಅದರಲ್ಲಿ ಜೂನಿಯರ್​ ಎನ್​ಟಿಆರ್ ಭಾಗಿ ಆಗಲಿಲ್ಲ. ಈಗ ಅವರು ಚಿತ್ರೀಕರಣದಲ್ಲಿ ಭಾಗಿಯಾಗುವ ಸಮಯ ಬಂದಿದೆ. ಏಪ್ರಿಲ್ 22ರಂದು ಜೂನಿಯರ್​ ಎನ್​ಟಿಆರ್​ ಅವರು ಶೂಟಿಂಗ್​ ಸೆಟ್​ಗೆ ಬರಲಿದ್ದಾರೆ.

ಇದನ್ನೂ ಓದಿ
Image
ರಾಮ್ ಚರಣ್​ಗೆ ಪತ್ನಿ ಉಪಾಸನಾ ಕೊಡುವ ದುಬಾರಿ ಗಿಫ್ಟ್​ಗಳೇನು?
Image
ಗೆದ್ದಿದ್ದು ಕಡಿಮೆ ಸಿನಿಮಾ ಆದರೂ ರಾಮ್ ಚರಣ್ ಆಸ್ತಿ 1,300 ಕೋಟಿ ರೂಪಾಯಿ
Image
ರಾಮ್ ಚರಣ್ ಮನೆಯಲ್ಲಿ ಇದೆ ಬರೋಬ್ಬರಿ 15 ಕುದುರೆ; ಕಾರಣ ಏನು?
Image
ಪೌರಾಣಿಕ ಪಾತ್ರದಲ್ಲಿ ಮಿಂಚಲಿದ್ದಾರೆ ರಾಮ್ ಚರಣ್

ಸದ್ಯಕ್ಕೆ ಈ ಸಿನಿಮಾದ ಹೆಸರು ಏನೆಂಬುದು ಬಹಿರಂಗ ಆಗಿಲ್ಲ. ಪ್ರಶಾಂತ್ ನೀಲ್ ಹಾಗೂ ಜೂನಿಯರ್ ಎನ್​ಟಿಆರ್​ ಕಾಂಬಿನೇಷನ್​ನ ಸಿನಿಮಾ ಆದ್ದರಿಂದ #NTRNeel ಎಂದು ತಾತ್ಕಾಲಿಕವಾಗಿ ಕರೆಯಲಾಗುತ್ತಿದೆ. ಈ ಸಿನಿಮಾದಲ್ಲಿ ಜೂನಿಯರ್ ಎನ್​ಟಿಆರ್​ ಅವರ ಲುಕ್ ಹೇಗಿದೆ ಎಂಬುದನ್ನು ತಿಳಿಯಲು ಫ್ಯಾನ್ಸ್ ಉತ್ಸುಕರಾಗಿದ್ದಾರೆ. ಅದ್ದೂರಿ ಬಜೆಟ್​ನಲ್ಲಿ ಈ ಸಿನಿಮಾ ಮೂಡಿಬರುತ್ತಿದೆ.

‘ಪುಷ್ಪ 2’ ಸಿನಿಮಾ ನಿರ್ಮಾಣ ಮಾಡಿದ್ದ ‘ಮೈತ್ರೀ ಮೂವೀ ಮೇಕರ್ಸ್​’ ಸಂಸ್ಥೆಯೇ ಈಗ ಜೂನಿಯರ್​ ಎನ್​ಟಿಆರ್​-ಪ್ರಶಾಂತ್ ನೀಲ್ ಕಾಂಬಿನೇಷನ್​ನ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ. ‘ಕೆಜಿಎಫ್ 1’, ‘ಕೆಜಿಎಫ್​ 2’, ‘ಸಲಾರ್’ ಸಿನಿಮಾಗಳ ಮೂಲಕ ಹೆಸರು ಮಾಡಿರುವ ಪ್ರಶಾಂತ್ ನೀಲ್ ಅವರಿಗೆ ಟಾಲಿವುಡ್​ನಲ್ಲಿ ಬೇಡಿಕೆ ಹೆಚ್ಚಾಗಿದೆ.

ಇದನ್ನೂ ಓದಿ: ಜೂ ಎನ್​ಟಿಆರ್​ಗಾಗಿ ತೆಲುಗು ಕಲಿತ ಜಪಾನಿ ಮಹಿಳೆ, ವಿಡಿಯೋ ಹಂಚಿಕೊಂಡ ನಟ

ಈಗ ಟಾಲಿವುಡ್​ ಹೀರೋಗಳೆಲ್ಲ ಜಾಗತಿಕ ಮಟ್ಟದಲ್ಲಿ ಸದ್ದು ಮಾಡುತ್ತಿದ್ದಾರೆ. ರಾಮ್ ಚರಣ್ ಅವರು ‘ಪೆದ್ದಿ’ ಸಿನಿಮಾದಿಂದ ಧೂಳೆಬ್ಬಿಸಲು ಸಜ್ಜಾಗಿದ್ದಾರೆ. ಅತ್ತ, ಅಲ್ಲು ಅರ್ಜುನ್ ಅವರು ಅಟ್ಲಿ ಜೊತೆ ಕೈಜೋಡಿಸಿ ವಿದೇಶದಲ್ಲಿ ಕೆಲಸ ಆರಂಭಿಸಿದ್ದಾರೆ. ಹಾಗಾಗಿ ಪೈಪೋಟಿ ಜೋರಾಗಿದೆ. ಆ ಪೈಪೋಟಿಗೆ ತಕ್ಕಂತೆ ಜೂನಿಯರ್​ ಎನ್​ಟಿಆರ್​-ಪ್ರಶಾಂತ್ ನೀಲ್ ಕೂಡ ಸಿನಿಮಾ ಮಾಡುತ್ತಾರೆ ಎಂಬ ನಿರೀಕ್ಷೆಯಲ್ಲಿ ಅವರ ಅಭಿಮಾನಿಗಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು