AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜ್ಯೂ.ಎನ್​ಟಿಆರ್​ ಜತೆ ಕಾಣಿಸಿಕೊಂಡ ಪ್ರಶಾಂತ್​ ನೀಲ್​; ಇದಕ್ಕಿದೆ ಮಹತ್ವದ ಕಾರಣ

ಪ್ರಶಾಂತ್ ನೀಲ್ ಹಾಗೂ ಲಿಖಿತಾ ಮತ್ತು ಜ್ಯೂ.ಎನ್​ಟಿಆರ್ ಹಾಗೂ ಲಕ್ಷ್ಮೀ ಪ್ರಣತಿ ದಂಪತಿಗಳು ಒಂದೇ ಫ್ರೇಮ್​ನಲ್ಲಿದ್ದಾರೆ. ಅಚ್ಚರಿ ಎಂದರೆ ಈ ಎರಡೂ ಜೋಡಿ ಮದುವೆ ಆಗಿದ್ದು ಮೇ 5ರಂದು. ಹೀಗಾಗಿ, ಇವರು ಒಟ್ಟಾಗಿ ವಿವಾಹ ವಾರ್ಷಿಕೋತ್ಸವ ಆಚರಿಸಿದ್ದಾರೆ.

ಜ್ಯೂ.ಎನ್​ಟಿಆರ್​ ಜತೆ ಕಾಣಿಸಿಕೊಂಡ ಪ್ರಶಾಂತ್​ ನೀಲ್​; ಇದಕ್ಕಿದೆ ಮಹತ್ವದ ಕಾರಣ
ಜ್ಯೂ.ಎನ್​ಟಿಆರ್​ ಜತೆ ಕಾಣಿಸಿಕೊಂಡ ಪ್ರಶಾಂತ್​ ನೀಲ್
TV9 Web
| Edited By: |

Updated on: May 06, 2022 | 3:13 PM

Share

ಜ್ಯೂ.ಎನ್​ಟಿಆರ್ (Jr.NTR)​ ಹಾಗೂ ಪ್ರಶಾಂತ್​ ನೀಲ್ (Prashant Neel)​ ಇಬ್ಬರೂ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಪ್ರಶಾಂತ್ ನೀಲ್ ನಿರ್ದೇಶನದ ‘ಕೆಜಿಎಫ್ 2’ ಸಾವಿರಾರು ಕೋಟಿ ರೂಪಾಯಿ ಬಾಚಿದೆ. ಜ್ಯೂ.ಎನ್​ಟಿಆರ್ ನಟನೆಯ ‘ಆರ್​ಆರ್​ಆರ್’ ಸಿನಿಮಾ (RRR Movie) ಕೂಡ ಸಾವಿರ ಕೋಟಿ ರೂಪಾಯಿ ಕ್ಲಬ್ ಸೇರಿದೆ. ಇವರು ಒಟ್ಟಾಗಿ ಕೆಲಸ ಮಾಡಲಿರುವ ವಿಚಾರ ಬಹುತೇಕರಿಗೆ ಗೊತ್ತಿದೆ. ಹೀಗಿರುವಾಗಲೇ ಇಬ್ಬರೂ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ. ಅವರ ಜತೆ ಅವರ ಪತ್ನಿಯರು ಕೂಡ ಇದ್ದಾರೆ. ಇದಕ್ಕೊಂದು ಮಹತ್ವದ ಕಾರಣವಿದೆ. ಅಷ್ಟಕ್ಕೂ ಏನದು? ಆ ಪ್ರಶ್ನೆಗೆ ಉತ್ತರ ವಿವಾಹ ವಾರ್ಷಿಕೋತ್ಸವ.

ಪ್ರಶಾಂತ್ ನೀಲ್ ಹಾಗೂ ಲಿಖಿತಾ ಮತ್ತು ಜ್ಯೂ.ಎನ್​ಟಿಆರ್ ಹಾಗೂ ಲಕ್ಷ್ಮೀ ಪ್ರಣತಿ ದಂಪತಿಗಳು ಒಂದೇ ಫ್ರೇಮ್​ನಲ್ಲಿದ್ದಾರೆ. ಅಚ್ಚರಿ ಎಂದರೆ ಈ ಎರಡೂ ಜೋಡಿ ಮದುವೆ ಆಗಿದ್ದು ಮೇ 5ರಂದು. ಹೀಗಾಗಿ, ಇವರು ಒಟ್ಟಾಗಿ ವಿವಾಹ ವಾರ್ಷಿಕೋತ್ಸವ ಆಚರಿಸಿದ್ದಾರೆ. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್​ ಆಗುತ್ತಿದೆ.

ಈ ಭೇಟಿಯ ಹಿಂದೆ ಸಿನಿಮಾ ಉದ್ದೇಶ ಕೂಡ ಇದೆ ಎಂಬುದನ್ನು ಫ್ಯಾನ್ಸ್​ಗೆ ಊಹಿಸಲು ಹೆಚ್ಚು ಸಮಯ ಹಿಡಿದಿಲ್ಲ. ಜ್ಯೂ. ಎನ್​ಟಿಆರ್​ 31ನೇ ಚಿತ್ರಕ್ಕೆ ಪ್ರಶಾಂತ್ ನೀಲ್ ನಿರ್ದೇಶನ ಮಾಡಿಲಿದ್ದಾರೆ. ಈ ಸಿನಿಮಾ ಇನ್ನು ಆರಂಭದ ಹಂತದಲ್ಲಿದೆ. ಭೇಟಿ ಸಂದರ್ಭದಲ್ಲಿ ಈ ಸಿನಿಮಾ ಬಗ್ಗೆ ಚರ್ಚೆ ನಡೆದಿದೆ ಎಂದು ಹೇಳಲಾಗುತ್ತಿದೆ. ಈ ಫೋಟೋವನ್ನು ಹಂಚಿಕೊಂಡಿರುವ ಜ್ಯೂ.ಎನ್​ಟಿಆರ್​ ‘ಹೊಸ ಆರಂಭ’ ಎಂಬ ಹ್ಯಾಶ್​ಟ್ಯಾಗ್​ ನೀಡಿದ್ದಾರೆ. ಇದು ಸಾಕಷ್ಟು ಕುತೂಹಲ ಮೂಡಿಸಿದೆ.

ಪ್ರಶಾಂತ್ ನೀಲ್, ಲಿಖಿತಾ, ಜ್ಯೂ.ಎನ್​ಟಿಆರ್ ಹಾಗೂ ಲಕ್ಷ್ಮೀ ಪ್ರಣತಿ ಸೋಫಾ ಮೇಲೆ ಕೂತಿದ್ದಾರೆ. ಪ್ರಶಾಂತ್ ನೀಲ್ ಹೆಗಲ ಮೇಲೆ ಲಿಖಿತಾ ಕೈ ಹಾಕಿದ್ದಾರೆ. ಲಕ್ಷ್ಮೀ ಅವರನ್ನು ಜ್ಯೂ.ಎನ್​ಟಿಆರ್​ ತಬ್ಬಿದ್ದಾರೆ. ಈ ದಂಪತಿ ಒಟ್ಟಾಗಿ ಪಾರ್ಟಿ ಕೂಡ ಮಾಡಿದ್ದಾರೆ.

ಪ್ರಶಾಂತ್ ನೀಲ್ ಹಾಗೂ ಜ್ಯೂ.ಎನ್​ಟಿಆರ್​ ಸಿನಿಮಾ 2023ರಲ್ಲಿ ಸೆಟ್ಟೇರಲಿದೆ. ‘ನಾನು ಈ ಸಿನಿಮಾ ಬಗ್ಗೆ ತುಂಬಾ ಉತ್ಸುಕನಾಗಿದ್ದೇನೆ. ಆ ಚಿತ್ರದ ಬಗ್ಗೆ ನನ್ನನ್ನು ಕೇಳಬೇಡಿ. ಸಿನಿಮಾ ಸೆಟ್ಟೇರಲು ಇನ್ನೂ ಸಾಕಷ್ಟು ಸಮಯವಿದೆ.  ನಾನು ಕಳೆದ 15 ರಿಂದ 20 ವರ್ಷಗಳಿಂದ ಜ್ಯೂ. ಎನ್‌ಟಿಆರ್ ಅವರ ಅಭಿಮಾನಿಯಾಗಿದ್ದೇನೆ. ನಾವಿಬ್ಬರೂ ಸ್ಕ್ರಿಪ್ಟ್ ಕೆಲಸವನ್ನು ಪ್ರಾರಂಭಿಸುವ ಮೊದಲು 10 ರಿಂದ 15 ಬಾರಿ ಆಕಸ್ಮಿಕವಾಗಿ ಭೇಟಿಯಾಗಿದ್ದೇವೆ. ನಾನು ಅವರನ್ನು ಹೆಚ್ಚು ಅರ್ಥಮಾಡಿಕೊಳ್ಳಲು ಬಯಸುತ್ತೇನೆ’ ಎಂದು ಪಿಂಕ್​ವಿಲ್ಲಾಗೆ ಪ್ರಶಾಂತ್​ ನೀಲ್ ಈ ಮೊದಲು ನೀಡಿದ ಸಂದರ್ಶನದಲ್ಲಿ ಹೇಳಿದ್ದರು.

ಇತರೆ ಮನರಂಜನೆಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ. 

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​