AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂನಿಯರ್ ಎನ್​ಟಿಆರ್ ಧರಿಸಿದ ಈ ವಾಚ್​ನ ಬೆಲೆ ಎಷ್ಟು ಕೋಟಿ ರೂಪಾಯಿ?

ಜೂನಿಯರ್ ಎನ್​ಟಿಆರ್ ಅವರಿಗೆ ವಾಚ್​ ಬಗ್ಗೆ ಸಾಕಷ್ಟು ಕ್ರೇಜ್ ಇದೆ. ಅವರ ಬಳಿ ಸಾಕಷ್ಟು ದುಬಾರಿ ವಾಚ್​​ಗಳಿವೆ. ಇದನ್ನು ವಿಶೇಷ ಸಂದರ್ಭಗಳಲ್ಲಿ ಅವರು ಧರಿಸುತ್ತಾರೆ.

ಜೂನಿಯರ್ ಎನ್​ಟಿಆರ್ ಧರಿಸಿದ ಈ ವಾಚ್​ನ ಬೆಲೆ ಎಷ್ಟು ಕೋಟಿ ರೂಪಾಯಿ?
ಜೂನಿಯರ್ ಎನ್​ಟಿಆರ್​
ರಾಜೇಶ್ ದುಗ್ಗುಮನೆ
|

Updated on:Mar 11, 2023 | 12:26 PM

Share

ಜೂನಿಯರ್ ಎನ್​​ಟಿಆರ್ (Jr NTR) ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಸೋಶಿಯಲ್​ ಮೀಡಿಯಾದಲ್ಲಿ ಅವರನ್ನು ಕೋಟ್ಯಾಂತರ ಮಂದಿ ಹಿಂಬಾಲಿಸುತ್ತಾರೆ. ಅವರು ಸ್ಟೈಲ್ ವಿಚಾರಕ್ಕೂ ಗಮನ ಸೆಳೆಯುತ್ತಾರೆ. ಅವರು ಧರಿಸೋ ಬಟ್ಟೆ, ವಾಚ್ ಎಲ್ಲವೂ ಸಖತ್ ಸ್ಟೈಲಿಶ್ ಆಗಿರುತ್ತದೆ. ಈಗ ಅವರು ಹಾಕಿರೋ ವಾಚ್ (JR NTR Watch) ಎಲ್ಲರ ಗಮನ ಸೆಳೆಯುತ್ತಿದೆ. ಇದರ ಬೆಲೆಯನ್ನು ಕೆಲವರು ಹುಡುಕಿ ತೆಗೆದಿದ್ದಾರೆ. ವಾಚ್​ನ ಬೆಲೆ ಕೇಳಿ ಅನೇಕರು ಅಚ್ಚರಿಗೊಂಡಿದ್ದಾರೆ.

ಜೂನಿಯರ್ ಎನ್​ಟಿಆರ್ ಅವರಿಗೆ ವಾಚ್​ ಬಗ್ಗೆ ಸಾಕಷ್ಟು ಕ್ರೇಜ್ ಇದೆ. ಅವರ ಬಳಿ ಸಾಕಷ್ಟು ದುಬಾರಿ ವಾಚ್​​ಗಳಿವೆ. ಇದನ್ನು ವಿಶೇಷ ಸಂದರ್ಭಗಳಲ್ಲಿ ಅವರು ಧರಿಸುತ್ತಾರೆ. ಸದ್ಯ ಜೂನಿಯರ್ ಎನ್​ಟಿಆರ್ ಅವರು ಅಮೆರಿಕದಲ್ಲಿದ್ದಾರೆ. ಲಾಸ್ ಏಂಜಲೀಸ್​ನಲ್ಲಿ ನಡೆಯಲಿರುವ ‘ಆಸ್ಕರ್​ ಅವಾರ್ಡ್​’ ಕಾರ್ಯಕ್ರಮದಲ್ಲಿ ಭಾಗಿ ಆಗಲಿದ್ದಾರೆ. ಅದಕ್ಕೂ ಮೊದಲು ಜೂನಿಯರ್ ಎನ್​ಟಿಆರ್ ಅವರು ಹಂಚಿಕೊಂಡಿರುವ ಫೋಟೋ ವೈರಲ್ ಆಗಿದೆ. ಇದರಲ್ಲಿ ಅವರು ಧರಿಸಿರೋ ವಾಚ್​​ನ ಬೆಲೆ 2.5 ಕೋಟಿ ರೂಪಾಯಿ ಎಂದು ಹೇಳಲಾಗುತ್ತಿದೆ. ಇದನ್ನು ಕೇಳಿ ಅನೇಕರಿಗೆ ಅಚ್ಚರಿ ಆಗಿದೆ.  ಜೂನಿಯರ್ ಎನ್​ಟಿಆರ್ ಧರಿಸಿರೋದು ಪಟೆಕ್ ಫಿಲಿಪ್ ಕಂಪನಿಯ ವಾಚ್​. ಸ್ವಿಜರ್​ಲೆಂಡ್​ನಲ್ಲಿ ಈ ಕಂಪನಿಯ ಪ್ರಧಾನ ಕಚೇರಿ ಇದೆ. 1839ರಲ್ಲಿ ಕಂಪನಿ ಸ್ಥಾಪನೆ ಆಯಿತು.

View this post on Instagram

A post shared by Jr NTR (@jrntr)

ಜೂನಿಯರ್ ಎನ್​ಟಿಆರ್​ಗೆ ಕೇವಲ ವಾಚ್​ಗಳ ಮೇಲೆ ಮಾತ್ರವಲ್ಲ ಕಾರ್​ಗಳ ಬಗ್ಗೆಯೂ ಸಾಕಷ್ಟು ಕ್ರೇಜ್ ಇದೆ. ಅವರ ಬಳಿ ಅನೇಕ ದುಬಾರಿ ಹಾಗೂ ಐಷಾರಾಮಿ ಕಾರುಗಳು ಇವೆ. ಈ ಕಾರುಗಳನ್ನು ಅವರು ಆಗಾಗ ತೆಗೆಯುತ್ತಾರೆ.

ಲಾಸ್ ಏಂಜಲಿಸ್​ನಲ್ಲಿ ಜೂನಿಯರ್ ಎನ್​ಟಿಆರ್

ಜೂನಿಯರ್ ಎನ್​ಟಿಆರ್ ಅವರು ಸದ್ಯ ಅಮೆರಿಕದಲ್ಲಿದ್ದಾರೆ. ರಾಜಮೌಳಿ, ರಾಮ್ ಚರಣ್ ಕೂಡ ಅವರಿಗೆ ಸಾಥ್ ನೀಡಿದ್ದಾರೆ. ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್​’ ಸಿನಿಮಾದ ‘ನಾಟು ನಾಟು..’ ಹಾಡು ಆಸ್ಕರ್ ರೇಸ್​ನಲ್ಲಿದೆ. ಈ ಹಾಡು ಆಸ್ಕರ್ ಗೆಲ್ಲಲಿ ಎಂದು ಎಲ್ಲರೂ ಕೋರುತ್ತಿದ್ದಾರೆ. ಅಮೆರಿಕದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಅವರು ಭಾಗಿ ಆಗುತ್ತಿದ್ದಾರೆ.

ಇದನ್ನೂ ಓದಿ: NTR 30: ಜೂನಿಯರ್​ ಎನ್​ಟಿಆರ್​ 30ನೇ ಚಿತ್ರಕ್ಕೆ ಜಾನ್ವಿ ಕಪೂರ್​ ನಾಯಕಿ; ಇಲ್ಲಿದೆ ಫಸ್ಟ್​ ಲುಕ್​

ಆಸ್ಕರ್ ವೇದಿಕೆ ಮೇಲಿಲ್ಲ ರಾಮ್ ಚರಣ್​- ಜೂನಿಯರ್  ಎನ್​ಟಿಆರ್ ಪರ್ಫಾರ್ಮೆನ್ಸ್

ಲಾಸ್​ ಏಂಜಲಿಸ್​ನ ಡಾಲ್ಬಿ ಥಿಯೇಟರ್​ನಲ್ಲಿ ಆಸ್ಕರ್​ ಸಮಾರಂಭ ನಡೆಯಲಿದೆ. ಹಾಲಿವುಡ್​ ಸೇರಿದಂತೆ ಪ್ರಪಂಚದ ವಿವಿಧ ಭಾಷೆಯ ಚಿತ್ರರಂಗದ ಗಣ್ಯರೆಲ್ಲ ಆ ಸಮಾರಂಭದಲ್ಲಿ ಭಾಗಿ ಆಗಲಿದ್ದಾರೆ. ಅಂಥ ವೇದಿಕೆಯಲ್ಲಿ ಜೂನಿಯರ್​ ಎನ್​ಟಿಆರ್​ ಮತ್ತು ರಾಮ್​ ಚರಣ್​ ಅವರು ‘ನಾಟು ನಾಟು..’ ಹಾಡಿಗೆ ಹೆಜ್ಜೆ ಹಾಕಲಿದ್ದಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಅದು ಸಾಧ್ಯವಿಲ್ಲ ಎಂದು ಜೂನಿಯರ್​ ಎನ್​ಟಿಆರ್​ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:23 pm, Sat, 11 March 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ