AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂನಿಯರ್​ ಎನ್​ಟಿಆರ್​, ಪ್ರಶಾಂತ್ ನೀಲ್ ಫ್ಯಾನ್ಸ್ ಪಾಲಿಗೆ ಏ.22 ವಿಶೇಷ ದಿನ; ಸಿಕ್ತು ಅಪ್​ಡೇಟ್

ಪ್ರಶಾಂತ್ ನೀಲ್ ಹಾಗೂ ಜೂನಿಯರ್ ಎನ್​ಟಿಆರ್​ ಅವರು ಸಿನಿಮಾ ಅನೌನ್ಸ್ ಮಾಡಿ ಬಹಳ ಸಮಯ ಕಳೆದಿದೆ. ಇದರ ಶೂಟಿಂಗ್ ಕೂಡ ನಡೆಯುತ್ತಿದೆ. ಆದರೆ ಜೂನಿಯರ್​ ಎನ್​ಟಿಆರ್ ಅವರು ಇನ್ನೂ ಶೂಟಿಂಗ್ ಸೆಟ್​ಗೆ ಬಂದಿಲ್ಲ. ಹಾಗಾದರೆ ಅವರು ಚಿತ್ರೀಕರಣಕ್ಕೆ ಬರುವುದು ಯಾವಾಗ? ಈ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ.

ಜೂನಿಯರ್​ ಎನ್​ಟಿಆರ್​, ಪ್ರಶಾಂತ್ ನೀಲ್ ಫ್ಯಾನ್ಸ್ ಪಾಲಿಗೆ ಏ.22 ವಿಶೇಷ ದಿನ; ಸಿಕ್ತು ಅಪ್​ಡೇಟ್
Prashanth Neel, Jr NTR
ಮದನ್​ ಕುಮಾರ್​
|

Updated on: Apr 09, 2025 | 8:09 PM

Share

ಟಾಲಿವುಡ್ ನಟ ಜೂನಿಯರ್ ಎನ್​ಟಿಆರ್ (Jr NTR)​ ಅವರು ‘ದೇವರ’ ಸಿನಿಮಾದ ಬಳಿಕ ಹೊಸ ಚಿತ್ರದ ಕೆಲಸಗಳತ್ತ ಗಮನ ನೀಡಿದ್ದಾರೆ. ಕನ್ನಡದ ನಿರ್ದೇಶಕ ಪ್ರಶಾಂತ್ ನೀಲ್ (Prashanth Neel) ಜೊತೆ ಅವರು ಸಿನಿಮಾ ಮಾಡುತ್ತಿರುವುದು ಗೊತ್ತೇ ಇದೆ. ಈ ಸಿನಿಮಾ ಮೇಲೆ ಸಖತ್ ನಿರೀಕ್ಷೆ ಇದೆ. ಈಗಾಗಲೇ ಈ ಚಿತ್ರದ ಶೂಟಿಂಗ್ ಆರಂಭ ಆಗಿದೆ. ಹಾಗಿದ್ದರೂ ಕೂಡ ಜೂನಿಯರ್ ಎನ್​ಟಿಆರ್​ ಅವರು ಇನ್ನೂ ಶೂಟಿಂಗ್​ನಲ್ಲಿ ಭಾಗಿಯಾಗಿಲ್ಲ. ಅವರು ಯಾವಾಗ ಚಿತ್ರೀಕರಣದ ಸೆಟ್​ಗೆ ಬರುತ್ತಾರೆ ಎಂದು ಕೇಳುತ್ತಿದ್ದ ಅಭಿಮಾನಿಗಳಿಗೆ ಈಗ ಉತ್ತರ ಸಿಕ್ಕಿದೆ. ಶೂಟಿಂಗ್ ಬಗ್ಗೆ ನಿರ್ಮಾಣ ಸಂಸ್ಥೆಯಿಂದ ಅಪ್​ಡೇಟ್​ ನೀಡಲಾಗಿದೆ.

ಈ ವರ್ಷ ಫೆಬ್ರವರಿ ಮಧ್ಯ ಭಾಗದಲ್ಲಿ ಈ ಸಿನಿಮಾಗೆ ಪ್ರಶಾಂತ್ ನೀಲ್ ಅವರು ಶೂಟಿಂಗ್ ಆರಂಭಿಸಿದ್ದರು. ಬರೋಬ್ಬರಿ 2 ಸಾವಿರ ಮಂದಿ ಜೂನಿಯರ್​ ಆರ್ಟಿಸ್ಟ್​ಗಳ ಜೊತೆ ಚಿತ್ರೀಕರಣಕ್ಕೆ ಚಾಲನೆ ನೀಡಲಾಗಿತ್ತು. ಅದು ಮೊದಲ ಹಂತದ ಚಿತ್ರೀಕರಣ. ಅದರಲ್ಲಿ ಜೂನಿಯರ್​ ಎನ್​ಟಿಆರ್ ಭಾಗಿ ಆಗಲಿಲ್ಲ. ಈಗ ಅವರು ಚಿತ್ರೀಕರಣದಲ್ಲಿ ಭಾಗಿಯಾಗುವ ಸಮಯ ಬಂದಿದೆ. ಏಪ್ರಿಲ್ 22ರಂದು ಜೂನಿಯರ್​ ಎನ್​ಟಿಆರ್​ ಅವರು ಶೂಟಿಂಗ್​ ಸೆಟ್​ಗೆ ಬರಲಿದ್ದಾರೆ.

ಇದನ್ನೂ ಓದಿ
Image
ರಾಮ್ ಚರಣ್​ಗೆ ಪತ್ನಿ ಉಪಾಸನಾ ಕೊಡುವ ದುಬಾರಿ ಗಿಫ್ಟ್​ಗಳೇನು?
Image
ಗೆದ್ದಿದ್ದು ಕಡಿಮೆ ಸಿನಿಮಾ ಆದರೂ ರಾಮ್ ಚರಣ್ ಆಸ್ತಿ 1,300 ಕೋಟಿ ರೂಪಾಯಿ
Image
ರಾಮ್ ಚರಣ್ ಮನೆಯಲ್ಲಿ ಇದೆ ಬರೋಬ್ಬರಿ 15 ಕುದುರೆ; ಕಾರಣ ಏನು?
Image
ಪೌರಾಣಿಕ ಪಾತ್ರದಲ್ಲಿ ಮಿಂಚಲಿದ್ದಾರೆ ರಾಮ್ ಚರಣ್

ಸದ್ಯಕ್ಕೆ ಈ ಸಿನಿಮಾದ ಹೆಸರು ಏನೆಂಬುದು ಬಹಿರಂಗ ಆಗಿಲ್ಲ. ಪ್ರಶಾಂತ್ ನೀಲ್ ಹಾಗೂ ಜೂನಿಯರ್ ಎನ್​ಟಿಆರ್​ ಕಾಂಬಿನೇಷನ್​ನ ಸಿನಿಮಾ ಆದ್ದರಿಂದ #NTRNeel ಎಂದು ತಾತ್ಕಾಲಿಕವಾಗಿ ಕರೆಯಲಾಗುತ್ತಿದೆ. ಈ ಸಿನಿಮಾದಲ್ಲಿ ಜೂನಿಯರ್ ಎನ್​ಟಿಆರ್​ ಅವರ ಲುಕ್ ಹೇಗಿದೆ ಎಂಬುದನ್ನು ತಿಳಿಯಲು ಫ್ಯಾನ್ಸ್ ಉತ್ಸುಕರಾಗಿದ್ದಾರೆ. ಅದ್ದೂರಿ ಬಜೆಟ್​ನಲ್ಲಿ ಈ ಸಿನಿಮಾ ಮೂಡಿಬರುತ್ತಿದೆ.

‘ಪುಷ್ಪ 2’ ಸಿನಿಮಾ ನಿರ್ಮಾಣ ಮಾಡಿದ್ದ ‘ಮೈತ್ರೀ ಮೂವೀ ಮೇಕರ್ಸ್​’ ಸಂಸ್ಥೆಯೇ ಈಗ ಜೂನಿಯರ್​ ಎನ್​ಟಿಆರ್​-ಪ್ರಶಾಂತ್ ನೀಲ್ ಕಾಂಬಿನೇಷನ್​ನ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ. ‘ಕೆಜಿಎಫ್ 1’, ‘ಕೆಜಿಎಫ್​ 2’, ‘ಸಲಾರ್’ ಸಿನಿಮಾಗಳ ಮೂಲಕ ಹೆಸರು ಮಾಡಿರುವ ಪ್ರಶಾಂತ್ ನೀಲ್ ಅವರಿಗೆ ಟಾಲಿವುಡ್​ನಲ್ಲಿ ಬೇಡಿಕೆ ಹೆಚ್ಚಾಗಿದೆ.

ಇದನ್ನೂ ಓದಿ: ಜೂ ಎನ್​ಟಿಆರ್​ಗಾಗಿ ತೆಲುಗು ಕಲಿತ ಜಪಾನಿ ಮಹಿಳೆ, ವಿಡಿಯೋ ಹಂಚಿಕೊಂಡ ನಟ

ಈಗ ಟಾಲಿವುಡ್​ ಹೀರೋಗಳೆಲ್ಲ ಜಾಗತಿಕ ಮಟ್ಟದಲ್ಲಿ ಸದ್ದು ಮಾಡುತ್ತಿದ್ದಾರೆ. ರಾಮ್ ಚರಣ್ ಅವರು ‘ಪೆದ್ದಿ’ ಸಿನಿಮಾದಿಂದ ಧೂಳೆಬ್ಬಿಸಲು ಸಜ್ಜಾಗಿದ್ದಾರೆ. ಅತ್ತ, ಅಲ್ಲು ಅರ್ಜುನ್ ಅವರು ಅಟ್ಲಿ ಜೊತೆ ಕೈಜೋಡಿಸಿ ವಿದೇಶದಲ್ಲಿ ಕೆಲಸ ಆರಂಭಿಸಿದ್ದಾರೆ. ಹಾಗಾಗಿ ಪೈಪೋಟಿ ಜೋರಾಗಿದೆ. ಆ ಪೈಪೋಟಿಗೆ ತಕ್ಕಂತೆ ಜೂನಿಯರ್​ ಎನ್​ಟಿಆರ್​-ಪ್ರಶಾಂತ್ ನೀಲ್ ಕೂಡ ಸಿನಿಮಾ ಮಾಡುತ್ತಾರೆ ಎಂಬ ನಿರೀಕ್ಷೆಯಲ್ಲಿ ಅವರ ಅಭಿಮಾನಿಗಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ನಾಗರ ಪಂಚಮಿಯ ಆಚರಣೆಯ ಮಹತ್ವ ಹಾಗೂ ಅದರ ಫಲ ತಿಳಿಯಿರಿ
ನಾಗರ ಪಂಚಮಿಯ ಆಚರಣೆಯ ಮಹತ್ವ ಹಾಗೂ ಅದರ ಫಲ ತಿಳಿಯಿರಿ
ನಾಗರ ಪಂಚಮಿ ಹಬ್ಬದಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ ತಿಳಿಯಿರಿ
ನಾಗರ ಪಂಚಮಿ ಹಬ್ಬದಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ ತಿಳಿಯಿರಿ
ಬ್ಯಾಡ್ಮಿಂಟನ್ ಆಡುವಾಗಲೇ ಹೃದಯಾಘಾತದಿಂದ 25 ವರ್ಷದ ಯುವಕ ಸಾವು
ಬ್ಯಾಡ್ಮಿಂಟನ್ ಆಡುವಾಗಲೇ ಹೃದಯಾಘಾತದಿಂದ 25 ವರ್ಷದ ಯುವಕ ಸಾವು
ನನ್ನ ಹೋರಾಟದಲ್ಲಿ ಕೈಜೋಡಿಸಿದವರಿಗೆಲ್ಲ ಧನ್ಯವಾದಗಳು: ರಮ್ಯಾ, ನಟಿ
ನನ್ನ ಹೋರಾಟದಲ್ಲಿ ಕೈಜೋಡಿಸಿದವರಿಗೆಲ್ಲ ಧನ್ಯವಾದಗಳು: ರಮ್ಯಾ, ನಟಿ
ನಿಮ್ಮ ದೇಶದ ಸಚಿವರ ಮೇಲೆ ನಂಬಿಕೆಯಿಲ್ವಾ?; ಸದನದಲ್ಲಿ ಗುಡುಗಿದ ಅಮಿತ್ ಶಾ
ನಿಮ್ಮ ದೇಶದ ಸಚಿವರ ಮೇಲೆ ನಂಬಿಕೆಯಿಲ್ವಾ?; ಸದನದಲ್ಲಿ ಗುಡುಗಿದ ಅಮಿತ್ ಶಾ
ಮಗನ ಮದುವೆ ಜೊತೆಗೆ 11 ಜೋಡಿಗಳಿಗೆ ವಿವಾಹ ಮಾಡಿಸಿದ ತಂದೆ
ಮಗನ ಮದುವೆ ಜೊತೆಗೆ 11 ಜೋಡಿಗಳಿಗೆ ವಿವಾಹ ಮಾಡಿಸಿದ ತಂದೆ
ಯಶ್, ಸುದೀಪ್ ಪತ್ನಿ-ಮಕ್ಕಳ ಬಗ್ಗೆಯೂ ಕೆಟ್ಟ ಕಮೆಂಟ್; ರಮ್ಯಾ ಬೇಸರ
ಯಶ್, ಸುದೀಪ್ ಪತ್ನಿ-ಮಕ್ಕಳ ಬಗ್ಗೆಯೂ ಕೆಟ್ಟ ಕಮೆಂಟ್; ರಮ್ಯಾ ಬೇಸರ
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇದು ಮುಖ್ಯ ಕಾರಣ
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇದು ಮುಖ್ಯ ಕಾರಣ
ಗೊಬ್ಬರಕ್ಕಾಗಿ ಪರದಾಡುತ್ತಿರುವ ಅನ್ನದಾತರು, ಅಂಗಡಿಗಳ ಮುಂದೆ ಉದ್ದುದ್ದ ಸಾಲ
ಗೊಬ್ಬರಕ್ಕಾಗಿ ಪರದಾಡುತ್ತಿರುವ ಅನ್ನದಾತರು, ಅಂಗಡಿಗಳ ಮುಂದೆ ಉದ್ದುದ್ದ ಸಾಲ