AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ಜೂ ಎನ್​ಟಿಆರ್ ಸಿಎಂ ಆಗಲಿದ್ದಾರೆ: ಶಾಸಕ ಹೇಳಿಕೆ

Jr NTR movie: ನಟ ಜೂ ಎನ್​​ಟಿಆರ್ ಹೆಸರು ಸಾಮಾಜಿಕ ಜಾಲತಾಣಗಳಲ್ಲಿ ಜೋರಾಗಿ ಕೇಳಿ ಬರುತ್ತಿದ್ದು, ವಿಜಯ್ ರೀತಿಯೇ ಜೂ ಎನ್​ಟಿಆರ್ ಸಹ ಸಿಎಂ ಆಗಲಿದ್ದಾರೆ ಎಂದು ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಸಂದೇಶಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಇದರ ನಡುವೆ ಶಾಸಕರೊಬ್ಬರು ಜೂ ಎನ್​​ಟಿಆರ್ ಬಗ್ಗೆ ಮಾತನಾಡಿ, ಜೂ ಎನ್​​​​ಟಿಆರ್ ಭವಿಷ್ಯದ ಆಂಧ್ರ ಪ್ರದೇಶದ ಸಿಎಂ ಎಂದಿದ್ದಾರೆ.

ನಟ ಜೂ ಎನ್​ಟಿಆರ್ ಸಿಎಂ ಆಗಲಿದ್ದಾರೆ: ಶಾಸಕ ಹೇಳಿಕೆ
Jr Ntr
ಮಂಜುನಾಥ ಸಿ.
|

Updated on: May 19, 2026 | 10:45 PM

Share

ತಮಿಳುನಾಡಿನಲ್ಲಿ ಸ್ಟಾರ್ ನಟ ವಿಜಯ್ (Vijay) ಚುನಾವಣೆ ಗೆದ್ದು ಸಿಎಂ ಆದ ಬೆನ್ನಲ್ಲೆ, ನೆರೆಯ ಆಂಧ್ರ ಪ್ರದೇಶದಲ್ಲಿ ರಾಜಕೀಯ ಚರ್ಚೆಗಳು ಗರಿ ಗೆದರಿವೆ. ಅದರಲ್ಲೂ ನಟ ಜೂ ಎನ್​​ಟಿಆರ್ ಹೆಸರು ಸಾಮಾಜಿಕ ಜಾಲತಾಣಗಳಲ್ಲಿ ಜೋರಾಗಿ ಕೇಳಿ ಬರುತ್ತಿದ್ದು, ವಿಜಯ್ ರೀತಿಯೇ ಜೂ ಎನ್​ಟಿಆರ್ ಸಹ ಸಿಎಂ ಆಗಲಿದ್ದಾರೆ ಎಂದು ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಸಂದೇಶಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಇದರ ನಡುವೆ ಶಾಸಕರೊಬ್ಬರು ಜೂ ಎನ್​​ಟಿಆರ್ ಬಗ್ಗೆ ಮಾತನಾಡಿ, ಜೂ ಎನ್​​​​ಟಿಆರ್ ಭವಿಷ್ಯದ ಆಂಧ್ರ ಪ್ರದೇಶದ ಸಿಎಂ ಎಂದಿದ್ದಾರೆ.

ವೈಎಸ್​​ರಾ ಪಕ್ಷದ ಮುಖಂಡ ಮತ್ತು ಎಂಎಲ್​​ಸಿ ದುವ್ವಾಡ ಶ್ರೀನಿವಾಸ್ ಇತ್ತೀಚೆಗಿನ ಸಂದರ್ಶನವೊಂದರಲ್ಲಿ ಜೂ ಎನ್​​ಟಿಆರ್ ಬಗ್ಗೆ ಮಾತನಾಡಿದ್ದು, ಜೂ ಎನ್​​ಟಿಆರ್​ ಅವರು ಭವಿಷ್ಯದಲ್ಲಿ ಆಂಧ್ರ ಪ್ರದೇಶದ ಸಿಎಂ ಆಗಲಿದ್ದಾರೆ ಎಂದಿದ್ದಾರೆ. ‘ಜೂ ಎನ್‌ಟಿಆರ್‌ಗೆ ಅಪಾರ ಜನಬೆಂಬಲ ಇದೆ. ಅವರ ಮಾತನಾಡುವ ಶೈಲಿ, ಯೋಚನಾ ಲಹರಿ, ಜನರೊಟ್ಟಿಗೆ ಬೆರೆಯುವ ರೀತಿ ಹಾಗೂ ಕುಟುಂಬ ಹಿನ್ನೆಲೆ ಗಮನಿಸಿದರೆ ಅವರು ರಾಜಕೀಯಕ್ಕೆ ಬರುವುದು ಖಾತ್ರಿ. ತೆಲುಗು ಜನರಲ್ಲಿ ಎನ್‌ಟಿಆರ್‌ ಮೇಲೆ ವಿಶೇಷ ಪ್ರೀತಿ ಇದೆ. ಭವಿಷ್ಯದಲ್ಲಿ ಅವರು ರಾಜಕೀಯಕ್ಕೆ ಬಂದರೆ ಸಿಎಂ ಆಗುತ್ತಾರೆ’ ಎಂದಿದ್ದಾರೆ.

ಜೂ ಎನ್​​ಟಿಆರ್ ಅವರಿಗೆ ರಾಜಕೀಯ ಹೊಸದಲ್ಲ. ಈ ಹಿಂದೆ ಅವರು ಆಂಧ್ರದ ಪ್ರಸ್ತುತ ಆಡಳಿತ ಪಕ್ಷ ಟಿಡಿಪಿಯ ರಾಜ್ಯ ಯುವ ಮುಖಂಡರಾಗಿ ಜವಬ್ದಾರಿ ನಿರ್ವಹಿಸಿದ್ದಾರೆ. ಅವಿಭಜಿತ ಆಂಧ್ರದ ಪರ್ಯಟನೆ ನಡೆಸಿ ರಾಜಕೀಯ ಪ್ರಚಾರ ಸಹ ಮಾಡಿದ್ದಾರೆ. ಆದರೆ ಕಳೆದೆರಡು ಚುನಾವಣೆಗಳಲ್ಲಿ ಅವರನ್ನು ಪಕ್ಷವು ಉದ್ದೇಶಪೂರ್ವಕವಾಗಿ ಮೂಲೆಗುಂಪು ಮಾಡಿದೆ. ಪ್ರಸ್ತುತ ಅವರು ಮತ್ತು ಅವರ ಸಹೋದರ ಕಲ್ಯಾಣ್ ರಾಮ್, ಟಿಡಿಪಿ ಪಕ್ಷದಿಂದ ದೂರವೇ ಉಳಿದಿದ್ದಾರೆ.

ಇದನ್ನೂ ಓದಿ:‘ಪೆದ್ದಿ’ಯ ಪ್ರೀ ರಿಲೀಸ್ ಇವೆಂಟ್ ಸಿನಿಮಾದಷ್ಟೆ ಅದ್ಧೂರಿ, 150 ಕೋಟಿ ಮೌಲ್ಯದ ಸೆಟಪ್

ನಾಳೆ (ಮೇ 20) ಜೂ ಎನ್​​ಟಿಆರ್ ಹುಟ್ಟುಹಬ್ಬವಿದ್ದು, ಹಲವು ಸಾಮಾಜಿಕ ಕಾರ್ಯಗಳನ್ನು ಅವರು ತಮ್ಮ ಅಭಿಮಾನಿ ಸಂಘದ ನೆರವಿನಿಂದ ಮಾಡಲಿದ್ದು, ಆ ಮೂಲಕ ಜನರಿಗೆ ಹತ್ತಿರವಾಗುವ ಕಾರ್ಯ ಮಾಡುತ್ತಿದ್ದಾರೆ. ಭವಿಷ್ಯದಲ್ಲಿ ವಿಜಯ್ ರೀತಿಯೇ ಸ್ವಂತ ಪಕ್ಷ ಕಟ್ಟಿ ಜೂ ಎನ್​​ಟಿಆರ್ ಸಹ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಈಗಿನಿಂದಲೇ ಕೇಳಿ ಬರುತ್ತಿವೆ.

ಜೂ ಎನ್​​ಟಿಆರ್ ಪ್ರಸ್ತುತ ಪ್ರಶಾಂತ್ ನೀಲ್ ನಿರ್ದೇಶನದ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಅದಾದ ಬಳಿಕ ತ್ರಿವಿಕ್ರಮ್ ಶ್ರೀನಿವಾಸ್ ನಿರ್ದೇಶನದ ಹೊಸ ಸಿನಿಮಾನಲ್ಲಿ ನಟಿಸಲಿದ್ದಾರೆ. ಅದರ ಬಳಿಕ ಯಶ್ ರಾಜ್ ಫಿಲಮ್ಸ್​ ನಿರ್ಮಾಣದ ಹಿಂದಿ ಸಿನಿಮಾ ಒಂದರಲ್ಲಿ ಸಹ ಜೂ ಎನ್​​ಟಿಆರ್ ನಟಿಸಲಿದ್ದಾರೆ ಎನ್ನಲಾಗುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ದೇವೇಗೌಡ್ರು ನಿವಾಸಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ
ದೇವೇಗೌಡ್ರು ನಿವಾಸಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ
ಸಿಜೆಪಿ ಪ್ರತಿಭಟನೆ: ಮುಂಜಾಗ್ರತಾ ಕ್ರಮವಾಗಿ ಪೊಲೀಸರ ರಜೆ ರದ್ದು
ಸಿಜೆಪಿ ಪ್ರತಿಭಟನೆ: ಮುಂಜಾಗ್ರತಾ ಕ್ರಮವಾಗಿ ಪೊಲೀಸರ ರಜೆ ರದ್ದು
ಚಿಕ್ಕೋಡಿ, ನಿಪ್ಪಾಣಿ ತಾಲೂಕಿನ 8 ಸೇತುವೆಗಳು ಜಲಾವೃತ
ಚಿಕ್ಕೋಡಿ, ನಿಪ್ಪಾಣಿ ತಾಲೂಕಿನ 8 ಸೇತುವೆಗಳು ಜಲಾವೃತ
ಬಿಪಿಎಲ್ ಕಾರ್ಡುದಾರರಿಗೆ ಗುಡ್​ ನ್ಯೂಸ್ ನೀಡಿದ ಆಹಾರ ಸಚಿವ ಮುನಿಯಪ್ಪ
ಬಿಪಿಎಲ್ ಕಾರ್ಡುದಾರರಿಗೆ ಗುಡ್​ ನ್ಯೂಸ್ ನೀಡಿದ ಆಹಾರ ಸಚಿವ ಮುನಿಯಪ್ಪ
ಬಿಡಾಡಿ ವಾಹನಗಳ ಟೋಯಿಂಗ್: ರಸ್ತೆ ಬದಿಯಲ್ಲಿ ನಿಂತಿದ್ದ ವಾಹನಗಳು ಜಪ್ತಿ
ಬಿಡಾಡಿ ವಾಹನಗಳ ಟೋಯಿಂಗ್: ರಸ್ತೆ ಬದಿಯಲ್ಲಿ ನಿಂತಿದ್ದ ವಾಹನಗಳು ಜಪ್ತಿ
‘ಸ್ವಾರ್ಥ ಬಿಡಿ’: ಚಿತ್ರರಂಗದವರ ಬಗ್ಗೆ ಸಾಧುಕೋಕಿಲ ಬೇಸರ
‘ಸ್ವಾರ್ಥ ಬಿಡಿ’: ಚಿತ್ರರಂಗದವರ ಬಗ್ಗೆ ಸಾಧುಕೋಕಿಲ ಬೇಸರ
ಕಾಕ್ರೋಚ್ ಹೋರಾಟಗಾರರಿಗೆ ಮುಲ್ಲಾಗಳು ಬಿರಿಯಾನಿ ತಿನ್ನಿಸ್ತಾವಸ್ರೆ: ಸಿಂಹ
ಕಾಕ್ರೋಚ್ ಹೋರಾಟಗಾರರಿಗೆ ಮುಲ್ಲಾಗಳು ಬಿರಿಯಾನಿ ತಿನ್ನಿಸ್ತಾವಸ್ರೆ: ಸಿಂಹ
ಸಾರಿಗೆ ಸಚಿವರ ಕ್ಷೇತ್ರದಲ್ಲೇ ಗೋದಾಮಾಗಿ ಮಾರ್ಪಟ್ಟಿರುವ ಬಸ್​​ ನಿಲ್ದಾಣ!
ಸಾರಿಗೆ ಸಚಿವರ ಕ್ಷೇತ್ರದಲ್ಲೇ ಗೋದಾಮಾಗಿ ಮಾರ್ಪಟ್ಟಿರುವ ಬಸ್​​ ನಿಲ್ದಾಣ!
ಚಾಲಕನ ಜೀವಕ್ಕಿಂತ ಬಿಯರ್ ಬಾಟಲಿಯೇ ಮುಖ್ಯವಾಯಿತೇ?
ಚಾಲಕನ ಜೀವಕ್ಕಿಂತ ಬಿಯರ್ ಬಾಟಲಿಯೇ ಮುಖ್ಯವಾಯಿತೇ?
ನೀಟ್ ಪ್ರತಿಭಟನೆ, ಮೋದಿ ಹೇಳಿಕೆ ಬಗ್ಗೆ ಪ್ರಲ್ಹಾದ್ ಜೋಶಿ ಮಹತ್ವದ ಹೇಳಿಕೆ
ನೀಟ್ ಪ್ರತಿಭಟನೆ, ಮೋದಿ ಹೇಳಿಕೆ ಬಗ್ಗೆ ಪ್ರಲ್ಹಾದ್ ಜೋಶಿ ಮಹತ್ವದ ಹೇಳಿಕೆ