‘ಅದನ್ನು ಮರೆತುಬಿಡಿ’; ‘ಜನ ಗಣ ಮನ’ ಸಿನಿಮಾ ಬಗ್ಗೆ ಪ್ರತಿಕ್ರಿಯಿಸಿದ ವಿಜಯ್ ದೇವರಕೊಂಡ

‘ಜನ ಗಣ ಮನ’ ಸಿನಿಮಾಗಾಗಿ ಈಗಾಗಲೇ 8 ಕೋಟಿ ರೂಪಾಯಿಗೂ ಅಧಿಕ ವೆಚ್ಛ ಮಾಡಲಾಗಿದೆ. ಈ ಸಿನಿಮಾದ ಮುಹೂರ್ತ ನಡೆದಿತ್ತು. ಅಲ್ಲದೆ, ಕೆಲ ದೃಶ್ಯದ ಶೂಟಿಂಗ್ ಕೂಡ ಮಾಡಲಾಗಿತ್ತು. ಈಗ ಈ ಹಣವೂ ವ್ಯರ್ಥವಾಗಿದೆ.

‘ಅದನ್ನು ಮರೆತುಬಿಡಿ’; ‘ಜನ ಗಣ ಮನ’ ಸಿನಿಮಾ ಬಗ್ಗೆ ಪ್ರತಿಕ್ರಿಯಿಸಿದ ವಿಜಯ್ ದೇವರಕೊಂಡ
ವಿಜಯ್
Follow us
| Updated By: ರಾಜೇಶ್ ದುಗ್ಗುಮನೆ

Updated on: Sep 12, 2022 | 3:58 PM

ವಿಜಯ್ ದೇವರಕೊಂಡ (Vijay Devarakonda) ನಟನೆಯ ‘ಲೈಗರ್’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಕಮಾಲ್ ಮಾಡುವಲ್ಲಿ ವಿಫಲ ಆಗಿದೆ. ಈ ಸಿನಿಮಾ ವಿಮರ್ಶೆಯಲ್ಲೂ ಸೋತಿದೆ. ಅವರ ಜನಪ್ರಿಯತೆಗೆ ಈ ಸೋಲು ಸಾಕಷ್ಟು ಹೊಡೆತ ನೀಡಿದೆ. ವಿಜಯ್ ದೇವರಕೊಂಡ ಅವರು ಅಂದುಕೊಂಡ ಯಾವ ಜಾದೂ ಕೂಡ ಈ ಸಿನಿಮಾದಿಂದ ಆಗಿಲ್ಲ. ನಿರ್ದೇಶಕ ಪುರಿ ಜಗನ್ನಾಥ್ (Puri Jagannadh) ಅವರ ತಪ್ಪು ಲೆಕ್ಕಾಚಾರವೇ ಇದಕ್ಕೆಲ್ಲ ಕಾರಣ ಎಂದು ಅನೇಕರು ಆರೋಪಿಸಿದ್ದಿದೆ. ಈಗ ಇವರಿಬ್ಬರ ಕಾಂಬಿನೇಷನ್​ನಲ್ಲಿ ಮೂಡಿ ಬರಬೇಕಿದ್ದ ‘ಜನ ಗಣ ಮನ’ ಸಿನಿಮಾ ಮೇಲೂ ಈ ಸೋಲು ಪ್ರಭಾವ ಬೀರಿದೆ. ಈ ಸಿನಿಮಾ ಬಗ್ಗೆ ಕೇಳಿದ ಪ್ರಶ್ನೆಗೆ ವಿಜಯ್ ಉತ್ತರಿಸುವುದಕ್ಕೂ ನಿರಾಕರಿಸಿದ್ದಾರೆ.

‘ಲೈಗರ್’ ಚಿತ್ರಕ್ಕಾಗಿ ವಿಜಯ್ ದೇವರಕೊಂಡ ಸಾಕಷ್ಟು ಸಿದ್ಧತೆ ಮಾಡಿಕೊಂಡಿದ್ದರು. ಅವರು ಈ ಚಿತ್ರಕ್ಕಾಗಿ ಮೂರ್ನಾಲ್ಕು ವರ್ಷ ಮೀಸಲಿಟ್ಟಿದ್ದರು. ಆದರೆ, ಈ ಶ್ರಮ ನೀರಿನಲ್ಲಿ ಹೋಮ ಮಾಡಿದಂತೆ ಆಗಿದೆ. ಇದು ವಿಜಯ್ ದೇವರಕೊಂಡ ಅವರಿಗೆ ಬೇಸರ ಮೂಡಿಸಿದೆ. ಈ ಕಾರಣಕ್ಕೆ ‘ಲೈಗರ್’ ಬಳಿಕ ಅವರು ಎಲ್ಲಿಯೂ ಸಾರ್ವಜನಿಕವಾಗಿ ಕಾಣಿಸಿಕೊಂಡಿರಲಿಲ್ಲ. ಈಗ ‘ಸೈಮಾ’ ಅವಾರ್ಡ್ಸ್​​ಗೆ ವಿಜಯ್ ಆಗಮಿಸಿದ್ದರು. ಈ ವೇಳೆ ಮಾಧ್ಯಮವನ್ನು ಅವರು ಎದುರುಗೊಂಡರು.

‘ಲೈಗರ್’ ಬಳಿಕ ವಿಜಯ್ ಹಾಗೂ ಪುರಿ ಜಗನ್ನಾಥ್ ಅವರು ‘ಜನ ಗಣ ಮನ’ ಸಿನಿಮಾದಲ್ಲಿ ಒಟ್ಟಾಗಿ ಕೆಲಸ ಮಾಡಬೇಕಿತ್ತು. ಆದರೆ, ‘ಲೈಗರ್’ ಸೋತ ಕಾರಣ ‘ಜನ ಗಣ ಮನ’ ಸಿನಿಮಾ ಸೆಟ್ಟೇರುವುದಿಲ್ಲ ಎನ್ನಲಾಗಿತ್ತು. ಈ ಬಗ್ಗೆ ವಿಜಯ್​ಗೆ ಪ್ರಶ್ನೆ ಎದುರಾಗಿದೆ. ಆದರೆ, ಇವರು ಪ್ರಶ್ನೆಗೆ ಉತ್ತರಿಸಿಲ್ಲ.

ಇದನ್ನೂ ಓದಿ
Image
Liger: ‘ಲೈಗರ್ ಸಿನಿಮಾ ಬ್ಲಾಕ್​ ಬಸ್ಟರ್​’: ರಿಲೀಸ್​ಗೂ ಮುನ್ನ ಘೋಷಿಸಿದ ವಿಜಯ್​ ದೇವರಕೊಂಡ
Image
Liger: ವಡೋದರದಲ್ಲಿ ವಿಜಯ್​ ದೇವರಕೊಂಡ, ಅನನ್ಯಾ ಪಾಂಡೆಗೆ ಅದ್ದೂರಿ ಸ್ವಾಗತ
Image
Liger Movie: ಅಹಮದಾಬಾದ್​ನಲ್ಲಿ ವಿಜಯ್​ ದೇವರಕೊಂಡ ನೋಡಲು ಜನಸಾಗರ; ಜೋರಾಗಿದೆ ‘ಲೈಗರ್​’ ಹವಾ
Image
Sini Shetty: ಮಿಸ್​ ಇಂಡಿಯಾ ಸಿನಿ ಶೆಟ್ಟಿಗೂ ಇಷ್ಟ ವಿಜಯ್​ ದೇವರಕೊಂಡ; ಮನದ ಮಾತು ತೆರೆದಿಟ್ಟ ಸುಂದರಿ

‘ಜನ ಗಣ ಮನ ಸಿನಿಮಾ ಸೆಟ್ಟೇರುವುದಿಲ್ಲವಂತೆ ನಿಜವೇ?’ ಎಂದು ಮಾಧ್ಯಮದವರು ವಿಜಯ್​ಗೆ ಪ್ರಶ್ನೆ ಮಾಡಿದರು. ಇದಕ್ಕೆ ಉತ್ತರಿಸಿದ ವಿಜಯ್, ‘ಅದನ್ನೆಲ್ಲ ಮರೆತುಬಿಡಿ. ನಾವು ಇಲ್ಲಿ ಬಂದಿದ್ದು ಸೈಮಾ ಅವಾರ್ಡ್​ಗಾಗಿ. ಈ ಕಾರ್ಯಕ್ರಮವನ್ನು ಎಂಜಾಯ್ ಮಾಡೋಣ’ ಎಂದಿದ್ದಾರೆ ವಿಜಯ್. ಅವರ ಈ ಉತ್ತರ ಅನೇಕರಿಗೆ ಅಚ್ಚರಿ ಮೂಡಿಸಿದೆ.

ಇದನ್ನೂ ಓದಿ: ‘ಪುನೀತಣ್ಣ, ಶಿವಣ್ಣ ನನಗೆ ಸಾಕಷ್ಟು ಪ್ರೀತಿ ನೀಡಿದ್ದಾರೆ’: ವಿಜಯ್ ದೇವರಕೊಂಡ

‘ಜನ ಗಣ ಮನ’ ಸಿನಿಮಾಗಾಗಿ ಈಗಾಗಲೇ 8 ಕೋಟಿ ರೂಪಾಯಿಗೂ ಅಧಿಕ ವೆಚ್ಛ ಮಾಡಲಾಗಿದೆ. ಈ ಸಿನಿಮಾದ ಮುಹೂರ್ತ ನಡೆದಿತ್ತು. ಅಲ್ಲದೆ, ಕೆಲ ದೃಶ್ಯದ ಶೂಟಿಂಗ್ ಕೂಡ ಮಾಡಲಾಗಿತ್ತು. ಈಗ ಈ ಹಣವೂ ವ್ಯರ್ಥವಾಗಿದೆ.

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ