AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ಯಾರಿಸ್​ನಲ್ಲಿ ಜ್ಯೂ.ಎನ್​ಟಿಆರ್​; ಕುಟುಂಬ ಸಮೇತ ಫ್ರಾನ್ಸ್​ಗೆ ತೆರಳಿದ ಸ್ಟಾರ್​ ನಟ

ಜ್ಯೂ.ಎನ್​ಟಿಆರ್​ ‘ಆರ್​ಆರ್​ಆರ್​’ ಸಿನಿಮಾದಲ್ಲಿ ನಟಿಸಿದ್ದಾರೆ.  ದೊಡ್ಡ ತಾರಾ ಬಳಗವೇ ಸಿನಿಮಾದಲ್ಲಿದೆ. ಜ್ಯೂ.ಎನ್​ಟಿಆರ್​ ಕೂಡ ಪ್ರಚಾರ ಕಾರ್ಯದಲ್ಲಿ ತೊಡಗಿಕೊಳ್ಳಲಿದ್ದಾರೆ.

ಪ್ಯಾರಿಸ್​ನಲ್ಲಿ ಜ್ಯೂ.ಎನ್​ಟಿಆರ್​; ಕುಟುಂಬ ಸಮೇತ ಫ್ರಾನ್ಸ್​ಗೆ ತೆರಳಿದ ಸ್ಟಾರ್​ ನಟ
ಜ್ಯೂ.ಎನ್​ಟಿಆರ್​
TV9 Web
| Edited By: |

Updated on:Nov 21, 2021 | 7:41 PM

Share

ಜ್ಯೂ. ಎನ್​ಟಿಆರ್​ ‘ಆರ್​ಆರ್​ಆರ್’ ಸಿನಿಮಾ ಕೆಲಸಗಳನ್ನು ಪೂರ್ಣಗೊಳಿಸಿ ಕೊಂಚ ರಿಲೀಫ್​ ಆಗಿದ್ದಾರೆ. ಇತ್ತೀಚೆಗೆ ಅವರು ಶಸ್ತ್ರ ಚಿಕಿತ್ಸೆಗೂ ಒಳಗಾಗಿದ್ದರು. ಶೀಘ್ರವೇ ಅವರು ‘ಆರ್​ಆರ್​ಆರ್​’ ಸಿನಿಮಾದ ಪ್ರಚಾರ ಕಾರ್ಯದಲ್ಲಿ ತೊಡಗಿಕೊಳ್ಳಲಿದ್ದಾರೆ. ಅದಕ್ಕೂ ಮೊದಲು ಜ್ಯೂ.ಎನ್​ಟಿಆರ್​ ಕುಟುಂಬ ಸಮೇತ ಫ್ರಾನ್ಸ್​ನ ಪ್ಯಾರಿಸ್​ಗೆ​ ತೆರಳಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಚಿತ್ರಗಳನ್ನು ನೋಡಿ ಅಭಿಮಾನಿಗಳು ಸಖತ್​ ಖುಷಿಯಾಗಿದ್ದಾರೆ.

ಜ್ಯೂ.ಎನ್​ಟಿಆರ್​ ‘ಆರ್​ಆರ್​ಆರ್​’ ಸಿನಿಮಾದಲ್ಲಿ ನಟಿಸಿದ್ದಾರೆ.  ದೊಡ್ಡ ತಾರಾ ಬಳಗವೇ ಸಿನಿಮಾದಲ್ಲಿದೆ. ಜ್ಯೂ.ಎನ್​ಟಿಆರ್​ ಕೂಡ ಪ್ರಚಾರ ಕಾರ್ಯದಲ್ಲಿ ತೊಡಗಿಕೊಳ್ಳಲಿದ್ದಾರೆ. ಈ ಕಾರಣಕ್ಕೆ ಉಳಿದ ಎಲ್ಲಾ ಪ್ರಾಜೆಕ್ಟ್​ಗಳ ಕೆಲಸವನ್ನು ಮುಂದೂಡುವಂತೆ ಅವರು ಸೂಚಿಸಿದ್ದಾರೆ. ಪ್ರಚಾರದ ಮಧ್ಯೆಯೂ ಅವರು ಪ್ಯಾರಿಸ್​ಗೆ ತೆರಳಿದ್ದಾರೆ. ಪತ್ನಿ ನಂದಮೂರಿ ಪ್ರಣತಿ, ಮಕ್ಕಳಾದ ಅಭಯ್​ ರಾಮ್​ ಮತ್ತ್ತು ಭಾರ್ಗವ್​ ರಾಮ್​ ಕೂಡ ಟ್ರಿಪ್​ಗೆ ತೆರಳಿದ್ದಾರೆ.

ಕೊವಿಡ್ ಕಾಣಿಸಿಕೊಂಡ ನಂತರ ಜ್ಯೂ.ಎನ್​ಟಿಆರ್​ ಅವರು ಕುಟುಂಬದ ಜತೆ ಎಲ್ಲಿಯೂ ಹೊರಗೆ ತೆರಳಿರಲಿಲ್ಲ. ಕೊವಿಡ್​ ಎರಡನೇ ಅಲೆ ಈಗ ಕಡಿಮೆ ಆಗಿದೆ. ಈ ಕಾರಣಕ್ಕೆ ಅವರು ಕುಟುಂಬದ ಜತೆ ಪ್ಯಾರಿಸ್​ ತೆರಳಿದ್ದಾರೆ. ಎಸ್​.ಎಸ್​. ರಾಜಮೌಳಿ ಅವರು ಶೀಘ್ರವೇ ಆರ್​ಆರ್​ಆರ್​ ಪ್ರಚಾರ ಕಾರ್ಯ ಆರಂಭಿಸಲಿದ್ದಾರೆ.

ಜ್ಯೂ.ಎನ್​ಟಿಆರ್​ ಅವರು ಜಾಹೀರಾತು ಶೂಟಿಂಗ್​ಗಾಗಿ ಮುಂಬೈಗೆ ತೆರಳಬೇಕಿತ್ತು. ಆದರೆ, ಆ ಕೆಲಸವನ್ನು ಸದ್ಯಕ್ಕೆ ಹೋಲ್ಡ್​ನಲ್ಲಿ ಇರಿಸಿದ್ದಾರೆ. ಇನ್ನು, ಕೊರಟಾಲ ಶಿವ ಜತೆ ಜ್ಯೂ.ಎನ್​ಟಿಆರ್​ ಸಿನಿಮಾ ಮಾಡುತ್ತಿದ್ದಾರೆ. ಇದೇ ತಿಂಗಳಲ್ಲಿ ಈ ಸಿನಿಮಾ ಮುಹೂರ್ತ ನಡೆಯಬೇಕಿತ್ತು. ಅದನ್ನು ಕೂಡ ಜ್ಯೂ.ಎನ್​ಟಿಆರ್​ 2021ಕ್ಕೆ ಪೋಸ್ಟ್​ಪೋನ್​ ಮಾಡಿದ್ದಾರೆ.

ನೈಜ ಘಟನೆ ಆಧರಿಸಿ ‘ಆರ್​ಆರ್​ಆರ್​’ ಸಿನಿಮಾ ತಯಾರಾಗಿದೆ. ಖ್ಯಾತ ಸಂಗೀತ ನಿರ್ದೇಶಕ ಎಂಎಂ ಕೀರವಾಣಿ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ಈ ಹಿಂದೆ ‘ದೋಸ್ತಿ..’ ಹಾಡು ಬಿಡುಗಡೆ ಆಗಿತ್ತು. ಇತ್ತೀಚೆಗೆ ರಿಲೀಸ್​ ಆದ  ಎರಡನೇ ಗೀತೆ ‘ಹಳ್ಳಿ ನಾಟು..’ ಎಲ್ಲೆಲ್ಲೂ ರಾರಾಜಿಸುತ್ತಿದೆ. ಈ ಹಾಡಿನಿಂದಾಗಿ ಚಿತ್ರದ ಮೇಲಿನ ಕ್ರೇಜ್​ ಹೆಚ್ಚುವಂತಾಗಿದೆ. 2022ರ ಜ.7ರಂದು ಈ ಸಿನಿಮಾ ಅದ್ದೂರಿಯಾಗಿ ವಿಶ್ವಾದ್ಯಂತ ಬಿಡುಗಡೆ ಆಗಲಿದೆ. ಆ ದಿನಕ್ಕಾಗಿ ಸಿನಿಪ್ರಿಯರು ಕಾದು ಕುಳಿತಿದ್ದಾರೆ.

ಇದನ್ನೂ ಓದಿ: ರಾಜಕಾರಣಿಗಳಿಂದ ಮಹಿಳೆಯರಿಗೆ ಅವಮಾನ; ಜ್ಯೂ. ಎನ್​ಟಿಆರ್​ ನೀಡಿದ ಎಚ್ಚರಿಕೆ ಸಂದೇಶದ ವಿಡಿಯೋ ಇಲ್ಲಿದೆ

Published On - 7:15 pm, Sun, 21 November 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ