AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಂಗಿದೆ ಮಾರಿಹಬ್ಬ; ಮಹೇಶ್ ಬಾಬುಗೆ ಮೊದಲೇ ಎಚ್ಚರಿಸಿದ್ದ ಜೂ.ಎನ್​ಟಿಆರ್

ರಾಜಮೌಳಿ ಅವರ ಪರಿಪೂರ್ಣತೆಯ ಬಗ್ಗೆ ಜೂನಿಯರ್ ಎನ್​ಟಿಆರ್ ಮಹೇಶ್ ಬಾಬು ಅವರಿಗೆ ಎಚ್ಚರಿಕೆ ನೀಡಿದ್ದಾರೆ. 'RRR' ಸಮಯದಲ್ಲಿ ಅನುಭವಿಸಿದ ಸವಾಲುಗಳನ್ನು ನೆನಪಿಸಿಕೊಂಡ NTR, ರಾಜಮೌಳಿ ಜೊತೆ ಕೆಲಸ ಮಾಡುವುದು ಸುಲಭವಲ್ಲ ಎಂದು ಹೇಳಿದ್ದರು. 'ವಾರಣಾಸಿ' ಸಿನಿಮಾದಲ್ಲಿ ಮಹೇಶ್ ಬಾಬು ಇದೇ ಸವಾಲುಗಳನ್ನು ಎದುರಿಸುವ ನಿರೀಕ್ಷೆಯಿದೆ.

ನಿಂಗಿದೆ ಮಾರಿಹಬ್ಬ; ಮಹೇಶ್ ಬಾಬುಗೆ ಮೊದಲೇ ಎಚ್ಚರಿಸಿದ್ದ ಜೂ.ಎನ್​ಟಿಆರ್
ಮಹೇಶ್​-ಎನ್​ಟಿಆರ್
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ|

Updated on: Nov 20, 2025 | 8:06 AM

Share

ಜೂನಿಯರ್ ಎನ್​ಟಿಆರ್ ಹಾಗೂ ಮಹೇಶ್ ಬಾಬು ಮಧ್ಯೆ ಒಳ್ಳೆಯ ಗೆಳೆತನ ಇದೆ. ಜೂನಿಯರ್ ಎನ್​ಟಿಆರ್ ಅವರು ಸದ್ಯ ಪ್ರಶಾಂತ್ ನೀಲ್ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಮಹೇಶ್ ಬಾಬು ಅವರು ರಾಜಮೌಳಿ ನಿರ್ದೇಶನದ ‘ವಾರಣಾಸಿ’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ರಾಜಮೌಳಿ ಜೊತೆ ಸಿನಿಮಾ ಮಾಡಬೇಕು ಎಂದರೆ ಅದು ದೊಡ್ಡ ಚಾಲೆಂಜ್. ಈ ಬಗ್ಗೆ ಜೂನಿಯರ್ ಎನ್​ಟಿಆರ್ ಅವರು ಈ ಮೊದಲೇ ಎಚ್ಚರಿಕೆ ನೀಡಿದ್ದರು.

ರಾಜಮೌಳಿ ಅವರು ಏನೇ ಮಾಡಿದರೂ ಪರ್ಫೆಕ್ಷನ್​ನ ಇಷ್ಟಪಡುತ್ತಾರೆ. ಇದು ಮೊದಲಿನಿಂದಲೂ ನಡೆದುಕೊಂಡು ಬಂದಿದೆ. ಹೀಗಾಗಿ ಅವರ ಜೊತೆ ಸಿನಿಮಾ ಮಾಡಬೇಕು ಎಂದರೆ ಅವರು ಬೇರೆ ಯಾವುದೇ ಸಿನಿಮಾಗಳನ್ನೂ ಒಪ್ಪಿಕೊಂಡಿರಬಾರದು. ಇದನ್ನು ಒಪ್ಪಿದ ಬಳಿಕವೇ ಅವರು ಸಿನಿಮಾ ಮಾಡುತ್ತಾರೆ. ಈ ವಿಚಾರದ ಬಗ್ಗೆ ಜೂನಿಯರ್ ಎನ್​ಟಿಆರ್ ಎಚ್ಚರಿಕೆ ನೀಡಿದ್ದರು. ಜೂನಿಯರ್ ಎನ್​ಟಿಆರ್ ಅವರು ‘ಆರ್​ಆರ್​ಆರ್’  ಸಿನಿಮಾದಲ್ಲಿ ರಾಜಮೌಳಿ ಜೊತೆ ನಟಿಸಿದ್ದರು.

‘ರಾಜಮೌಳಿ ಸಿನಿಮಾ ಮಾಡ್ತಾ ಇದೀಯಲ್ಲ, ಅವರು ಎಲ್ಲ ಆಟ ಆಡಿಸ್ತಾರೆ’ ಎಂದು ಜೂನಿಯರ್​ ಎನ್​ಟಿಆರ್ ವೇದಿಕೆ ಒಂದರಲ್ಲಿ ಮಹೇಶ್ ಬಾಬುಗೆ ಹೇಳಿದ್ದರು. ಮೊನ್ನೆ ರಾಮೋಜಿ ಫಿಲ್ಮ್​ ಸಿಟಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಹೇಶ್ ಬಾಬು ಸುಸ್ತಾಗಿದ್ದಾರೆ. ಸಿಂಪಲ್ ಆಗಿ ನಡೆದು ಬರ್ತೀನಿ ಎಂದು ಮಹೇಶ್ ಬಾಬು ಹೇಳಿದರಂತೆ. ಆದರೆ, ಇದನ್ನು ರಾಜಮೌಳಿ ಕೇಳಿಲ್ಲ. ವಿಶೇಷವಾದ ಎಂಟ್ರಿಯನ್ನು ಅವರು ಕೊಡಿಸಿದ್ದಾರೆ. ಸಿಂಪಲ್ ಶರ್ಟ್ ಹಾಕ್ಕೊಂಡು ನನ್ನ ಸ್ಟೈಲ್​ನಲ್ಲಿ ಬರ್ತೀನಿ ಎಂದು ಮಹೇಶ್ ಬಾಬು ಹೇಳಿದರಂತೆ. ಅದೂ ಆಗದು ಎಂದರಂತೆ.

‘ಇದು ಅನುಭವದ ಮಾತು’ ಎಂದು ಜೂನಿಯರ್ ಎನ್​ಟಿಆರ್ ಆ ಸಂದರ್ಭದಲ್ಲಿ ಹೇಳಿದ್ದರು. ಈಗ ಹಾಗೆಯೇ ಆಗಿದೆ. ಮಹೇಶ್ ಬಾಬು ಅವರು ಸಾಕಷ್ಟು ತ್ಯಾಗಗಳನ್ನು ಮಾಡಲು ಸಿದ್ಧರಾಗಿದ್ದಾರೆ. ಶೂಟ್ ಪರ್ಫೆಕ್ಟ್ ಆಗಿ ಬರೋವರೆಗೂ ಬಿಡೋದಿಲ್ಲ.

ಇದನ್ನೂ ಓದಿ: ಮಹೇಶ್ ಬಾಬು vs ಪ್ರಿಯಾಂಕಾ ಚೋಪ್ರಾ; ಇಬ್ಬರಲ್ಲಿ ಯಾರು ಹೆಚ್ಚು ಶ್ರೀಮಂತರು?

‘ನಾಟು ನಾಟು..’ ಹಾಡಲ್ಲಿ ಜೂನಿಯರ್ ಎನ್​ಟಿಆರ್ ಹಾಗೂ ರಾಮ್ ಚರಣ್ ಒಟ್ಟಾಗಿ ಡ್ಯಾನ್ಸ್ ಮಾಡಿದ್ದರು. ಈ ಹಾಡಿಗಾಗಿ ಸಾಕಷ್ಟು ರೀಟೇಕ್​ಗಳನ್ನು ಮಾಡಲಾಗಿತ್ತು. ಇದನ್ನು ಜೂನಿಯರ್​ ಎನ್​ಟಿಆರ್ ಅವರು ಅನೇಕ ಬಾರಿ ಹೇಳಿಕೊಂಡಿದ್ದು ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ