AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅದನ್ನು ಮರೆತುಬಿಡಿ’; ‘ಜನ ಗಣ ಮನ’ ಸಿನಿಮಾ ಬಗ್ಗೆ ಪ್ರತಿಕ್ರಿಯಿಸಿದ ವಿಜಯ್ ದೇವರಕೊಂಡ

‘ಜನ ಗಣ ಮನ’ ಸಿನಿಮಾಗಾಗಿ ಈಗಾಗಲೇ 8 ಕೋಟಿ ರೂಪಾಯಿಗೂ ಅಧಿಕ ವೆಚ್ಛ ಮಾಡಲಾಗಿದೆ. ಈ ಸಿನಿಮಾದ ಮುಹೂರ್ತ ನಡೆದಿತ್ತು. ಅಲ್ಲದೆ, ಕೆಲ ದೃಶ್ಯದ ಶೂಟಿಂಗ್ ಕೂಡ ಮಾಡಲಾಗಿತ್ತು. ಈಗ ಈ ಹಣವೂ ವ್ಯರ್ಥವಾಗಿದೆ.

‘ಅದನ್ನು ಮರೆತುಬಿಡಿ’; ‘ಜನ ಗಣ ಮನ’ ಸಿನಿಮಾ ಬಗ್ಗೆ ಪ್ರತಿಕ್ರಿಯಿಸಿದ ವಿಜಯ್ ದೇವರಕೊಂಡ
ವಿಜಯ್
TV9 Web
| Edited By: |

Updated on: Sep 12, 2022 | 3:58 PM

Share

ವಿಜಯ್ ದೇವರಕೊಂಡ (Vijay Devarakonda) ನಟನೆಯ ‘ಲೈಗರ್’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಕಮಾಲ್ ಮಾಡುವಲ್ಲಿ ವಿಫಲ ಆಗಿದೆ. ಈ ಸಿನಿಮಾ ವಿಮರ್ಶೆಯಲ್ಲೂ ಸೋತಿದೆ. ಅವರ ಜನಪ್ರಿಯತೆಗೆ ಈ ಸೋಲು ಸಾಕಷ್ಟು ಹೊಡೆತ ನೀಡಿದೆ. ವಿಜಯ್ ದೇವರಕೊಂಡ ಅವರು ಅಂದುಕೊಂಡ ಯಾವ ಜಾದೂ ಕೂಡ ಈ ಸಿನಿಮಾದಿಂದ ಆಗಿಲ್ಲ. ನಿರ್ದೇಶಕ ಪುರಿ ಜಗನ್ನಾಥ್ (Puri Jagannadh) ಅವರ ತಪ್ಪು ಲೆಕ್ಕಾಚಾರವೇ ಇದಕ್ಕೆಲ್ಲ ಕಾರಣ ಎಂದು ಅನೇಕರು ಆರೋಪಿಸಿದ್ದಿದೆ. ಈಗ ಇವರಿಬ್ಬರ ಕಾಂಬಿನೇಷನ್​ನಲ್ಲಿ ಮೂಡಿ ಬರಬೇಕಿದ್ದ ‘ಜನ ಗಣ ಮನ’ ಸಿನಿಮಾ ಮೇಲೂ ಈ ಸೋಲು ಪ್ರಭಾವ ಬೀರಿದೆ. ಈ ಸಿನಿಮಾ ಬಗ್ಗೆ ಕೇಳಿದ ಪ್ರಶ್ನೆಗೆ ವಿಜಯ್ ಉತ್ತರಿಸುವುದಕ್ಕೂ ನಿರಾಕರಿಸಿದ್ದಾರೆ.

‘ಲೈಗರ್’ ಚಿತ್ರಕ್ಕಾಗಿ ವಿಜಯ್ ದೇವರಕೊಂಡ ಸಾಕಷ್ಟು ಸಿದ್ಧತೆ ಮಾಡಿಕೊಂಡಿದ್ದರು. ಅವರು ಈ ಚಿತ್ರಕ್ಕಾಗಿ ಮೂರ್ನಾಲ್ಕು ವರ್ಷ ಮೀಸಲಿಟ್ಟಿದ್ದರು. ಆದರೆ, ಈ ಶ್ರಮ ನೀರಿನಲ್ಲಿ ಹೋಮ ಮಾಡಿದಂತೆ ಆಗಿದೆ. ಇದು ವಿಜಯ್ ದೇವರಕೊಂಡ ಅವರಿಗೆ ಬೇಸರ ಮೂಡಿಸಿದೆ. ಈ ಕಾರಣಕ್ಕೆ ‘ಲೈಗರ್’ ಬಳಿಕ ಅವರು ಎಲ್ಲಿಯೂ ಸಾರ್ವಜನಿಕವಾಗಿ ಕಾಣಿಸಿಕೊಂಡಿರಲಿಲ್ಲ. ಈಗ ‘ಸೈಮಾ’ ಅವಾರ್ಡ್ಸ್​​ಗೆ ವಿಜಯ್ ಆಗಮಿಸಿದ್ದರು. ಈ ವೇಳೆ ಮಾಧ್ಯಮವನ್ನು ಅವರು ಎದುರುಗೊಂಡರು.

‘ಲೈಗರ್’ ಬಳಿಕ ವಿಜಯ್ ಹಾಗೂ ಪುರಿ ಜಗನ್ನಾಥ್ ಅವರು ‘ಜನ ಗಣ ಮನ’ ಸಿನಿಮಾದಲ್ಲಿ ಒಟ್ಟಾಗಿ ಕೆಲಸ ಮಾಡಬೇಕಿತ್ತು. ಆದರೆ, ‘ಲೈಗರ್’ ಸೋತ ಕಾರಣ ‘ಜನ ಗಣ ಮನ’ ಸಿನಿಮಾ ಸೆಟ್ಟೇರುವುದಿಲ್ಲ ಎನ್ನಲಾಗಿತ್ತು. ಈ ಬಗ್ಗೆ ವಿಜಯ್​ಗೆ ಪ್ರಶ್ನೆ ಎದುರಾಗಿದೆ. ಆದರೆ, ಇವರು ಪ್ರಶ್ನೆಗೆ ಉತ್ತರಿಸಿಲ್ಲ.

ಇದನ್ನೂ ಓದಿ
Image
Liger: ‘ಲೈಗರ್ ಸಿನಿಮಾ ಬ್ಲಾಕ್​ ಬಸ್ಟರ್​’: ರಿಲೀಸ್​ಗೂ ಮುನ್ನ ಘೋಷಿಸಿದ ವಿಜಯ್​ ದೇವರಕೊಂಡ
Image
Liger: ವಡೋದರದಲ್ಲಿ ವಿಜಯ್​ ದೇವರಕೊಂಡ, ಅನನ್ಯಾ ಪಾಂಡೆಗೆ ಅದ್ದೂರಿ ಸ್ವಾಗತ
Image
Liger Movie: ಅಹಮದಾಬಾದ್​ನಲ್ಲಿ ವಿಜಯ್​ ದೇವರಕೊಂಡ ನೋಡಲು ಜನಸಾಗರ; ಜೋರಾಗಿದೆ ‘ಲೈಗರ್​’ ಹವಾ
Image
Sini Shetty: ಮಿಸ್​ ಇಂಡಿಯಾ ಸಿನಿ ಶೆಟ್ಟಿಗೂ ಇಷ್ಟ ವಿಜಯ್​ ದೇವರಕೊಂಡ; ಮನದ ಮಾತು ತೆರೆದಿಟ್ಟ ಸುಂದರಿ

‘ಜನ ಗಣ ಮನ ಸಿನಿಮಾ ಸೆಟ್ಟೇರುವುದಿಲ್ಲವಂತೆ ನಿಜವೇ?’ ಎಂದು ಮಾಧ್ಯಮದವರು ವಿಜಯ್​ಗೆ ಪ್ರಶ್ನೆ ಮಾಡಿದರು. ಇದಕ್ಕೆ ಉತ್ತರಿಸಿದ ವಿಜಯ್, ‘ಅದನ್ನೆಲ್ಲ ಮರೆತುಬಿಡಿ. ನಾವು ಇಲ್ಲಿ ಬಂದಿದ್ದು ಸೈಮಾ ಅವಾರ್ಡ್​ಗಾಗಿ. ಈ ಕಾರ್ಯಕ್ರಮವನ್ನು ಎಂಜಾಯ್ ಮಾಡೋಣ’ ಎಂದಿದ್ದಾರೆ ವಿಜಯ್. ಅವರ ಈ ಉತ್ತರ ಅನೇಕರಿಗೆ ಅಚ್ಚರಿ ಮೂಡಿಸಿದೆ.

ಇದನ್ನೂ ಓದಿ: ‘ಪುನೀತಣ್ಣ, ಶಿವಣ್ಣ ನನಗೆ ಸಾಕಷ್ಟು ಪ್ರೀತಿ ನೀಡಿದ್ದಾರೆ’: ವಿಜಯ್ ದೇವರಕೊಂಡ

‘ಜನ ಗಣ ಮನ’ ಸಿನಿಮಾಗಾಗಿ ಈಗಾಗಲೇ 8 ಕೋಟಿ ರೂಪಾಯಿಗೂ ಅಧಿಕ ವೆಚ್ಛ ಮಾಡಲಾಗಿದೆ. ಈ ಸಿನಿಮಾದ ಮುಹೂರ್ತ ನಡೆದಿತ್ತು. ಅಲ್ಲದೆ, ಕೆಲ ದೃಶ್ಯದ ಶೂಟಿಂಗ್ ಕೂಡ ಮಾಡಲಾಗಿತ್ತು. ಈಗ ಈ ಹಣವೂ ವ್ಯರ್ಥವಾಗಿದೆ.

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು