AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಪ್ಪ ಬಾಲಕೃಷ್ಣ ಜೊತೆ ನೇರ ಹೋರಾಟಕ್ಕೆ ಇಳಿದ ಜೂ ಎನ್​ಟಿಆರ್: ಬಾಕ್ಸ್ ಆಫೀಸ್​ನಲ್ಲಿ ಗೆಲುವು ಯಾರಿಗೆ?

Jr NTR-Balakrishna: ನಂದಮೂರಿ ಕುಟುಂಬದವರಾದ ನಂದಮೂರಿ ಬಾಲಕೃಷ್ಣ ಹಾಗೂ ಜೂ.ಎನ್​ಟಿಆರ್ ನಡುವೆ ದೊಡ್ಡ ಕಂದಕವೇ ಏರ್ಪಟ್ಟಿದೆ. ಇದೀಗ ಈ ಇಬ್ಬರೂ ಯುದ್ಧಕ್ಕೆ ನಿಂತಿದ್ದಾರೆ, ಯುದ್ಧ ನಡೆಯಲಿರುವುದು ಬಾಕ್ಸ್ ಆಫೀಸ್​ನಲ್ಲಿ.

ಚಿಕ್ಕಪ್ಪ ಬಾಲಕೃಷ್ಣ ಜೊತೆ ನೇರ ಹೋರಾಟಕ್ಕೆ ಇಳಿದ ಜೂ ಎನ್​ಟಿಆರ್: ಬಾಕ್ಸ್ ಆಫೀಸ್​ನಲ್ಲಿ ಗೆಲುವು ಯಾರಿಗೆ?
ಮಂಜುನಾಥ ಸಿ.
|

Updated on: Nov 08, 2023 | 7:31 PM

Share

ಆಂಧ್ರಪ್ರದೇಶ ರಾಜಕೀಯ ಹಾಗೂ ಚಿತ್ರರಂಗ (Sandalwood) ಎರಡರಲ್ಲೂ ನಂದಮೂರಿ ಕುಟುಂಬದ್ದು ದಶಕಗಳಿಂದಲೂ ಪ್ರಾಬಲ್ಯ ಇದೆ. ನಂದಮೂರಿ ಕುಟುಂಬದಲ್ಲಿ ಹಲವು ಸ್ಟಾರ್ ನಟರು, ಪ್ರಮುಖ ರಾಜಕಾರಣಿಗಳೂ ಇದ್ದಾರೆ. ಆದರೆ ಇತ್ತೀಚೆಗೆ ನಂದಮೂರಿ ಕುಟುಂಬದಲ್ಲಿ ಬಿರುಕು ಮೂಡಿದೆ. ಜೂ ಎನ್​ಟಿಆರ್ (Jr NTR) ಹಾಗೂ ಅವರ ಚಿಕ್ಕಪ್ಪ ನಂದಮೂರಿ ಬಾಲಕೃಷ್ಣ ನಡುವೆ ಎಲ್ಲವೂ ಸರಿಯಿಲ್ಲ ಎಂಬುದು ಜಗಜ್ಜಾಹೀರಾಗಿದೆ. ಈ ಇಬ್ಬರು ಬಹಿರಂಗವಾಗಿ ಮಾತನಾಡಿಲ್ಲವಾದರೂ ಕೋಲ್ಡ್ ವಾರ್ ಚಾಲ್ತಿಯಲ್ಲಿದೆ. ಇದೀಗ ಬಾಲಕೃಷ್ಣ ಹಾಗೂ ಜೂ ಎನ್​ಟಿಆರ್ ನೇರವಾಗಿ ಎದುರು-ಬದುರು ಯುದ್ಧಕ್ಕೆ ನಿಂತಿದ್ದಾರೆ. ಅದು ಬಾಕ್ಸ್ ಆಫೀಸ್​ನಲ್ಲಿ.

ನಂದಮೂರಿ ಕುಟುಂಬದ ನಟರ ಸಿನಿಮಾಗಳು ಪರಸ್ಪರ ಎದುರು ಬದುರು ಬಾಕ್ಸ್ ಆಫೀಸ್​ನಲ್ಲಿ ಫೈಟ್ ಮಾಡಿದ್ದಿಲ್ಲ. ಪರಸ್ಪರರ ಮೇಲೆ ಬಾಕ್ಸ್ ಆಫೀಸ್​ನಲ್ಲಿ ಫೈಟ್​ ಆಗಿಲ್ಲ. ಆದರೆ ಈಗ ಜೂ ಎನ್​ಟಿಆರ್ ಅವರ ಸಿನಿಮಾ ಹಾಗೂ ಬಾಲಕೃಷ್ಣ ಅವರ ಸಿನಿಮಾಗಳು ಬಾಕ್ಸ್ ಆಫೀಸ್​ ಫೈಟ್​ಗೆ ಸಜ್ಜಾಗುತ್ತಿವೆ. ಜೂ ಎನ್​ಟಿಆರ್ ಪ್ರಸ್ತುತ ‘ದೇವರ’ ಹೆಸರಿನ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಸಿನಿಮಾದ ಶೂಟಿಂಗ್ ಜೋರಾಗಿ ನಡೆದಿದೆ. ಸಿನಿಮಾವನ್ನು ಭಾರಿ ಬಜೆಟ್​ನಲ್ಲಿ, ದೊಡ್ಡ ದೊಡ್ಡ ನಟರು, ಹಾಲಿವುಡ್ ತಂತ್ರಜ್ಞರನ್ನು ಬಳಸಿ ನಿರ್ಮಿಸಲಾಗುತ್ತಿದೆ. ಈ ಸಿನಿಮಾದ ಬಿಡುಗಡೆ, ಬಾಲಕೃಷ್ಣರ ಹೊಸ ಸಿನಿಮಾದ ಬಿಡುಗಡೆಯೊಟ್ಟಿಗೆ ಕ್ಲ್ಯಾಷ್ ಆಗಲಿದೆ.

ಬಾಲಕೃಷ್ಣ ನಟನೆಯ ‘ಭಗವಂತ್ ಕೇಸರಿ’ ಸಿನಿಮಾ ಕಳೆದ ತಿಂಗಳಷ್ಟೆ ಬಿಡುಗಡೆ ಆಗಿ ಸೂಪರ್ ಹಿಟ್ ಆಗಿದೆ. ಇದೀಗ ಬಾಲಕೃಷ್ಣ ತಮ್ಮ 109ನೇ ಸಿನಿಮಾದ ಚಿತ್ರೀಕರಣ ಆರಂಭಿಸಿದ್ದಾರೆ. ಈ ಸಿನಿಮಾವನ್ನು ಬಾಬಿ ಕೊಲ್ಲ ನಿರ್ದೇಶನ ಮಾಡುತ್ತಿದ್ದಾರೆ. ಬಾಬಿ ಕೊಲ್ಲ ಈ ಹಿಂದೆ ಜೂ ಎನ್​ಟಿಆರ್ ನಟನೆಯ ‘ಲವ-ಕುಶ’, ಚಿರಂಜೀವಿ ನಟನೆಯ ‘ವಾಲ್ತೇರು ವೀರಯ್ಯ’ ಇನ್ನೂ ಕೆಲವು ಸಿನಿಮಾಗಳನ್ನು ನಿರ್ದೇಶಿಸಿದ್ದಾರೆ. ಇದೇ ಮೊದಲ ಬಾರಿಗೆ ಬಾಲಕೃಷ್ಣರ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ.

ಇದನ್ನೂ ಓದಿ:ಮತ್ತೆ ಜೂ ಎನ್​ಟಿಆರ್ ಅನ್ನು ದೂರವಿಟ್ಟ ನಂದಮೂರಿ ಬಾಲಕೃಷ್ಣ-ಚಂದ್ರಬಾಬು ನಾಯ್ಡು

ಬಾಲಕೃಷ್ಣರ 109ನೇ ಸಿನಿಮಾ ಹಾಗೂ ಜೂ ಎನ್​ಟಿಆರ್​ರ ‘ದೇವರ’ ಸಿನಿಮಾ ಒಂದೇ ಸಮಯಕ್ಕೆ ಬಿಡುಗಡೆ ಆಗಲಿವೆ ಎನ್ನಲಾಗುತ್ತಿದೆ. ‘ದೇವರ’ ಸಿನಿಮಾದ ಮೊದಲ ಭಾಗವನ್ನು ಏಪ್ರಿಲ್ 5ಕ್ಕೆ ಬಿಡುಗಡೆ ಮಾಡುವುದಾಗಿ ಈಗಾಗಲೇ ಚಿತ್ರತಂಡ ಘೋಷಿಸಿದೆ. ಇದೀಗ ಬಾಲಕೃಷ್ಣರ ಸಿನಿಮಾ ಸಹ ಅದೇ ಸಮಯಕ್ಕೆ ಬಿಡುಗಡೆ ಆಗಲಿದೆ ಎಂಬ ಮಾತುಗಳು ಕೇಳಿ ಬರುತ್ತಿದೆ. ಒಂದೊಮ್ಮೆ ‘ದೇವರ’ ಹಾಗೂ ಬಾಲಕೃಷ್ಣರ ಸಿನಿಮಾ ಒಂದೇ ದಿನ ಬಿಡುಗಡೆ ಆದರೆ ಟಾಲಿವುಡ್​ನ ಅತಿ ದೊಡ್ಡ ಬಾಕ್ಸ್ ಆಫೀಸ್ ಫೈಟ್ ಆಗಲಿದೆ.

ಇತ್ತೀಚೆಗಷ್ಟೆ ನಂದಮೂರಿ ಕುಟುಂಬವು ಎನ್​ಟಿಆರ್​ರ ಜನ್ಮ ಶತಮಾನೋತ್ಸವವನ್ನು ಅದ್ಧೂರಿಯಾಗಿ ಹಲವು ನಗರಗಳಲ್ಲಿ ಆಚರಣೆ ಮಾಡಿತು. ಆ ಕಾರ್ಯಕ್ರಮಕ್ಕೆ ಜೂ ಎನ್​ಟಿಆರ್​ಗೆ ಆಗಲಿ ಅವರ ಅಣ್ಣನಿಗಾಗಲಿ ಆಹ್ವಾನ ನೀಡಿರಲಿಲ್ಲ. ಬಾಲಕೃಷ್ಣ ಅಂತೂ ಕೆಲವು ಸಂದರ್ಭಗಳಲ್ಲಿ ನೇರವಾಗಿಯೇ ಜೂ ಎನ್​ಟಿಆರ್ ವಿರುದ್ಧ ಮಾತನಾಡಿದ್ದು ಇದೆ. ಅದಾದ ಬಳಿಕ ನಂದಮೂರಿ ಕುಟುಂಬದ ಅಳಿಯ, ಮಾಜಿ ಸಿಎಂ ಚಂದ್ರಬಾಬು ನಾಯ್ಡು ಜೈಲಿಗೆ ಹೋದಾಗ ಜೂ ಎನ್​ಟಿಆರ್ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ, ಕನಿಷ್ಟ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿ ಬಂಧನವನ್ನು ಖಂಡಿಸಲಿಲ್ಲ. ಬದಲಿಗೆ ಕುಟುಂಬದೊಡನೆ ಫಾರಿನ್ ಟ್ರಿಪ್​ಗೆ ಹೊರಟರು. ಕುಟುಂಬದ ಜಗಳ ಬಹಿರಂಗಗೊಂಡಿದ್ದು, ಇದು ಯಾವ ಹಂತಕ್ಕೆ ಹೋಗಿ ಮುಟ್ಟುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು