AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಧುರಂಧರ್ 2’ ಚಿತ್ರದ ಖ್ಯಾತ ನಟನಿಗೆ ಸಿನಿಮಾ ಅವಕಾಶ ಕೊಟ್ಟ ಪ್ರಶಾಂತ್ ನೀಲ್

ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್ ಅವರ ಮುಂದಿನ ಸಿನಿಮಾ ಜೂ.ಎನ್​ಟಿಆರ್ ಜೊತೆಗಿದೆ. ಈ ಬಹುನಿರೀಕ್ಷಿತ ಚಿತ್ರಕ್ಕೆ ‘ಧುರಂಧರ್’ ಖ್ಯಾತಿಯ ನಟ ಬಿಮಲ್ ಓಬೆರಾಯ್ ವಿಲನ್ ಆಗಿ ಎಂಟ್ರಿ ಕೊಟ್ಟಿದ್ದಾರೆ ಎನ್ನಲಾಗಿದೆ. ‘ಡ್ರ್ಯಾಗನ್’ ಎಂದು ತಾತ್ಕಾಲಿಕವಾಗಿ ಹೆಸರಿಡಲಾದ ಈ ಆಕ್ಷನ್ ಸಿನಿಮಾದಲ್ಲಿ ಬಿಮಲ್ ಅವರ ಪಾತ್ರದ ಕುರಿತು ಕುತೂಹಲ ಮೂಡಿದೆ.

‘ಧುರಂಧರ್ 2’ ಚಿತ್ರದ ಖ್ಯಾತ ನಟನಿಗೆ ಸಿನಿಮಾ ಅವಕಾಶ ಕೊಟ್ಟ ಪ್ರಶಾಂತ್ ನೀಲ್
ಪ್ರಶಾಂತ್ ನೀಲ್-ಧುರಂಧರ್ ನಟ
ರಾಜೇಶ್ ದುಗ್ಗುಮನೆ
|

Updated on: Apr 03, 2026 | 12:10 PM

Share

ಪ್ರಶಾಂತ್ ನೀಲ್ ಅವರು ‘ಕೆಜಿಎಫ್’ ಹಾಗೂ ‘ಕೆಜಿಎಫ್ 2’ ಬಳಿಕ ದೊಡ್ಡ ಗೆಲುವು ಕಂಡರು. ಈ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗಮನ ಸೆಳೆಯಿತು. ಈ ಸಿನಿಮಾ ಬಳಿಕ ಪ್ರಶಾಂತ್ ನೀಲ್ ಅವರು ತೆಲುಗು ಚಿತ್ರರಂಗದಲ್ಲಿ ಬ್ಯುಸಿ ಇದ್ದಾರೆ. ಪ್ರಶಾಂತ್ ನೀಲ್ ಅವರು ಸದ್ಯ ಜೂನಿಯರ್ ಎನ್​​​ಟಿಆರ್ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈಗ ಈ ಚಿತ್ರಕ್ಕೆ ‘ಧುರಂಧರ್’ ನಟನ ಎಂಟ್ರಿ ಆಗಿದೆ. ಅದೂ ವಿಲನ್ ಆಗಿ ಎನ್ನಲಾಗುತ್ತಿದೆ.

‘ಧುರಂಧರ್’ ಹಾಗೂ ‘ಧುಂಧರ್ 2’ ಚಿತ್ರವನ್ನು ಆದಿತ್ಯ ಧಾರ್ ಅವರು ನಿರ್ದೇಶನ ಮಾಡಿದರು. ಈ ಎರಡೂ ಚಿತ್ರಗಳು ಮೆಚ್ಚುಗೆ ಪಡೆದಿವೆ. ‘ಧುರಂಧರ್’ ಸಿನಿಮಾ 1300 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದರೆ, ‘ಧುರಂದರ್ 2’ ಸಿನಿಮಾ 2 ಸಾವಿರ ಕೋಟಿ ರೂಪಾಯಿ ಗಳಿಕೆ ಮಾಡುವ ಸಾಧ್ಯತೆ ಇದೆ. ಈ ಚಿತ್ರದಲ್ಲಿ ಶಿರಾನಿ ಬಲೂಚ್ ಪಾತ್ರದಲ್ಲಿ ಬಿಮಲ್ ಓಬೆರಾಯ್ ಕಾಣಿಸಿಕೊಂಡಿದ್ದರು.

‘ಧುರಂಧರ್’ ಸಿನಿಮಾದಲ್ಲಿ ಬಿಮಲ್ ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.‘ಧುರಂಧರ್ 2’ ಚಿತ್ರದ ಕ್ಲೈಮ್ಯಾಕ್ಸ್ ಅಲ್ಲಿ ಅವರ ಪಾತ್ರ ಪ್ರಾಮುಖ್ಯತೆ ಪಡೆದುಕೊಂಡಿದೆ. ಅವರು ಹಮ್ಜಾಗೆ ಸಹಾಯ ಮಾಡುವ ರೀತಿಯಲ್ಲಿ ಕಾಣಿಸಿಕೊಂಡಿದ್ದರು. ಈಗ ಅವರು ಪ್ರಶಾಂತ್ ನೀಲ್ ಸಿನಿಮಾದಲ್ಲಿ ಆಫರ್ ಪಡೆದಿದ್ದಾರೆ.

ಇದನ್ನೂ ಓದಿ: ಜೂ ಎನ್​​ಟಿಆರ್-ನೀಲ್ ಸಿನಿಮಾಕ್ಕೆ ಜೊತೆಯಾದ ಹಾಲಿವುಡ್ ತಂಡ

ಜೂನಿಯರ್ ಎನ್​​ಟಿಆರ್ ಸಿನಿಮಾ ಎಂದರೆ ಆ್ಯಕ್ಷನ್ ಜೋರಾಗಿಯೇ ಇರುತ್ತದೆ. ಈ ಚಿತ್ರಕ್ಕೆ ‘ಡ್ರ್ಯಾಗನ್’ ಎಂದು ಟೈಟಲ್ ಇಡಲಾಗಿದೆ ಎಂದು ಹೇಳಲಾಗಿದೆ.ಈ ಸಿನಿಮಾದಲ್ಲಿ ಬಿಮಲ್ ಅವರು ವಿಲನ್ ಪಾತ್ರದಲ್ಲಿ ಕಾಣಿಸಿಕೊಳ್ಳಬಹುದು ಎನ್ನಲಾಗುತ್ತಿದೆ. ಈ ಸಿನಿಮಾದಲ್ಲಿ ಅವರ ಪಾತ್ರದ ಬಗ್ಗೆ ಮುಂದಿನ ದಿನಗಳಲ್ಲಿ ತಿಳಿಯಲಿದೆ.

ಪ್ರಶಾಂತ್ ನೀಲ್ ಹಾಗೂ ಜೂನಿಯರ್ ಎನ್​​ಟಿಆರ್ ಸಿನಿಮಾದ ಶೂಟ್ ಭರದಿಂದ ಸಾಗುತ್ತಿದೆ. ಈ ಚಿತ್ರವನ್ನು ಮೈತ್ರಿ ಮೂವೀ ಮೇಕರ್ಸ್ ನಿರ್ಮಾಣ ಮಾಡುತ್ತಿದೆ. ಚಿತ್ರದ ಶೂಟ್ ನಿರಂತರವಾಗಿ ವಿಳಂಬ ಆಗುತ್ತಿದೆ, ಸಿನಿಮಾ ನಿಂತು ಹೋಗುತ್ತದೆ ಎಂಬೆಲ್ಲ ವರದಿ ಇದ್ದವು. ಅದ್ಯಾವುದೂ ಸತ್ಯವಾಗಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ