ಜ್ಯೂ.ಎನ್​ಟಿಆರ್​ ಜತೆ ಕಾಣಿಸಿಕೊಂಡ ಪ್ರಶಾಂತ್​ ನೀಲ್​; ಇದಕ್ಕಿದೆ ಮಹತ್ವದ ಕಾರಣ

ಪ್ರಶಾಂತ್ ನೀಲ್ ಹಾಗೂ ಲಿಖಿತಾ ಮತ್ತು ಜ್ಯೂ.ಎನ್​ಟಿಆರ್ ಹಾಗೂ ಲಕ್ಷ್ಮೀ ಪ್ರಣತಿ ದಂಪತಿಗಳು ಒಂದೇ ಫ್ರೇಮ್​ನಲ್ಲಿದ್ದಾರೆ. ಅಚ್ಚರಿ ಎಂದರೆ ಈ ಎರಡೂ ಜೋಡಿ ಮದುವೆ ಆಗಿದ್ದು ಮೇ 5ರಂದು. ಹೀಗಾಗಿ, ಇವರು ಒಟ್ಟಾಗಿ ವಿವಾಹ ವಾರ್ಷಿಕೋತ್ಸವ ಆಚರಿಸಿದ್ದಾರೆ.

ಜ್ಯೂ.ಎನ್​ಟಿಆರ್​ ಜತೆ ಕಾಣಿಸಿಕೊಂಡ ಪ್ರಶಾಂತ್​ ನೀಲ್​; ಇದಕ್ಕಿದೆ ಮಹತ್ವದ ಕಾರಣ
ಜ್ಯೂ.ಎನ್​ಟಿಆರ್​ ಜತೆ ಕಾಣಿಸಿಕೊಂಡ ಪ್ರಶಾಂತ್​ ನೀಲ್
Follow us
| Updated By: ರಾಜೇಶ್ ದುಗ್ಗುಮನೆ

Updated on: May 06, 2022 | 3:13 PM

ಜ್ಯೂ.ಎನ್​ಟಿಆರ್ (Jr.NTR)​ ಹಾಗೂ ಪ್ರಶಾಂತ್​ ನೀಲ್ (Prashant Neel)​ ಇಬ್ಬರೂ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಪ್ರಶಾಂತ್ ನೀಲ್ ನಿರ್ದೇಶನದ ‘ಕೆಜಿಎಫ್ 2’ ಸಾವಿರಾರು ಕೋಟಿ ರೂಪಾಯಿ ಬಾಚಿದೆ. ಜ್ಯೂ.ಎನ್​ಟಿಆರ್ ನಟನೆಯ ‘ಆರ್​ಆರ್​ಆರ್’ ಸಿನಿಮಾ (RRR Movie) ಕೂಡ ಸಾವಿರ ಕೋಟಿ ರೂಪಾಯಿ ಕ್ಲಬ್ ಸೇರಿದೆ. ಇವರು ಒಟ್ಟಾಗಿ ಕೆಲಸ ಮಾಡಲಿರುವ ವಿಚಾರ ಬಹುತೇಕರಿಗೆ ಗೊತ್ತಿದೆ. ಹೀಗಿರುವಾಗಲೇ ಇಬ್ಬರೂ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ. ಅವರ ಜತೆ ಅವರ ಪತ್ನಿಯರು ಕೂಡ ಇದ್ದಾರೆ. ಇದಕ್ಕೊಂದು ಮಹತ್ವದ ಕಾರಣವಿದೆ. ಅಷ್ಟಕ್ಕೂ ಏನದು? ಆ ಪ್ರಶ್ನೆಗೆ ಉತ್ತರ ವಿವಾಹ ವಾರ್ಷಿಕೋತ್ಸವ.

ಪ್ರಶಾಂತ್ ನೀಲ್ ಹಾಗೂ ಲಿಖಿತಾ ಮತ್ತು ಜ್ಯೂ.ಎನ್​ಟಿಆರ್ ಹಾಗೂ ಲಕ್ಷ್ಮೀ ಪ್ರಣತಿ ದಂಪತಿಗಳು ಒಂದೇ ಫ್ರೇಮ್​ನಲ್ಲಿದ್ದಾರೆ. ಅಚ್ಚರಿ ಎಂದರೆ ಈ ಎರಡೂ ಜೋಡಿ ಮದುವೆ ಆಗಿದ್ದು ಮೇ 5ರಂದು. ಹೀಗಾಗಿ, ಇವರು ಒಟ್ಟಾಗಿ ವಿವಾಹ ವಾರ್ಷಿಕೋತ್ಸವ ಆಚರಿಸಿದ್ದಾರೆ. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್​ ಆಗುತ್ತಿದೆ.

ಈ ಭೇಟಿಯ ಹಿಂದೆ ಸಿನಿಮಾ ಉದ್ದೇಶ ಕೂಡ ಇದೆ ಎಂಬುದನ್ನು ಫ್ಯಾನ್ಸ್​ಗೆ ಊಹಿಸಲು ಹೆಚ್ಚು ಸಮಯ ಹಿಡಿದಿಲ್ಲ. ಜ್ಯೂ. ಎನ್​ಟಿಆರ್​ 31ನೇ ಚಿತ್ರಕ್ಕೆ ಪ್ರಶಾಂತ್ ನೀಲ್ ನಿರ್ದೇಶನ ಮಾಡಿಲಿದ್ದಾರೆ. ಈ ಸಿನಿಮಾ ಇನ್ನು ಆರಂಭದ ಹಂತದಲ್ಲಿದೆ. ಭೇಟಿ ಸಂದರ್ಭದಲ್ಲಿ ಈ ಸಿನಿಮಾ ಬಗ್ಗೆ ಚರ್ಚೆ ನಡೆದಿದೆ ಎಂದು ಹೇಳಲಾಗುತ್ತಿದೆ. ಈ ಫೋಟೋವನ್ನು ಹಂಚಿಕೊಂಡಿರುವ ಜ್ಯೂ.ಎನ್​ಟಿಆರ್​ ‘ಹೊಸ ಆರಂಭ’ ಎಂಬ ಹ್ಯಾಶ್​ಟ್ಯಾಗ್​ ನೀಡಿದ್ದಾರೆ. ಇದು ಸಾಕಷ್ಟು ಕುತೂಹಲ ಮೂಡಿಸಿದೆ.

ಪ್ರಶಾಂತ್ ನೀಲ್, ಲಿಖಿತಾ, ಜ್ಯೂ.ಎನ್​ಟಿಆರ್ ಹಾಗೂ ಲಕ್ಷ್ಮೀ ಪ್ರಣತಿ ಸೋಫಾ ಮೇಲೆ ಕೂತಿದ್ದಾರೆ. ಪ್ರಶಾಂತ್ ನೀಲ್ ಹೆಗಲ ಮೇಲೆ ಲಿಖಿತಾ ಕೈ ಹಾಕಿದ್ದಾರೆ. ಲಕ್ಷ್ಮೀ ಅವರನ್ನು ಜ್ಯೂ.ಎನ್​ಟಿಆರ್​ ತಬ್ಬಿದ್ದಾರೆ. ಈ ದಂಪತಿ ಒಟ್ಟಾಗಿ ಪಾರ್ಟಿ ಕೂಡ ಮಾಡಿದ್ದಾರೆ.

ಪ್ರಶಾಂತ್ ನೀಲ್ ಹಾಗೂ ಜ್ಯೂ.ಎನ್​ಟಿಆರ್​ ಸಿನಿಮಾ 2023ರಲ್ಲಿ ಸೆಟ್ಟೇರಲಿದೆ. ‘ನಾನು ಈ ಸಿನಿಮಾ ಬಗ್ಗೆ ತುಂಬಾ ಉತ್ಸುಕನಾಗಿದ್ದೇನೆ. ಆ ಚಿತ್ರದ ಬಗ್ಗೆ ನನ್ನನ್ನು ಕೇಳಬೇಡಿ. ಸಿನಿಮಾ ಸೆಟ್ಟೇರಲು ಇನ್ನೂ ಸಾಕಷ್ಟು ಸಮಯವಿದೆ.  ನಾನು ಕಳೆದ 15 ರಿಂದ 20 ವರ್ಷಗಳಿಂದ ಜ್ಯೂ. ಎನ್‌ಟಿಆರ್ ಅವರ ಅಭಿಮಾನಿಯಾಗಿದ್ದೇನೆ. ನಾವಿಬ್ಬರೂ ಸ್ಕ್ರಿಪ್ಟ್ ಕೆಲಸವನ್ನು ಪ್ರಾರಂಭಿಸುವ ಮೊದಲು 10 ರಿಂದ 15 ಬಾರಿ ಆಕಸ್ಮಿಕವಾಗಿ ಭೇಟಿಯಾಗಿದ್ದೇವೆ. ನಾನು ಅವರನ್ನು ಹೆಚ್ಚು ಅರ್ಥಮಾಡಿಕೊಳ್ಳಲು ಬಯಸುತ್ತೇನೆ’ ಎಂದು ಪಿಂಕ್​ವಿಲ್ಲಾಗೆ ಪ್ರಶಾಂತ್​ ನೀಲ್ ಈ ಮೊದಲು ನೀಡಿದ ಸಂದರ್ಶನದಲ್ಲಿ ಹೇಳಿದ್ದರು.

ಇತರೆ ಮನರಂಜನೆಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ. 

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಬರೋಬ್ಬರಿ 124 ಮೀಟರ್ ಸಿಕ್ಸ್ ಸಿಡಿಸಿದ ಶಕ್ಕೆರೆ ಪ್ಯಾರಿಸ್
ಬರೋಬ್ಬರಿ 124 ಮೀಟರ್ ಸಿಕ್ಸ್ ಸಿಡಿಸಿದ ಶಕ್ಕೆರೆ ಪ್ಯಾರಿಸ್