AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುನಿಸು ಮರೆತು ಚಿಕ್ಕಪ್ಪನ ಮಗನಿಗೆ ಶುಭ ಹಾರೈಸಿದ ಜೂ ಎನ್​ಟಿಆರ್

ನಂದಮೂರಿ ಬಾಲಕೃಷ್ಣ ಮತ್ತು ಜೂ ಎನ್​ಟಿಆರ್ ನಡುವೆ ಶೀಥಲ ಸಮರ ಜಾರಿಯಲ್ಲಿದೆ. ಬಾಲಯ್ಯ ಹಲವು ಬಾರಿ ಬಹಿರಂಗವಾಗಿಯೇ ಜೂ ಎನ್​ಟಿಆರ್ ವಿರುದ್ಧ ಮಾತನಾಡಿದ್ದಾರೆ. ಆದರೆ ಅದನ್ನೆಲ್ಲ ಮರೆತು ಜೂ ಎನ್​ಟಿಆರ್, ಬಾಲಯ್ಯ ಮಗ ಮೋಕ್ಷಜ್ಞರ ಮೊದಲ ಸಿನಿಮಾಕ್ಕೆ ಶುಭ ಹಾರೈಸಿದ್ದಾರೆ.

ಮುನಿಸು ಮರೆತು ಚಿಕ್ಕಪ್ಪನ ಮಗನಿಗೆ ಶುಭ ಹಾರೈಸಿದ ಜೂ ಎನ್​ಟಿಆರ್
ಮೋಕ್ಷಜ್ಞ-ಜೂ ಎನ್​ಟಿಆರ್
ಮಂಜುನಾಥ ಸಿ.
|

Updated on: Sep 06, 2024 | 6:38 PM

Share

ತೆಲುಗು ಚಿತ್ರರಂಗ ಹಾಗೂ ರಾಜಕೀಯ ರಂಗದಲ್ಲಿ ಅರ್ಧ ಶತಮಾನದಿಂದಲೂ ಹಿಡಿತ ಸಾಧಿಸಿಕೊಂಡು ಬಂದಿರುವ ನಂದಮೂರಿ ಕುಟುಂಬದಲ್ಲಿ ಇತ್ತೀಚಿನ ಕೆಲ ವರ್ಷಗಳಲ್ಲಿ ಬಿರುಕು ಮೂಡಿರುವುದು ಗುಟ್ಟೇನೂ ಅಲ್ಲ. ನಂದಮೂರಿ ಕುಟುಂಬದ ಜೂ ಎನ್​ಟಿಆರ್ ಹಾಗೂ ಅವರ ಸಹೋದರ ಕಲ್ಯಾಣ್ ರಾಮ್ ಅನ್ನು ನಂದಮೂರಿ ಬಾಲಕೃಷ್ಣ, ಚಂದ್ರಬಾಬು ನಾಯ್ಡು ಇನ್ನಿತರರು ಕುಟುಂಬದಿಂದ ದೂರವೇ ಇಟ್ಟಿದ್ದಾರೆ. ನಂದಮೂರಿ ಬಾಲಕೃಷ್ಣ ಅಂತೂ ಕೆಲವು ಸಂದರ್ಭದಲ್ಲಿ ನೇರವಾಗಿಯೇ ಜೂ ಎನ್​ಟಿಆರ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದೂ ಇದೆ. ಆದರೆ ಈ ಮುನಿಸುಗಳನ್ನು ಬದಿಗಿಟ್ಟು ಜೂ ಎನ್​ಟಿಆರ್ ಈಗ ನಂದಮೂರಿ ಬಾಲಕೃಷ್ಣ ಪುತ್ರನಿಗೆ ಶುಭಾಶಯ ತಿಳಿಸಿದ್ದಾರೆ.

ನಂದಮೂರಿ ಬಾಲಕೃಷ್ಣ ಪುತ್ರ ನಂದಮೂರಿ ಮೋಕ್ಷಾಜ್ಞ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ. ಇಂದು ಅವರ ಹುಟ್ಟುಹಬ್ಬದಂದು ಅವರ ಹೊಸ ಸಿನಿಮಾದ ಪೋಸ್ಟರ್ ಒಂದನ್ನು ಬಿಡುಗಡೆ ಮಾಡಲಾಗಿದೆ. ಆ ಮೂಲಕ ನಂದಮೂರಿ ಕುಟುಂಬದಿಂದ ಮತ್ತೊಬ್ಬ ನಟ ಚಿತ್ರರಂಗಕ್ಕೆ ಎಂಟ್ರಿ ಆಗುತ್ತಿದ್ದಾರೆ. ನಂದಮೂರಿ ಕುಟುಂಬದ ಅಭಿಮಾನಿಗಳು ಮೋಕ್ಷಾಜ್ಞ ಎಂಟ್ರಿಯನ್ನು ಸ್ವಾಗತಿಸಿದ್ದಾರೆ. ಕುಟುಂಬ ಸದಸ್ಯರು ಸಹ ಟ್ವೀಟ್ ಮಾಡಿ ಮೋಕ್ಷಾಜ್ಞಗೆ ಶುಭ ಹಾರೈಸಿದ್ದಾರೆ.

ಇದನ್ನೂ ಓದಿ:ಆಂಧ್ರ-ತೆಲಂಗಾಣ ಪ್ರವಾಹ: ಸಹಾಯ ಹಸ್ತ ಚಾಚಿದ ಜೂ ಎನ್​ಟಿಆರ್

ಜೂ ಎನ್​ಟಿಆರ್ ವಿರುದ್ಧ ಬಾಲಯ್ಯ ದ್ವೇಷ ಸಾಧಿಸಿದ್ದರೂ ಸಹ ಜೂ ಎನ್​ಟಿಆರ್ ಅದನ್ನೆಲ್ಲ ಮನಸ್ಸಿಗೆ ತೆಗೆದುಕೊಳ್ಳದೆ ತಮ್ಮ ಚಿಕ್ಕಪ್ಪನ ಮಗನ ಸಿನಿಮಾ ರಂಗದ ಎಂಟ್ರಿಗೆ ಶುಭ ಹಾರೈಸಿದ್ದಾರೆ. ಮೋಕ್ಷಾಜ್ಞಗೆ ಟ್ವೀಟ್ ಮಾಡಿರುವ ಜೂ ಎನ್​ಟಿಆರ್, ‘ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿರುವ ನಿನಗೆ ಶುಭವಾಗಲಿ. ಹೊಸ ಜೀವನವನ್ನು ಪ್ರಾರಂಭ ಮಾಡುತ್ತಿದ್ದೀಯ. ತಾತ ತಾರಕ ರಾಮಾರಾವ್ ಸೇರಿದಂತೆ ಎಲ್ಲ ಅಗೋಚರ ಶಕ್ತಿಗಳು ನಿನ್ನ ಈ ಹೊಸ ಜರ್ನಿಗೆ ಶುಭ ಹಾರೈಸಲಿ. ನಿನ್ನ ಹುಟ್ಟುಹಬ್ಬಕ್ಕೆ ಶುಭಾಶಯಗಳು’ ಎಂದಿದ್ದಾರೆ.

ಮೋಕ್ಷಾಜ್ಞರ ಹೊಸ ಸಿನಿಮಾವನ್ನು ‘ಹನುಮ್ಯಾನ್’ ಸಿನಿಮಾದ ನಿರ್ದೇಶಕ ಪ್ರಶಾಂತ್ ವರ್ಮಾ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾ ಯೂಥ್ ಕತೆಯ ಜೊತೆಗೆ ಆಕ್ಷನ್ ಅಂಶವನ್ನು ಸಹ ಒಳಗೊಂಡಿದೆಯಂತೆ. ಸಿನಿಮಾವನ್ನು ಬಾಲಕೃಷ್ಣ ಪತ್ನಿ ತೇಜಸ್ವಿನಿ ಬಾಲಕೃಷ್ಣ ನಿರ್ಮಾಣ ಮಾಡುತ್ತಿದ್ದಾರೆ. ಸಿನಿಮಾದ ನಾಯಕಿ, ಇತರೆ ತಂತ್ರಜ್ಞರ ಘೋಷಣೆ ಇನ್ನಷ್ಟೆ ಆಗಬೇಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ದಿ ರೈಸ್ ಆಫ್ ಅಶೋಕ: ಇಂಗ್ಲಿಷ್ ಟೈಟಲ್ ಇಟ್ಟಿದ್ದಕ್ಕೆ ಕಾರಣ ತಿಳಿಸಿದ ಸತೀಶ್
ದಿ ರೈಸ್ ಆಫ್ ಅಶೋಕ: ಇಂಗ್ಲಿಷ್ ಟೈಟಲ್ ಇಟ್ಟಿದ್ದಕ್ಕೆ ಕಾರಣ ತಿಳಿಸಿದ ಸತೀಶ್
ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ
ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ
ಕರ್ನಾಟಕ ವಿರುದ್ಧ 5 ವಿಕೆಟ್ ಉರುಳಿಸಿದ ಆಕಿಬ್ ನಬಿ
ಕರ್ನಾಟಕ ವಿರುದ್ಧ 5 ವಿಕೆಟ್ ಉರುಳಿಸಿದ ಆಕಿಬ್ ನಬಿ
ತಂಡಕ್ಕೆ ಚಿಯರ್ ಅಪ್ ಮಾಡಲು ಹುಬ್ಬಳ್ಳಿಗೆ ಬಂದ ಜಮ್ಮು-ಕಾಶ್ಮೀರ ಸಿಎಂ
ತಂಡಕ್ಕೆ ಚಿಯರ್ ಅಪ್ ಮಾಡಲು ಹುಬ್ಬಳ್ಳಿಗೆ ಬಂದ ಜಮ್ಮು-ಕಾಶ್ಮೀರ ಸಿಎಂ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ