AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇಡೀ ಕುಟುಂಬ ಶಪಿಸಿತು’; ಜೂ. ಎನ್​​ಟಿಆರ್ ಈ ಸ್ಥಿತಿಗೆ ಪ್ರಶಾಂತ್ ನೀಲ್ ಕಾರಣ

ಜೂನಿಯರ್ ಎನ್​​ಟಿಆರ್ ಅವರ ತೀವ್ರ ತೂಕ ಇಳಿಕೆ ಅಭಿಮಾನಿಗಳಲ್ಲಿ ಆತಂಕ ಮೂಡಿಸಿತ್ತು. ನಿರ್ದೇಶಕ ಪ್ರಶಾಂತ್ ನೀಲ್, ಇದು ಸಿನಿಮಾದ ಹಂತಕನ ಪಾತ್ರಕ್ಕಾಗಿ ಮಾಡಿದ ಕಠಿಣ ಪರಿಶ್ರಮ ಎಂದಿದ್ದಾರೆ. 15-16 ಕೆಜಿ ತೂಕ ಕಳೆದುಕೊಂಡ NTR ಅವರ ಸಮರ್ಪಣೆ, ಅವರ ಪಾತ್ರದ ಬಗೆಗಿನ ಅಚಲ ಬದ್ಧತೆಯನ್ನು ತೋರಿಸುತ್ತದೆ.

‘ಇಡೀ ಕುಟುಂಬ ಶಪಿಸಿತು’; ಜೂ. ಎನ್​​ಟಿಆರ್ ಈ ಸ್ಥಿತಿಗೆ ಪ್ರಶಾಂತ್ ನೀಲ್ ಕಾರಣ
ಎನ್​​ಟಿಆರ್​-ಪ್ರಶಾಂತ್ ನೀಲ್
ರಾಜೇಶ್ ದುಗ್ಗುಮನೆ
|

Updated on: May 21, 2026 | 7:01 AM

Share

ಟಾಲಿವುಡ್ ಸ್ಟಾರ್ ನಟ ಜೂನಿಯರ್ ಎನ್​​ಟಿಆರ್ (JR NTR) ಇತ್ತೀಚಿನ ದಿನಗಳಲ್ಲಿ ಅತಿಯಾಗಿ ತೆಳ್ಳಗಾಗಿ ಕಾಣಿಸಿಕೊಂಡಿದ್ದಾರೆ. ಇದು ಅವರ ಆರೋಗ್ಯದ ಬಗ್ಗೆ ಸಾಕಷ್ಟು ಆತಂಕ ಮೂಡಿಸಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಹತ್ತಾರು ಪ್ರಶ್ನೆಗಳು ಎದ್ದಿದ್ದವು. ಆದರೆ, ಅವರು ಈ ರೀತಿ ಬದಲಾಗಲು ಯಾವುದೇ ಅನಾರೋಗ್ಯ ಕಾರಣವಲ್ಲ, ಬದಲಿಗೆ ತಮ್ಮ ಮುಂಬರುವ ಚಿತ್ರದ ಪಾತ್ರಕ್ಕಾಗಿ ಅವರು ಮಾಡಿದ ಕಠಿಣ ಪರಿಶ್ರಮ ಕಾರಣ ಎಂಬ ಅಸಲಿ ರಹಸ್ಯವನ್ನು ಖ್ಯಾತ ನಿರ್ದೇಶಕ ಪ್ರಶಾಂತ್ ನೀಲ್ ಈಗ ಬಹಿರಂಗಪಡಿಸಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿದ ಪ್ರಶಾಂತ್ ನೀಲ್, ‘ಚಿತ್ರದ ಪ್ರಿ-ಪ್ರೊಡಕ್ಷನ್ ಕೆಲಸಗಳು ಮುಗಿಸಿ ಶೂಟಿಂಗ್ ಆರಂಭಿಸಲು ನಾವು ಸಿದ್ಧರಾಗಿದ್ದೆವು. ಆ ಸಮಯದಲ್ಲಿ ಜೂನಿಯರ್ ಎನ್​​ಟಿಆರ್ ಅವರಿಗೆ ಒಂದು ಲುಕ್ ಟೆಸ್ಟ್ ಮಾಡಲಾಯಿತು. ಆ ಲುಕ್ ಟೆಸ್ಟ್ ಮುಗಿದ ನಂತರ, ನಾನು ಅವರ ಬಳಿ ಹೋಗಿ, ನೀವು ನಿರ್ವಹಿಸುತ್ತಿರುವ ಹಂತಕ ಪಾತ್ರಕ್ಕೆ ಸ್ವಲ್ಪ ತೆಳ್ಳಗಾದರೆ ಚೆನ್ನಾಗಿರುತ್ತದೆ, ಅದು ಚಿತ್ರಕ್ಕೆ ಸಹಾಯ ಮಾಡುತ್ತದೆ ಎಂದು ಕೇವಲ ಒಂದು ಮಾತು ಹೇಳಿದ್ದೆ’ ಎಂದಿದ್ದಾರೆ.

ನಿರ್ದೇಶಕರು ಹೇಳಿದ ಆ ಒಂದು ಮಾತನ್ನು ಜೂನಿಯರ್ ಎನ್​​ಟಿಆರ್ ಅತ್ಯಂತ ಗಂಭೀರವಾಗಿ ತೆಗೆದುಕೊಂಡರಂತೆ. ‘ಮುಂದಿನ ನಾಲ್ಕು ತಿಂಗಳುಗಳ ಕಾಲ ಅವರು ಶೂಟಿಂಗ್ ಮಾಡದೆ ಕೇವಲ ತೂಕ ಇಳಿಸಿಕೊಳ್ಳುವತ್ತಲೇ ಗಮನ ಹರಿಸಿದರು. ನೋಡನೋಡುತ್ತಿದ್ದಂತೆ ಅವರು ಬರೋಬ್ಬರಿ 15 ರಿಂದ 16 ಕೆಜಿಯಷ್ಟು ತೂಕವನ್ನು ಇಳಿಸಿಕೊಂಡರು. ನೀವು ಬರೆದಿರುವ ಕಥೆಗೆ ಮತ್ತು ನಿಮ್ಮ ಕಲ್ಪನೆಗೆ ತಕ್ಕಂತೆ ನಾನು ಬದಲಾಗುತ್ತೇನೆ ಎಂದು ಹಠಕ್ಕೆ ಬಿದ್ದವರಂತೆ ಜೂನಿಯರ್ ಎನ್​​ಟಿಆರ್ ಪರಿಶ್ರಮ ಪಟ್ಟರು’ ಎಂದು ನೀಲ್ ನೆನಪಿಸಿಕೊಂಡಿದ್ದಾರೆ.

ಇದನ್ನೂ ಓದಿ: ಜೂ.ಎನ್​​ಟಿಆರ್​​ಗೆ ವಿಶ್ ಮಾಡಿದ ಹೊಂಬಾಳೆ ಫಿಲ್ಮ್ಸ್; ಇದರ ಹಿಂದಿದೆ ದೊಡ್ಡ ಲೆಕ್ಕಾಚಾರ?

ಒಂದು ಹಂತದಲ್ಲಿ ಎನ್​​ಟಿಆರ್ ತುಂಬಾ ಸುಸ್ತಾಗಿ, ಪೇಲವವಾಗಿ ಕಾಣಿಸಲು ಆರಂಭಿಸಿದಾಗ ಪ್ರಶಾಂತ್ ನೀಲ್ ಅವರೇ ಗಾಬರಿಯಾಗಿ, ತೂಕ ಇಳಿಸುವುದನ್ನು ನಿಲ್ಲಿಸುವಂತೆ ಹಲವು ಬಾರಿ ಮನವಿ ಮಾಡಿದ್ದರಂತೆ. ಅಷ್ಟೇ ಅಲ್ಲದೆ, ಎನ್​​ಟಿಆರ್ ಅವರ ಈ ಕಠಿಣ ಡಯಟ್ ನೋಡಿ ಅವರ ಪತ್ನಿ, ತಾಯಿ, ಸ್ನೇಹಿತರು ಹಾಗೂ ಪ್ರಶಾಂತ್ ನೀಲ್ ಅವರ ಇಡೀ ಚಿತ್ರತಂಡವೇ ನೀಲ್ ಅವರ ಮೇಲೆ ಕೋಪ ಮಾಡಿಕೊಂಡಿತ್ತಂತೆ. ಸಿನಿಮಾ ಪಾತ್ರಕ್ಕಾಗಿ ಎನ್​​ಟಿಆರ್ ಅನುಭವಿಸಿದ ಆ ನಾಲ್ಕು ತಿಂಗಳ ಕಷ್ಟ ಮತ್ತು ಅವರಲ್ಲಿದ್ದ ಆ ಹಠ ಬೇರೆಲ್ಲೂ ನೋಡಲು ಸಾಧ್ಯವಿಲ್ಲ ಎಂದು ಪ್ರಶಾಂತ್ ನೀಲ್ ಕೊಂಡಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಹುಡುಗಿಗಾಗಿ ಟವರ್ ಏರಿದ್ದ ಯವಕನನ್ನ ಮನವೊಲಿಸಿ ಕೆಳಗಿಳಿಸಿದ್ಹೇಗೆ?
ಹುಡುಗಿಗಾಗಿ ಟವರ್ ಏರಿದ್ದ ಯವಕನನ್ನ ಮನವೊಲಿಸಿ ಕೆಳಗಿಳಿಸಿದ್ಹೇಗೆ?
ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು
ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ